ETV Bharat / state

ತಾಲಿಬಾನಿಗಳಿಗೆ RSS ಹೋಲಿಸಿದ ಸಿದ್ದರಾಮಯ್ಯಗೆ ತಲೆಕೆಟ್ಟಿದೆ: ಎನ್.ರವಿಕುಮಾರ್ - ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ವಾಗ್ದಾಳಿ

ಆರ್​ಎಸ್ಎಸ್ ಸಂಘಟನೆಯನ್ನು ತಾಲಿಬಾನಿಗಳಿಗೆ ಹೋಲಿಕೆ ಮಾಡುವ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ. ಅವರನ್ನು ನಿಮಾನ್ಸ್​ಗೆ ಸೇರಿಸಬೇಕು. ಅಫ್ಘಾನಿಸ್ತಾನದಲ್ಲಿ ಆಗುವ ಹತ್ಯೆಗಳನ್ನು ಸಿದ್ದರಾಮಯ್ಯ ಒಪ್ಪಿಕೊಳ್ತಾರಾ? ಎಸ್​ಡಿಪಿಐಯನ್ನು ಒಪ್ಪಿಕೊಳ್ಳುತ್ತಾರಾ? ದೇಶ ತಾಲಿಬಾನೀಕರಣ ಆಗಬೇಕಾ? ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಪ್ರಶ್ನಿಸಿದರು.

BJP General Secretory N Ravikumar on Cong leader Siddaramaiah
ಎನ್.ರವಿಕುಮಾರ್
author img

By

Published : Oct 5, 2021, 7:22 PM IST

ಬೆಂಗಳೂರು: ಆರ್​ಎಸ್ಎಸ್ ಅನ್ನು ತಾಲಿಬಾನಿಗಳಿಗೆ ಹೋಲಿಸುವ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ.‌ ಅವರನ್ನು ‌ನಿಮಾನ್ಸ್​ಗೆ ಸೇರಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಆರ್​ಎಸ್ಎಸ್ ಸಂಘಟನೆಯನ್ನು ತಾಲಿಬಾನಿಗಳಿಗೆ ಹೋಲಿಕೆ ಮಾಡುವ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ. ಅವರನ್ನು ನಿಮಾನ್ಸ್​ಗೆ ಸೇರಿಸಬೇಕು. ಅಫ್ಘಾನಿಸ್ತಾನದಲ್ಲಿ ಆಗುವ ಹತ್ಯೆಗಳನ್ನು ಸಿದ್ದರಾಮಯ್ಯ ಒಪ್ಪಿಕೊಳ್ತಾರಾ? ಎಸ್​ಡಿಪಿಐಯನ್ನು ಒಪ್ಪಿಕೊಳ್ಳುತ್ತಾರಾ? ದೇಶ ತಾಲಿಬಾನೀಕರಣ ಆಗಬೇಕಾ? ಎಂದು ಪ್ರಶ್ನಿಸಿದರು.

ಹೆಚ್​ಡಿಕೆ ಬಾಯಿ ಹರಕೆಯಿಂದ ಹಾಗೇ ಆಗಲಿ:

ಇದೇ ಸಂದರ್ಭ ಆರ್​ಎಸ್​ಎಸ್ ಸಂಘಟನೆಯಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆರ್​ಎಸ್ಎಸ್ ಆಡಳಿತ ನಡೆಸುವ ಸಂಸ್ಥೆಯಲ್ಲ. ಸೇವೆ ಮಾಡುವ ಸಂಸ್ಥೆಯಾಗಿದೆ. ಕಾರ್ಯಕರ್ತರಿಗೆ ಸೇವಾ ಮನೋಭಾವ ಬೆಳೆಸುವ ಪ್ರಪಂಚದ ಅತಿ ದೊಡ್ಡ ಸಂಘಟನೆ ಆರ್​ಎಸ್​ಎಸ್. ಕುಮಾರಸ್ವಾಮಿ ಬಾಯಿ ಹರಕೆಯಿಂದ ಹಾಗಾದಲ್ಲಿ ನಿಜಕ್ಕೂ ಆಗ ದೇಶಕ್ಕೆ ಒಳ್ಳೆದಾಗುತ್ತದೆ ಎಂದರು.

ಆರ್​ಎಸ್​ಎಸ್​ ಎಲ್ಲಿ ಇರತ್ತೋ ಅಲ್ಲಿ ಬಹಳ ಒಳ್ಳೆಯ ಕೆಲಸಗಳಾಗುತ್ತವೆ. ಕುಮಾರಸ್ವಾಮಿ aವರಿಗೆ ಡೌಟ್ ಬೇಡ, ಆರ್​ಎಸ್​ಎಸ್ ಇರುವುದರಿಂದ ದೇಶದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ. ಕಾಶ್ಮೀರದಲ್ಲಿ 370ನೇ ವಿಧಿ ಹೋಯ್ತು, ಭಯೋತ್ಪಾದನೆ‌ ನಿರ್ಮೂಲನೆ ಆಯ್ತು, 4000 ಜನ ಅನ್ನೋದು ಬಹಳ ದೊಡ್ಡ ಸಂಖ್ಯೆ, ಕುಮಾರಸ್ವಾಮಿ ಬಾಯಿ ಹರಕೆಯಿಂದ ಅಷ್ಟು ಮಂದಿ ಆರ್​ಎಸ್​ಎಸ್​ನವರು ಐಎಎಸ್, ಐಪಿಎಸ್ ಅಧಿಕಾರಿಗಳಾಗಲಿ. ಆರ್​ಎಸ್ಎಸ್ ದೇಶಭಕ್ತ ಸಂಘಟನೆಯಾಗಿದೆ. ನಿಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಆರ್​ಎಸ್​ಎಸ್​ಗೆ ಕಳುಹಿಸಿ ಎಂದರು.

ಬಿ.ವೈ.ವಿಜಯೇಂದ್ರ ಕೈಬಿಟ್ಟಿದ್ದು ಕಣ್ತಪ್ಪಿನಿಂದ ಆಗಿದೆ:

ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ ಉಸ್ತುವಾರಿ ನೇಮಕ ಪಟ್ಟಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೈಬಿಟ್ಟಿದ್ದು ಕಣ್ತಪ್ಪಿನಿಂದಾಗಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.‌ರವಿಕುಮಾರ್‌ ಸ್ಪಷ್ಟನೆ ನೀಡಿದರು.

ವಿಜಯೇಂದ್ರ ಅವರು ಉಪಚುನಾವಣೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಮಸ್ಕಿ ಉಪಚುನಾವಣೆ, ಮಂಡ್ಯ, ಕೆ.ಆರ್.ಪೇಟೆ, ಶಿರಾದಲ್ಲೂ ಕೆಲಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಉದ್ದೇಶಪೂರ್ವಕವಾಗಿ ವಿಜಯೇಂದ್ರ ಹೆಸರು ಕೈಬಿಟ್ಟಿಲ್ಲ. ಅದು ಕಣ್ತಪ್ಪಿನಿಂದಾಗಿ ಆಗಿರುವುದು.‌ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅದನ್ನು ತಿದ್ದುಪಡಿ ಮಾಡಿದ್ದಾರೆ ಎಂದರು.

ಬೆಂಗಳೂರು: ಆರ್​ಎಸ್ಎಸ್ ಅನ್ನು ತಾಲಿಬಾನಿಗಳಿಗೆ ಹೋಲಿಸುವ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ.‌ ಅವರನ್ನು ‌ನಿಮಾನ್ಸ್​ಗೆ ಸೇರಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಆರ್​ಎಸ್ಎಸ್ ಸಂಘಟನೆಯನ್ನು ತಾಲಿಬಾನಿಗಳಿಗೆ ಹೋಲಿಕೆ ಮಾಡುವ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ. ಅವರನ್ನು ನಿಮಾನ್ಸ್​ಗೆ ಸೇರಿಸಬೇಕು. ಅಫ್ಘಾನಿಸ್ತಾನದಲ್ಲಿ ಆಗುವ ಹತ್ಯೆಗಳನ್ನು ಸಿದ್ದರಾಮಯ್ಯ ಒಪ್ಪಿಕೊಳ್ತಾರಾ? ಎಸ್​ಡಿಪಿಐಯನ್ನು ಒಪ್ಪಿಕೊಳ್ಳುತ್ತಾರಾ? ದೇಶ ತಾಲಿಬಾನೀಕರಣ ಆಗಬೇಕಾ? ಎಂದು ಪ್ರಶ್ನಿಸಿದರು.

ಹೆಚ್​ಡಿಕೆ ಬಾಯಿ ಹರಕೆಯಿಂದ ಹಾಗೇ ಆಗಲಿ:

ಇದೇ ಸಂದರ್ಭ ಆರ್​ಎಸ್​ಎಸ್ ಸಂಘಟನೆಯಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆರ್​ಎಸ್ಎಸ್ ಆಡಳಿತ ನಡೆಸುವ ಸಂಸ್ಥೆಯಲ್ಲ. ಸೇವೆ ಮಾಡುವ ಸಂಸ್ಥೆಯಾಗಿದೆ. ಕಾರ್ಯಕರ್ತರಿಗೆ ಸೇವಾ ಮನೋಭಾವ ಬೆಳೆಸುವ ಪ್ರಪಂಚದ ಅತಿ ದೊಡ್ಡ ಸಂಘಟನೆ ಆರ್​ಎಸ್​ಎಸ್. ಕುಮಾರಸ್ವಾಮಿ ಬಾಯಿ ಹರಕೆಯಿಂದ ಹಾಗಾದಲ್ಲಿ ನಿಜಕ್ಕೂ ಆಗ ದೇಶಕ್ಕೆ ಒಳ್ಳೆದಾಗುತ್ತದೆ ಎಂದರು.

ಆರ್​ಎಸ್​ಎಸ್​ ಎಲ್ಲಿ ಇರತ್ತೋ ಅಲ್ಲಿ ಬಹಳ ಒಳ್ಳೆಯ ಕೆಲಸಗಳಾಗುತ್ತವೆ. ಕುಮಾರಸ್ವಾಮಿ aವರಿಗೆ ಡೌಟ್ ಬೇಡ, ಆರ್​ಎಸ್​ಎಸ್ ಇರುವುದರಿಂದ ದೇಶದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ. ಕಾಶ್ಮೀರದಲ್ಲಿ 370ನೇ ವಿಧಿ ಹೋಯ್ತು, ಭಯೋತ್ಪಾದನೆ‌ ನಿರ್ಮೂಲನೆ ಆಯ್ತು, 4000 ಜನ ಅನ್ನೋದು ಬಹಳ ದೊಡ್ಡ ಸಂಖ್ಯೆ, ಕುಮಾರಸ್ವಾಮಿ ಬಾಯಿ ಹರಕೆಯಿಂದ ಅಷ್ಟು ಮಂದಿ ಆರ್​ಎಸ್​ಎಸ್​ನವರು ಐಎಎಸ್, ಐಪಿಎಸ್ ಅಧಿಕಾರಿಗಳಾಗಲಿ. ಆರ್​ಎಸ್ಎಸ್ ದೇಶಭಕ್ತ ಸಂಘಟನೆಯಾಗಿದೆ. ನಿಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಆರ್​ಎಸ್​ಎಸ್​ಗೆ ಕಳುಹಿಸಿ ಎಂದರು.

ಬಿ.ವೈ.ವಿಜಯೇಂದ್ರ ಕೈಬಿಟ್ಟಿದ್ದು ಕಣ್ತಪ್ಪಿನಿಂದ ಆಗಿದೆ:

ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ ಉಸ್ತುವಾರಿ ನೇಮಕ ಪಟ್ಟಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೈಬಿಟ್ಟಿದ್ದು ಕಣ್ತಪ್ಪಿನಿಂದಾಗಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.‌ರವಿಕುಮಾರ್‌ ಸ್ಪಷ್ಟನೆ ನೀಡಿದರು.

ವಿಜಯೇಂದ್ರ ಅವರು ಉಪಚುನಾವಣೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಮಸ್ಕಿ ಉಪಚುನಾವಣೆ, ಮಂಡ್ಯ, ಕೆ.ಆರ್.ಪೇಟೆ, ಶಿರಾದಲ್ಲೂ ಕೆಲಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಉದ್ದೇಶಪೂರ್ವಕವಾಗಿ ವಿಜಯೇಂದ್ರ ಹೆಸರು ಕೈಬಿಟ್ಟಿಲ್ಲ. ಅದು ಕಣ್ತಪ್ಪಿನಿಂದಾಗಿ ಆಗಿರುವುದು.‌ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅದನ್ನು ತಿದ್ದುಪಡಿ ಮಾಡಿದ್ದಾರೆ ಎಂದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.