ETV Bharat / state

ಕೆ.ಆರ್. ಮಾರುಕಟ್ಟೆ ಪರಿಶೀಲಿಸಿದ ಮೇಯರ್​: ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ

author img

By

Published : Jul 12, 2019, 3:04 AM IST

ಬಿಬಿಎಂಪಿ ಮೇಯರ್​ ಗಂಗಾಬಿಕೆ ನಿನ್ನೆ ಕೆ.ಆರ್​ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ವಚ್ಚತೆ ಕಾಪಾಡುವಂತೆ ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮೇಯರ್​ ಗಂಗಾಬಿಕೆ

ಬೆಂಗಳೂರು: ಕೆ.ಆರ್ ಮಾರುಕಟ್ಟೆ ಪಾದಚಾರಿ ಮಾರ್ಗ ಮತ್ತು ರಸ್ತೆಬದಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಾರುಕಟ್ಟೆ ತಪಾಸಣೆ ವೇಳೆ ತಿಳಿಸಿದ್ದಾರೆ.

ತಪಾಸಣೆ ನಡೆಸುವ ವೇಳೆ ಮಾತ್ರ ಸ್ವಚ್ಛ ಮಾಡುತ್ತಾರೆ ಎಂಬ ದೂರಿನ ಹಿನ್ನೆಲೆ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಪಾದಾಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದ ಪರಿಣಾಮ ಒತ್ತುವರಿ ಪ್ರದೇಶವನ್ನು ಕೂಡಲೇ ತೆರವು ಮಾಡುವಂತೆ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು. ಅದರಂತೆ ಎಲ್ಲ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿಸಲಾಯಿತು ಎಂದರು.

ಕೆ.ಆರ್.ಮಾರುಕಟ್ಟೆ ನಿರ್ವಹಣೆ ಮಾಡುವ ಎಲ್ಲ ಅಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಬೇಕು. ಸಭೆಯ ಮಾಹಿತಿಯನ್ನು ಮಹಾಪೌರರ ಕಚೇರಿಗೆ ತಿಳಿಸಬೇಕು. ಸಭೆ ನಡೆಸದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಕೆ.ಆರ್ ಮಾರುಕಟ್ಟೆ ಪಾದಚಾರಿ ಮಾರ್ಗ ಮತ್ತು ರಸ್ತೆಬದಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಾರುಕಟ್ಟೆ ತಪಾಸಣೆ ವೇಳೆ ತಿಳಿಸಿದ್ದಾರೆ.

ತಪಾಸಣೆ ನಡೆಸುವ ವೇಳೆ ಮಾತ್ರ ಸ್ವಚ್ಛ ಮಾಡುತ್ತಾರೆ ಎಂಬ ದೂರಿನ ಹಿನ್ನೆಲೆ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಪಾದಾಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದ ಪರಿಣಾಮ ಒತ್ತುವರಿ ಪ್ರದೇಶವನ್ನು ಕೂಡಲೇ ತೆರವು ಮಾಡುವಂತೆ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು. ಅದರಂತೆ ಎಲ್ಲ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿಸಲಾಯಿತು ಎಂದರು.

ಕೆ.ಆರ್.ಮಾರುಕಟ್ಟೆ ನಿರ್ವಹಣೆ ಮಾಡುವ ಎಲ್ಲ ಅಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಬೇಕು. ಸಭೆಯ ಮಾಹಿತಿಯನ್ನು ಮಹಾಪೌರರ ಕಚೇರಿಗೆ ತಿಳಿಸಬೇಕು. ಸಭೆ ನಡೆಸದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Intro:ಕೆಆರ್ ಮಾರುಕಟ್ಟೆ ಲರಿಶೀಲಿಸಿದ ಮೇಯರ್- ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು- ಕೆ.ಆರ್.ಮಾರುಕಟ್ಟೆ ಪಾದಚಾರಿ ಮಾರ್ಗ ಮತ್ತು ರಸ್ತೆಬದಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಾರುಕಟ್ಟೆ ತಪಾಸಣೆ ವೇಳೆ ತಿಳಿಸಿದರು.


ತಪಾಸಣೆ ನಡೆಸುವ ವೇಳೆ ಮಾತ್ರ ಸ್ವಚ್ಛ ಮಾಡುತ್ತಾರೆ ಎಂಬ ದೂರಿನ ಹಿನ್ನೆಲೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಕೆ.ಆರ್.ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಪಾದಾಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದ ಪರಿಣಾಮ ಒತ್ತುವರಿ ಪ್ರದೇಶವನ್ನು ಕೂಡಲೆ ತೆರವು ಮಾಡುವಂತೆ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು. ಅದರಂತೆ ಎಲ್ಲ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿಸಲಾಯಿತು ಎಂದರು.


ಅಗ್ನಿಶಾಮಕ ದಳ ಮಾರುಕಟ್ಟೆಯೊಳಗೆ ಬರಲು ಸರಿಯಾದ ಮಾರ್ಗ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೆಲಮಹಡಿಯಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನು ಕೂಡಲೆ ತೆರವುಗೊಳಿಸಿ ಇನ್ನುಮುಂದೆ ಆ ಜಾಗದಲ್ಲಿ ಕಸ ಬೀಳದಂತೆ ನೋಡಿಕೊಳ್ಳಬೇಕು. ಜತೆಗೆ ಯಾರೊಬ್ಬರೂ ಅಲ್ಲಿ ಕಸ ಬಿಸಾಡದಂತೆ ಮುಖ್ಯದ್ವಾರದಲ್ಲಿ ಶೆಲ್ಟರ್ ಅಳವಡಿಸಿ, ಅಗ್ನಿಶಾಮಕ ದಳ ಬಂದ ವೇಳೆ ಮಾತ್ರ ಅದನ್ನು ತೆರೆಯುವಂತೆ ಕ್ರಮವಹಿಸಬೇಕು ಎಂದು ಮೇಯರ್ ಅಧಿಕಾರಿಗಳಿಗೆ ಸೂಚಿಸಿದರು


ಕೆ.ಆರ್.ಮಾರುಕಟ್ಟೆ ನಿರ್ವಹಣೆ ಮಾಡುವ ಎಲ್ಲ ಅಧಿಕಾರಿಗಳು ಸಮ್ಮುಖದಲ್ಲಿ ವಾರಕ್ಕೊಮ್ಮೆ ಸಭೆ ನಡೆಸಬೇಕು. ಸಭೆಯ ಮಾಹಿತಿಯನ್ನು ಮಹಾಪೌರರ ಕಚೇರಿಗೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಭೆ ನಡೆಸದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತ್ತು ಕ್ರಮ ಕೈಗೊಳ್ಳಲಾಗವುದು ಎಂದು ಎಚ್ಚರಿಕೆ ನೀಡಿದ್ದೇನೆ ಎಂದರು.
ಸೌಮ್ಯಶ್ರೀ
Kn_bng_05_mayor_krmarket_7202707Body:Kn_bng_05_mayor_krmarket_7202707Conclusion:Kn_bng_05_mayor_krmarket_7202707

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.