ETV Bharat / state

ರಾಮಲಿಂಗಾರೆಡ್ಡಿಗೆ ಬಿಜೆಪಿಯಿಂದ ಬಂಪರ್​ ಆಫರ್!?

ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಗೆ ಬಿಜೆಪಿ ಭರ್ಜರಿ ಆಫರ್ ನೀಡಿದೆ ಎನ್ನಲಾಗಿದೆ.

author img

By

Published : Jul 7, 2019, 4:52 AM IST

ರಾಮಲಿಂಗ ರೆಡ್ಡಿಗೆ ಬಂಪರ್​ ಆಫರ್​ ನೀಡಿದ ಬಿಜೆಪಿ!

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಗೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಇಲ್ಲವೇ, ರಾಜ್ಯಸಭೆ ಸದಸ್ಯ ಸ್ಥಾನ ನೀಡುವ ಆಫರ್​ನ್ನು ಬಿಜೆಪಿ ನೀಡಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಸರ್ಕಾರದಲ್ಲಿ ಒಂದು ವೇಳೆ ಉಪ ಮುಖ್ಯಮಂತ್ರಿಯಾಗಲು ಒಪ್ಪದೆ ಇದ್ದರೆ ರಾಜ್ಯಸಭೆಗೆ ನೇಮಕ ಮಾಡುವ ಭರವಸೆಯನ್ನು ಬಿಜೆಪಿ ಕೊಟ್ಟಿದೆ ಎನ್ನಲಾಗ್ತಿದೆ. ಇನ್ನು ರಾಮಲಿಂಗಾರೆಡ್ಡಿ ರಾಜ್ಯಸಭೆಗೆ ಆಯ್ಕೆಯಾದರೆ, ಅವರ ಪುತ್ರಿಯಾದ ಸೌಮ್ಯರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವ ಆಫರ್​ನ್ನ ಬಿಜೆಪಿಯ ಹೈಕಮಾಂಡ್ ನೀಡಿದೆ ಎನ್ನಲಾಗಿದೆ.

ರಾಮಲಿಂಗಾರೆಡ್ಡಿಯವರು ಈಗ ಪ್ರತಿನಿಧಿಸುತ್ತಿರುವ ಬೆಂಗಳೂರಿನ ಬಿಟಿಎಂ ಲೇಔಟ್ ಕ್ಷೇತ್ರದಿಂದ ಜಯನಗರ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿ ಸ್ಪರ್ಧೆ ಮಾಡುವುದು, ಸೌಮ್ಯರೆಡ್ಡಿ ಪ್ರತಿನಿಧಿಸಿರುವ ಜಯನಗರ ಕ್ಷೇತ್ರದಲ್ಲಿ ದಿ.ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕಣಕ್ಕಿಳಿಸುವ ಯೋಚನೆಯನ್ನು ಬಿಜೆಪಿ ಹೊಂದಿದೆ ಎಂದು ತಿಳಿದು ಬಂದಿದೆ.

ಎಲ್ಲಾ ಆಯ್ಕೆಯನ್ನು ರಾಮಲಿಂಗಾರೆಡ್ಡಿ ಅವರಿಗೆ ಬಿಜೆಪಿ ಬಿಟ್ಟಿದೆ. ರಾಮಲಿಂಗಾರೆಡ್ಡಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ರಾಜೀನಾಮೆ ನೀಡುತ್ತಿರುವುದರಿಂದ ಬಂಪರ್ ಆಫರ್​ನ್ನು ಬಿಜೆಪಿ ನೀಡಲು ಆಸಕ್ತಿ ತೋರಿದೆ ಎನ್ನಲಾಗುತ್ತಿದೆ.

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಗೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಇಲ್ಲವೇ, ರಾಜ್ಯಸಭೆ ಸದಸ್ಯ ಸ್ಥಾನ ನೀಡುವ ಆಫರ್​ನ್ನು ಬಿಜೆಪಿ ನೀಡಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಸರ್ಕಾರದಲ್ಲಿ ಒಂದು ವೇಳೆ ಉಪ ಮುಖ್ಯಮಂತ್ರಿಯಾಗಲು ಒಪ್ಪದೆ ಇದ್ದರೆ ರಾಜ್ಯಸಭೆಗೆ ನೇಮಕ ಮಾಡುವ ಭರವಸೆಯನ್ನು ಬಿಜೆಪಿ ಕೊಟ್ಟಿದೆ ಎನ್ನಲಾಗ್ತಿದೆ. ಇನ್ನು ರಾಮಲಿಂಗಾರೆಡ್ಡಿ ರಾಜ್ಯಸಭೆಗೆ ಆಯ್ಕೆಯಾದರೆ, ಅವರ ಪುತ್ರಿಯಾದ ಸೌಮ್ಯರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವ ಆಫರ್​ನ್ನ ಬಿಜೆಪಿಯ ಹೈಕಮಾಂಡ್ ನೀಡಿದೆ ಎನ್ನಲಾಗಿದೆ.

ರಾಮಲಿಂಗಾರೆಡ್ಡಿಯವರು ಈಗ ಪ್ರತಿನಿಧಿಸುತ್ತಿರುವ ಬೆಂಗಳೂರಿನ ಬಿಟಿಎಂ ಲೇಔಟ್ ಕ್ಷೇತ್ರದಿಂದ ಜಯನಗರ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿ ಸ್ಪರ್ಧೆ ಮಾಡುವುದು, ಸೌಮ್ಯರೆಡ್ಡಿ ಪ್ರತಿನಿಧಿಸಿರುವ ಜಯನಗರ ಕ್ಷೇತ್ರದಲ್ಲಿ ದಿ.ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕಣಕ್ಕಿಳಿಸುವ ಯೋಚನೆಯನ್ನು ಬಿಜೆಪಿ ಹೊಂದಿದೆ ಎಂದು ತಿಳಿದು ಬಂದಿದೆ.

ಎಲ್ಲಾ ಆಯ್ಕೆಯನ್ನು ರಾಮಲಿಂಗಾರೆಡ್ಡಿ ಅವರಿಗೆ ಬಿಜೆಪಿ ಬಿಟ್ಟಿದೆ. ರಾಮಲಿಂಗಾರೆಡ್ಡಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ರಾಜೀನಾಮೆ ನೀಡುತ್ತಿರುವುದರಿಂದ ಬಂಪರ್ ಆಫರ್​ನ್ನು ಬಿಜೆಪಿ ನೀಡಲು ಆಸಕ್ತಿ ತೋರಿದೆ ಎನ್ನಲಾಗುತ್ತಿದೆ.

Intro:ರಾಮಲಿಂಗಾರೆಡ್ಡಿ ಗೆ ರಾಜ್ಯಸಭೆ ಅಥವಾ ಡಿಸಿಎಂ
ಮಗಳಿಗೆ ಮಂತ್ರಿಗಿರಿ - ಇದು ಬಿಜೆಪಿ ಆಫರ್

ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಗೆ ರಾಜ್ಯ ಬಿಜೆಪಿ ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಇಲ್ಲವೇ ರಾಜ್ಯಸಭೆ ಸದಸ್ಯ ಸ್ಥಾನ ನೀಡುವ ಆಫರ್ ನ್ನು ಬಿಜೆಪಿ ನೀಡಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಸರಕಾರದಲ್ಲಿ ಒಂದು ವೇಳೆ ಒಂದು ಉಪ ಮುಖ್ಯಮಂತ್ರಿ ಯಾಗಲು ಒಪ್ಪದೆ ಇದ್ದರೆ ರಾಜ್ಯಸಭೆಗೆ ನೇಮಕ ಮಾಡುವ ಭರವಸೆಯನ್ನು ಬಿಜೆಪಿ ಕೊಟ್ಟಿದೆ ಎಂದು ತಿಳಿದುಬಂದಿದೆ.


Body:ರಾಮಲಿಂಗಾರೆಡ್ಡಿ ವಾರು ರಾಜ್ಯಸಭೆಗೆ ಆಯ್ಕೆಯಾದರೆ ರಾಜ್ಯದಲ್ಲಿನ ಬಿಜೆಪಿ ಸರಕಾರದಲ್ಲಿ ಅವರ ಪುತ್ರಿಯಾದ ಸೌಮ್ಯರೆಡ್ಡಿ ಅವರಿಗೆ ಮಂತ್ರಿ ಸ್ಥಾನ ನೀಡುವ ಆಫರ್ ನ್ನು ಬಿಜೆಪಿಯ ಹೈಕಮಾಂಡ್ ನೀಡಿದೆ ಎನ್ನಲಾಗುತ್ತದೆ.

ರಾಮಲಿಂಗಾರೆಡ್ಡಿಯವರು ಈಗ ಪ್ರತಿನಿಧಿಸುತ್ತಿರುವ ಬೆಂಗಳೂರಿನ ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಜಯನಗರ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿ ಸ್ಪರ್ಧೆ ಮಾಡುವುದು. ಸೌಮ್ಯರೆಡ್ಡಿ ಪ್ರತಿನಿಧಿಸಿರುವ ಜಯನಗರ ಕ್ಷೇತ್ರದಲ್ಲಿ ದಿ.ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕಣಕ್ಕಿಳಿಸುವ ಯೋಚನೆಯನ್ನು ಬಿಜೆಪಿ ಹೊಂದಿದೆ ಎಂದು ತಿಳಿದುಬಂದಿದೆ.

ಎಲ್ಲಾ ಆಯ್ಕೆಯನ್ನು ರಾಮಲಿಂಗಾರೆಡ್ಡಿ ಅವರಿಗೆ ಬಿಜೆಪಿ ಬಿಟ್ಟಿದೆ. ರಾಮಲಿಂಗಾರೆಡ್ಡಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ರಾಜೀನಾಮೆ ನೀಡುತ್ತಿರುವುದರಿಂದ ಬಂಪರ್ ಆಫರ್ ನ್ನು ಕಮಲದ ಪಕ್ಷ ನೀಡಲು ಆಸಕ್ತಿ ತೋರಿದೆ ಎನ್ನಲಾಗುತ್ತಿದೆ.


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.