ಬೆಂಗಳೂರು: ನಗರದ ಕಾಕ್ಸ್ ಟೌನ್ ಪ್ರದೇಶದಲ್ಲಿ 48 ಬೀದಿನಾಯಿಗಳನ್ನು ಹಿಡಿದು ಇಂದು ಸಂತಾನಹರಣ ಚಿಕಿತ್ಸೆ ಮಾಡಲಾಯಿತು.
ಪಾಲಿಕೆಯ ಎಲ್ಲಾ ವಲಯಗಳಲ್ಲಿ ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆಯನ್ನು ಒಂದೊಂದು ಎನ್ಜಿಒ ಮುಖಾಂತರ ಮಾಡಿಸಲಾಗ್ತಿದೆ. ಚಿಕಿತ್ಸೆ ಬಳಿಕ ಅವುಗಳ ಸ್ಥಳಕ್ಕೆ ಬಿಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತರಾದ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದರು.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಅವರು, ಬೀದಿ ನಾಯಿಗಳ ನಿಯಂತ್ರಣಕ್ಕೆ ಬಿಬಿಎಂಪಿ ಶ್ರಮಿಸುತ್ತಿದೆ. ಎಲ್ಲೆಡೆ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆ ಮಾಡಲಾಗುತ್ತಿದೆ. ಇಂದು ಕಾಕ್ಸ್ ಟೌನ್ ಪ್ರದೇಶದಲ್ಲಿ 48 ನಾಯಿಗಳಿಗೆ ವ್ಯಾಕ್ಸಿನೇಷನ್ ಮಾಡಲಾಗಿದೆ ಎಂದು ತಿಳಿಸಿದರು.