ETV Bharat / state

ಶ್ರೀಮಂತ ಪಾಟೀಲ್ ಪರ ಸಿಎಂ‌ ಒಲವು: 'ಕಮಲ' ತೊರೆಯಲು ಮುಂದಾದ್ರಾ ಕಾಗೆ?

author img

By

Published : Nov 4, 2019, 4:11 PM IST

ಕಾಗವಾಡ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ ಆಗಿರುವ ರಾಜು ಕಾಗೆ ಅವರು ಅನರ್ಹ ಶಾಸಕ ಶ್ರೀಮಂತ ಪಾಟೀಲ್​ಗೆ ಟಿಕೆಟ್ ನೀಡಿದರೆ ಪಕ್ಷ ತೊರೆಯುವ ಕುರಿತು ಆಪ್ತರ ಮೂಲಕ ರಾಜ್ಯ ನಾಯಕರಿಗ ಸಂದೇಶ ರವಾನಿಸಿದ್ದಾರೆ. ಸದ್ಯ ಸುಪ್ರೀಂಕೋರ್ಟ್ ತೀರ್ಪು ಕಾದು ನೋಡುತ್ತಿರುವ ರಾಜು ಕಾಗೆ ತೀರ್ಪಿನ ನಂತರ ಅನರ್ಹರ ಸ್ಪರ್ಧೆಗೆ ಅವಕಾಶ ಸಿಕ್ಕಲ್ಲಿ ಪಕ್ಷ ತೊರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ.

ರಾಜು ಕಾಗೆ

ಬೆಂಗಳೂರು: ಅನರ್ಹ ಶಾಸಕ ಶ್ರೀಮಂತ ಪಾಟೀಲ್​​ಗೆ ಬಿಜೆಪಿ ಟಿಕೆಟ್ ನೀಡುವ ನಿರ್ಧಾರ ಕೈಗೊಂಡರೆ ಪಕ್ಷ ತೊರೆಯುವ ಕುರಿತು ಚಿಂತನೆ ನಡೆಸಬೇಕಾಗಲಿದೆ ಎಂದು ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಕಮಲ ನಾಯಕರಿಗೆ ಸಂದೇಶ ರವಾನಿಸಿದ್ದಾರೆ.

ಅನರ್ಹ ಶಾಸಕರಿಗೆ ಮಣೆ ಹಾಕುವುದಾದರೆ ನಾವ್ಯಾಕೆ ಇರಬೇಕು? ಯಡಿಯೂರಪ್ಪ ಮಾತ್ರ ಏನು ಬೇಕಾದ್ರೂ ಮಾಡಿ ಅಧಿಕಾರಕ್ಕೆ ಬರಬಹುದು. ನಾವು ಮಾತ್ರ ಎಲ್ಲವನ್ನು ನೋಡುತ್ತ ಸುಮ್ಮನೆ ಕೂರಬೇಕಾ? ಇಂತವರ ಜೊತೆಗೆ ಇರುವುದಕ್ಕಿಂತ ಪಕ್ಷದಿಂದ ಹೊರ ಹೋಗುವುದೇ ಲೇಸು ಎಂದು ಕಾಗೆ ತಮ್ಮ ಆಪ್ತರ ಬಳಿ ನೋವು ತೋಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಾಜು ಕಾಗೆ 30 ಸಾವಿರ ಮತಗಳ ಅಂತರದಿಂದ ಶ್ರೀಮಂತ ಪಾಟೀಲ್ ವಿರುದ್ಧ ಪರಾಭವಗೊಂಡಿದ್ದರು. ಇದೀಗ ಮತ್ತೊಮ್ಮೆ ಬಿಜೆಪಿಯ ಟಿಕೆಟ್ ಆಕಾಂಕ್ಷಿ ಆಗಿರುವ ಇವರಿಗೆ ಅನರ್ಹ ಶಾಸಕ ಶ್ರೀಮಂತ ಪಾಟೀಲ್​ಗೆ ಟಿಕೆಟ್ ನೀಡಿದ್ರೆ ಪಕ್ಷ ತೊರೆಯುವ ಕುರಿತು ಆಪ್ತರ ಮೂಲಕ ರಾಜ್ಯ ನಾಯಕರಿಗ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಸುಪ್ರೀಂಕೋರ್ಟ್ ತೀರ್ಪು ಕಾದು ನೋಡುತ್ತಿರುವ ರಾಜು ಕಾಗೆ ತೀರ್ಪಿನ ನಂತರ ಅನರ್ಹರ ಸ್ಪರ್ಧೆಗೆ ಅವಕಾಶ ಸಿಕ್ಕಲ್ಲಿ ಪಕ್ಷ ತೊರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಹಿನ್ನೆಲೆಯಲ್ಲಿ ರಾಜು ಕಾಗೆ ಬೇಸರಗೊಂಡಿದ್ದು, ಶೀಘ್ರದಲ್ಲೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಬೆಂಗಳೂರು: ಅನರ್ಹ ಶಾಸಕ ಶ್ರೀಮಂತ ಪಾಟೀಲ್​​ಗೆ ಬಿಜೆಪಿ ಟಿಕೆಟ್ ನೀಡುವ ನಿರ್ಧಾರ ಕೈಗೊಂಡರೆ ಪಕ್ಷ ತೊರೆಯುವ ಕುರಿತು ಚಿಂತನೆ ನಡೆಸಬೇಕಾಗಲಿದೆ ಎಂದು ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಕಮಲ ನಾಯಕರಿಗೆ ಸಂದೇಶ ರವಾನಿಸಿದ್ದಾರೆ.

ಅನರ್ಹ ಶಾಸಕರಿಗೆ ಮಣೆ ಹಾಕುವುದಾದರೆ ನಾವ್ಯಾಕೆ ಇರಬೇಕು? ಯಡಿಯೂರಪ್ಪ ಮಾತ್ರ ಏನು ಬೇಕಾದ್ರೂ ಮಾಡಿ ಅಧಿಕಾರಕ್ಕೆ ಬರಬಹುದು. ನಾವು ಮಾತ್ರ ಎಲ್ಲವನ್ನು ನೋಡುತ್ತ ಸುಮ್ಮನೆ ಕೂರಬೇಕಾ? ಇಂತವರ ಜೊತೆಗೆ ಇರುವುದಕ್ಕಿಂತ ಪಕ್ಷದಿಂದ ಹೊರ ಹೋಗುವುದೇ ಲೇಸು ಎಂದು ಕಾಗೆ ತಮ್ಮ ಆಪ್ತರ ಬಳಿ ನೋವು ತೋಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಾಜು ಕಾಗೆ 30 ಸಾವಿರ ಮತಗಳ ಅಂತರದಿಂದ ಶ್ರೀಮಂತ ಪಾಟೀಲ್ ವಿರುದ್ಧ ಪರಾಭವಗೊಂಡಿದ್ದರು. ಇದೀಗ ಮತ್ತೊಮ್ಮೆ ಬಿಜೆಪಿಯ ಟಿಕೆಟ್ ಆಕಾಂಕ್ಷಿ ಆಗಿರುವ ಇವರಿಗೆ ಅನರ್ಹ ಶಾಸಕ ಶ್ರೀಮಂತ ಪಾಟೀಲ್​ಗೆ ಟಿಕೆಟ್ ನೀಡಿದ್ರೆ ಪಕ್ಷ ತೊರೆಯುವ ಕುರಿತು ಆಪ್ತರ ಮೂಲಕ ರಾಜ್ಯ ನಾಯಕರಿಗ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಸುಪ್ರೀಂಕೋರ್ಟ್ ತೀರ್ಪು ಕಾದು ನೋಡುತ್ತಿರುವ ರಾಜು ಕಾಗೆ ತೀರ್ಪಿನ ನಂತರ ಅನರ್ಹರ ಸ್ಪರ್ಧೆಗೆ ಅವಕಾಶ ಸಿಕ್ಕಲ್ಲಿ ಪಕ್ಷ ತೊರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಹಿನ್ನೆಲೆಯಲ್ಲಿ ರಾಜು ಕಾಗೆ ಬೇಸರಗೊಂಡಿದ್ದು, ಶೀಘ್ರದಲ್ಲೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

Intro:


ಬೆಂಗಳೂರು: ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಗೆ ಟಿಕೆಟ್ ನೀಡುವ ನಿರ್ಧಾರ ಕೈಗೊಂಡರೆ ಬಿಜೆಪಿ ತೊರೆಯುವ ಕುರಿತು ಚಿಂತನೆ ನಡೆಸಬೇಕಾಗಲಿದೆ ಎಂದು ಬಿಜೆಪಿ ನಾಯಕರಿಗೆ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜುಕಾಗೆ ಸಂದೇಶ ರವಾನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿದ್ದ ಆಡಿಯೋ ಬಿಡುಗಡೆ ಹಿನ್ನೆಲೆಯಲ್ಲಿ ರಾಜು ಕಾಗೆ ಬೇಸರಗೊಂಡಿದ್ದು ಶೀಘ್ರದಲ್ಲೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಅನರ್ಹ ಶಾಸಕರಿಗೆ ಮಣೆ ಹಾಕೋದಾದರೆ ನಾವ್ಯಾಕೆ ಇರಬೇಕು? ಯಡಿಯೂರಪ್ಪ ಮಾತ್ರ ಏನು ಬೇಕಾದ್ರೂ ಮಾಡಿ ಅಧಿಕಾರಕ್ಕೆ ಬರಬಹುದು.ನಾವು ಮಾತ್ರ ನೋಡ್ತಾ ಸುಮ್ಮನೆ ಕೂರಬೇಕಾ? ಇಂತವರ ಜೊತೆಗೆ ಇರುವುದಕ್ಕಿಂತ ಹೊರ ಹೋಗುವುದೇ ಲೇಸು ಎಂದು ರಾಜುಕಾಗೆ ಆಪ್ತರ ಬಳಿ ತಮ್ಮ ನೋವು ತೋಡಿಕೊಂಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ರಾಜುಕಾಗೆ 30 ಸಾವಿರ ಮತಗಳ ಅಂತರದಿಂದ ಶ್ರೀಮಂತ ಪಾಟೀಲ್ ವಿರುದ್ಧ ಪರಾಭವಗೊಂಡಿದ್ದರು. ಇದೀಗ ಮತ್ತಿಮ್ಮೆ ಬಿಜೆಪಿಯ ಟಿಕೆಟ್ ಆಕಾಂಕ್ಷಿ ಆಗಿರುವ ರಾಜುಕಾಗೆ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಗೆ ಟಿಕೆಟ್ ನೀಡಿದರೆ ಪಕ್ಷ ತೊರೆಯುವ ಕುರಿತು ಆಪ್ತರ ಮೂಲಕ ರಾಜ್ಯ ನಾಯಕರಿಗ ಸಂದೇಶ ರವಾನಿಸಿದ್ದಾರೆ.

ಸಧ್ಯ ಸುಪ್ರೀಂ ಕೋರ್ಟ್ ತೀರ್ಪು ಕಾದು ನೋಡುತ್ತಿರುವ ರಾಜುಕಾಗೆ ತೀರ್ಪಿನ ನಂತರ ಅನರ್ಹರ ಸ್ಪರ್ಧೆಗೆ ಅವಕಾಶ ಸಿಕ್ಕಲ್ಲಿ ಪಕ್ಷ ತೊರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.