ಬೆಂಗಳೂರು: ಪಾಲಿಕೆಯ ಯಾವುದಾದರೂ ಒಂದು ವಾರ್ಡ್ಗೆ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಹೆಸರಿಡಿ ಎಂದು ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕಿ ಭಾಗ್ಯವತಿ ಅಮರೇಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಪತ್ರ ಬರೆದಿದ್ದಾರೆ.

ತಮ್ಮ ಅಮೋಘ ಅಭಿನಯ ಮತ್ತು ಸಾಮಾಜಿಕ ಕಳಕಳಿಯಿಂದ ಜನರ ಮನಸ್ಸು ಗೆದ್ದಿರುವ ಪುನೀತ್ ಹೆಸರು ಅಜರಾಮರವಾಗಿರಬೇಕಾದರೆ ಅವರ ಹೆಸರನ್ನು ಯಾವುದಾದರೂ ಒಂದು ವಾರ್ಡ್ಗೆ ಇಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಅಕ್ಕ - ತಮ್ಮನ ಕೊಲೆ ಪ್ರಕರಣ: ಒಂದೇ ಕುಟುಂಬದ ಐವರ ವಿರುದ್ಧ ಎಫ್ಐಆರ್
198 ವಾರ್ಡ್ಗಳು ಇದೀಗ 243 ವಾರ್ಡ್ಗಳಾಗಿ ಪರಿವರ್ತನೆಗೊಂಡಿದೆ. ಹೊಸದಾಗಿ ರಚನೆ ಮಾಡಿರುವ ಒಂದು ವಾರ್ಡ್ಗೆ ಪುನೀತ್ ಹೆಸರಿಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವೃತ್ತ ಅಥವಾ ರಸ್ತೆಗೆ ಅವರ ಹೆಸರನ್ನು ಇಡುವುದಕ್ಕಿಂತ ಸಂಪೂರ್ಣ ಒಂದು ವಾರ್ಡ್ಗೆ ಅವರ ಹೆಸರನ್ನು ಇಟ್ಟರೆ ಒಳ್ಳೆಯದು ಎಂದು ಪುನೀತ್ ರಾಜ್ ಕುಮಾರ್ ಅಭಿಮಾನಿಯಾಗಿ ಕೇಳಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.