ETV Bharat / state

ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ: ಸಿಎಂ ನಿವಾಸದಲ್ಲಿ ಸಂಭ್ರಮಾಚರಣೆ

author img

By

Published : Nov 10, 2020, 1:25 PM IST

ರಾಜ್ಯದಲ್ಲಿ ನಡೆದ ಆರ್​ ಆರ್​ ನಗರ ಹಾಗೂ ಶಿರಾ ಉಪಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು, ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿರುವ ಕಾರಣ ಮುಖ್ಯಮಂತ್ರಿ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದೆ.

Celebration in CM's Home
ಸಿಎಂಗೆ ಸಿಹಿ ತಿನ್ನಿಸುತ್ತಿರುವ ಸಚಿವ ಆರ್​.ಅಶೋಕ್​

ಬೆಂಗಳೂರು: ಆರ್ ಆರ್ ನಗರ, ಶಿರಾ ಕ್ಷೇತ್ರದ ಉಪ-ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದು, ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಗೆಲುವಿನ ಸಂಭ್ರಮ ಆಚರಿಸಲಾಗುತ್ತಿದೆ.

ಸಿಎಂಗೆ ಸಿಹಿ ತಿನ್ನಿಸುತ್ತಿರುವ ಸಚಿವ ಆರ್​.ಅಶೋಕ್​

ಸಿಎಂ ನಿವಾಸಕ್ಕೆ ಆಗಮಿಸಿದ ಸಚಿವರಾದ ಆರ್.ಅಶೋಕ್, ಗೃಹ ಸಚಿವ ಬೊಮ್ಮಾಯಿ, ಶ್ರೀರಾಮುಲು, ಬೈರತಿ ಬಸವರಾಜ್, ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಇತರ ಮುಖಂಡರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಎರಡು ಕ್ಷೇತ್ರದಲ್ಲಿ ಗೆಲುವು ನಮ್ಮದೇ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದೇ ವೇಳೆ ಸಿಎಂಗೆ ಸಿಹಿ ತಿನ್ನಿಸಿ ಹೂಗುಚ್ಛ ನೀಡಿ ಅಭಿನಂದಿಸುವ ಮೂಲಕ ಸಚಿವ ಆರ್​.ಅಶೋಕ್​ ಸಂತಸ ವ್ಯಕ್ತಪಡಿಸಿದರು.

ಬೆಂಗಳೂರು: ಆರ್ ಆರ್ ನಗರ, ಶಿರಾ ಕ್ಷೇತ್ರದ ಉಪ-ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದು, ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಗೆಲುವಿನ ಸಂಭ್ರಮ ಆಚರಿಸಲಾಗುತ್ತಿದೆ.

ಸಿಎಂಗೆ ಸಿಹಿ ತಿನ್ನಿಸುತ್ತಿರುವ ಸಚಿವ ಆರ್​.ಅಶೋಕ್​

ಸಿಎಂ ನಿವಾಸಕ್ಕೆ ಆಗಮಿಸಿದ ಸಚಿವರಾದ ಆರ್.ಅಶೋಕ್, ಗೃಹ ಸಚಿವ ಬೊಮ್ಮಾಯಿ, ಶ್ರೀರಾಮುಲು, ಬೈರತಿ ಬಸವರಾಜ್, ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಇತರ ಮುಖಂಡರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಎರಡು ಕ್ಷೇತ್ರದಲ್ಲಿ ಗೆಲುವು ನಮ್ಮದೇ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದೇ ವೇಳೆ ಸಿಎಂಗೆ ಸಿಹಿ ತಿನ್ನಿಸಿ ಹೂಗುಚ್ಛ ನೀಡಿ ಅಭಿನಂದಿಸುವ ಮೂಲಕ ಸಚಿವ ಆರ್​.ಅಶೋಕ್​ ಸಂತಸ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.