ETV Bharat / state

ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕ ಆರಂಭ..

author img

By

Published : Feb 15, 2022, 8:13 PM IST

Updated : Feb 15, 2022, 8:52 PM IST

ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಇಂದು ಶುರು ಮಾಡಿದ್ದೇವೆ. ಆದಷ್ಟು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ಈ ಘಟಕ ಆರಂಭಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

Dr. K. Sudhakar
ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನದ ಪ್ರಯುಕ್ತ ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಮೊದಲ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕ ಆರಂಭಿಸಲಾಗಿದೆ. ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕಕ್ಕೆ ಇಂದು ಸಚಿವ ಸುಧಾಕರ್ ಚಾಲನೆ ನೀಡಿದರು. ಈ ವೇಳೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕಿದ್ವಾಯಿ ನಿರ್ದೇಶಕ ಡಾ. ಸಿ. ರಾಮಚಂದ್ರ ಉಪಸ್ಥಿತರಿದ್ದರು. ಲೋಕಾಪರ್ಣೆ ನಿಮಿತ್ತ ಮೊದಲ ಇಬ್ಬರು ಮಕ್ಕಳಿಗೆ ಬೋನ್ ಮ್ಯಾರೋ ಟ್ರಾನ್ಸ್ ಆಪರೇಷನ್ ನಡೆಸಲಾಯಿತು.

ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕ ಆರಂಭ..

ಈ ಕುರಿತು ಮಾತಾನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಇಂದು ಶುರು ಮಾಡಿದ್ದೇವೆ. ಆದಷ್ಟು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ಈ ಘಟಕ ಆರಂಭಿಸಿದ್ದೇವೆ. ಇಂದು ಇಬ್ಬರು ಮಕ್ಕಳಿಗೆ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಆರಂಭ ಆಗಿದ್ದು, ಎಲ್ಲರಿಗೂ ಉತ್ತಮ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಗುರಿ ಅಂತ ತಿಳಿಸಿದರು.

ಕುಸಿದು ಬಿದ್ದ ಪರಿಸರವಾದಿ ಯಲ್ಲಪ್ಪ ರೆಡ್ಡಿ: ಸಚಿವ ಸುಧಾಕರ್ ಮಾತನಾಡುವ ವೇಳೆ ಅತಿಥಿಯಾಗಿ ಆಗಮಿಸಿದ್ದ ಪರಿಸರವಾದಿ ಯಲ್ಲಪ್ಪ ರೆಡ್ಡಿ ಕುಸಿದು ಬಿದ್ದ ಘಟನೆ ನಡೆಯಿತು.

ಇದನ್ನೂ ಓದಿ: ಮಕ್ಕಳಲ್ಲಿ ಕ್ಯಾನ್ಸರ್: ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ತಜ್ಞ ವೈದ್ಯರಿಂದ ವಿಶೇಷ ಜಾಗೃತಿ

ಬೆಂಗಳೂರು: ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನದ ಪ್ರಯುಕ್ತ ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಮೊದಲ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕ ಆರಂಭಿಸಲಾಗಿದೆ. ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕಕ್ಕೆ ಇಂದು ಸಚಿವ ಸುಧಾಕರ್ ಚಾಲನೆ ನೀಡಿದರು. ಈ ವೇಳೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕಿದ್ವಾಯಿ ನಿರ್ದೇಶಕ ಡಾ. ಸಿ. ರಾಮಚಂದ್ರ ಉಪಸ್ಥಿತರಿದ್ದರು. ಲೋಕಾಪರ್ಣೆ ನಿಮಿತ್ತ ಮೊದಲ ಇಬ್ಬರು ಮಕ್ಕಳಿಗೆ ಬೋನ್ ಮ್ಯಾರೋ ಟ್ರಾನ್ಸ್ ಆಪರೇಷನ್ ನಡೆಸಲಾಯಿತು.

ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕ ಆರಂಭ..

ಈ ಕುರಿತು ಮಾತಾನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಇಂದು ಶುರು ಮಾಡಿದ್ದೇವೆ. ಆದಷ್ಟು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ಈ ಘಟಕ ಆರಂಭಿಸಿದ್ದೇವೆ. ಇಂದು ಇಬ್ಬರು ಮಕ್ಕಳಿಗೆ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಆರಂಭ ಆಗಿದ್ದು, ಎಲ್ಲರಿಗೂ ಉತ್ತಮ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಗುರಿ ಅಂತ ತಿಳಿಸಿದರು.

ಕುಸಿದು ಬಿದ್ದ ಪರಿಸರವಾದಿ ಯಲ್ಲಪ್ಪ ರೆಡ್ಡಿ: ಸಚಿವ ಸುಧಾಕರ್ ಮಾತನಾಡುವ ವೇಳೆ ಅತಿಥಿಯಾಗಿ ಆಗಮಿಸಿದ್ದ ಪರಿಸರವಾದಿ ಯಲ್ಲಪ್ಪ ರೆಡ್ಡಿ ಕುಸಿದು ಬಿದ್ದ ಘಟನೆ ನಡೆಯಿತು.

ಇದನ್ನೂ ಓದಿ: ಮಕ್ಕಳಲ್ಲಿ ಕ್ಯಾನ್ಸರ್: ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ತಜ್ಞ ವೈದ್ಯರಿಂದ ವಿಶೇಷ ಜಾಗೃತಿ

Last Updated : Feb 15, 2022, 8:52 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.