ಬೆಂಗಳೂರು: ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದು, ಬೈಕ್ ಕದ್ದು ಪರಾರಿಯಾಗಿದ್ದಾರೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೆಂಗೇರಿ ವ್ಯಾಪ್ತಿಯಲ್ಲಿ ಬರುವ ಶ್ರೀನಿವಾಸ್ ಎಂಬುವವರು ತಮ್ಮ ಮನೆಯ ಮುಂದೆ ರಾಯಲ್ ಎನ್ಫೀಲ್ಡ್ ಬೈಕ್ ನಿಲ್ಲಿಸಿದ್ದರು. ಇದನ್ನು ಗಮನಿಸಿದ ಕಳ್ಳರು ಬೆಳಗಿನ ಜಾವ ಬೈಕ್ ಕದ್ದು ಪರಾರಿಯಾಗಿದ್ದಾರೆ. ಮರುದಿನ ಬೆಳಗ್ಗೆ ಬೈಕ್ ಇಲ್ಲದ್ದನ್ನು ನೋಡಿ ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.