ETV Bharat / state

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್​... ತಪ್ಪಿದ ಅನಾಹುತ - undefined

ಬನಶಂಕರಿಯಿಂದ ಹೆಬ್ಬಾಳಕ್ಕೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಬಿಎಂಟಿಸಿ
author img

By

Published : Jul 13, 2019, 12:26 AM IST

Updated : Jul 13, 2019, 8:40 AM IST

ಬೆಂಗಳೂರು: ಬಿಎಂಟಿಸಿ ಬಸ್​​ನ ಇಂಜಿನ್​​ನಲ್ಲಿ ಬೆಂಕಿ ಹೊತ್ತಿಕೊಂಡು, ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ಘಟನೆ ನಗರದ ಮಾರತ್ತಹಳ್ಳಿ ರಿಂಗ್ ರಸ್ತೆಯ ದೊಡ್ಡನೆಕ್ಕುಂದಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.

ಬನಶಂಕರಿಯಿಂದ ಹೆಬ್ಬಾಳಕ್ಕೆ ಸಂಚರಿಸುತ್ತಿದ್ದ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು‌ ಗಮನಿಸಿದ ಬಸ್​ ಚಾಲಕ ಪ್ರಯಾಣಿಕರನ್ನು‌ ಕೆಳಗಿಳಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸಮಯಪ್ರಜ್ಞೆ ಮೆರೆದಿದ್ದಾನೆ.

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

ಬಳಿಕ ಬಸ್ ಚಾಲಕ ಹಾಗೂ ನಿರ್ವಾಹಕ ಬೆಂಕಿ ನಂದಿಸಲು ಯತ್ನಿಸಿದರು. ಅಲ್ಲದೆ ಇವರೊಟ್ಟಿಗೆ ಸಾರ್ವಜನಿಕರು ಕೈಜೋಡಿಸಿ ಬೆಂಕಿ ನಂದಿಸಿದರಾದರೂ ಬಸ್ ಸುಟ್ಟು ಕರಕಲಾಗಿದೆ.

ಬೆಂಗಳೂರು: ಬಿಎಂಟಿಸಿ ಬಸ್​​ನ ಇಂಜಿನ್​​ನಲ್ಲಿ ಬೆಂಕಿ ಹೊತ್ತಿಕೊಂಡು, ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ಘಟನೆ ನಗರದ ಮಾರತ್ತಹಳ್ಳಿ ರಿಂಗ್ ರಸ್ತೆಯ ದೊಡ್ಡನೆಕ್ಕುಂದಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.

ಬನಶಂಕರಿಯಿಂದ ಹೆಬ್ಬಾಳಕ್ಕೆ ಸಂಚರಿಸುತ್ತಿದ್ದ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು‌ ಗಮನಿಸಿದ ಬಸ್​ ಚಾಲಕ ಪ್ರಯಾಣಿಕರನ್ನು‌ ಕೆಳಗಿಳಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸಮಯಪ್ರಜ್ಞೆ ಮೆರೆದಿದ್ದಾನೆ.

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

ಬಳಿಕ ಬಸ್ ಚಾಲಕ ಹಾಗೂ ನಿರ್ವಾಹಕ ಬೆಂಕಿ ನಂದಿಸಲು ಯತ್ನಿಸಿದರು. ಅಲ್ಲದೆ ಇವರೊಟ್ಟಿಗೆ ಸಾರ್ವಜನಿಕರು ಕೈಜೋಡಿಸಿ ಬೆಂಕಿ ನಂದಿಸಿದರಾದರೂ ಬಸ್ ಸುಟ್ಟು ಕರಕಲಾಗಿದೆ.

Intro:ರಸ್ತೆಯಲ್ಲೆ ಹೊತ್ತಿಉರಿದ ಬಿಎಂಟಿಸಿ ಬಸ್.ಚಾಲಕನ ಸಮಯ ಪ್ರಜ್ಞೆಯಿಂದ ಬಚಾವ್‌ ಆದ ಪ್ರಯಾಣಿಕರು.




ಅದ್ಯಾಕೊ ಏನೋ ಇತ್ತೀಚೆಗೆ ನಗರದಲ್ಲಿ ಬಿಎಂಟಿಸಿ ಬಸ್ ಗಳು ಎಲ್ಲಂದರಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗುತ್ತಿದ್ದು ಪ್ರಯಾಣಿಕರು ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸಲು ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಇಂದು ಸಹ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್ ನ ಇಂಜಿನ್ ನಲ್ಲಿ ಬೆಂಕಿ ಹೊತ್ತಿಕೊಂಡು ನೋಡ ನೋಡುತ್ತಿದ್ದಂತೆ ಸುಟ್ಟು ಭಸ್ಮವಾಗಿ. .


ರಸ್ತೆಯಲ್ಲೆ ಹೊತ್ತಿ ಉರಿಯುತ್ತಿರುವ ಬಿಎಂಟಿಸಿ ಬಸ್, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿರುವ ಬಸ್ ಚಾಲಕ-ನಿರ್ವಾಹಕ ಹಾಗೂ ಸಾರ್ವಜನಿಕರು. ಇಂತಹ ದೃಶ್ಯಗಳು ಕಂಡುಬಂದದ್ದು ಬೆಂಗಳೂರಿನ ಮಾರತ್ತಹಳ್ಳಿ ರಿಂಗ್ ರಸ್ತೆಯ ದೊಡ್ಡನೆಕ್ಕುಂದಿ ಬಸ್ ನಿಲ್ದಾಣದ ಬಳಿ. ಬನಶಂಕರಿ ಯಿಂದ ಹೆಬ್ಬಾಳಕ್ಕೆ ಸಂಚರಿಸುತ್ತಿದ್ದ 500A ಮಾರ್ಗ್ ಸಂಖ್ಯೆಯ ಬಸ್ ದೊಡ್ಡನೆಕ್ಕುಂದು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಸ್ವಲ್ಪ ಮುಂದೆ ಸಾಗಿದಂತೆ ಬಸ್ ನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿತು ಇದನ್ನು‌ ಗಮನಿಸಿದ ಬಸ್ಸ್ ಚಾಲಕ ಪ್ರಯಾಣಿಕರನ್ನು‌ ಕೆಳಗೆ ಇಳಿಯುವಂತೆ ಹೇಳಿ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಚಾಲಕನ ಸಮಯ ಪ್ರಜ್ಞೆಯಿಂದ
ಬಚಾವ್ ಆಗಿದ್ದಾರೆ. ಆದರೆ ಬಸ್ಸ್ ಸುಟ್ಟು ಭಸ್ಮವಾಗಿದೆ.


Body:ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೂಡಲೆ ಕೆಳಗಿಳಿಸಿದ ಬಸ್ ಚಾಲಕ ಹಾಗೂ ನಿರ್ವಾಹಕ ಬೆಂಕಿ ನಂದಿಸಲು ಯತ್ನಿಸಿದ್ದು, ಇವರೊಟ್ಟಿಗೆ ಸಾರ್ವಜನಿಕರು ಕೈಜೋಡಿಸಿ ಬೆಂಕಿ ನಂದಿಸಿದರಾದರು ಅಷ್ಟರಲ್ಲಿ ಬಸ್ ಅರ್ಧದಷ್ಟು ಸುಟ್ಟು ಭಸ್ಮವಾಗಿದೆ. ಪದೆ ಪದೆ ಇಂತಹ ಅವಘಡಗಳು ಸಂಭವಿಸುತ್ತಿದ್ದು ಸಾರಿಗೆ ಇಲಾಖೆ ಸರಿಯಾದ ಸಮಯಕ್ಕೆ ಬಸ್ ಗಳನ ನಿರ್ವಹಣೆ(ಸರ್ವಿಸ್) ಮಾಡದೆ ಇರುವುದೆ ಇದಕ್ಕೆ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ.



Conclusion:ಒಟ್ಟಾರೆ ನಗರ ಸಾರಿಗೆ ಬಸ್ ಗಳು ಇತ್ತೀಚೆಗೆ ಹೆಚ್ಚು ಹೆಚ್ಚಾಗಿ ಇಂತಹ ಬೆಂಕಿ ಅವಘಡಗಳಿಗೆ ಒಳಗಾಗುತ್ತಿದ್ದು, ಇನ್ನಾದರು ಸಂಬಂದಪಟ್ಟ ಅಧಿಕಾರಿಗಳು ಇದಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಿ ಪ್ರಯಾಣಿಕರಲ್ಲಿನ ಭಯವನ್ನು ದೂರ ಮಾಡುತ್ತಾರ ಎಂಬುದನ್ನು ಕಾದುನೋಡಬೇಕಿದೆ.

ಧರ್ಮರಾಜು ಎಂ ಕೆಆರ್ ಪುರ.

ಬೈಟ್: ಮೆಹಬೂಬ್, ಪ್ರತ್ಯಕ್ಷದರ್ಶಿ.
Last Updated : Jul 13, 2019, 8:40 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.