ETV Bharat / state

Bengaluru bandh: ವ್ಯಾಪಾರ ವಹಿವಾಟು ಸ್ಥಗಿತದಿಂದ ಅಂದಾಜು 200 ರೂ. ಕೋಟಿ ನಷ್ಟ; ಎಫ್‌ಕೆಸಿಸಿಐ

author img

By ETV Bharat Karnataka Team

Published : Sep 26, 2023, 9:02 PM IST

Updated : Sep 26, 2023, 10:47 PM IST

ಬೆಂಗಳೂರು ಬಂದ್​ನಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡು ಸುಮಾರು 200 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಎಫ್​ಕೆಸಿಸಿಐ ತಿಳಿಸಿದೆ.

bengaluru-bandh-estimated-loss-of-rs-200-crore-due-to-business-disruption-fkcci
ಬೆಂಗಳೂರು ಬಂದ್ : ವ್ಯಾಪಾರ ವಹಿವಾಟು ಸ್ಥಗಿತದಿಂದ ಅಂದಾಜು 200 ಕೋಟಿ ನಷ್ಟ: ಎಫ್‌ಕೆಸಿಸಿಐ
ಬೆಂಗಳೂರು ಬಂದ್ : ವ್ಯಾಪಾರ ವಹಿವಾಟು ಸ್ಥಗಿತದಿಂದ ಅಂದಾಜು 200 ಕೋಟಿ ನಷ್ಟ: ಎಫ್‌ಕೆಸಿಸಿಐ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಬೆಂಗಳೂರು ಬಂದ್​ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಆದರೆ, ಬೆಂಗಳೂರು ಬಂದ್​​ನಿಂದ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ನಷ್ಟ ಸಂಭವಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು, ಹೋಟೆಲ್​ಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು.

ಬಂದ್ ಹಿನ್ನೆಲೆ ನಗರದಲ್ಲಿ ವಾಹನ‌ ಸಂಚಾರ, ಜನರ ಓಡಾಟದ ಪ್ರಮಾಣವೂ ಕಡಿಮೆ ಇತ್ತು. ಹೀಗಾಗಿ ಬೆಂಗಳೂರು ಬಹುತೇಕ ಸ್ತಬ್ಧವಾಗಿತ್ತು. ಅಂಗಡಿ ಮುಂಗಟ್ಟು, ಹೋಟೆಲ್​, ಸಿನಿಮಾ ಮಂದಿರಗಳು, ಮಾಲ್​ಗಳು, ಬಾರ್​ಗಳು, ಸೂಪರ್ ಮಾರ್ಕೆಟ್​​ಗಳು ಬಹುತೇಕ ಬಂದ್ ಆಗಿದ್ದವು. ಹೀಗಾಗಿ ಬೆಂಗಳೂರಲ್ಲಿ ಬಂದ್​ನಿಂದ ಬಹುತೇಕ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದವು.

ವಾಣಿಜ್ಯ ಒಕ್ಕೂಟ ಎಫ್​ಕೆಸಿಸಿಐ ಅಧ್ಯಕ್ಷ ಬಿ ವಿ ಗೋಪಾಲ್ ರೆಡ್ಡಿ ಅವರು ಬೆಂಗಳೂರು ಬಂದ್​ನಿಂದ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದ ಒಟ್ಟು ಆದಾಯದಲ್ಲಿ ಬೆಂಗಳೂರಿನಲ್ಲಿನ ಆದಾಯದ ಪಾಲು ಶೇ.60ರಷ್ಟಿದೆ. ಬಂದ್​ನಿಂದ ವ್ಯಾಪಾರ ವಹಿವಾಟು ಸ್ಥಗಿತವಾಗಿರುವುದರಿಂದ ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿಸಿದರು.

ಬೆಂಗಳೂರು ಬಂದ್​ನಿಂದ ಜಿಎಸ್​ಟಿ ಸಂಗ್ರಹ ವ್ಯತ್ಯಯವಾಗಿದ್ದು, 10 ತಾಸಿನ ಬೆಂಗಳೂರು ಬಂದ್​ನಿಂದ ಅಂದಾಜು ಸುಮಾರು 200-250 ಕೋಟಿ ರೂ‌. ನಷ್ಟ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಇಂತಹ ಬಂದ್​ಗಳಿಂದ ಆರ್ಥಿಕ ವಹಿವಾಟು ಕುಂಠಿತವಾಗಿ ನಷ್ಟ ಉಂಟಾಗುತ್ತದೆ ಎಂದು ತಿಳಿಸಿದರು.

ಬಿಎಂಟಿಸಿ ಬಸ್‌, ಖಾಸಗಿ ವಾಹನ ಸಂಚಾರ: ಇನ್ನು ಕೆಎಸ್ಆರ್​ಟಿಸಿ, ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ಸೇವೆ ಎಂದಿನಂತೆ ನಡೆದಿದೆ. ಆಟೋ, ಖಾಸಗಿ ವಾಹನಗಳ ಸಂಚಾರದಲ್ಲಿ ಹೆಚ್ಚಿನ ವ್ಯತ್ಯಯ ಕಂಡು ಬಂದಿಲ್ಲ. ಆದರೆ ಬಹುತೇಕ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಬಿಎಂಟಿಸಿ ಹಾಗೂ ಕೆಎಸ್‍ಆರ್​ಟಿಸಿ ನೌಕರರ ಸಂಘವು ಮೊದಲು ಬಂದ್​ಗೆ ಬೆಂಬಲ ನೀಡುವುದಾಗಿ ತಿಳಿಸಿತ್ತು. ಮಂಗಳವಾರ ಬಿಎಂಟಿಸಿ ಬಸ್‍ಗಳನ್ನು ರಸ್ತೆಗೆ ಇಳಿಸಲ್ಲ ಎಂದು ನೌಕರರ ಸಂಘ ಹೇಳಿತ್ತು. ಆದರೆ ಬಿಎಂಟಿಸಿ ಎಂದಿನಂತೆ ಕಾರ್ಯಾಚರಣೆ ನಡೆಸಿದೆ. ಮಾತ್ರವಲ್ಲದೇ ಖಾಸಗಿ ವಾಹನಗಳೂ ಸಹ ಸಂಚರಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಇದನ್ನೂ ಓದಿ : CWRC ಸಮಿತಿಯೂ ತಮಿಳುನಾಡು ನೀರಿನ ಬೇಡಿಕೆಯನ್ನು ತಿರಸ್ಕಾರ ಮಾಡಿದ್ದು ನನಗೆ ಸಂತೋಷ ತಂದಿದೆ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು ಬಂದ್ : ವ್ಯಾಪಾರ ವಹಿವಾಟು ಸ್ಥಗಿತದಿಂದ ಅಂದಾಜು 200 ಕೋಟಿ ನಷ್ಟ: ಎಫ್‌ಕೆಸಿಸಿಐ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಬೆಂಗಳೂರು ಬಂದ್​ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಆದರೆ, ಬೆಂಗಳೂರು ಬಂದ್​​ನಿಂದ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ನಷ್ಟ ಸಂಭವಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು, ಹೋಟೆಲ್​ಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು.

ಬಂದ್ ಹಿನ್ನೆಲೆ ನಗರದಲ್ಲಿ ವಾಹನ‌ ಸಂಚಾರ, ಜನರ ಓಡಾಟದ ಪ್ರಮಾಣವೂ ಕಡಿಮೆ ಇತ್ತು. ಹೀಗಾಗಿ ಬೆಂಗಳೂರು ಬಹುತೇಕ ಸ್ತಬ್ಧವಾಗಿತ್ತು. ಅಂಗಡಿ ಮುಂಗಟ್ಟು, ಹೋಟೆಲ್​, ಸಿನಿಮಾ ಮಂದಿರಗಳು, ಮಾಲ್​ಗಳು, ಬಾರ್​ಗಳು, ಸೂಪರ್ ಮಾರ್ಕೆಟ್​​ಗಳು ಬಹುತೇಕ ಬಂದ್ ಆಗಿದ್ದವು. ಹೀಗಾಗಿ ಬೆಂಗಳೂರಲ್ಲಿ ಬಂದ್​ನಿಂದ ಬಹುತೇಕ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದವು.

ವಾಣಿಜ್ಯ ಒಕ್ಕೂಟ ಎಫ್​ಕೆಸಿಸಿಐ ಅಧ್ಯಕ್ಷ ಬಿ ವಿ ಗೋಪಾಲ್ ರೆಡ್ಡಿ ಅವರು ಬೆಂಗಳೂರು ಬಂದ್​ನಿಂದ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದ ಒಟ್ಟು ಆದಾಯದಲ್ಲಿ ಬೆಂಗಳೂರಿನಲ್ಲಿನ ಆದಾಯದ ಪಾಲು ಶೇ.60ರಷ್ಟಿದೆ. ಬಂದ್​ನಿಂದ ವ್ಯಾಪಾರ ವಹಿವಾಟು ಸ್ಥಗಿತವಾಗಿರುವುದರಿಂದ ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿಸಿದರು.

ಬೆಂಗಳೂರು ಬಂದ್​ನಿಂದ ಜಿಎಸ್​ಟಿ ಸಂಗ್ರಹ ವ್ಯತ್ಯಯವಾಗಿದ್ದು, 10 ತಾಸಿನ ಬೆಂಗಳೂರು ಬಂದ್​ನಿಂದ ಅಂದಾಜು ಸುಮಾರು 200-250 ಕೋಟಿ ರೂ‌. ನಷ್ಟ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಇಂತಹ ಬಂದ್​ಗಳಿಂದ ಆರ್ಥಿಕ ವಹಿವಾಟು ಕುಂಠಿತವಾಗಿ ನಷ್ಟ ಉಂಟಾಗುತ್ತದೆ ಎಂದು ತಿಳಿಸಿದರು.

ಬಿಎಂಟಿಸಿ ಬಸ್‌, ಖಾಸಗಿ ವಾಹನ ಸಂಚಾರ: ಇನ್ನು ಕೆಎಸ್ಆರ್​ಟಿಸಿ, ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ಸೇವೆ ಎಂದಿನಂತೆ ನಡೆದಿದೆ. ಆಟೋ, ಖಾಸಗಿ ವಾಹನಗಳ ಸಂಚಾರದಲ್ಲಿ ಹೆಚ್ಚಿನ ವ್ಯತ್ಯಯ ಕಂಡು ಬಂದಿಲ್ಲ. ಆದರೆ ಬಹುತೇಕ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಬಿಎಂಟಿಸಿ ಹಾಗೂ ಕೆಎಸ್‍ಆರ್​ಟಿಸಿ ನೌಕರರ ಸಂಘವು ಮೊದಲು ಬಂದ್​ಗೆ ಬೆಂಬಲ ನೀಡುವುದಾಗಿ ತಿಳಿಸಿತ್ತು. ಮಂಗಳವಾರ ಬಿಎಂಟಿಸಿ ಬಸ್‍ಗಳನ್ನು ರಸ್ತೆಗೆ ಇಳಿಸಲ್ಲ ಎಂದು ನೌಕರರ ಸಂಘ ಹೇಳಿತ್ತು. ಆದರೆ ಬಿಎಂಟಿಸಿ ಎಂದಿನಂತೆ ಕಾರ್ಯಾಚರಣೆ ನಡೆಸಿದೆ. ಮಾತ್ರವಲ್ಲದೇ ಖಾಸಗಿ ವಾಹನಗಳೂ ಸಹ ಸಂಚರಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಇದನ್ನೂ ಓದಿ : CWRC ಸಮಿತಿಯೂ ತಮಿಳುನಾಡು ನೀರಿನ ಬೇಡಿಕೆಯನ್ನು ತಿರಸ್ಕಾರ ಮಾಡಿದ್ದು ನನಗೆ ಸಂತೋಷ ತಂದಿದೆ: ಡಿಸಿಎಂ ಡಿ ಕೆ ಶಿವಕುಮಾರ್

Last Updated : Sep 26, 2023, 10:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.