ETV Bharat / state

4,531 ಶವ ಸಂಸ್ಕಾರ ಮಾಡೋ ಮೂಲಕ ಬಿಜೆಪಿ ನಿಸ್ವಾರ್ಥ ಸೇವೆ ಮಾಡಿದೆ: ಕ್ಯಾ ಗಣೇಶ್ ಕಾರ್ಣಿಕ್

author img

By

Published : Jun 26, 2021, 8:13 PM IST

Updated : Jun 26, 2021, 8:46 PM IST

ನಮ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಮುಂದಿನ ದಿನಗಳಲ್ಲಿ ಹೇಗೆ ಸಂಘಟನೆ ಮಾಡಬೇಕು ಅನ್ನೋದರ ಕುರಿತು ಚರ್ಚೆ ಮಾಡಿದ್ರು. ಸೇವಾಹೀ ಸಂಘಟನೆ ಹೆಸರಲ್ಲಿ ಸಂಘಟನೆ ಮಾಡಲು ಸೂಚಿಸಿದ್ದಾರೆ. ಬೂತ್ ಮಟ್ಟದಲ್ಲಿ 'ನನ್ನ ಬೂತ್ ಸಂಪೂರ್ಣ ಲಸಿಕೆ ಪಡೆದ ಬೂತ್' ಕಾರ್ಯಕ್ರಮ ಯೋಜನೆ ರೂಪಿಸಲಾಗಿದೆ. ಜುಲೈ 16 ರಿಂದ 23ರವರೆಗೆ ಪಕ್ಷ ಬಲವರ್ಧನೆಗೆ ಕಾರ್ಯಕ್ರಮ ಯೋಜನೆ ಪ್ರಾರಂಭವಾಗಲಿದೆ..

ganesh
ganesh

ಬೆಂಗಳೂರು : ಬಿಜೆಪಿ ಕೋವಿಡ್​ನಿಂದ ನಿಧನರಾದ 4,531 ಮಂದಿಯ ಶವಸಂಸ್ಕಾರ ಮಾಡುವ ಮೂಲಕ ನಿಸ್ವಾರ್ಥ ಸೇವೆ ಮಾಡಿದೆ ಎಂದು ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮುಗಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ರು. ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿ ನಡೆದಿದೆ ಎಂದ್ರು. ರಾಜ್ಯದ ಪದಾಧಿಕಾರಿಗಳು ಇಲ್ಲಿ ಭಾಗಿಯಾಗಿದ್ದರು. ಜಿಲ್ಲಾ ಪದಾಧಿಕಾರಿಗಳು ಜಿಲ್ಲೆಯಲ್ಲೇ ವರ್ಚುಯಲ್ ಮೂಲಕ ಭಾಗಿಯಾಗಿದ್ರು. ಕೋವಿಡ್ ನಿರ್ವಹಣೆಯ ಬಗ್ಗೆ ಚರ್ಚೆಯಾಗಿದೆ ಎಂದರು.

ಮೂರನೇ ಅಲೆ ಬಂದಲ್ಲಿ ಏನು ಮಾಡಬೇಕು ಅಂತ ಮುನ್ಸೂಚನೆ ನೀಡಲಾಗಿದೆ. ಅರುಣ್ ಸಿಂಗ್ ಅವರು ಕರ್ನಾಟಕವನ್ನ ಹೊಗಳಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ದೇಶಕ್ಕೆ ಮಾದರಿ ಅಂತ ಹೇಳಿದ್ದಾರೆ ಎಂದರು. ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಯಶಸ್ವಿಯಾಗಿದೆ. ಆದರೆ, ಆರಂಭದಲ್ಲಿ ಕಾಂಗ್ರೆಸ್ ವಿರೋಧಿ ಚಟುವಟಿಕೆ ಮಾಡಿತು. ನಮ್ಮಲ್ಲಿ ಮಾಸ್ಕ್, ಸ್ಯಾನಿಟೈಸರ್ ಇಲ್ಲದಿರೋ ಕಾಲವಿತ್ತು. ಟೀಕೆ ಟಿಪ್ಪಣಿಗಳ ಬಗ್ಗೆ ಅಧ್ಯಕ್ಷರು ಉಲ್ಲೇಖ ಮಾಡಿದರು.

ನಮ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಮುಂದಿನ ದಿನಗಳಲ್ಲಿ ಹೇಗೆ ಸಂಘಟನೆ ಮಾಡಬೇಕು ಅನ್ನೋದರ ಕುರಿತು ಚರ್ಚೆ ಮಾಡಿದ್ರು. ಸೇವಾಹೀ ಸಂಘಟನೆ ಹೆಸರಲ್ಲಿ ಸಂಘಟನೆ ಮಾಡಲು ಸೂಚಿಸಿದ್ದಾರೆ. ಬೂತ್ ಮಟ್ಟದಲ್ಲಿ 'ನನ್ನ ಬೂತ್ ಸಂಪೂರ್ಣ ಲಸಿಕೆ ಪಡೆದ ಬೂತ್' ಕಾರ್ಯಕ್ರಮ ಯೋಜನೆ ರೂಪಿಸಲಾಗಿದೆ. ಜುಲೈ 16 ರಿಂದ 23ರವರೆಗೆ ಪಕ್ಷ ಬಲವರ್ಧನೆಗೆ ಕಾರ್ಯಕ್ರಮ ಯೋಜನೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಬರುತ್ತಿದ್ದು, ಅದರ ಬಗ್ಗೆ ಚರ್ಚೆಯಾಗಿದೆ. ತುರ್ತು ಪರಿಸ್ಥಿತಿ ದಿನವನ್ನ ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಇನ್ನು, ಸೆರೆವಾಸ ಅನುಭವಿಸಿದ್ದ ಬಾನು ಪ್ರಕಾಶ್ ಅವರು ಒಂದು ಅವಧಿ ತೆಗೆದುಕೊಂಡು ಅನುಭವ ಹಂಚಿಕೊಂಡ್ರು. ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ:ಆದಿಚುಂಚನಗಿರಿ ಮಠಕ್ಕೆ ಭೇಟಿ : ನಿರ್ಮಲಾನಂದನಾಥ ಶ್ರೀಗಳ ಜೊತೆ ಸಿ ಟಿ ರವಿ ರಹಸ್ಯ ಸಮಾಲೋಚನೆ

ಬೆಂಗಳೂರು : ಬಿಜೆಪಿ ಕೋವಿಡ್​ನಿಂದ ನಿಧನರಾದ 4,531 ಮಂದಿಯ ಶವಸಂಸ್ಕಾರ ಮಾಡುವ ಮೂಲಕ ನಿಸ್ವಾರ್ಥ ಸೇವೆ ಮಾಡಿದೆ ಎಂದು ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮುಗಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ರು. ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿ ನಡೆದಿದೆ ಎಂದ್ರು. ರಾಜ್ಯದ ಪದಾಧಿಕಾರಿಗಳು ಇಲ್ಲಿ ಭಾಗಿಯಾಗಿದ್ದರು. ಜಿಲ್ಲಾ ಪದಾಧಿಕಾರಿಗಳು ಜಿಲ್ಲೆಯಲ್ಲೇ ವರ್ಚುಯಲ್ ಮೂಲಕ ಭಾಗಿಯಾಗಿದ್ರು. ಕೋವಿಡ್ ನಿರ್ವಹಣೆಯ ಬಗ್ಗೆ ಚರ್ಚೆಯಾಗಿದೆ ಎಂದರು.

ಮೂರನೇ ಅಲೆ ಬಂದಲ್ಲಿ ಏನು ಮಾಡಬೇಕು ಅಂತ ಮುನ್ಸೂಚನೆ ನೀಡಲಾಗಿದೆ. ಅರುಣ್ ಸಿಂಗ್ ಅವರು ಕರ್ನಾಟಕವನ್ನ ಹೊಗಳಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ದೇಶಕ್ಕೆ ಮಾದರಿ ಅಂತ ಹೇಳಿದ್ದಾರೆ ಎಂದರು. ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಯಶಸ್ವಿಯಾಗಿದೆ. ಆದರೆ, ಆರಂಭದಲ್ಲಿ ಕಾಂಗ್ರೆಸ್ ವಿರೋಧಿ ಚಟುವಟಿಕೆ ಮಾಡಿತು. ನಮ್ಮಲ್ಲಿ ಮಾಸ್ಕ್, ಸ್ಯಾನಿಟೈಸರ್ ಇಲ್ಲದಿರೋ ಕಾಲವಿತ್ತು. ಟೀಕೆ ಟಿಪ್ಪಣಿಗಳ ಬಗ್ಗೆ ಅಧ್ಯಕ್ಷರು ಉಲ್ಲೇಖ ಮಾಡಿದರು.

ನಮ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಮುಂದಿನ ದಿನಗಳಲ್ಲಿ ಹೇಗೆ ಸಂಘಟನೆ ಮಾಡಬೇಕು ಅನ್ನೋದರ ಕುರಿತು ಚರ್ಚೆ ಮಾಡಿದ್ರು. ಸೇವಾಹೀ ಸಂಘಟನೆ ಹೆಸರಲ್ಲಿ ಸಂಘಟನೆ ಮಾಡಲು ಸೂಚಿಸಿದ್ದಾರೆ. ಬೂತ್ ಮಟ್ಟದಲ್ಲಿ 'ನನ್ನ ಬೂತ್ ಸಂಪೂರ್ಣ ಲಸಿಕೆ ಪಡೆದ ಬೂತ್' ಕಾರ್ಯಕ್ರಮ ಯೋಜನೆ ರೂಪಿಸಲಾಗಿದೆ. ಜುಲೈ 16 ರಿಂದ 23ರವರೆಗೆ ಪಕ್ಷ ಬಲವರ್ಧನೆಗೆ ಕಾರ್ಯಕ್ರಮ ಯೋಜನೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಬರುತ್ತಿದ್ದು, ಅದರ ಬಗ್ಗೆ ಚರ್ಚೆಯಾಗಿದೆ. ತುರ್ತು ಪರಿಸ್ಥಿತಿ ದಿನವನ್ನ ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಇನ್ನು, ಸೆರೆವಾಸ ಅನುಭವಿಸಿದ್ದ ಬಾನು ಪ್ರಕಾಶ್ ಅವರು ಒಂದು ಅವಧಿ ತೆಗೆದುಕೊಂಡು ಅನುಭವ ಹಂಚಿಕೊಂಡ್ರು. ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ:ಆದಿಚುಂಚನಗಿರಿ ಮಠಕ್ಕೆ ಭೇಟಿ : ನಿರ್ಮಲಾನಂದನಾಥ ಶ್ರೀಗಳ ಜೊತೆ ಸಿ ಟಿ ರವಿ ರಹಸ್ಯ ಸಮಾಲೋಚನೆ

Last Updated : Jun 26, 2021, 8:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.