ETV Bharat / state

ಮೇಯರ್,ಉಪ ಮೇಯರ್ ಅವದಿ 30 ತಿಂಗಳಿಗೆ ಹೆಚ್ಚಿಸಿ ವರದಿ ಸಲ್ಲಿಸಿದ ನ್ಯಾ.ಭಕ್ತವತ್ಸಲ ಆಯೋಗ..! - ನ್ಯಾ ಭಕ್ತವತ್ಸಲ ಆಯೋಗ

ಮೀಸಲಾತಿಯಲ್ಲಿ ಶೇಕಡಾ50 ರಷ್ಟು ಮೀರದಂತೆ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿದ್ದು, ಹಿಂದುಳಿದ ವರ್ಗಗಳಿಗೆ ಬಿಬಿಎಂಪಿಯಲ್ಲಿ ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ನೀಡಬಹುದು, ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಭಾಗವನ್ನು ಡಿಪಿಎಆರ್ ಅಧೀನದಲ್ಲಿ ತರಬೇಕು, ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಅವಧಿಯನ್ನ 30 ತಿಂಗಳಿಗೆ ಹೆಚ್ಚಳಕ್ಕೆ ಸಲಹೆ ನೀಡಲಾಗಿದೆ. ಮೇಯರ್, ಉಪ ಮೇಯರ್ ಸ್ಥಾನಕ್ಕೆ ಈ ಹಿಂದೆ ಇದ್ದ ಒಂದು ವರ್ಷದ ಅವಧಿ ಹೆಚ್ಚಿಸಲು ಸಲಹೆ ನೀಡಿದೆ

bhaktavastal committe
ನ್ಯಾ ಭಕ್ತವತಸ್ಲ ಸಮೀತಿ
author img

By

Published : Jul 21, 2022, 10:55 PM IST

ಬೆಂಗಳೂರು: ಬಿಬಿಎಂಪಿ ಕಾಯ್ದೆ 2020 ಪ್ರಕಾರ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ 30 ತಿಂಗಳು ಅವಕಾಶ ಕಲ್ಪಿಸಲಾಗಿದ್ದು, ಅದೇ ರೀತಿ ರಾಜ್ಯದ ಇತರ ನಗರ ಸ್ಥಳೀಯ ಸಂಸ್ಥೆಗಳ ಮೇಯರ್ ಮತ್ತು ಉಪ ಮೇಯರ್ ಅವಧಿಯನ್ನು 30 ತಿಂಗಳಿಗೆ ಹೆಚ್ಚಿಸಲು ಕೆಎಂಸಿ ಕಾಯ್ದೆ 1976 ಗೆ ತಿದ್ದುಪಡಿ ತರುವಂತೆ ಶಿಫಾರಸು ಮಾಡಿದೆ.

ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗೆ ನೀಡಿರುವ ಮೀಸಲಾತಿ ಖಾತರಿಪಡಿಸಲು ಆಯಾ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಲು ರಚಿಸಲಾಗಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಆಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಕೆ ಮಾಡಿತು.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಿ ಈ ಸಮುದಾಯಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಸಂಬಂಧ ಅಧ್ಯಯನ ನಡೆಸಿ ವರದಿ ಸಲ್ಲಿಕೆ ಮಾಡಲಾಗಿದ್ದು, ಹಲವು ಶಿಫಾರಸುಗಳನ್ನು ವರದಿ ಒಳಗೊಂಡಿದೆ. ವರದಿಯಲ್ಲಿ ಸಾಮಾಜಿಕ, ರಾಜಕೀಯ ಮೀಸಲಾತಿ ಒಪ್ಪಿಗೆ ಸೂಚಿಸುವ ಉಲ್ಲೇಖ ಮಾಡಲಾಗಿದ್ದು, ಹಿಂದುಳಿದ ವರ್ಗಗಳ A ಮತ್ತು B ವರ್ಗಕ್ಕೆ ಶೇ 33 ರಷ್ಟು ಮೀಸಲಾತಿ ನೀಡಲು ನ್ಯಾ.ಭಕ್ತ ವತ್ಸಲ ನೇತೃತ್ವದ ಆಯೋಗ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

ಒಟ್ಟಾರೆ, ಮೀಸಲಾತಿಯಲ್ಲಿ ಶೇಕಡಾ50 ರಷ್ಟು ಮೀರದಂತೆ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿದ್ದು, ಹಿಂದುಳಿದ ವರ್ಗಗಳಿಗೆ ಬಿಬಿಎಂಪಿಯಲ್ಲಿ ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ನೀಡಬಹುದು. ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಭಾಗವನ್ನು ಡಿಪಿಎಆರ್ ಅಧೀನದಲ್ಲಿ ತರಬೇಕು, ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಅವಧಿಯನ್ನ 30 ತಿಂಗಳಿಗೆ ಹೆಚ್ಚಳಕ್ಕೆ ಸಲಹೆ ನೀಡಲಾಗಿದೆ. ಮೇಯರ್, ಉಪ ಮೇಯರ್ ಸ್ಥಾನಕ್ಕೆ ಈ ಹಿಂದೆ ಇದ್ದ ಒಂದು ವರ್ಷದ ಅವಧಿ ಹೆಚ್ಚಿಸಲು ಸಲಹೆ ನೀಡಿದೆ.

ನಿಖರವಾದ ಅಂಕಿ- ಅಂಶಗಳ ಆಧಾರದಲ್ಲಿ ಮೂರು ಹಂತದ ಪರಿಶೀಲನೆ ನಡೆಸಿ, ಆಯಾ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಖಾತರಿಪಡಿಸಿದ ಬಳಿಕವೇ ರಾಜಕೀಯ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ 2010ರಲ್ಲಿ ತೀರ್ಪು ನೀಡಿತ್ತು. 2021ರ ಮಾರ್ಚ್‌ನಲ್ಲೂ ಸುಪ್ರೀಂಕೋರ್ಟ್‌ ಇದನ್ನು ಪುನರುಚ್ಚರಿಸಿತ್ತು.

ಅದರ ಆಧಾರದಲ್ಲಿಯೇ 2022ರ ಜನವರಿಯಲ್ಲಿ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೂರು ಹಂತದ ಪರಿಶೀಲನೆ ಇಲ್ಲದೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿತ್ತು. ಈ ಆದೇಶ ಇಡೀ ದೇಶಕ್ಕೆ ಅನ್ವಯವಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯಕ್ಕೂ ಅದೇ ಆದೇಶ ಅನ್ವಯವಾಗುವ ಕಾರಣದಿಂದ ಸರ್ಕಾರ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಆಯೋಗ ರಚಿಸಿತ್ತು. ಈ ಸಮಿತಿ ಕಳೆದ ಎರಡು ತಿಂಗಳ ಕಾಲ ಸತತವಾಗಿ ಅಧ್ಯಯನ ನಡೆಸಿ ವರದಿ ಸಿದ್ದಪಡಿಸಿದ್ದು, ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಕೆ ಮಾಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಉದ್ಘಾಟಿಸಿದ ನಾಲ್ಕೇ ದಿನದಲ್ಲಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್​ವೇನಲ್ಲಿ ಗುಂಡಿಗಳ ಹವಾ!

ಬೆಂಗಳೂರು: ಬಿಬಿಎಂಪಿ ಕಾಯ್ದೆ 2020 ಪ್ರಕಾರ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ 30 ತಿಂಗಳು ಅವಕಾಶ ಕಲ್ಪಿಸಲಾಗಿದ್ದು, ಅದೇ ರೀತಿ ರಾಜ್ಯದ ಇತರ ನಗರ ಸ್ಥಳೀಯ ಸಂಸ್ಥೆಗಳ ಮೇಯರ್ ಮತ್ತು ಉಪ ಮೇಯರ್ ಅವಧಿಯನ್ನು 30 ತಿಂಗಳಿಗೆ ಹೆಚ್ಚಿಸಲು ಕೆಎಂಸಿ ಕಾಯ್ದೆ 1976 ಗೆ ತಿದ್ದುಪಡಿ ತರುವಂತೆ ಶಿಫಾರಸು ಮಾಡಿದೆ.

ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗೆ ನೀಡಿರುವ ಮೀಸಲಾತಿ ಖಾತರಿಪಡಿಸಲು ಆಯಾ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಲು ರಚಿಸಲಾಗಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಆಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಕೆ ಮಾಡಿತು.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಿ ಈ ಸಮುದಾಯಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಸಂಬಂಧ ಅಧ್ಯಯನ ನಡೆಸಿ ವರದಿ ಸಲ್ಲಿಕೆ ಮಾಡಲಾಗಿದ್ದು, ಹಲವು ಶಿಫಾರಸುಗಳನ್ನು ವರದಿ ಒಳಗೊಂಡಿದೆ. ವರದಿಯಲ್ಲಿ ಸಾಮಾಜಿಕ, ರಾಜಕೀಯ ಮೀಸಲಾತಿ ಒಪ್ಪಿಗೆ ಸೂಚಿಸುವ ಉಲ್ಲೇಖ ಮಾಡಲಾಗಿದ್ದು, ಹಿಂದುಳಿದ ವರ್ಗಗಳ A ಮತ್ತು B ವರ್ಗಕ್ಕೆ ಶೇ 33 ರಷ್ಟು ಮೀಸಲಾತಿ ನೀಡಲು ನ್ಯಾ.ಭಕ್ತ ವತ್ಸಲ ನೇತೃತ್ವದ ಆಯೋಗ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

ಒಟ್ಟಾರೆ, ಮೀಸಲಾತಿಯಲ್ಲಿ ಶೇಕಡಾ50 ರಷ್ಟು ಮೀರದಂತೆ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿದ್ದು, ಹಿಂದುಳಿದ ವರ್ಗಗಳಿಗೆ ಬಿಬಿಎಂಪಿಯಲ್ಲಿ ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ನೀಡಬಹುದು. ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಭಾಗವನ್ನು ಡಿಪಿಎಆರ್ ಅಧೀನದಲ್ಲಿ ತರಬೇಕು, ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಅವಧಿಯನ್ನ 30 ತಿಂಗಳಿಗೆ ಹೆಚ್ಚಳಕ್ಕೆ ಸಲಹೆ ನೀಡಲಾಗಿದೆ. ಮೇಯರ್, ಉಪ ಮೇಯರ್ ಸ್ಥಾನಕ್ಕೆ ಈ ಹಿಂದೆ ಇದ್ದ ಒಂದು ವರ್ಷದ ಅವಧಿ ಹೆಚ್ಚಿಸಲು ಸಲಹೆ ನೀಡಿದೆ.

ನಿಖರವಾದ ಅಂಕಿ- ಅಂಶಗಳ ಆಧಾರದಲ್ಲಿ ಮೂರು ಹಂತದ ಪರಿಶೀಲನೆ ನಡೆಸಿ, ಆಯಾ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಖಾತರಿಪಡಿಸಿದ ಬಳಿಕವೇ ರಾಜಕೀಯ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ 2010ರಲ್ಲಿ ತೀರ್ಪು ನೀಡಿತ್ತು. 2021ರ ಮಾರ್ಚ್‌ನಲ್ಲೂ ಸುಪ್ರೀಂಕೋರ್ಟ್‌ ಇದನ್ನು ಪುನರುಚ್ಚರಿಸಿತ್ತು.

ಅದರ ಆಧಾರದಲ್ಲಿಯೇ 2022ರ ಜನವರಿಯಲ್ಲಿ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೂರು ಹಂತದ ಪರಿಶೀಲನೆ ಇಲ್ಲದೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿತ್ತು. ಈ ಆದೇಶ ಇಡೀ ದೇಶಕ್ಕೆ ಅನ್ವಯವಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯಕ್ಕೂ ಅದೇ ಆದೇಶ ಅನ್ವಯವಾಗುವ ಕಾರಣದಿಂದ ಸರ್ಕಾರ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಆಯೋಗ ರಚಿಸಿತ್ತು. ಈ ಸಮಿತಿ ಕಳೆದ ಎರಡು ತಿಂಗಳ ಕಾಲ ಸತತವಾಗಿ ಅಧ್ಯಯನ ನಡೆಸಿ ವರದಿ ಸಿದ್ದಪಡಿಸಿದ್ದು, ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಕೆ ಮಾಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಉದ್ಘಾಟಿಸಿದ ನಾಲ್ಕೇ ದಿನದಲ್ಲಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್​ವೇನಲ್ಲಿ ಗುಂಡಿಗಳ ಹವಾ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.