ETV Bharat / state

ಸಿಎಂ ಸಿಟಿ ರೌಂಡ್ಸ್ ಫಲಶೃತಿ ಏನು? ಪ್ರಧಾನಿಗೆ ಟ್ವೀಟ್​ ಮಾಡಿದರೂ ಪ್ರಯೋಜನ ಇಲ್ಲ: ಹೆಚ್​ಡಿಕೆ

author img

By

Published : Sep 1, 2022, 8:16 PM IST

ಬೆಂಗಳೂರು ರಕ್ಷಣೆ ಮಾಡುವ ಕೆಲಸ ಪ್ರಧಾನಿ ಕೈಯಲ್ಲಿಲ್ಲ. ಆ ರೀತಿ ಭಾವಿಸಿದರೆ ಅವರಿಗೆ ನಿರಾಶೆಯಾಗೋದು ಖಚಿತ. ಯಾರು ಕೆಲಸ ಮಾಡಿದ್ದಾರೆ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕೆಂದು ಹೆಚ್​ಡಿ ಕುಮಾರಸ್ವಾಮಿ ನುಡಿದರು.

bengaluru-floods-what-is-the-result-of-cm-city-rounds-asks-hd-kumaraswamy
ಸಿಎಂ ಸಿಟಿ ರೌಂಡ್ಸ್ ಫಲಶೃತಿ ಏನು?, ಪ್ರಧಾನಿಗೆ ಟ್ವೀಟ್​ ಮಾಡಿದರೂ ಪ್ರಯೋಜನ ಇಲ್ಲ: ಹೆಚ್​ಡಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ರಾಜಕಾಲುವೆ, ಉಪ ಕಾಲುವೆಗಳನ್ನು ಒತ್ತುವರಿ ಮಾಡಿ ಪ್ರವಾಹಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ, ಕೆಲ ರಾಜಕಾರಣಿಗಳನ್ನು ಮೆಚ್ಚಿಸಲು ಬಿಬಿಎಂಪಿ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದರು.

ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಅವರ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಬೀದರ್ ಜಿಲ್ಲೆಯ ಹಲವು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದ ನಂತರ ಅವರು ಮಾತನಾಡಿದರು. ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅದನ್ನು ಹೊರತುಪಡಿಸಿ ಬರೀ ಹೇಳಿಕೆಗಳಿಂದ ಉಪಯೋಗ ಇಲ್ಲ. ಮೊದಲು ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರಿಗೆ ಚಾಟಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಮಳೆ ಅನಾಹುತ ಬೆಂಗಳೂರು ಒಂದೇ ಕಡೆ ಅಲ್ಲ, ರಾಜ್ಯದ ಎಲ್ಲೆಡೆ ಆಗಿದೆ. ಸಾರ್ವಜನಿಕರಿಗೆ ಅನಾನುಕೂಲ ಆಗುವ ಪರಿಸ್ಥಿತಿ ಬಂದಿದೆ. ಬುಧವಾರ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಆದರೆ, ಇಂತಹ ಸಭೆಗಳಿಂದ ಉಪಯೋಗ ಏನು?. ಅನೇಕ ಬಲಿಷ್ಠರು ರಾಜಕಾಲುವೆ, ಉಪಕಾಲುವೆ ಮುಚ್ಚಿ ಅರಮನೆಗಳನ್ನು ಕಟ್ಟಿಕೊಂಡಿದ್ದಾರೆ. ಕೆರೆಗಳನ್ನು ನುಂಗಿ ಹಾಕಿದ್ದಾರೆ. ಈ ರೀತಿ ಜಲಾವೃತ ಆಗಲು ಇಂತಹ ದುರಾಸೆ ಕಾರಣ ಎಂದು ಕಿಡಿಕಾರಿದರು.

ಟ್ವೀಟ್​ನಿಂದ ಪ್ರಯೋಜನ ಇಲ್ಲ: ಉದ್ಯಮಿ ಮೋಹನ್ ದಾಸ್ ಪೈ ಅವರು ಬೆಂಗಳೂರು ಉಳಿಸಿ ಎಂದು ಪ್ರಧಾನಿಗಳಿಗೆ ಟ್ವೀಟ್ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದರೆ ಬೆಂಗಳೂರಿಗೆ ಪರಿಹಾರ ಸಿಗಲ್ಲ. ಬೆಂಗಳೂರು ಅಭಿವೃದ್ಧಿಗೆ ಯಾವ ಪಕ್ಷದ ಕೊಡುಗೆ ಎಷ್ಟಿದೆ ಅನ್ನೋದು ತಿಳಿಯಬೇಕು. ಬೆಂಗಳೂರು ರಕ್ಷಣೆ ಮಾಡುವ ಕೆಲಸ ಪ್ರಧಾನಿ ಕೈಯಲ್ಲಿಲ್ಲ. ಆ ರೀತಿ ಭಾವಿಸಿದರೆ ಅವರಿಗೆ ನಿರಾಸೆಯಾಗೋದು ಖಚಿತ. ಯಾರು ಕೆಲಸ ಮಾಡಿದ್ದಾರೆ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಹೆಚ್​ಡಿಕೆ ಮಾರ್ಮಿಕವಾಗಿ ನುಡಿದರು.

ಸಿಎಂ ಸಿಟಿ ರೌಂಡ್ಸ್ ಫಲಶೃತಿ ಏನು? : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್ ಮಾಡಿದರು. ಏನಾದರೂ ಸಂದೇಶ ಕೊಟ್ಟರೇ?. ಅದರಿಂದ ಬಂದ ಫಲಶೃತಿ ಏನು?. ಯಾವುದಾದರೂ ಪರಿಹಾರ ಕೊಟ್ಟರಾ?. ಮುಂದೆ ಅವರು ಬೆಂಗಳೂರು ಜನರಿಗೆ ಏನು ಕೊಡುತ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದು ಕುಟುಕಿದರು.

ಮುದ್ದಹನುಮೇಗೌಡ ರಾಜೀನಾಮೆಯಿಂದ ಅಚ್ಚರಿ ಇಲ್ಲ: ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ ವಿಚಾರ
ನನಗೆ ಆಶ್ಚರ್ಯ ತರುವ ಘಟನೆ ಏನಲ್ಲ. ಈಗಾಗಲೇ ಅನೇಕರು ಕಾಂಗ್ರೆಸ್ ಪಕ್ಷ ತ್ಯಜಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಅವರ ರಾಜೀನಾಮೆ ನನಗೆ ಅಚ್ಚರಿ‌ ತರುವ ವಿಷಯವಲ್ಲ. ಮುಂದಿನ ದಿನಗಳಲ್ಲಿ ಬಹಳ ಬದಲಾವಣೆ ಆಗಲಿದೆ ಎಂದು ಅವರು ಭವಿಷ್ಯ ನುಡಿದರು.

ಕುತಂತ್ರ ರಾಜಕಾರಣಕ್ಕೆ ಉತ್ತರ ಸಿಗಲಿದೆ: ಜೆಡಿಎಸ್ ಪಕ್ಷದ ಬಗ್ಗೆ ಅನೇಕರು ಲಘುವಾಗಿ ಮಾತಾಡಿದ್ದರು. ನಮ್ಮ ಪಕ್ಷ‌ ಮುಗಿಸುವ ಕೆಲಸ‌ ಮಾಡಿದ್ದರು. ಮುಂದಿನ ದಿನಗಳಲ್ಲಿ ಉತ್ತರ ಕೊಡುವ ಕೆಲಸ ಮಾಡುತ್ತೇವೆ. ಕುತಂತ್ರ ರಾಜಕಾರಣ ಮಾಡುತ್ತಿದ್ದರು. ಅದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಬೇರೆ ಪಕ್ಷದವರು ಜೆಡಿಎಸ್ ಸೇರ್ತಾರಾ ಅನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ನಮ್ಮ ಪಕ್ಷದ ಸಂಘಟನೆ ನಾವೇ ಮಾಡಬೇಕು. ಇನ್ನೊಂದು ಪಕ್ಷದ ಮನೆ ಮುರಿದು ಸಂಘಟನೆ ಮಾಡುವುದಿಲ್ಲ. ಪ್ರಾಮಾಣಿಕವಾಗಿ ಸಂಘಟನೆ ಮಾಡುತ್ತೇವೆ. ಕಾಂಗ್ರೆಸ್ ಮತ್ತು ಬಿಜೆಪಿಯ ಈಗಿನ ಪರಿಸ್ಥಿತಿ ಮುಂದಿಟ್ಟು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ರಾಜಕಾಲುವೆ, ಉಪ ಕಾಲುವೆಗಳನ್ನು ಒತ್ತುವರಿ ಮಾಡಿ ಪ್ರವಾಹಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ, ಕೆಲ ರಾಜಕಾರಣಿಗಳನ್ನು ಮೆಚ್ಚಿಸಲು ಬಿಬಿಎಂಪಿ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದರು.

ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಅವರ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಬೀದರ್ ಜಿಲ್ಲೆಯ ಹಲವು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದ ನಂತರ ಅವರು ಮಾತನಾಡಿದರು. ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅದನ್ನು ಹೊರತುಪಡಿಸಿ ಬರೀ ಹೇಳಿಕೆಗಳಿಂದ ಉಪಯೋಗ ಇಲ್ಲ. ಮೊದಲು ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರಿಗೆ ಚಾಟಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಮಳೆ ಅನಾಹುತ ಬೆಂಗಳೂರು ಒಂದೇ ಕಡೆ ಅಲ್ಲ, ರಾಜ್ಯದ ಎಲ್ಲೆಡೆ ಆಗಿದೆ. ಸಾರ್ವಜನಿಕರಿಗೆ ಅನಾನುಕೂಲ ಆಗುವ ಪರಿಸ್ಥಿತಿ ಬಂದಿದೆ. ಬುಧವಾರ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಆದರೆ, ಇಂತಹ ಸಭೆಗಳಿಂದ ಉಪಯೋಗ ಏನು?. ಅನೇಕ ಬಲಿಷ್ಠರು ರಾಜಕಾಲುವೆ, ಉಪಕಾಲುವೆ ಮುಚ್ಚಿ ಅರಮನೆಗಳನ್ನು ಕಟ್ಟಿಕೊಂಡಿದ್ದಾರೆ. ಕೆರೆಗಳನ್ನು ನುಂಗಿ ಹಾಕಿದ್ದಾರೆ. ಈ ರೀತಿ ಜಲಾವೃತ ಆಗಲು ಇಂತಹ ದುರಾಸೆ ಕಾರಣ ಎಂದು ಕಿಡಿಕಾರಿದರು.

ಟ್ವೀಟ್​ನಿಂದ ಪ್ರಯೋಜನ ಇಲ್ಲ: ಉದ್ಯಮಿ ಮೋಹನ್ ದಾಸ್ ಪೈ ಅವರು ಬೆಂಗಳೂರು ಉಳಿಸಿ ಎಂದು ಪ್ರಧಾನಿಗಳಿಗೆ ಟ್ವೀಟ್ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದರೆ ಬೆಂಗಳೂರಿಗೆ ಪರಿಹಾರ ಸಿಗಲ್ಲ. ಬೆಂಗಳೂರು ಅಭಿವೃದ್ಧಿಗೆ ಯಾವ ಪಕ್ಷದ ಕೊಡುಗೆ ಎಷ್ಟಿದೆ ಅನ್ನೋದು ತಿಳಿಯಬೇಕು. ಬೆಂಗಳೂರು ರಕ್ಷಣೆ ಮಾಡುವ ಕೆಲಸ ಪ್ರಧಾನಿ ಕೈಯಲ್ಲಿಲ್ಲ. ಆ ರೀತಿ ಭಾವಿಸಿದರೆ ಅವರಿಗೆ ನಿರಾಸೆಯಾಗೋದು ಖಚಿತ. ಯಾರು ಕೆಲಸ ಮಾಡಿದ್ದಾರೆ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಹೆಚ್​ಡಿಕೆ ಮಾರ್ಮಿಕವಾಗಿ ನುಡಿದರು.

ಸಿಎಂ ಸಿಟಿ ರೌಂಡ್ಸ್ ಫಲಶೃತಿ ಏನು? : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್ ಮಾಡಿದರು. ಏನಾದರೂ ಸಂದೇಶ ಕೊಟ್ಟರೇ?. ಅದರಿಂದ ಬಂದ ಫಲಶೃತಿ ಏನು?. ಯಾವುದಾದರೂ ಪರಿಹಾರ ಕೊಟ್ಟರಾ?. ಮುಂದೆ ಅವರು ಬೆಂಗಳೂರು ಜನರಿಗೆ ಏನು ಕೊಡುತ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದು ಕುಟುಕಿದರು.

ಮುದ್ದಹನುಮೇಗೌಡ ರಾಜೀನಾಮೆಯಿಂದ ಅಚ್ಚರಿ ಇಲ್ಲ: ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ ವಿಚಾರ
ನನಗೆ ಆಶ್ಚರ್ಯ ತರುವ ಘಟನೆ ಏನಲ್ಲ. ಈಗಾಗಲೇ ಅನೇಕರು ಕಾಂಗ್ರೆಸ್ ಪಕ್ಷ ತ್ಯಜಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಅವರ ರಾಜೀನಾಮೆ ನನಗೆ ಅಚ್ಚರಿ‌ ತರುವ ವಿಷಯವಲ್ಲ. ಮುಂದಿನ ದಿನಗಳಲ್ಲಿ ಬಹಳ ಬದಲಾವಣೆ ಆಗಲಿದೆ ಎಂದು ಅವರು ಭವಿಷ್ಯ ನುಡಿದರು.

ಕುತಂತ್ರ ರಾಜಕಾರಣಕ್ಕೆ ಉತ್ತರ ಸಿಗಲಿದೆ: ಜೆಡಿಎಸ್ ಪಕ್ಷದ ಬಗ್ಗೆ ಅನೇಕರು ಲಘುವಾಗಿ ಮಾತಾಡಿದ್ದರು. ನಮ್ಮ ಪಕ್ಷ‌ ಮುಗಿಸುವ ಕೆಲಸ‌ ಮಾಡಿದ್ದರು. ಮುಂದಿನ ದಿನಗಳಲ್ಲಿ ಉತ್ತರ ಕೊಡುವ ಕೆಲಸ ಮಾಡುತ್ತೇವೆ. ಕುತಂತ್ರ ರಾಜಕಾರಣ ಮಾಡುತ್ತಿದ್ದರು. ಅದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಬೇರೆ ಪಕ್ಷದವರು ಜೆಡಿಎಸ್ ಸೇರ್ತಾರಾ ಅನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ನಮ್ಮ ಪಕ್ಷದ ಸಂಘಟನೆ ನಾವೇ ಮಾಡಬೇಕು. ಇನ್ನೊಂದು ಪಕ್ಷದ ಮನೆ ಮುರಿದು ಸಂಘಟನೆ ಮಾಡುವುದಿಲ್ಲ. ಪ್ರಾಮಾಣಿಕವಾಗಿ ಸಂಘಟನೆ ಮಾಡುತ್ತೇವೆ. ಕಾಂಗ್ರೆಸ್ ಮತ್ತು ಬಿಜೆಪಿಯ ಈಗಿನ ಪರಿಸ್ಥಿತಿ ಮುಂದಿಟ್ಟು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.