ETV Bharat / state

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಫೀಲ್ಡಿಗಿಳಿದ ಪೊಲೀಸರು: 10 ಗಂಟೆ ಬಳಿಕ ರಸ್ತೆಗಿಳಿದರೆ ಲಾಠಿ ರುಚಿ ಗ್ಯಾರಂಟಿ

author img

By

Published : May 10, 2021, 8:58 AM IST

ರಾಜ್ಯಾದ್ಯಂತ ಇಂದಿನಿಂದ ಲಾಕ್​​ಡೌನ್​ ಜಾರಿಯಾಗಿದ್ದು, ಬೆಳಗ್ಗೆ 10 ಗಂಟೆಯಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ವಿನಾಯಿತಿ ಅವಧಿ ವೇಳೆ ಅನಗತ್ಯ ಓಡಾಟ ನಡೆಸುವವರಿಗೆ ಪೊಲೀಸರು ಲಾಠಿ ರಚಿ ತೋರಿಸಿದರು.

Bengaluru Lockdown update
ಅನಗತ್ಯವಾಗಿ ರಸ್ತೆಗಿಳಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಬೆಂಗಳೂರು: ಕೊರೊನಾ ಸರಪಳಿ ಬ್ರೇಕ್ ಮಾಡಲು ಇಂದಿನಿಂದ 14 ದಿನಗಳ ಕಾಲ ರಾಜ್ಯದಲ್ಲಿ ಕಠಿಣ ಲಾಕ್​​ಡೌನ್ ಜಾರಿಯಾಗಲಿದ್ದು, ಸಿಲಿಕಾನ್ ಸಿಟಿಯಲ್ಲಿ 10 ಗಂಟೆ ಬಳಿಕ ಅನಗತ್ಯವಾಗಿ ರಸ್ತೆಗಿಳಿದರೆ ವಾಹನ ಸೀಜ್ ಮಾಡಲು ಪೊಲೀಸರು ಸನ್ನದ್ಧರಾಗಿದ್ದಾರೆ.

ಕೆ.ಆರ್ ಮಾರ್ಕೆಟ್​​ನಲ್ಲಿ ವಿನಾಯಿತಿ ನೀಡಿದ ಅವಧಿಯಲ್ಲೇ ಪೊಲೀಸರು ಫೀಲ್ಡಿಗಿಳಿದಿದ್ದು, ಲಾಠಿ ಹಿಡಿದು ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸುವ ಪ್ರಕ್ರಿಯೆ ಆರಂಭಿಸಿದ್ದಾರೆ‌‌. ಇಲ್ಲ ಸಲ್ಲದ ಕಾರಣ ಹೇಳುವ ವಾಹನ ಸವಾರರಿಗೆ ಲಾಠಿ ಬಿಸಿ ಮುಟ್ಟಿಸುತ್ತಿದ್ದಾರೆ.

ಅನಗತ್ಯವಾಗಿ ರಸ್ತೆಗಿಳಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಓದಿ : ಚಿತ್ರದುರ್ಗದಲ್ಲಿ ಲಾಕ್ ಡೌನ್​ಗೆ ಡೋಂಟ್​​ ಕೇರ್ : ಬೆಳಂಬೆಳ್ಳಗ್ಗೆ 150 ಬೈಕ್​ ಸೀಜ್​

ಈಗಾಗಲೇ ಹೆಚ್ಚಿನ ಜನರನ್ನು ತುಂಬಿಸಿಕೊಂಡು ಹೋಗುತ್ತಿದ್ದ 10ಕ್ಕೂ ಹೆಚ್ಚು ಆಟೋಗಳನ್ನು ಸೀಜ್ ಮಾಡಲಾಗಿದ್ದು, 10 ಗಂಟೆ ಬಳಿಕ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ‌.

ಬೆಂಗಳೂರು: ಕೊರೊನಾ ಸರಪಳಿ ಬ್ರೇಕ್ ಮಾಡಲು ಇಂದಿನಿಂದ 14 ದಿನಗಳ ಕಾಲ ರಾಜ್ಯದಲ್ಲಿ ಕಠಿಣ ಲಾಕ್​​ಡೌನ್ ಜಾರಿಯಾಗಲಿದ್ದು, ಸಿಲಿಕಾನ್ ಸಿಟಿಯಲ್ಲಿ 10 ಗಂಟೆ ಬಳಿಕ ಅನಗತ್ಯವಾಗಿ ರಸ್ತೆಗಿಳಿದರೆ ವಾಹನ ಸೀಜ್ ಮಾಡಲು ಪೊಲೀಸರು ಸನ್ನದ್ಧರಾಗಿದ್ದಾರೆ.

ಕೆ.ಆರ್ ಮಾರ್ಕೆಟ್​​ನಲ್ಲಿ ವಿನಾಯಿತಿ ನೀಡಿದ ಅವಧಿಯಲ್ಲೇ ಪೊಲೀಸರು ಫೀಲ್ಡಿಗಿಳಿದಿದ್ದು, ಲಾಠಿ ಹಿಡಿದು ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸುವ ಪ್ರಕ್ರಿಯೆ ಆರಂಭಿಸಿದ್ದಾರೆ‌‌. ಇಲ್ಲ ಸಲ್ಲದ ಕಾರಣ ಹೇಳುವ ವಾಹನ ಸವಾರರಿಗೆ ಲಾಠಿ ಬಿಸಿ ಮುಟ್ಟಿಸುತ್ತಿದ್ದಾರೆ.

ಅನಗತ್ಯವಾಗಿ ರಸ್ತೆಗಿಳಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಓದಿ : ಚಿತ್ರದುರ್ಗದಲ್ಲಿ ಲಾಕ್ ಡೌನ್​ಗೆ ಡೋಂಟ್​​ ಕೇರ್ : ಬೆಳಂಬೆಳ್ಳಗ್ಗೆ 150 ಬೈಕ್​ ಸೀಜ್​

ಈಗಾಗಲೇ ಹೆಚ್ಚಿನ ಜನರನ್ನು ತುಂಬಿಸಿಕೊಂಡು ಹೋಗುತ್ತಿದ್ದ 10ಕ್ಕೂ ಹೆಚ್ಚು ಆಟೋಗಳನ್ನು ಸೀಜ್ ಮಾಡಲಾಗಿದ್ದು, 10 ಗಂಟೆ ಬಳಿಕ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.