ETV Bharat / state

ಸಿರ್ಸಿ ಮೇಲ್ಸೇತುವೆಯಲ್ಲಿ ಮತ್ತೆ ಸಂಚಾರ ಬಂದ್: ನಗರಕ್ಕೆ ಸ್ಮಾರ್ಟ್ ಪಾರ್ಕಿಂಗ್ - BBMP Mayor gowtham kumar

ಸಿರ್ಸಿ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿ ಒಂದು ಭಾಗ ಪೂರ್ಣಗೊಂಡಿದ್ದು, ಇನ್ನೊಂದು ಭಾಗದ ಕಾಮಗಾರಿ ನಡೆಸಲು ಮೇಯರ್ ಗೌತಮ್ ಕುಮಾರ್ ಹಾಗೂ ಶಾಸಕ ಉದಯ್ ಗರುಡಾಚಾರ್, ಆಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಮೇಯರ್ ಗೌತಮ್ ಕುಮಾರ್
Mayor gowtham kumar
author img

By

Published : Dec 6, 2019, 11:07 PM IST

ಬೆಂಗಳೂರು: ಸಿರ್ಸಿ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿ ಒಂದು ಭಾಗ ಈಗಾಗಲೇ ಪೂರ್ಣಗೊಂಡಿದೆ. ಇನ್ನೊಂದು ಭಾಗದ ಕಾಮಗಾರಿ ನಡೆಸಲು ಇಂದು ಮೇಯರ್ ಗೌತಮ್ ಕುಮಾರ್ ಹಾಗೂ ಶಾಸಕ ಉದಯ್ ಗರುಡಾಚಾರ್, ಆಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳ ಪರಿಶೀಲನೆ ನಡೆಸಿದ ಮೇಯರ್ ಗೌತಮ್ ಕುಮಾರ್

ನಾಲ್ಕು ದಿನದೊಳಗೆ ಕಾಮಗಾರಿ ಆರಂಭವಾಗಲಿದ್ದು, ಕಾಮಗಾರಿ 30 ದಿನಗಳಲ್ಲಿ ಮುಗಿಸಬೇಕು. ಸಂಚಾರ ದಟ್ಟಣೆ ಆಗದಂತೆ, ಕ್ರಮವಹಿಸಬೇಕೆಂದು ಸಂಚಾರಿ ಪೊಲೀಸರಿಗೆ ಸೂಚಿಸಲಾಯಿತು. ಕಾಮಗಾರಿಯಿಂದ ಯಾರಿಗಾದರೂ ಸಮಸ್ಯೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ನಂತರ ಧರ್ಮರಾಯ ಸ್ವಾಮಿ ದೇವಸ್ಥಾನ ವಾರ್ಡ್-119 ವ್ಯಾಪ್ತಿಯ ಧರ್ಮರಾಯ ಸ್ವಾಮಿ ದೇವಸ್ಥಾನದ ಹತ್ತಿರ ಪಾಲಿಕೆಯ ಖಾಲಿ ಜಾಗವನ್ನು ಪರಿಶೀಲಿಸಿ ಆ ಜಾಗದಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್(MLCP) ನಿರ್ಮಾಣದ ಬಗ್ಗೆ ಚಿಂತನೆ ನಡೆಸಲಾಗಿದೆ. ದಾಸಪ್ಪ ಆಸ್ಪತ್ರೆ ಪ್ರದೇಶವನ್ನು ತಪಾಸಣೆ ನಡೆಸಿ ಸರ್ಕಾರ ಹಾಗೂ ಶಾಸಕರ ಅನುದಾನದಲ್ಲಿ ಪುನರ್ ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಪಿಪಿಪಿ ಮಾದರಿಯಲ್ಲಿ ಸೆಂಟ್ರಲ್ ಪಾರ್ಕಿಂಗ್ ಸರ್ವೀಸಸ್ ಸಂಸ್ಥೆ ನಗರದ 85 ಕಡೆ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸಲಿದ್ದು, ಕಸ್ತೂರ ಬಾ ರಸ್ತೆ ಸ್ಥಳ ಪರಿಶೀಲನೆ ಮಾಡಲಾಯಿತು. ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸುತ್ತಿರುವ ಸಂಸ್ಥೆಗೆ ಡಿಸೆಂಬರ್ 15 ರೊಳಗಾಗಿ ಪ್ರಾಯೋಗಿಕವಾಗಿ ಕಸ್ತೂರ ಬಾ ರಸ್ತೆಯಲ್ಲಿ ಪಾರ್ಕಿಂಗ್ ನಿಲುಗಡೆ ಪ್ರಾರಂಭಿಸುವಂತೆ ಆಯುಕ್ತರು ಸೂಚಿಸಿದರು.

ಬೆಂಗಳೂರು: ಸಿರ್ಸಿ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿ ಒಂದು ಭಾಗ ಈಗಾಗಲೇ ಪೂರ್ಣಗೊಂಡಿದೆ. ಇನ್ನೊಂದು ಭಾಗದ ಕಾಮಗಾರಿ ನಡೆಸಲು ಇಂದು ಮೇಯರ್ ಗೌತಮ್ ಕುಮಾರ್ ಹಾಗೂ ಶಾಸಕ ಉದಯ್ ಗರುಡಾಚಾರ್, ಆಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳ ಪರಿಶೀಲನೆ ನಡೆಸಿದ ಮೇಯರ್ ಗೌತಮ್ ಕುಮಾರ್

ನಾಲ್ಕು ದಿನದೊಳಗೆ ಕಾಮಗಾರಿ ಆರಂಭವಾಗಲಿದ್ದು, ಕಾಮಗಾರಿ 30 ದಿನಗಳಲ್ಲಿ ಮುಗಿಸಬೇಕು. ಸಂಚಾರ ದಟ್ಟಣೆ ಆಗದಂತೆ, ಕ್ರಮವಹಿಸಬೇಕೆಂದು ಸಂಚಾರಿ ಪೊಲೀಸರಿಗೆ ಸೂಚಿಸಲಾಯಿತು. ಕಾಮಗಾರಿಯಿಂದ ಯಾರಿಗಾದರೂ ಸಮಸ್ಯೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ನಂತರ ಧರ್ಮರಾಯ ಸ್ವಾಮಿ ದೇವಸ್ಥಾನ ವಾರ್ಡ್-119 ವ್ಯಾಪ್ತಿಯ ಧರ್ಮರಾಯ ಸ್ವಾಮಿ ದೇವಸ್ಥಾನದ ಹತ್ತಿರ ಪಾಲಿಕೆಯ ಖಾಲಿ ಜಾಗವನ್ನು ಪರಿಶೀಲಿಸಿ ಆ ಜಾಗದಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್(MLCP) ನಿರ್ಮಾಣದ ಬಗ್ಗೆ ಚಿಂತನೆ ನಡೆಸಲಾಗಿದೆ. ದಾಸಪ್ಪ ಆಸ್ಪತ್ರೆ ಪ್ರದೇಶವನ್ನು ತಪಾಸಣೆ ನಡೆಸಿ ಸರ್ಕಾರ ಹಾಗೂ ಶಾಸಕರ ಅನುದಾನದಲ್ಲಿ ಪುನರ್ ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಪಿಪಿಪಿ ಮಾದರಿಯಲ್ಲಿ ಸೆಂಟ್ರಲ್ ಪಾರ್ಕಿಂಗ್ ಸರ್ವೀಸಸ್ ಸಂಸ್ಥೆ ನಗರದ 85 ಕಡೆ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸಲಿದ್ದು, ಕಸ್ತೂರ ಬಾ ರಸ್ತೆ ಸ್ಥಳ ಪರಿಶೀಲನೆ ಮಾಡಲಾಯಿತು. ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸುತ್ತಿರುವ ಸಂಸ್ಥೆಗೆ ಡಿಸೆಂಬರ್ 15 ರೊಳಗಾಗಿ ಪ್ರಾಯೋಗಿಕವಾಗಿ ಕಸ್ತೂರ ಬಾ ರಸ್ತೆಯಲ್ಲಿ ಪಾರ್ಕಿಂಗ್ ನಿಲುಗಡೆ ಪ್ರಾರಂಭಿಸುವಂತೆ ಆಯುಕ್ತರು ಸೂಚಿಸಿದರು.

Intro:ಸಿರ್ಸಿ ಮೇಲ್ಸೇತುವೆಯಲ್ಲಿ ಮತ್ತೆ ಸಂಚಾರ ಬಂದ್- ನಗರಕ್ಕೆ ಸ್ಮಾರ್ಟ್ ಪಾರ್ಕಿಂಗ್..


ಬೆಂಗಳೂರು: ಸಿರ್ಸಿ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿ ಒಂದು ಭಾಗ ಈಗಾಗಲೇ ಪೂರ್ಣಗೊಂಡಿದೆ. ಇನ್ನೊಂದು ಭಾಗದ ಕಾಮಗಾರಿ ನಡೆಸಲು ಇಂದು ಮೇಯರ್ ಗೌತಮ್ ಕುಮಾರ್ ಹಾಗೂ ಶಾಸಕ ಉದಯ್ ಗರುಡಾಚಾರ್, ಆಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.
ನಾಲ್ಕು ದಿನದೊಳಗೆ ಕಾಮಗಾರಿ ಆರಂಭವಾಗಲಿದೆ.
ಕಾಮಗಾರಿ 30 ದಿನಗಳಲ್ಲಿ ಮುಗಿಸಬೇಕು. ಸಂಚಾರ ದಟ್ಟಣೆ ಆಗದಂತೆ, ಕ್ರಮವಹಿಸಬೇಕೆಂದು ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಕಾಮಗಾರಿಯಿಂದ ಯಾರಿಗಾದರು ಸಮಸ್ಯೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.
ನಂತರ ಧರ್ಮರಾಯ ಸ್ವಾಮಿ ದೇವಸ್ಥಾನ ವಾರ್ಡ್-119 ವ್ಯಾಪ್ತಿಯ ಧರ್ಮರಾಯ ಸ್ವಾಮಿ ದೇವಸ್ಥಾನದ ಹತ್ತಿರ ಪಾಲಿಕೆಯ ಖಾಲಿ ಜಾಗವನ್ನು ಪರಿಶೀಲಿಸಿ ಆ ಜಾಗದಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್(MLCP) ನಿರ್ಮಾಣ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ದಾಸಪ್ಪ ಆಸ್ಪತ್ರೆ ಪ್ರದೇಶವನ್ನು ತಪಾಸಣೆ ನಡೆಸಿ ಸರ್ಕಾರ ಹಾಗೂ ಶಾಸಕರ ಅನುದಾನದಲ್ಲಿ ಪುನರ್ ನವೀಕರಣ ಮಾಡಲು ಕ್ರಮವಹಿಸಲಾಯಿತು.
ಪಿಪಿಪಿ ಮಾದರಿಯಲ್ಲಿ ಸೆಂಟ್ರಲ್ ಪಾರ್ಕಿಂಗ್ ಸರ್ವೀಸಸ್ ಸಂಸ್ಥೆ ನಗರದ 85 ಕಡೆ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸಲಿದ್ದು, “ಕಸ್ತೂರು ಬಾ ರಸ್ತೆ” ಸ್ಥಳ ಪರಿಶೀಲನೆ ಮಾಡಲಾಯಿತು. ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸುತ್ತಿರುವ ಸಂಸ್ಥೆಗೆ ಡಿಸೆಂಬರ್ 15 ರೊಳಗಾಗಿ ಪ್ರಾಯೋಗಿಕವಾಗಿ ಕಸ್ತೂರು ಬಾ ರಸ್ತೆಯಲ್ಲಿ ಪಾರ್ಕಿಂಗ್ ನಿಲುಗಡೆ ಪ್ರಾರಂಭಿಸುವಂತೆ ಆಯುಕ್ತರು ಸೂಚಿಸಿದರು.


ಸೌಮ್ಯಶ್ರೀ
Kn_bng_05_mayor_inspection_7202707
Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.