ETV Bharat / state

ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿಗೆ 'ತಾರಾ' ಮೆರುಗು - ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ

ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಮುಂದುವರೆದಿದ್ದು, ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಪರ ನಟಿ ತಾರಾ ಅನುರಾಧ ಅವರು ಸೂಲಿಕೆರೆ, ಕೊಮ್ಮಘಟ್ಟ, ಚಿಕ್ಕನಹಳ್ಳಿ, ಚಿಕ್ಕಬಸ್ತಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

bjp campaign in yashawantapur news
ಯಶವಂತಪುರ ಕ್ಷೇತ್ರದಲ್ಲಿ ಸ್ಟಾರ್ ಮೆರುಗು : ಬಿಜೆಪಿ ಬಿರುಸಿನ ಪ್ರಚಾರ
author img

By

Published : Nov 27, 2019, 9:07 PM IST

ಬೆಂಗಳೂರು : ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಬಿರುಸಿನ ಪ್ರಚಾರ ಮುಂದುವರೆದಿದ್ದು, ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಪರ ನಟಿ ತಾರಾ ಅನುರಾಧ ಅವರು ಸೂಲಿಕೆರೆ, ಕೊಮ್ಮಘಟ್ಟ, ಚಿಕ್ಕನಹಳ್ಳಿ, ಚಿಕ್ಕಬಸ್ತಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ತಾರಾ ಅನುರಾಧ ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಬಿಜೆಪಿಯೊಂದೇ ಭರವಸೆ ಉಳಿಸಿಕೊಂಡಿರುವುದು. ಅಲ್ಪಸಂಖ್ಯಾತರ ವಿಷಯದಲ್ಲೂ ಬಿಜೆಪಿ ಆಶಾಕಿರಣವಾಗಿದೆ. ತ್ರಿವಳಿ ತಲಾಖ್ ರದ್ದು ಮಾಡಿದ್ದು ಅದಕ್ಕೆ ಸಾಕ್ಷಿ ಎಂದು ಹೇಳಿದರು. ರಾಜ್ಯದಲ್ಲೂ ಯಡಿಯೂರಪ್ಪನವರ ಸರ್ಕಾರ ಮುಂದುವರಿಯಬೇಕಾದರೆ ಯಶವಂತಪುರದಲ್ಲಿ ಸೋಮಶೇಖರ ಗೌಡರು ಗೆಲ್ಲಬೇಕೆಂದರು.

ಯಶವಂತಪುರ ಕ್ಷೇತ್ರದಲ್ಲಿ ಸ್ಟಾರ್ ಮೆರುಗು : ಬಿಜೆಪಿ ಬಿರುಸಿನ ಪ್ರಚಾರ

ಸೂಲಿಕೆರೆ ಗ್ರಾಮದಲ್ಲಿ ನಡೆದ ಪ್ರಚಾರದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ ಸೋಮಶೇಖರ್, ನಾನು ಚುನಾವಣಾ ಆಯೋಗಕ್ಕೆ ಅಫಿಡವಿಟ್ ಸಲ್ಲಿಸಿದ್ದೇನೆ. ನನ್ನ ಮೇಲೆ ಯಾವುದೇ ಕ್ರಿಮಿನಲ್ ಕೇಸ್‌ಗಳಿಲ್ಲ ಎಂದರು. ಕಳೆದ ಇಪ್ಪತ್ತು ವರ್ಷಗಳಿಂದ ನಾನು ಕ್ಷೇತ್ರದ ಜನರ ಜತೆ ಇದ್ದೇನೆ. ಚುನಾವಣೆಯಲ್ಲಿ ಸೋತಾಗಲೂ ಸಹ ನಾನು ಕ್ಷೇತ್ರ ಬಿಟ್ಟು ಹೋಗಿಲ್ಲ. ಅದೇ ಜವರಾಯಿಗೌಡರು ತಮ್ಮ ಮೇಲೆ ಎಷ್ಟು ಕ್ರಿಮಿನಲ್ ಕೇಸ್​ಗಳಿವೆ ಎಂಬುದನ್ನು ತಾವೇ ಘೋಷಿಸಿಕೊಂಡಿದ್ದಾರೆ. ಅಲ್ದೇ, ಚುನಾವಣೆ ಮುಗಿಯುತ್ತಿದ್ದಂತೆ ಕಾಣೆಯಾಗುತ್ತಾರೆ. ಐದು ವರ್ಷ ಕ್ಷೇತ್ರದ ಕಡೆಗೆ ತಿರುಗಿಯೂ ನೋಡಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪನವರು ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದಾರೆ. ಅದರ ಜತೆಗೆ ಮೇಲ್ಸೇತುವೆ, ಮಾಗಡಿ ರಸ್ತೆಗೆ ಮೆಟ್ರೋ ಸಂಪರ್ಕ ಹಾಗೂ ಕಾವೇರಿ ಕುಡಿಯುವ ನೀರಿನ ‌ಪೂರೈಕೆ ಯೋಜನೆಗಳನ್ನು ನಾವು ಪ್ರಾರಂಭಿಸಿದ್ದೆವು. ಅದನ್ನು ಮುಂದುವರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವವರು ಯಡಿಯೂರಪ್ಪನವರು, ಹಾಗಾಗಿ ಯಶವಂತಪುರದ ಜನ ಅವರ ಮಾತನ್ನು ನಂಬುತ್ತಾರೆ ಎಂದರು.

ಬೆಂಗಳೂರು : ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಬಿರುಸಿನ ಪ್ರಚಾರ ಮುಂದುವರೆದಿದ್ದು, ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಪರ ನಟಿ ತಾರಾ ಅನುರಾಧ ಅವರು ಸೂಲಿಕೆರೆ, ಕೊಮ್ಮಘಟ್ಟ, ಚಿಕ್ಕನಹಳ್ಳಿ, ಚಿಕ್ಕಬಸ್ತಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ತಾರಾ ಅನುರಾಧ ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಬಿಜೆಪಿಯೊಂದೇ ಭರವಸೆ ಉಳಿಸಿಕೊಂಡಿರುವುದು. ಅಲ್ಪಸಂಖ್ಯಾತರ ವಿಷಯದಲ್ಲೂ ಬಿಜೆಪಿ ಆಶಾಕಿರಣವಾಗಿದೆ. ತ್ರಿವಳಿ ತಲಾಖ್ ರದ್ದು ಮಾಡಿದ್ದು ಅದಕ್ಕೆ ಸಾಕ್ಷಿ ಎಂದು ಹೇಳಿದರು. ರಾಜ್ಯದಲ್ಲೂ ಯಡಿಯೂರಪ್ಪನವರ ಸರ್ಕಾರ ಮುಂದುವರಿಯಬೇಕಾದರೆ ಯಶವಂತಪುರದಲ್ಲಿ ಸೋಮಶೇಖರ ಗೌಡರು ಗೆಲ್ಲಬೇಕೆಂದರು.

ಯಶವಂತಪುರ ಕ್ಷೇತ್ರದಲ್ಲಿ ಸ್ಟಾರ್ ಮೆರುಗು : ಬಿಜೆಪಿ ಬಿರುಸಿನ ಪ್ರಚಾರ

ಸೂಲಿಕೆರೆ ಗ್ರಾಮದಲ್ಲಿ ನಡೆದ ಪ್ರಚಾರದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ ಸೋಮಶೇಖರ್, ನಾನು ಚುನಾವಣಾ ಆಯೋಗಕ್ಕೆ ಅಫಿಡವಿಟ್ ಸಲ್ಲಿಸಿದ್ದೇನೆ. ನನ್ನ ಮೇಲೆ ಯಾವುದೇ ಕ್ರಿಮಿನಲ್ ಕೇಸ್‌ಗಳಿಲ್ಲ ಎಂದರು. ಕಳೆದ ಇಪ್ಪತ್ತು ವರ್ಷಗಳಿಂದ ನಾನು ಕ್ಷೇತ್ರದ ಜನರ ಜತೆ ಇದ್ದೇನೆ. ಚುನಾವಣೆಯಲ್ಲಿ ಸೋತಾಗಲೂ ಸಹ ನಾನು ಕ್ಷೇತ್ರ ಬಿಟ್ಟು ಹೋಗಿಲ್ಲ. ಅದೇ ಜವರಾಯಿಗೌಡರು ತಮ್ಮ ಮೇಲೆ ಎಷ್ಟು ಕ್ರಿಮಿನಲ್ ಕೇಸ್​ಗಳಿವೆ ಎಂಬುದನ್ನು ತಾವೇ ಘೋಷಿಸಿಕೊಂಡಿದ್ದಾರೆ. ಅಲ್ದೇ, ಚುನಾವಣೆ ಮುಗಿಯುತ್ತಿದ್ದಂತೆ ಕಾಣೆಯಾಗುತ್ತಾರೆ. ಐದು ವರ್ಷ ಕ್ಷೇತ್ರದ ಕಡೆಗೆ ತಿರುಗಿಯೂ ನೋಡಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪನವರು ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದಾರೆ. ಅದರ ಜತೆಗೆ ಮೇಲ್ಸೇತುವೆ, ಮಾಗಡಿ ರಸ್ತೆಗೆ ಮೆಟ್ರೋ ಸಂಪರ್ಕ ಹಾಗೂ ಕಾವೇರಿ ಕುಡಿಯುವ ನೀರಿನ ‌ಪೂರೈಕೆ ಯೋಜನೆಗಳನ್ನು ನಾವು ಪ್ರಾರಂಭಿಸಿದ್ದೆವು. ಅದನ್ನು ಮುಂದುವರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವವರು ಯಡಿಯೂರಪ್ಪನವರು, ಹಾಗಾಗಿ ಯಶವಂತಪುರದ ಜನ ಅವರ ಮಾತನ್ನು ನಂಬುತ್ತಾರೆ ಎಂದರು.

Intro:ಬೆಂಗಳೂರು : ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಇಂದೂ ಸಹ ಮುಂದುವರಿದಿದೆ. Body:ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಪರ ನಟಿ ತಾರಾ ಅನುರಾಧ ಅವರು ಸೂಲಿಕೆರೆ, ಕೊಮ್ಮಘಟ್ಟ, ಚಿಕ್ಕನಹಳ್ಳಿ, ಚಿಕ್ಕಬಸ್ತಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.
ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಕೂಡ ಪ್ರಚಾರದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ನಟಿ, ರಾಜಕಾರಣಿ ತಾರಾ ಅನುರಾಧ ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಬಿಜೆಪಿಯೊಂದೇ ಭರವಸೆ ಉಳಿಸಿಕೊಂಡಿರುವುದು. ಅಲ್ಪಸಂಖ್ಯಾತರ ವಿಷಯದಲ್ಲೂ ಬಿಜೆಪಿ ಆಶಾಕಿರಣವಾಗಿದೆ. ತ್ರಿವಳಿ ತಲಾಖ್ ರದ್ದು ಮಾಡಿದ್ದು ಅದಕ್ಕೆ ಸಾಕ್ಷಿ ಎಂದು ಹೇಳಿದರು.
ರಾಜ್ಯದಲ್ಲೂ ಯಡಿಯೂರಪ್ಪನವರ ಸರ್ಕಾರ ಮುಂದುವರಿಯಬೇಕಾದರೆ ಯಶವಂತಪುರದಲ್ಲಿ ಸೋಮಶೇಖರಗೌಡರು ಗೆಲ್ಲಬೇಕು ಎಂದರು.
ಸೂಲಿಕೆರೆ ಗ್ರಾಮದಲ್ಲಿ ನಡೆದ ಪ್ರಚಾರದ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್ ಅವರು,
ನಾನು ಚುನಾವಣಾ ಆಯೋಗಕ್ಕೆ ಅಫಿಡವಿಟ್ ಸಲ್ಲಿಸಿದ್ದೇನೆ. ನನ್ನ ಮೇಲೆ ಯಾವುದೇ ಕ್ರಿಮಿನಲ್ ಆರೋಪಗಳಿಲ್ಲ. ಅದೇ ಜವರಾಯಿಗೌಡರು ತಮ್ಮ ಮೇಲೆ ಎಷ್ಟು ಕ್ರಿಮಿನಲ್ ಕೇಸ್ ಗಳಿವೆ ಎಂಬುದನ್ನು ತಾವೇ ಘೋಷಿಸಿಕೊಂಡಿದ್ದಾರೆ. ನಾನು ಅವರ ವೈಯಕ್ತಿಕ ವಿಷಯವನ್ನು ಪ್ರಸ್ತಾಪಿಸಿಯೇ ಇಲ್ಲ. ಅವರೇ ಮಾಧ್ಯಮಗಳಲ್ಲಿ ಮಗನ ಮದುವೆ ಹಾಗೂ ಮನೆ ವಿಷಯ ಪ್ರಸ್ತಾಪಿಸಿದ ಕಾರಣಕ್ಕೆ ನಾನು ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಕಳೆದ ಇಪ್ಪತ್ತು ವರ್ಷಗಳಿಂದ ನಾನು ಕ್ಷೇತ್ರದ ಜನರ ಜತೆ ಇದ್ದೇನೆ. ಚುನಾವಣೆ ಸೋತಾಗಲೂ ಸಹ ನಾನು ಕ್ಷೇತ್ರ ಬಿಟ್ಟು ಹೋಗಿಲ್ಲ. ಅದೇ ಜವರಾಯಿಗೌಡರು ಚುನಾವಣೆ ಮುಗಿಯುತ್ತಿದ್ದಂತೆ ಕಾಣೆಯಾಗುತ್ತಾರೆ. ಐದು ವರ್ಷ ಕ್ಷೇತ್ರದ ಕಡೆಗೆ ತಿರುಗಿಯೂ ನೋಡಲ್ಲ ಎಂದು ಟೀಕಿಸಿದರು.
ದೊಡ್ಡ ಬಸ್ತಿ ಬಡಾವಣೆಯಲ್ಲಿ‌ ಮುಸ್ಲೀಮರಿಗೆ ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದ್ದೇನೆ. ಅವರು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ಉರುಸ್ ಗೂ ನೆರವು ನೀಡಿದ್ದೇನೆ. ಹಾಗಾಗಿ ಪಕ್ಷಾತೀತವಾಗಿ ನನಗೆ ಅಲ್ಪಸಂಖ್ಯಾತರೂ ಬೆಂಬಲ ನೀಡುತ್ತಿದ್ದಾರೆ. ಯಡಿಯೂರಪ್ಪನವರು ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದಾರೆ. ಅದರ ಜತೆಗೆ ಮೇಲ್ಸೇತುವೆ. ಮಾಗಡಿ ರಸ್ತೆಗೆ ಮೆಟ್ರೋ ಸಂಪರ್ಕ ಹಾಗೂ ಕಾವೇರಿ ಕುಡಿಯುವ ನೀರಿನ ‌ಪೂರೈಕೆ ಯೋಜನೆಗಳನ್ನು ನಾವು ಪ್ರಾರಂಭಿಸಿದ್ದೆವು. ಅದನ್ನು ಮುಂದುವರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವವರು ಯಡಿಯೂರಪ್ಪನವರು. ಹಾಗಾಗಿ ಯಶವಂತಪುರದ ಜನ ಅವರ ಮಾತನ್ನು ನಂಬುತ್ತಾರೆ ಎಂದರು. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.