ETV Bharat / state

ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಬಿಬಿಎಂಪಿ ಕ್ರಮ : ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

author img

By

Published : Dec 22, 2022, 6:15 PM IST

Updated : Dec 22, 2022, 7:53 PM IST

ತಜ್ಞರ ಸಭೆ ನಂತರ ಸರ್ಕಾರ ಮಾರ್ಗಸೂಚಿಯಂತೆ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ, ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಸಲಹೆ ನೀಡಿದರು.

BBMP will take action as per government Covid guidelines
ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ: ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ ರೂಪಾಂತರ ಬಿಎಫ್7 ಪತ್ತೆಯಾಗಿದೆ. ಇದರಿಂದ ಕರ್ನಾಟಕದಲ್ಲಿ ಅದರಲ್ಲೂ ರಾಜಧಾನಿಯಲ್ಲಿ ಆತಂಕ ಶುರುವಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಮಾಧ್ಯಮಗಳಿಗೆ ಕೋವಿಡ್ ಕುರಿತು ಪ್ರತಿಕ್ರಿಯೆ ನೀಡಿದ ತುಷಾರ್ ಗಿರಿನಾಥ್ ಅವರು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಧಾನಸಭೆ ಕಲಾಪ ಮುಗಿಯುತ್ತಿದ್ದಂತೆ ಸಿಎಂ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.

ಕೋವಿಡ್ ಸಂಬಂಧ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ಸಭೆ ನಂತರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ. ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಸಲಹೆ ನೀಡಿದರು.

ಇದನ್ನೂ ಓದಿ: ಕೋವಿಡ್-19 ರೂಪಾಂತರಿ ಹಾವಳಿ.. ಮುನ್ನೆಚ್ಚರಿಕೆ ವಹಿಸಲು ತಜ್ಞರ ಸಲಹೆ

ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ ರೂಪಾಂತರ ಬಿಎಫ್7 ಪತ್ತೆಯಾಗಿದೆ. ಇದರಿಂದ ಕರ್ನಾಟಕದಲ್ಲಿ ಅದರಲ್ಲೂ ರಾಜಧಾನಿಯಲ್ಲಿ ಆತಂಕ ಶುರುವಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಮಾಧ್ಯಮಗಳಿಗೆ ಕೋವಿಡ್ ಕುರಿತು ಪ್ರತಿಕ್ರಿಯೆ ನೀಡಿದ ತುಷಾರ್ ಗಿರಿನಾಥ್ ಅವರು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಧಾನಸಭೆ ಕಲಾಪ ಮುಗಿಯುತ್ತಿದ್ದಂತೆ ಸಿಎಂ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.

ಕೋವಿಡ್ ಸಂಬಂಧ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ಸಭೆ ನಂತರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ. ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಸಲಹೆ ನೀಡಿದರು.

ಇದನ್ನೂ ಓದಿ: ಕೋವಿಡ್-19 ರೂಪಾಂತರಿ ಹಾವಳಿ.. ಮುನ್ನೆಚ್ಚರಿಕೆ ವಹಿಸಲು ತಜ್ಞರ ಸಲಹೆ

Last Updated : Dec 22, 2022, 7:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.