ETV Bharat / state

ಕಾವೇರಿಪುರಂ ವಾರ್ಡ್‌ನಲ್ಲಿ ಬಿಜೆಪಿಗೆ ಗೆಲುವು

author img

By

Published : May 31, 2019, 12:42 PM IST

Updated : May 31, 2019, 1:19 PM IST

ಕಾವೇರಿಪುರಂ ವಾರ್ಡ್​ನಲ್ಲಿ ಬಿಜೆಪಿ ಅಭ್ಯರ್ಥಿ ಪಲ್ಲವಿ ಚನ್ನಪ್ಪ ವಿಜಯದ ನಗೆ ಬೀರಿದ್ದಾರೆ.

ಕಾವೇರಿಪುರಂನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕಾವೇರಿಪುರಂ ವಾರ್ಡ್​ನಲ್ಲಿ​ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 78 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಕಾವೇರಿಪುರಂನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು

ಗಲಾಟೆ ಗದ್ದಲಗಳ ನಡುವೆ ನಡೆದ ಚುನಾವಣೆ ಮೈತ್ರಿ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್​ಗೆ ಪ್ರತಿಷ್ಠೆಯ ಕಣವಾಗಿತ್ತು. ಚುನಾವಣಾ ಪ್ರಚಾರದ ವೇಳೆ ಮತ್ತು ಚುನಾವಣೆಯ ದಿನ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ಕಾರ್ಯಕರ್ತರ ನಡುವಿನ ಮಾರಾಮಾರಿಗೂ ಚುನಾವಣೆ ಸಾಕ್ಷಿಯಾಗಿತ್ತು.

ಮತಎಣಿಕೆಯ ಪ್ರತಿ ಹಂತದಲ್ಲೂ ಇಬ್ಬರು ಅಭ್ಯರ್ಥಿಗಳ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ಕೊನೆಯ ಹಾಗು 9ನೇ ಸುತ್ತಿನ ಮತ ಎಣಿಕೆಯ ನಂತರ ಬಿಜೆಪಿ ಅಭ್ಯರ್ಥಿ ಪಲ್ಲವಿ ಚನ್ನಪ್ಪ, 9,507 ಮತ ಪಡೆದ್ರೆ, ಮೈತ್ರಿ ಅಭ್ಯರ್ಥಿ ಸುಶೀಲ ಸುರೇಶ್ 9,429 ಮತ ಪಡೆದುಕೊಂಡಿದ್ದರು. ಹೀಗಾಗಿ ಬಿಜೆಪಿ ಅಭ್ಯರ್ಥಿ ಪಲ್ಲವಿ ಚನ್ನಪ್ಪ 78 ಮತಗಳ ಅಂತರದಲ್ಲಿ ಗೆಲುವು ಸಾಧಿಸಿ, ವಿಜಯ ಪತಾಕೆ ಹಾರಿಸಿದರು.

ಗೆಲುವಿನ ಖುಷಿಯಲ್ಲಿ ಮಾತನಾಡಿದ ಪಲ್ಲವಿ ಚನ್ನಪ್ಪ, ಈ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅರ್ಪಿಸುತ್ತೇನೆ. ಜೆಡಿಎಸ್ ಮತ್ತು ಕಾಂಗ್ರೆಸ್ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಗೆದ್ದಿದೆ. ನನಗೆ ಸಿಗುವ 15 ತಿಂಗಳ ಕಾಲಾವಧಿಯಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕಾವೇರಿಪುರಂ ವಾರ್ಡ್​ನಲ್ಲಿ​ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 78 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಕಾವೇರಿಪುರಂನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು

ಗಲಾಟೆ ಗದ್ದಲಗಳ ನಡುವೆ ನಡೆದ ಚುನಾವಣೆ ಮೈತ್ರಿ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್​ಗೆ ಪ್ರತಿಷ್ಠೆಯ ಕಣವಾಗಿತ್ತು. ಚುನಾವಣಾ ಪ್ರಚಾರದ ವೇಳೆ ಮತ್ತು ಚುನಾವಣೆಯ ದಿನ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ಕಾರ್ಯಕರ್ತರ ನಡುವಿನ ಮಾರಾಮಾರಿಗೂ ಚುನಾವಣೆ ಸಾಕ್ಷಿಯಾಗಿತ್ತು.

ಮತಎಣಿಕೆಯ ಪ್ರತಿ ಹಂತದಲ್ಲೂ ಇಬ್ಬರು ಅಭ್ಯರ್ಥಿಗಳ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ಕೊನೆಯ ಹಾಗು 9ನೇ ಸುತ್ತಿನ ಮತ ಎಣಿಕೆಯ ನಂತರ ಬಿಜೆಪಿ ಅಭ್ಯರ್ಥಿ ಪಲ್ಲವಿ ಚನ್ನಪ್ಪ, 9,507 ಮತ ಪಡೆದ್ರೆ, ಮೈತ್ರಿ ಅಭ್ಯರ್ಥಿ ಸುಶೀಲ ಸುರೇಶ್ 9,429 ಮತ ಪಡೆದುಕೊಂಡಿದ್ದರು. ಹೀಗಾಗಿ ಬಿಜೆಪಿ ಅಭ್ಯರ್ಥಿ ಪಲ್ಲವಿ ಚನ್ನಪ್ಪ 78 ಮತಗಳ ಅಂತರದಲ್ಲಿ ಗೆಲುವು ಸಾಧಿಸಿ, ವಿಜಯ ಪತಾಕೆ ಹಾರಿಸಿದರು.

ಗೆಲುವಿನ ಖುಷಿಯಲ್ಲಿ ಮಾತನಾಡಿದ ಪಲ್ಲವಿ ಚನ್ನಪ್ಪ, ಈ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅರ್ಪಿಸುತ್ತೇನೆ. ಜೆಡಿಎಸ್ ಮತ್ತು ಕಾಂಗ್ರೆಸ್ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಗೆದ್ದಿದೆ. ನನಗೆ ಸಿಗುವ 15 ತಿಂಗಳ ಕಾಲಾವಧಿಯಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯ ಮಾಡುತ್ತೇನೆ ಎಂದು ಭರವಸೆ ನೀಡಿದರು.

Intro:BJP wonby 78 votesBody:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಅಕಾಲಿಕ ನಿಧನದ ನಂತರ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 78 ಮತಗಳಿಂದ ಜಯಭೇರಿ ಬಾರಿಸಿದೆ.

ಬಾರಿ ಗಲಾಟೆ ಗದ್ದಲಗಳ ನಡುವೆ ನಡೆದ ಚುನಾವಣೆ ಮೈತ್ರಿ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಇದು ಪ್ರತಿಷ್ಠೆಯ ಪಣವಾಗಿತ್ತು, ಚುನಾವಣಾ ಪ್ರಚಾರದ ವೇಳೆ ಮತ್ತು ಚುನಾವಣೆಯ ದಿನ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಮಾರಿ ಗು ಸಹಾಯ ಒಂದು ಚುನಾವಣೆ ಸಾಕ್ಷಿಯಾಗಿತ್ತು.

ಪ್ರತಿಯೊಂದು ಹಂತದಲ್ಲೂ ಪಾರಿಜಟ ಪಟಿ ಕಾಯ್ದುಕೊಂಡ ಇಬ್ಬರು ಅಭ್ಯರ್ಥಿಗಳು ಕೊನೆಯ 9 ಸುತ್ತಿನ ಮತ ಎಣಿಕೆಯ ನಂತರ ಬಿಜೆಪಿ ಅಭ್ಯರ್ಥಿ ಪಲ್ಲವಿ ಚನ್ನಪ್ಪಗೆ 9507 ಕಳೆದರೆ ಮೈತ್ರಿ ಅಭ್ಯರ್ಥಿ ಸುಶೀಲ ಸುರೇಶ್ ಗೆ 9429 ಪಡೆದುಕೊಂಡಿದ್ದಾರೆ, ಇದರಿಂದ
ಬಿಜೆಪಿ ಅಭ್ಯರ್ಥಿ 78 ಮತಗಳ ಅಂತರದಲ್ಲಿ ಗೆಲುವು ಸಾಧಿಸಿ ವಿಜಯ ಪದಕ್ಕೆ ಆರಿಸಿದರು

ನಂತರ ಮಾತನಾಡಿದ ಪಲ್ಲವಿ ಚನ್ನಪ್ಪ ಈ ಒಂದು ಗೆಲುವು ಪಕ್ಷದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅರ್ಪಿಸುತ್ತೇನೆ, ಜೆಡಿಎಸ್ ಮತ್ತು ಕಾಂಗ್ರೆಸ್ ನ ಭದ್ರಕೋಟೆ ಹೊಡೆದು ಮೊದಲಬಾರಿಗೆ ಬಿಜೆಪಿಯ ಪತಾಕೆ ಹಾರಿದ್ದು 15 ತಿಂಗಳ ಕಾಲ ಸಿಗುವ ಕಾಲಾವಧಿಯಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೆನೆ ಎಂದರುConclusion:Chitchat from mojo
Last Updated : May 31, 2019, 1:19 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.