ETV Bharat / state

ಯಡಿಯೂರಪ್ಪಗೆ ಶುಭಕೋರಲು ಕಾರ್ಯಕರ್ತರ ದಂಡು: ಇಂದು ಹುಟ್ಟೂರಿಗೆ ಪಯಣ - Kn_Bng_01_bsy_home_7202707

ಬೂಕನಕೆರೆ ಗವಿಮಠದ ಸಿದ್ದಲಿಂಗ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಸ್ಥಳೀಯ ಕಾರ್ಯಕ್ರಮಗಳಲ್ಲಿ ಬಿಎಸ್​​ವೈ ಭಾಗಿಯಾಗಲಿದ್ದಾರೆ. ನಂತರ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಭೇಟಿಯಾಗಿ ಮೇಲುಕೊಟೆಯಿಂದ ಬೆಂಗಳೂರಿಗೆ 2-20 ಕ್ಕೆ ಹಿಂತಿರುಗಲಿದ್ದಾರೆ.

ಬಿ ಎಸ್​ ಯಡಿಯೂರಪ್ಪಗೆ ಶುಭಕೋರಲು ಕಾರ್ಯಕರ್ತರ ದಂಡು
author img

By

Published : Jul 27, 2019, 8:58 AM IST

ಬೆಂಗಳೂರು: ನೂತನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಶುಭಕೋರಲು ಡಾಲರ್ಸ್ ಕಾಲೊನಿಯ ಧವಳಗಿರಿ ನಿವಾಸಕ್ಕೆ ನೂರಾರು ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಆಗಮಿಸಿದ್ದಾರೆ.

ನಾಲ್ಕನೇ ಬಾರಿಗೆ ಸಿಎಂ ಆಗಿರುವ ಬಿಎಸ್​ವೈಗೆ ಹೂವಿನ ಹಾರ, ಬೊಕ್ಕೆಗಳನ್ನು ನೀಡಿ ಶುಭಕೋರಲಾಗುತ್ತಿದೆ. ಮಗ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ರೇಣುಕಾಚಾರ್ಯ ಕೂಡಾ ಸಿಎಂ ಜೊತೆಗಿದ್ದಾರೆ. ಇಂದು ಯಡಿಯೂರಪ್ಪ ತಮ್ಮ ಹುಟ್ಟೂರಾದ ಮಂಡ್ಯ ಜಿಲ್ಲೆಯ ಬೂಕನಕೆರೆಗೆ ಬೆಳಗ್ಗೆ 10 ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.

ಬಿ ಎಸ್​ ಯಡಿಯೂರಪ್ಪಗೆ ಶುಭಕೋರಲು ಕಾರ್ಯಕರ್ತರ ದಂಡು

ಬೂಕನಕೆರೆ ಗವಿಮಠದ ಸಿದ್ದಲಿಂಗ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಂತರ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಭೇಟಿಯಾಗಿ ಮೇಲುಕೊಟೆಯಿಂದ ಬೆಂಗಳೂರಿಗೆ 2-20 ಕ್ಕೆ ಹಿಂತಿರುಗಲಿದ್ದಾರೆ.

ಇದಾದ ನಂತರ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ನೂತನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಶುಭಕೋರಲು ಡಾಲರ್ಸ್ ಕಾಲೊನಿಯ ಧವಳಗಿರಿ ನಿವಾಸಕ್ಕೆ ನೂರಾರು ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಆಗಮಿಸಿದ್ದಾರೆ.

ನಾಲ್ಕನೇ ಬಾರಿಗೆ ಸಿಎಂ ಆಗಿರುವ ಬಿಎಸ್​ವೈಗೆ ಹೂವಿನ ಹಾರ, ಬೊಕ್ಕೆಗಳನ್ನು ನೀಡಿ ಶುಭಕೋರಲಾಗುತ್ತಿದೆ. ಮಗ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ರೇಣುಕಾಚಾರ್ಯ ಕೂಡಾ ಸಿಎಂ ಜೊತೆಗಿದ್ದಾರೆ. ಇಂದು ಯಡಿಯೂರಪ್ಪ ತಮ್ಮ ಹುಟ್ಟೂರಾದ ಮಂಡ್ಯ ಜಿಲ್ಲೆಯ ಬೂಕನಕೆರೆಗೆ ಬೆಳಗ್ಗೆ 10 ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.

ಬಿ ಎಸ್​ ಯಡಿಯೂರಪ್ಪಗೆ ಶುಭಕೋರಲು ಕಾರ್ಯಕರ್ತರ ದಂಡು

ಬೂಕನಕೆರೆ ಗವಿಮಠದ ಸಿದ್ದಲಿಂಗ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಂತರ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಭೇಟಿಯಾಗಿ ಮೇಲುಕೊಟೆಯಿಂದ ಬೆಂಗಳೂರಿಗೆ 2-20 ಕ್ಕೆ ಹಿಂತಿರುಗಲಿದ್ದಾರೆ.

ಇದಾದ ನಂತರ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Intro:ಮುಖ್ಯಮಂತ್ರಿ ಯಡಿಯೂರಪ್ಪಗೆ ಶುಭಕೋರಲು ಕಾರ್ಯಕರ್ತರ ದಂಡು- ಇಂದು ಸಿಎಂ ಹುಟ್ಟೂರಿಗೆ


ಬೆಂಗಳೂರು- ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಶುಭಕೋರಲು, ಡಾಲರ್ಸ್ ಕಾಲೊನಿಯ ಧವಳಗಿರಿ ನಿವಾಸಕ್ಕೆ ನೂರಾರು ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಆಗಮಿಸಿದ್ದಾರೆ. ಹೂವಿನ ಹಾರ, ಬೊಕ್ಕೆಗಳನ್ನು ನೀಡಿ ನಾಲ್ಕನೇ ಬಾರಿಗೆ ಸಿಎಂ ಆಗಿರುವ, ದಕ್ಷಿಣ ಭಾರತದಲ್ಲಿ ಕಮಲ ಸರ್ಕಾರ ಅರಳಿಸಿದ್ದಕ್ಕೆ ಶುಭಕೋರುತ್ತಿದ್ದಾರೆ. ಮಗ ಬಿವೈ ವಿಜಯೇಂದ್ರ ಹಾಗೂ ಶಾಸಕ ರೇಣುಕಾಚಾರ್ಯ ಕೂಡಾ ಸಿಎಂ ಜೊತೆಗಿದ್ದಾರೆ.
ಇಂದು ಯಡಿಯೂರಪ್ಪ ತಮ್ಮ ಹುಟ್ಟೂರಾದ ಮಂಡ್ಯ ಜಿಲ್ಲೆಯ ಬೂಕನಕೆರೆಗೆ ತೆರಳಲಿದ್ದಾರೆ. ಬೆಳಗ್ಗೆ ೧೦ ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.
ಬೂಕನಕೆರೆ ಗವಿಮಠದ ಸಿದ್ದಲಿಂಗ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ,ಬಳಿಕ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ನಂತರ ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಭೇಟಿಯಾಗಿ ಮೇಲುಕೊಟೆಯಿಂದ ಬೆಂಗಳೂರಿಗೆ 2-20 ಕ್ಕೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಹಿಂದುರುಗಿದ ಬಳಿಕ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗ್ತಿದ್ದು, ಹೈಕಮಾಂಡ್ ಕರೆದರೆ ದೆಹಲಿಗೆ ಹೊಗಲಿದ್ದಾರೆ.
ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.


ಸೌಮ್ಯಶ್ರೀ
Kn_Bng_01_bsy_home_7202707Body:..Conclusion:..

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.