ETV Bharat / state

ಬಿಇಎಂಎಲ್ ಖಾಸಗೀಕರಣ ಪ್ರಶ್ನಿಸಿ ಪಿಐಎಲ್: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

author img

By

Published : Jan 19, 2022, 1:29 PM IST

ಬಿಇಎಂಎಲ್ ಖಾಸಗೀಕರಣ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

Karnataka high court notice to Central government, BEML privatization PIL, Bharat Earth Movers Limited, Karnataka high court news, ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್, ಬಿಇಎಂಎಲ್ ಖಾಸಗೀಕರಣ ಪ್ರಶ್ನಿಸಿ ಪಿಐಎಲ್, ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್, ಕರ್ನಾಟಕ ಹೈಕೋರ್ಟ್ ಸುದ್ದಿ,
ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಖಾಸಗೀಕರಣಗೊಳಿಸುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ಬಿಇಎಂಎಲ್​ಗೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಬಿಇಎಂಎಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ರುದ್ರಯ್ಯ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ರಕ್ಷಣಾ ವಲಯದ ಅತ್ಯಂತ ಪ್ರಮುಖ ಉದ್ದಿಮೆಯಾದ ಬಿಇಎಂಎಲ್​ನ್ನು ಖಾಸಗೀಕರಣಗೊಳಿಸುವ ಕ್ರಮ ಸರಿಯಾದದ್ದಲ್ಲ.

ಹಾಗಿದ್ದೂ, ಖಾಸಗೀಕರಣ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಆಸಕ್ತ ಬಿಡ್ಡರ್​ಗಳ ಮೌಲ್ಯಮಾಪನ ನಡೆಸಲಾಗುತ್ತಿದೆ. ಖಾಸಗೀಕರಣ ಪ್ರಕ್ರಿಯೆ ಕೈಬಿಡುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ವಿವರಿಸಿದರು.

ಓದಿ: ದಡ್ಡರು ಮದುವೆಯಾಗ್ತಾರೆ, ವಿವೇಕಿಗಳು ಪ್ರೀತಿಯಲ್ಲೇ ಇರ್ತಾರೆ.. ಇದು ಆರ್​ಜಿವಿ ವೇದಾಂತ

ಅಲ್ಲದೇ, ರಕ್ಷಣಾ ವಲಯದ ಉದ್ದಿಮೆಯಾದ್ದರಿಂದ ಖಾಸಗೀಕರಣಗೊಳಿಸುವುದು ಸರಿಯಲ್ಲ. ಹೀಗಾಗಿ, ಖಾಸಗೀಕರಣ ಪ್ರಕ್ರಿಯೆಗೆ ನ್ಯಾಯಾಲಯ ಮಧ್ಯಂತರ ತಡೆ ನೀಡಬೇಕು. ಇಲ್ಲವೇ, ಖಾಸಗೀಕರಣ ಪ್ರಕ್ರಿಯೆಯು ಈ ಅರ್ಜಿ ಸಂಬಂಧ ನ್ಯಾಯಾಲಯ ನೀಡಲಿರುವ ಅಂತಿಮ ತೀರ್ಪಿಗೆ ಒಳಪಡಲಿದೆ ಎಂದಾದರೂ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮೊದಲು ನೋಟಿಸ್ ಜಾರಿಯಾಗಲಿ. ಪ್ರತಿವಾದಿಗಳು ತಮ್ಮ ನಿಲುವು ತಿಳಿಸಿದ ನಂತರ ಈ ಕುರಿತು ವಿಚಾರಣೆ ನಡೆಸೋಣ ಎಂದು ತಿಳಿಸಿ ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಜತೆಗೆ, ನೋಟಿಸ್ ಜಾರಿಗೆ ಆದೇಶಿಸಿದ ಪೀಠ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿತು.

ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಖಾಸಗೀಕರಣಗೊಳಿಸುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ಬಿಇಎಂಎಲ್​ಗೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಬಿಇಎಂಎಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ರುದ್ರಯ್ಯ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ರಕ್ಷಣಾ ವಲಯದ ಅತ್ಯಂತ ಪ್ರಮುಖ ಉದ್ದಿಮೆಯಾದ ಬಿಇಎಂಎಲ್​ನ್ನು ಖಾಸಗೀಕರಣಗೊಳಿಸುವ ಕ್ರಮ ಸರಿಯಾದದ್ದಲ್ಲ.

ಹಾಗಿದ್ದೂ, ಖಾಸಗೀಕರಣ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಆಸಕ್ತ ಬಿಡ್ಡರ್​ಗಳ ಮೌಲ್ಯಮಾಪನ ನಡೆಸಲಾಗುತ್ತಿದೆ. ಖಾಸಗೀಕರಣ ಪ್ರಕ್ರಿಯೆ ಕೈಬಿಡುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ವಿವರಿಸಿದರು.

ಓದಿ: ದಡ್ಡರು ಮದುವೆಯಾಗ್ತಾರೆ, ವಿವೇಕಿಗಳು ಪ್ರೀತಿಯಲ್ಲೇ ಇರ್ತಾರೆ.. ಇದು ಆರ್​ಜಿವಿ ವೇದಾಂತ

ಅಲ್ಲದೇ, ರಕ್ಷಣಾ ವಲಯದ ಉದ್ದಿಮೆಯಾದ್ದರಿಂದ ಖಾಸಗೀಕರಣಗೊಳಿಸುವುದು ಸರಿಯಲ್ಲ. ಹೀಗಾಗಿ, ಖಾಸಗೀಕರಣ ಪ್ರಕ್ರಿಯೆಗೆ ನ್ಯಾಯಾಲಯ ಮಧ್ಯಂತರ ತಡೆ ನೀಡಬೇಕು. ಇಲ್ಲವೇ, ಖಾಸಗೀಕರಣ ಪ್ರಕ್ರಿಯೆಯು ಈ ಅರ್ಜಿ ಸಂಬಂಧ ನ್ಯಾಯಾಲಯ ನೀಡಲಿರುವ ಅಂತಿಮ ತೀರ್ಪಿಗೆ ಒಳಪಡಲಿದೆ ಎಂದಾದರೂ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮೊದಲು ನೋಟಿಸ್ ಜಾರಿಯಾಗಲಿ. ಪ್ರತಿವಾದಿಗಳು ತಮ್ಮ ನಿಲುವು ತಿಳಿಸಿದ ನಂತರ ಈ ಕುರಿತು ವಿಚಾರಣೆ ನಡೆಸೋಣ ಎಂದು ತಿಳಿಸಿ ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಜತೆಗೆ, ನೋಟಿಸ್ ಜಾರಿಗೆ ಆದೇಶಿಸಿದ ಪೀಠ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.