ಬೆಂಗಳೂರು: ಚಿತ್ರದುರ್ಗದ ಚಳ್ಳಕೆರೆ ಮಂಡಲಕ್ಕೆ ಬಿಜೆಪಿ ಅಧ್ಯಕ್ಷರ ಆಯ್ಕೆ ವಿರೋಧಿಸಿ ಬಿಜೆಪಿ ತಾಲೂಕು ಕಾರ್ಯಕರ್ತರು ಹಾಗೂ ಮುಖಂಡರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಚಳ್ಳಕೆರೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಶ್ರೀನಿವಾಸ್ಗೆ ಚಳ್ಳಕೆರೆ ಮಂಡಲಕ್ಕೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದರು.
ಶ್ರೀನಿವಾಸ್ ಕಾಂಗ್ರೆಸ್ನಿಂದ ವಲಸೆ ಬಂದಿದ್ದಾರೆ. ಆದರೂ ಅವರಿಗೆ ಅಧ್ಯಕ್ಷ ಸ್ಥಾನ ಕೊಡಲಾಗಿದೆ. ಇದನ್ನು ರದ್ದು ಮಾಡಿ, ಮೂಲ ಬಿಜೆಪಿಗರಿಗೇ ಚಳ್ಳಕೆರೆ ಮಂಡಲ ಅಧ್ಯಕ್ಷ ಸ್ಥಾನ ಕೊಡಿ ಎಂದು ಆಗ್ರಹಿಸಿದರು. ಇದೊಂದೇ ಅಲ್ಲದೇ ಕೆಲವೆಡೆ ಜಿಲ್ಲಾ ಮತ್ತು ಮಂಡಲ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ವಿರೋಧ ಕೇಳಿ ಬಂದಿದೆ.