ETV Bharat / state

2023 ರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಜಾರಕಿಹೊಳಿ ಸಹೋದರರು..

author img

By

Published : May 13, 2023, 8:51 AM IST

Updated : May 13, 2023, 4:37 PM IST

ಬೆಳಗಾವಿಯ ಗೋಕಾಕ್​ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್​ ಜಾರಕಿಹೊಳಿ ಅವರು 104068 ಮತಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಇಬ್ಬರು ಹಾಗೂ ಕಾಂಗ್ರೆಸ್​ನಿಂದ ಒಬ್ಬರು ಆಯ್ಕೆ ಆಗಿದ್ದಾರೆ.

Jarkiholi brothers
ಜಾರಕಿಹೊಳಿ ಸಹೋದರರು

ಬೆಂಗಳೂರು/ಬೆಳಗಾವಿ : ಜಿಲ್ಲೆಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ ತನ್ನದೇ ಆದ ಪ್ರಾಬಲ್ಯವನ್ನು ಹೊಂದಿದೆ. ಈ ಬಾರಿ ಮೂವರು ಜಾರಕಿಹೊಳಿ ಸಹೋದರರು ಚುನಾವಣಾ ಕಣದಲ್ಲಿ ಸ್ಪರ್ಧಿಸಿ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಒಬ್ಬ ಸಹೋದರ ವಿಧಾನ ಪರಿಷತ್​ ಸದಸ್ಯರಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುತೂಹಲ ಮೂಡಿಸಿದ್ದ ಬೆಳಗಾವಿಯ ಗೋಕಾಕ್​ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್​ ಜಾರಕಿಹೊಳಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಸತತವಾಗಿ 7ನೇ ಬಾರಿಗೆ ಸಾಹುಕಾರ್​ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ. ರಮೇಶ್​ ಜಾರಕಿಹೊಳಿ ಅವರಿಗೆ 104068 ಮತಗಳು ಲಭಿಸಿದ್ದರೆ, ಪ್ರತಿಸ್ಪರ್ಧಿ ಕಡಾಡಿ ಮಹಾಂತೇಶ್​ 79431 ಮತಗಳಿಗೆ​ ತೃಪ್ತಿಪಟ್ಟಿದೆ.

ಸಿಡಿ ಹಗರಣ ಸೇರಿದಂತೆ ಲಕ್ಷ್ಮಣ ಸವದಿ ಅವರೊಂದಿಗಿನ ಗುದ್ದಾಟ, ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗಿನ ವಾಕ್ಸಮರ ಮೂಲಕ ಹೆಚ್ಚು ಸುದ್ದಿಯಲ್ಲಿದ್ದ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಮಹಾಂತೇಶ್ ಕಡಾಡಿ ಸೋಲು ಕಂಡಿದ್ದಾರೆ. ಗೋಕಾಕ್ ಮಾತ್ರವಲ್ಲದೇ ಬೆಳಗಾವಿ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ಅವರು ಹೊತ್ತಿದ್ದರು.

2018ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಮೇಶ್ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಶೋಕ್ ನಿಂಗಯ್ಯ ಸ್ವಾಮಿ ಪೂಜಾರಿ ಹಾಗೂ ಜೆಡಿಎಸ್ ಅಭ್ಯರ್ಥಿ ಕರೆಪ್ಪ ಲಕ್ಕಪ್ಪ ತಳವಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆ ಎದುರಿಸಿದ್ದರು. 2019ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಹೋದರ ಲಖನ್ ಲಕ್ಷ್ಮಣರಾವ್ ಜಾರಕಿಹೊಳಿ ಹಾಗೂ ಜೆಡಿಎಸ್ ಅಭ್ಯರ್ಥಿ ಅಶೋಕ್ ನಿಂಗಯ್ಯ ಸ್ವಾಮಿ ಪೂಜಾರಿ ಅವರನ್ನು ಮಣಿಸಿ ಜಯಭೇರಿ ಬಾರಿಸಿದ್ದರು. ಬೆನ್ನಲ್ಲೇ ಸಚಿವ ಸ್ಥಾನವನ್ನೂ ಗಿಟ್ಟಿಸಿಕೊಂಡಿದ್ದರು.

ಸತೀಶ್​ ಜಾರಕಿಹೊಳಿ (ಯಮಕನಮರಡಿ): ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ 99,987 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಸವರಾಜ ಹುಂದಿ (ಬಿಜೆಪಿ) ಅವರು 42941 ಮತಗಳನ್ನು ಪಡೆದಿದ್ದಾರೆ.

ಕಾಂಗ್ರೆಸ್​ ಕಾರ್ಯಾಧ್ಯಕ್ಷರಾದ ಸತೀಶ್​ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಯಮಕನಮರಡಿಯು ಸಂಕೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿತ್ತು. ಸತೀಶ್​ ಜಾರಕಿಹೊಳಿ ಅವರನ್ನು ಹೇಗಾದರೂ ಮಾಡಿ ಈ ಬಾರಿ ಮಣಿಸಲೇಬೇಕೆಂದು ಪಣ ತೊಟ್ಟಿರುವ ಕಮಲ ಪಾಳಯ ಬಸವರಾಜ ಹುಂಡ್ರಿ ಅವರನ್ನು ಕಣಕ್ಕಿಳಿಸಿತ್ತು.

ಬಾಲಚಂದ್ರ ಜಾರಕಿಹೊಳಿ (ಅರಭಾವಿ): ಜೆಡಿಎಸ್​ನ ಮಾಜಿ ನಾಯಕ, ಹಾಲಿ ಬಿಜೆಪಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. 2004 ಮತ್ತು 2008ರಲ್ಲಿ ಜೆಡಿಎಸ್​ನಿಂದ ಗೆದ್ದಿದ್ದ ಬಾಲಚಂದ್ರ, 2013, 2018ರಂದು ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ. ಈ ಬಾರಿ ಮುನ್ನಡೆ ಸಾಧಿಸಿದ್ದಾರೆ.

ಈ ಬಾರಿ ಬಾಲಚಂದ್ರ ಅವರನ್ನು ಸೋಲಿಸಬೇಕೆಂದು ಕಾಂಗ್ರೆಸ್​ ಪಣ ತೊಟ್ಟಿದ್ದು, ಕಳೆದ ಬಾರಿ‌ ಪರಾಭವಗೊಂಡಿದ್ದ ಅರವಿಂದ ದಳವಾಯಿ ಅವರನ್ನೇ ಮತ್ತೆ ಕಣಕ್ಕಿಳಿಸಿದೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಭೀಮಪ್ಪ ಗಡಾದ ಸ್ಪರ್ಧೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಭೀಮಪ್ಪ ಗಡಾದ ಎರಡನೇ ಸ್ಥಾನ ಪಡೆದು ಗಮನ ಸೆಳೆದಿದ್ದರು. ಈ ಬಾರಿ ಜೆಡಿಎಸ್​ನಿಂದ ಪ್ರಕಾಶ್ ರಾಮಪ್ಪ ಕಲಶೆಟ್ಟಿ ಕಣದಲ್ಲಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆ : ಕಣದಲ್ಲಿ ಅತಿರಥ ಮಹಾರಥರು.. ಫಲಿತಾಂಶಕ್ಕೆ ಕ್ಷಣಗಣನೆ

ಬೆಂಗಳೂರು/ಬೆಳಗಾವಿ : ಜಿಲ್ಲೆಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ ತನ್ನದೇ ಆದ ಪ್ರಾಬಲ್ಯವನ್ನು ಹೊಂದಿದೆ. ಈ ಬಾರಿ ಮೂವರು ಜಾರಕಿಹೊಳಿ ಸಹೋದರರು ಚುನಾವಣಾ ಕಣದಲ್ಲಿ ಸ್ಪರ್ಧಿಸಿ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಒಬ್ಬ ಸಹೋದರ ವಿಧಾನ ಪರಿಷತ್​ ಸದಸ್ಯರಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುತೂಹಲ ಮೂಡಿಸಿದ್ದ ಬೆಳಗಾವಿಯ ಗೋಕಾಕ್​ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್​ ಜಾರಕಿಹೊಳಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಸತತವಾಗಿ 7ನೇ ಬಾರಿಗೆ ಸಾಹುಕಾರ್​ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ. ರಮೇಶ್​ ಜಾರಕಿಹೊಳಿ ಅವರಿಗೆ 104068 ಮತಗಳು ಲಭಿಸಿದ್ದರೆ, ಪ್ರತಿಸ್ಪರ್ಧಿ ಕಡಾಡಿ ಮಹಾಂತೇಶ್​ 79431 ಮತಗಳಿಗೆ​ ತೃಪ್ತಿಪಟ್ಟಿದೆ.

ಸಿಡಿ ಹಗರಣ ಸೇರಿದಂತೆ ಲಕ್ಷ್ಮಣ ಸವದಿ ಅವರೊಂದಿಗಿನ ಗುದ್ದಾಟ, ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗಿನ ವಾಕ್ಸಮರ ಮೂಲಕ ಹೆಚ್ಚು ಸುದ್ದಿಯಲ್ಲಿದ್ದ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಮಹಾಂತೇಶ್ ಕಡಾಡಿ ಸೋಲು ಕಂಡಿದ್ದಾರೆ. ಗೋಕಾಕ್ ಮಾತ್ರವಲ್ಲದೇ ಬೆಳಗಾವಿ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ಅವರು ಹೊತ್ತಿದ್ದರು.

2018ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಮೇಶ್ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಶೋಕ್ ನಿಂಗಯ್ಯ ಸ್ವಾಮಿ ಪೂಜಾರಿ ಹಾಗೂ ಜೆಡಿಎಸ್ ಅಭ್ಯರ್ಥಿ ಕರೆಪ್ಪ ಲಕ್ಕಪ್ಪ ತಳವಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆ ಎದುರಿಸಿದ್ದರು. 2019ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಹೋದರ ಲಖನ್ ಲಕ್ಷ್ಮಣರಾವ್ ಜಾರಕಿಹೊಳಿ ಹಾಗೂ ಜೆಡಿಎಸ್ ಅಭ್ಯರ್ಥಿ ಅಶೋಕ್ ನಿಂಗಯ್ಯ ಸ್ವಾಮಿ ಪೂಜಾರಿ ಅವರನ್ನು ಮಣಿಸಿ ಜಯಭೇರಿ ಬಾರಿಸಿದ್ದರು. ಬೆನ್ನಲ್ಲೇ ಸಚಿವ ಸ್ಥಾನವನ್ನೂ ಗಿಟ್ಟಿಸಿಕೊಂಡಿದ್ದರು.

ಸತೀಶ್​ ಜಾರಕಿಹೊಳಿ (ಯಮಕನಮರಡಿ): ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ 99,987 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಸವರಾಜ ಹುಂದಿ (ಬಿಜೆಪಿ) ಅವರು 42941 ಮತಗಳನ್ನು ಪಡೆದಿದ್ದಾರೆ.

ಕಾಂಗ್ರೆಸ್​ ಕಾರ್ಯಾಧ್ಯಕ್ಷರಾದ ಸತೀಶ್​ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಯಮಕನಮರಡಿಯು ಸಂಕೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿತ್ತು. ಸತೀಶ್​ ಜಾರಕಿಹೊಳಿ ಅವರನ್ನು ಹೇಗಾದರೂ ಮಾಡಿ ಈ ಬಾರಿ ಮಣಿಸಲೇಬೇಕೆಂದು ಪಣ ತೊಟ್ಟಿರುವ ಕಮಲ ಪಾಳಯ ಬಸವರಾಜ ಹುಂಡ್ರಿ ಅವರನ್ನು ಕಣಕ್ಕಿಳಿಸಿತ್ತು.

ಬಾಲಚಂದ್ರ ಜಾರಕಿಹೊಳಿ (ಅರಭಾವಿ): ಜೆಡಿಎಸ್​ನ ಮಾಜಿ ನಾಯಕ, ಹಾಲಿ ಬಿಜೆಪಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. 2004 ಮತ್ತು 2008ರಲ್ಲಿ ಜೆಡಿಎಸ್​ನಿಂದ ಗೆದ್ದಿದ್ದ ಬಾಲಚಂದ್ರ, 2013, 2018ರಂದು ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ. ಈ ಬಾರಿ ಮುನ್ನಡೆ ಸಾಧಿಸಿದ್ದಾರೆ.

ಈ ಬಾರಿ ಬಾಲಚಂದ್ರ ಅವರನ್ನು ಸೋಲಿಸಬೇಕೆಂದು ಕಾಂಗ್ರೆಸ್​ ಪಣ ತೊಟ್ಟಿದ್ದು, ಕಳೆದ ಬಾರಿ‌ ಪರಾಭವಗೊಂಡಿದ್ದ ಅರವಿಂದ ದಳವಾಯಿ ಅವರನ್ನೇ ಮತ್ತೆ ಕಣಕ್ಕಿಳಿಸಿದೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಭೀಮಪ್ಪ ಗಡಾದ ಸ್ಪರ್ಧೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಭೀಮಪ್ಪ ಗಡಾದ ಎರಡನೇ ಸ್ಥಾನ ಪಡೆದು ಗಮನ ಸೆಳೆದಿದ್ದರು. ಈ ಬಾರಿ ಜೆಡಿಎಸ್​ನಿಂದ ಪ್ರಕಾಶ್ ರಾಮಪ್ಪ ಕಲಶೆಟ್ಟಿ ಕಣದಲ್ಲಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆ : ಕಣದಲ್ಲಿ ಅತಿರಥ ಮಹಾರಥರು.. ಫಲಿತಾಂಶಕ್ಕೆ ಕ್ಷಣಗಣನೆ

Last Updated : May 13, 2023, 4:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.