ETV Bharat / state

ಚಿಕ್ಕಪೇಟೆ ರಸ್ತೆಗಳಲ್ಲಿ ಇನ್ಮುಂದೆ ಏಕಮುಖ ಸಂಚಾರ: ಬಿಬಿಎಂಪಿ ಆಯುಕ್ತ - ಚಿಕ್ಕಪೇಟೆ ಅಭಿವೃದ್ಧಿಗೆ ಬಿಬಿಎಂಪಿ ಆಯುಕ್ತ ಬಿ. ಹೆಚ್. ಅನಿಲಕುಮಾರ್​ ಸಲಹೆ

ಚಿಕ್ಕಪೇಟೆಯಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ನಗರದ ಎಲ್ಲಾ ರಸ್ತೆಗಳನ್ನು ಏಕಮುಖ ಸಂಚಾರ ಮಾಡುವ ಉದ್ದೇಶವಿದೆ ಎಂದು ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ತಿಳಿಸಿದ್ದಾರೆ.

ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್
author img

By

Published : Oct 29, 2019, 9:17 PM IST

ಬೆಂಗಳೂರು : ನಗರದ ಹೃದಯ ಭಾಗದಲ್ಲಿರುವ ಚಿಕ್ಕಪೇಟೆ ಅಭಿವೃದ್ಧಿ ಮರೀಚಿಕೆಯಾಗಿದೆ. ಚಿಕ್ಕ ರಸ್ತೆಯಲ್ಲಿ ದ್ವಿಮುಖ ಸಂಚಾರವಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಇನ್ನು ಫುಟ್​ಪಾತ್​ಗಳು ವ್ಯಾಪಾರಿಗಳಿಂದ ಒತ್ತುವರಿಯಾಗಿದ್ದು ಸಂಚರಿಸಲು ಅಸಾಧ್ಯವಾಗಿದೆ.

ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್, ಚಿಕ್ಕಪೇಟೆ, ನಗರತ್ ಪೇಟೆ, ಅಕ್ಕಿಪೇಟೆ, ಬಳೇಪೇಟೆ, ಕುಂಬಾರ ಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಲ್ತಾನ್ ಪೇಟೆ ಮಾಮೂಲ್ ಪೇಟೆಗಳ ಸಂಚಾರ ದಟ್ಟಣೆ ನಿವಾರಿಸಲು ಏಕಮುಖ ಸಂಚಾರ ಮಾಡುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ಚಿಕ್ಕಪೇಟೆ ರಸ್ತೆಗಳಲ್ಲಿ ಇನ್ನುಮುಂದೆ ಏಕಮುಖ ಸಂಚಾರ

ಕಸ ನಿರ್ವಹಣೆಗೆ ಪ್ರತ್ಯೇಕ ಸಭೆ

ಚಿಕ್ಕಪೇಟೆಯಲ್ಲಿ 90%ರಷ್ಟು ವಾಣಿಜ್ಯ ಉದ್ಯಮಗಳಿದ್ದು, ಹೆಚ್ಚು ಕಸ ಉತ್ಪತ್ತಿಯಾಗುತ್ತಿವೆ. ಬಟ್ಟೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಿಕ್ಕಸಿಕ್ಕ ಕಡೆಗಳಲ್ಲಿ ಎಸೆಯಲಾಗುತ್ತಿದೆ. ಈ ಕುರಿತು ಉದ್ಯಮಿಗಳು, ವರ್ತಕರ ಸಂಘಟನೆಗಳ ಜೊತೆ ಸಭೆ ನಡೆಸಿ, ತ್ಯಾಜ್ಯ ವಿಲೇವಾರಿ ಕುರಿತು ಸಲಹೆ ತೆಗೆದುಕೊಳ್ಳಲಾಗುವುದು ಮತ್ತು ಸಂಸದ ಪಿ.ಸಿ. ಮೋಹನ್ ಜೊತೆಗೂ ಚರ್ಚಿಸಿದ್ದು ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್ ತಿಳಿಸಿದರು.

ರಾತ್ರಿ ವೇಳೆಯಲ್ಲಿ ಸ್ವಚ್ಚತೆ

ನಗರದಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚಿರುವುದರಿಂದ ರಾತ್ರಿವೇಳೆ ತ್ಯಾಜ್ಯ ವಿಲೇವಾರಿಗೆ ಚಿಂತಿಸಲಾಗಿದೆ. ತ್ಯಾಜ್ಯ ಸಂಗ್ರಹಣೆ, ವಿಲೇವಾರಿಯನ್ನು ರಾತ್ರಿ ಹೊತ್ತಿನಲ್ಲಿ ಮಾಡುವ ಬಗ್ಗೆ ಸಂಘಟನೆಗಳ ಜೊತೆ ಸಭೆ ನಡೆಸಲಾಗುವುದು. ತ್ಯಾಜ್ಯ ನಿರ್ವಹಣೆ ಬೈಲಾ ಅಂತಿಮವಾದ ಬಳಿಕ, ಕಸ ನಿರ್ವಹಣೆಗೆ ಸಹಕರಿಸದ ವರ್ತಕರಿಗೆ ಹೆಚ್ಚು ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರು : ನಗರದ ಹೃದಯ ಭಾಗದಲ್ಲಿರುವ ಚಿಕ್ಕಪೇಟೆ ಅಭಿವೃದ್ಧಿ ಮರೀಚಿಕೆಯಾಗಿದೆ. ಚಿಕ್ಕ ರಸ್ತೆಯಲ್ಲಿ ದ್ವಿಮುಖ ಸಂಚಾರವಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಇನ್ನು ಫುಟ್​ಪಾತ್​ಗಳು ವ್ಯಾಪಾರಿಗಳಿಂದ ಒತ್ತುವರಿಯಾಗಿದ್ದು ಸಂಚರಿಸಲು ಅಸಾಧ್ಯವಾಗಿದೆ.

ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್, ಚಿಕ್ಕಪೇಟೆ, ನಗರತ್ ಪೇಟೆ, ಅಕ್ಕಿಪೇಟೆ, ಬಳೇಪೇಟೆ, ಕುಂಬಾರ ಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಲ್ತಾನ್ ಪೇಟೆ ಮಾಮೂಲ್ ಪೇಟೆಗಳ ಸಂಚಾರ ದಟ್ಟಣೆ ನಿವಾರಿಸಲು ಏಕಮುಖ ಸಂಚಾರ ಮಾಡುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ಚಿಕ್ಕಪೇಟೆ ರಸ್ತೆಗಳಲ್ಲಿ ಇನ್ನುಮುಂದೆ ಏಕಮುಖ ಸಂಚಾರ

ಕಸ ನಿರ್ವಹಣೆಗೆ ಪ್ರತ್ಯೇಕ ಸಭೆ

ಚಿಕ್ಕಪೇಟೆಯಲ್ಲಿ 90%ರಷ್ಟು ವಾಣಿಜ್ಯ ಉದ್ಯಮಗಳಿದ್ದು, ಹೆಚ್ಚು ಕಸ ಉತ್ಪತ್ತಿಯಾಗುತ್ತಿವೆ. ಬಟ್ಟೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಿಕ್ಕಸಿಕ್ಕ ಕಡೆಗಳಲ್ಲಿ ಎಸೆಯಲಾಗುತ್ತಿದೆ. ಈ ಕುರಿತು ಉದ್ಯಮಿಗಳು, ವರ್ತಕರ ಸಂಘಟನೆಗಳ ಜೊತೆ ಸಭೆ ನಡೆಸಿ, ತ್ಯಾಜ್ಯ ವಿಲೇವಾರಿ ಕುರಿತು ಸಲಹೆ ತೆಗೆದುಕೊಳ್ಳಲಾಗುವುದು ಮತ್ತು ಸಂಸದ ಪಿ.ಸಿ. ಮೋಹನ್ ಜೊತೆಗೂ ಚರ್ಚಿಸಿದ್ದು ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್ ತಿಳಿಸಿದರು.

ರಾತ್ರಿ ವೇಳೆಯಲ್ಲಿ ಸ್ವಚ್ಚತೆ

ನಗರದಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚಿರುವುದರಿಂದ ರಾತ್ರಿವೇಳೆ ತ್ಯಾಜ್ಯ ವಿಲೇವಾರಿಗೆ ಚಿಂತಿಸಲಾಗಿದೆ. ತ್ಯಾಜ್ಯ ಸಂಗ್ರಹಣೆ, ವಿಲೇವಾರಿಯನ್ನು ರಾತ್ರಿ ಹೊತ್ತಿನಲ್ಲಿ ಮಾಡುವ ಬಗ್ಗೆ ಸಂಘಟನೆಗಳ ಜೊತೆ ಸಭೆ ನಡೆಸಲಾಗುವುದು. ತ್ಯಾಜ್ಯ ನಿರ್ವಹಣೆ ಬೈಲಾ ಅಂತಿಮವಾದ ಬಳಿಕ, ಕಸ ನಿರ್ವಹಣೆಗೆ ಸಹಕರಿಸದ ವರ್ತಕರಿಗೆ ಹೆಚ್ಚು ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

Intro:ಚಿಕ್ಕಪೇಟೆ ವಾಹನ ದಟ್ಟಣೆಗೆ ನಿವಾರಣೆಗೆ ಬಿಬಿಎಂಪಿ ಪ್ಲಾನ್- ಕಸ ನಿರ್ವಹಣೆಗೆ ಹೊಸ ಮಾರ್ಗೋಪಾಯ


ಬೆಂಗಳೂರು- ನಗರದ ಹೃದಯಭಾಗದಲ್ಲಿರುವ, ಶಾಪಿಂಗ್ ಗೆ ಹೆಸರುವಾಸಿಯಾಗಿರುವ ಚಿಕ್ಕಪೇಟೆಗೆ ಅಭಿವೃದ್ಧಿಯೇ ಮರೀಚಿಕೆಯಾಗಿತ್ತು. ಚಿಕ್ಕಪೇಟೆ ಸುತ್ತಲಿನ ವಿವಿಧ ಪೇಟೆ ರಸ್ತೆಗಳು ಕಿರಿದಾಗಿದ್ದು, ವಾಹನ ಸಂಚಾರಕ್ಕೆ ಅನಾನುಕೂಲವಾಗಿದೆ. ಇನ್ನು ಕೆಲವು ರಸ್ತೆಯಂತೂ ದ್ವಿಮುಖ ಸಂಚಾರ ಇರುವುದರಿಂದ ವಾಹನಗಳು ಸಂಚರಿಸಲು ಸಾಧ್ಯವಾಗದಂತೆ ದಟ್ಟಣೆ ಉಂಟಾಗುತ್ತಿದೆ. ಇನ್ನು ಫುಟ್ ಪಾತ್ ಗಳೂ ವ್ಯಾಪಾರಿಗಳಿಂದ ಒತ್ತುವರಿಯಾಗಿದ್ದು, ಪಾದಚಾರಿಗಳಿಗೂ ಸಂಚರಿಸಲು ಅಸಾಧ್ಯವಾಗಿದೆ. ಹೀಗಾಗಿ ಈ ಬಗ್ಗೆ ಮಾತನಾಡಿದ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್, ದ್ವಿಮುಖ ರಸ್ತೆಗಳನ್ನೆಲ್ಲಾ ಏಕಮುಖ ಸಂಚಾರ ಮಾಡುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.
ಚಿಕ್ಕಪೇಟೆ, ನಗರತ್ ಪೇಟೆ, ಅಕ್ಕಿಪೇಟೆ, ಬಳೇಪೇಟೆ, ಕುಂಬಾರ ಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಲ್ತಾನ್ ಪೇಟೆ, ಮಾಮೂಲ್ ಪೇಟೆಗಳ ಸಂಚಾರ ದಟ್ಟಣೆ ನಿವಾರಿಸಲು ಏಕಮುಖ ಸಂಚಾರ ಮಾಡುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.


ಕಸ ನಿರ್ವಹಣೆಗೆ ಪ್ರತ್ಯೇಕ ಸಭೆ
ಚಿಕ್ಕಪೇಟೆಯ 90% ದಷ್ಟು ವಾಣಿಜ್ಯ ಉದ್ಯಮಗಳಿದ್ದು, ಹೆಚ್ಚು ಕಸ ಉತ್ಪತ್ತಿಯಾಗುತ್ತಿವೆ. ಬಟ್ಟೆ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಿಕ್ಕಸಿಕ್ಕಂದರಲ್ಲಿ ಎಸೆಯಲಾಗುತ್ತಿದೆ. ಖಾಲಿ‌ಸೈಟ್ ಗಳಲ್ಲಿ ತುಂಬಿಸಲಾಗುತ್ತಿದೆ.
ಇನ್ನು ಚಿಕ್ಕಪೇಟೆಯ ಉದ್ಯಮಿಗಳು, ವರ್ತಕರ ಸಂಘಟನೆಗಳ ಜೊತೆ ಸಭೆ ನಡೆಸಲಾಗುವುದು. ತ್ಯಾಜ್ಯ ವಿಲೇವಾರಿ ಬಗ್ಗೆ ಸಲಹೆ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಸಂಸದ ಪಿಸಿ ಮೋಹನ್ ಜೊತೆಗೂ ಚರ್ಚಿಸಲಾಗಿದ್ದು, ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ತಿಳಿಸಿದರು.


ರಾತ್ರಿ ವೇಳೆಯಲ್ಲಿ ಸ್ವಚ್ಚತೆ.
ಚಿಕ್ಕಪೇಟೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚಿರುವುದರಿಂದ ರಾತ್ರಿವೇಳೆ ತ್ಯಾಜ್ಯ ವಿಲೇವಾರಿಗೆ ಚಿಂತಿಸಲಾಗಿದೆ. ತ್ಯಾಜ್ಯ ಸಂಗ್ರಹಣೆ, ವಿಲೇವಾರಿಯನ್ನು ರಾತ್ರಿ ಹೊತ್ತಿನಲ್ಲಿ ಮಾಡುವ ಬಗ್ಗೆ ಸಂಘಟನೆಗಳ ಜೊತೆ ಸಭೆ ನಡೆಸಲಾಗುವುದು. ತ್ಯಾಜ್ಯ ನಿರ್ವಹಣೆ ಬೈಲಾ ಅಂತಿಮವಾದ ಬಳಿಕ, ಕಸ ನಿರ್ವಹಣೆಗೆ ಸಹಕರಿಸದ ವರ್ತಕರಿಗೆ ಹೆಚ್ಚು ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.


ಸೌಮ್ಯಶ್ರೀ
Kn_bng_03_chikpete_garbage_7202707Body:..Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.