ETV Bharat / state

ಪ್ಲಾಸ್ಟಿಕ್ ಮುಕ್ತ ಸಮಾಜ: ಮಕ್ಕಳೊಂದಿಗೆ ಹೆಜ್ಜೆ ಹಾಕಿ ಜಾಗೃತಿ ಮೂಡಿಸಿದ ಮೇಯರ್

author img

By

Published : Aug 3, 2019, 4:37 PM IST

Updated : Aug 3, 2019, 4:53 PM IST

ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳೂ ಸೇರಿದಂತೆ ನಾಗರಿಕರಿಗೆ ಪ್ಲಾಸ್ಟಿಕ್ ಬಳಕೆ ನಿಷೇಧ, ಕಸ ವಿಂಗಡಣೆ, ಪಿಒಪಿ ಗಣೇಶ ಮೂರ್ತಿಯ ಬದಲು ಮಣ್ಣಿನ ಮೂರ್ತಿ ಬಳಕೆ, ಕುಡಿಯುವ ನೀರಿನ‌ ಮಿತ ಬಳಕೆ ಬಗ್ಗೆ ಮೇಯರ್​ ಅರಿವು ಮೂಡಿಸುವ ಕೆಲಸ ಮಾಡಿದ್ರು.

ಮಕ್ಕಳೊಂದಿಗೆ ಹೆಜ್ಜೆ ಹಾಕಿ ಜಾಗೃತಿ ಮೂಡಿಸಿದ ಮೇಯರ್!

ಬೆಂಗಳೂರು: ಪರಿಸರಕ್ಕೆ ಅತ್ಯಂತ ಹೆಚ್ಚು ಹಾನಿ ತಂದೊಡ್ಡುವ ಪ್ಲಾಸ್ಟಿಕ್​ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಲು ಬಿಬಿಎಂಪಿ ಮೇಯರ್​ ಗಂಗಾಂಬಿಕೆ ಮಲ್ಲಿಕಾರ್ಜುನ್‌ ರಸ್ತೆಯಲ್ಲಿ ಜಾಥಾ ನಡೆಸಿದ್ರು.

ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ, ನಾಗರಿಕರಿಗೆ ಪ್ಲಾಸ್ಟಿಕ್ ಬಳಕೆ ನಿಷೇಧ, ಕಸ ವಿಂಗಡಣೆ, ಪಿಒಪಿ ಗಣೇಶ ಬದಲು ಮಣ್ಣಿನ ಮೂರ್ತಿ ಬಳಕೆ, ಕುಡಿಯುವ ನೀರಿನ‌ ಮಿತ ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಪೂರ್ವವಲಯದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಮೇಯರ್ ಚಾಲನೆ ನೀಡಿದರು.

ಪ್ಲಾಸ್ಟಿಕ್​ನಿಂದಾಗುವ ಅನಾಹುತ: ಮಕ್ಕಳೊಂದಿಗೆ ಹೆಜ್ಜೆ ಹಾಕಿ ಜಾಗೃತಿ ಮೂಡಿಸಿದ ಮೇಯರ್!

ಬಿಬಿಎಂಪಿ ಪೂರ್ವವಲಯ ವ್ಯಾಪ್ತಿಯ ವಾರ್ಡ್​ಗಳಲ್ಲಿ ಜಾಗೃತಿ ಜಾಥಾದಲ್ಲಿ ಶಾಲಾ ಮಕ್ಕಳೊಂದಿಗೆ ಜಾಥಾ ನಡೆಸಿದ ಅವರು ನಾಗರಿಕರಲ್ಲಿ ಜಾಗೃತಿ ಮೂಡಿಸಿದರು. ನಂತರ ಕ್ಲೀವ್ ಲ್ಯಾಂಡ್ ಟೌನ್ ನಲ್ಲಿರುವ ಬಿಬಿಎಂಪಿ ಬಾಲಕಿಯರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಿಒಪಿ ಗಣಪ, ಹಸಿಕಸ, ಒಣ ಕಸ ಬೇರ್ಪಡಿಕೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ಹಾನಿ ಬಗ್ಗೆ ತಿಳಿ ಹೇಳಿದ್ರು.

ಬೆಂಗಳೂರು: ಪರಿಸರಕ್ಕೆ ಅತ್ಯಂತ ಹೆಚ್ಚು ಹಾನಿ ತಂದೊಡ್ಡುವ ಪ್ಲಾಸ್ಟಿಕ್​ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಲು ಬಿಬಿಎಂಪಿ ಮೇಯರ್​ ಗಂಗಾಂಬಿಕೆ ಮಲ್ಲಿಕಾರ್ಜುನ್‌ ರಸ್ತೆಯಲ್ಲಿ ಜಾಥಾ ನಡೆಸಿದ್ರು.

ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ, ನಾಗರಿಕರಿಗೆ ಪ್ಲಾಸ್ಟಿಕ್ ಬಳಕೆ ನಿಷೇಧ, ಕಸ ವಿಂಗಡಣೆ, ಪಿಒಪಿ ಗಣೇಶ ಬದಲು ಮಣ್ಣಿನ ಮೂರ್ತಿ ಬಳಕೆ, ಕುಡಿಯುವ ನೀರಿನ‌ ಮಿತ ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಪೂರ್ವವಲಯದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಮೇಯರ್ ಚಾಲನೆ ನೀಡಿದರು.

ಪ್ಲಾಸ್ಟಿಕ್​ನಿಂದಾಗುವ ಅನಾಹುತ: ಮಕ್ಕಳೊಂದಿಗೆ ಹೆಜ್ಜೆ ಹಾಕಿ ಜಾಗೃತಿ ಮೂಡಿಸಿದ ಮೇಯರ್!

ಬಿಬಿಎಂಪಿ ಪೂರ್ವವಲಯ ವ್ಯಾಪ್ತಿಯ ವಾರ್ಡ್​ಗಳಲ್ಲಿ ಜಾಗೃತಿ ಜಾಥಾದಲ್ಲಿ ಶಾಲಾ ಮಕ್ಕಳೊಂದಿಗೆ ಜಾಥಾ ನಡೆಸಿದ ಅವರು ನಾಗರಿಕರಲ್ಲಿ ಜಾಗೃತಿ ಮೂಡಿಸಿದರು. ನಂತರ ಕ್ಲೀವ್ ಲ್ಯಾಂಡ್ ಟೌನ್ ನಲ್ಲಿರುವ ಬಿಬಿಎಂಪಿ ಬಾಲಕಿಯರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಿಒಪಿ ಗಣಪ, ಹಸಿಕಸ, ಒಣ ಕಸ ಬೇರ್ಪಡಿಕೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ಹಾನಿ ಬಗ್ಗೆ ತಿಳಿ ಹೇಳಿದ್ರು.

Intro:ರಸ್ತೆಯಲ್ಲಿ ಜಾಥಾ ನಡೆಸಿ ಪ್ಲಾಸ್ಟಿಕ್ ಹಾನಿ ಬಗ್ಗೆ ಜಾಗೃತಿ ಮೂಡಿಸಿದ ಮೇಯರ್

ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಹಾಗೂ ನಾಗರಿಕರಿಗೆ ಪ್ಲಾಸ್ಟಿಕ್ ಬಳಕೆ ನಿಷೇಧ, ಕಸ ವಿಂಗಡಣೆ, ಪಿಒಪಿ ಗಣೇಶ ಬದಲು ಮಣ್ಣಿನ ಮೂರ್ತಿ ಬಳಕೆ, ಕುಡಿಯುವ ನೀರಿನ‌ ಮಿತ ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಪೂರ್ವವಲಯದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ ಚಾಲನೆ ನೀಡಿದರು.

ಬಿಬಿಎಂಪಿ ಪೂರ್ವವಲಯ ವ್ಯಾಪ್ತಿಯ ವಾರ್ಡ್ ಗಳಲ್ಲಿ ಜಾಗೃತಿ ಜಾಥಾದಲ್ಲಿ ಶಾಲಾಮಕ್ಕಳೊಂದಿಗೆ ಜಾಥಾ ನಡೆಸಿ ನಾಗರಿಕರಲ್ಲಿ ಜಾಗೃತಿ ಮೂಡಿಸಿದರು. ನಂತರ ಕ್ಲೀವ್ ಲ್ಯಾಂಡ್ ಟೌನ್ ನಲ್ಲಿರುವ ಬಿಬಿಎಂಪಿ ಬಾಲಕಿಯರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಿಓಪಿ ಗಣಪ,ಹಸಿಕಸ, ಒಣ ಕಸ ಬೇರ್ಪಡಿಕೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ಹಾನಿ ಬಗ್ಗೆ ತಿಳಿಸಿದರು.

ಪ್ಲಾಸ್ಟಿಕ್ ಮುಕ್ತ ಬೆಂಗಳೂರು‌ ಮಾಡಲು ಬಿಬಿಎಂಪಿ‌ ವತಿಯಿಂದ ಬೃಹತ್ ಆಂದೋಲ ಹಮ್ಮಿಕೊಂಡು, ನಿತ್ಯ ಪ್ಲಾಸ್ಟಿಕ್ ಬಳಕೆ ಮಾಡುವ ಮಳಿಗೆಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ ಪ್ಲಾಸ್ಟಿಕ್ ಜಪ್ತಿ ಮಾಡುವ ಜೊತೆಗೆ ದಂಡ ವಿಧಿಸುತ್ತಿದ್ದಾರೆ. ನಾವು ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡಬೇಕಿದೆ.ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಬದಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಅರಿವು ಮೂಡಿಸಲು ಪ್ಲಾಸ್ಟಿಕ್ ಮೇಳ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಗಣೇಶ ಚತುರ್ಥಿಯ ವೇಳೆ ಪ್ಲಾಸ್ಟರ್ ಆಪ್ ಪ್ಯಾರೀಸ್(ಪಿಒಪಿ) ಗಣೇಶ ಮೂರ್ತಿಗಳನ್ನು ಬಳಸಬಾರದು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಎಲ್ಲರೂ ಪಿಒಪಿ ಬದಲು ಮಣ್ಣಿನ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸುವ ಮೂಲಕ ಪರಿಸರಕ್ಕೆ ಹಾನಿಯಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸುತ್ತಮುತ್ತಲಿನವರಿಗೆ ಅರಿವು ಮೂಡಿಸಬೇಕು. ನೀವು ಮನೆಗಳಲ್ಲಿ ಹೇಳಿದರೆ ಪೋಷಕರು ಕೇಳುತ್ತಾರೆ. ಆದ್ದರಿಂದ ಇಂದಿನಿಂದಲೇ ನಿಮ್ಮ ಮನೆಗಳಲ್ಲಿ ಅರಿವು ಮೂಡಿಸಲು ಮುಂದಾಗಿ ಎಂದು ಮನವಿ ಮಾಡಿದರು.

ನಗರದಲ್ಲಿ‌ ಕಸದ ಸಮಸ್ಯೆ ನಿವಾರಣೆ ಮಾಡಲು ಹೊಸ ಟೆಂಡರ್ ಪದ್ಧತಿಯನ್ನು ಸೆ. 1ರಿಂದ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನಾಗರಿಕರು ಮಿಶ್ರ ತ್ಯಾಜ್ಯವನ್ನು ಪಾಲಿಕೆಗೆ ನೀಡಿದರೆ ಸಂಸ್ಕರಣೆ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಬಿಬಿಎಂಪಿ ಕೈಗೊಂಡಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮಕ್ಕಳು ಹಾಗೂ ನಾಗರಿಕರಲ್ಲಿ ಅರಿವು ಮೂಡಿಸುವ ಮೂಲಕ ಬೆಂಗಳೂರನ್ನು ಸ್ವಚ್ಛನಗರಿಯನ್ನಾಗಿ ಮಾಡಲು ಪ್ರತಿಯೊಬ್ಬರು ಪಣತೊಡಬೇಕೆಂದು ಕರೆ ನೀಡಿದರು.

Body:ಇನ್ನು, ನಗರದಲ್ಲಿ ಉತ್ಪತ್ತಿ ಬಹುತೇಕ ತ್ಯಾಜ್ಯವನ್ನು ಕ್ವಾರಿಗಳಲ್ಲಿ ಸುರಿಯಲಾಗುತ್ತಿದೆ. ಇದರಿಂದ ಸ್ಥಳೀಯ ನಿವಾಸಿಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಆದ್ದರಿಂದ ಒಣ, ಹಸಿ, ಸ್ಯಾನಿಟರಿ ಹಾಗೂ ಇ-ತ್ಯಾಜ್ಯವನ್ನು ಬೇರ್ಪಡಿಸಿ ಕೊಟ್ಟರೆ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

Conclusion:ಎಲ್ಲರೂ ಕುಡಿಯುವ ನೀರನ್ನು ಮಿತವಾಗಿ ಬಳಸಬೇಕು. ಕಾವೇರಿ ನಿರನ್ನು ಕುಡಿಯಲು ಮಾತ್ರ ಬಳಸಿ, ಬೋರ್ ವೆಲ್ ನೀರು ಹಾಗೂ ಸಂಸ್ಕರಿಸಿದ ನೀರುನ್ನು ಇತರೆ ಕೆಲಸಗಳಿಗೆ ಬಳಸಬೇಕು. ಈ‌ ಬಗ್ಗೆ ನಿಮ್ಮ ಮನೆಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.




Last Updated : Aug 3, 2019, 4:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.