ETV Bharat / state

ಡಿ ಕೆ ಶಿವಕುಮಾರ್, ಜಮೀರ್ ಅಹಮದ್ ಖಾನ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

author img

By

Published : May 3, 2023, 8:29 PM IST

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪೊಲೀಸರನ್ನು ಹೆದರಿಸುವುದು ನೇರವಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರು ಯಾರೇ ನಾಯಕರು ಬಂದರೂ ರಕ್ಷಣೆ ನೀಡಬೇಕು. ಯಾವುದೇ ಪಕ್ಷ ಹೋದರೂ ನಮ್ಮ‌ ಪೊಲೀಸರು ರಕ್ಷಣೆ ನೀಡಬೇಕು. ಆದರೆ ಚಿಕ್ಕಬಳ್ಳಾಪುರದಲ್ಲಿ ಜನರನ್ನು ಮೆಚ್ಚಿಸಲು ಪೊಲೀಸರಿಗೆ ಡಿ ಕೆ ಶಿವಕುಮಾರ್ ಅವರು ಬೆದರಿಸಿದ್ದಾರೆ ಹಾಗೂ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕಿಡ್ನಾಪ್ ಹುನ್ನಾರ ಆರೋಪ: ಜೆಡಿಎಸ್ ಅಭ್ಯರ್ಥಿ ಮುನೇಗೌಡ ವಿರುದ್ಧ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ದೂರು

ನಮ್ಮ ಸರ್ಕಾರ ಬಂದರೆ ನಿಮ್ಮನ್ನು ನೋಡಿಕೊಳ್ಳುತ್ತೇವೆ ಎಂದು ನಿನ್ನೆ ಡಿ ಕೆ ಶಿ‌ವಕುಮಾರ್ ಅವರು ಪೊಲೀಸರಿಗೆ ಧಮ್ಕಿ ಹಾಕಿದ್ದಾರೆ. ಈ ಹಿಂದೆ ನಮ್ಮ‌ ರಾಜ್ಯದ ಡಿಜಿ ಮತ್ತು ಡಿಐಜಿಗೆ ಧಮ್ಕಿ ಹಾಕಿದ್ದರು. ಈಗ ಮತ್ತೊಮ್ಮೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ನಮ್ಮ ಎಲ್ಲಾ‌ ರಾಜಕೀಯ ಪಕ್ಷದ ನಾಯಕರಿಗೆ ರಕ್ಷಣೆ ಕೊಡುವ ಕೆಲಸ ಪೊಲೀಸರು ಮಾಡುತ್ತಾರೆ.

ಇಂಥಹ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಅವರು ಪೊಲೀಸರನ್ನು ಹೆದರಿಸುವುದು ನೇರವಾಗಿ‌ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಪೊಲೀಸರ ಕೆಲಸಕ್ಕೆ ಅಡ್ಡಿ ಆಗಿದೆ. ಹೀಗಾಗಿ ತಕ್ಷಣ ಡಿ ಕೆ ಶಿವಕುಮಾರ್ ಅವರ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಬೆದರಿಕೆ ದೂರು ದಾಖಲು ಮಾಡಬೇಕು ಎಂದು ಮನವಿ ಮಾಡಿರುವುದಾಗಿ ಅವರು ಹೇಳಿದರು.

ಇದನ್ನೂ ಓದಿ: ಡಿಕೆಶಿಯವರೇ ನಿಮಗೆ ತಾಕತ್ ಇದ್ದರೇ ಬಜರಂಗದಳ ನಿಷೇಧಿಸಿ: ರೇಣುಕಾಚಾರ್ಯ ಸವಾಲ್​​

ಇನ್ನು ಮೇ 1 ರಂದು ಜಮೀರ್ ಅಹಮದ್ ಖಾನ್ ಅವರು ಹುಮ್ನಾಬಾದ್​ನಲ್ಲಿ ನಡೆದ ಸಭೆಯಲ್ಲಿ ಮಾತನಾಡುವಾಗ ಚುನಾವಣೆ ಘೋಷಣೆ ಹಾಗೂ ನೀತಿ ಸಂಹಿತೆ ಜಾರಿ ಆದ ಮೇಲೆ ರಾಷ್ಟ್ರ ಧ್ವಜವನ್ನು ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ರಾಷ್ಟ್ರ ಧ್ವಜವನ್ನು ಭಾಷಣ ಮಾಡುವ ಪೋಡಿಯಂಗೆ ಹಾಕಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದವರು ರಾಷ್ಟ್ರಧ್ವಜಕ್ಕೆ ಎಷ್ಟು ಬೆಲೆ‌ಕೊಡುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದರು.

ರಾಷ್ಟ್ರ ಧ್ವಜದ ಬಗ್ಗೆ ಕಾಂಗ್ರೆಸ್ಸಿಗರಿಗೆ ಗೌರವ ಇಲ್ಲ. ರಾಷ್ಟ್ರಿಯ ನಾಯಕರ ಬಗ್ಗೆ ಗೌರವ ಇಲ್ಲ. ದೇಶದ ಯಾವುದೇ ವಿಚಾರಗಳ ಬಗ್ಗೆ ಗೌರವ ಇಲ್ಲ. ಹುಮ್ನಾಬಾದ್​ನಲ್ಲಿ‌ ರಾಷ್ಟ್ರಧ್ವಜವನ್ನು ಯಾಕೆ‌ ಬಳಕೆ ಮಾಡಿದರು. ರಾಷ್ಟ್ರ ಧ್ವಜವನ್ನು ಬಳಸಿ ನೀತಿ ಸಂಹಿತೆ ಉಲ್ಲಂಘನೆ ಆಗಿದೆ. ಹಾಗಾಗಿ ಆ ವೇದಿಕೆ‌ ಮೇಲೆ ಯಾರೆಲ್ಲ ಇದ್ದರು ಅವರ ಮೇಲೆ ದೂರು ದಾಖಲಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆಗ್ರಹಿಸಿದರು.

ಇದನ್ನೂ ಓದಿ: ದಲಿತ ನಾಯಕ ಖರ್ಗೆ ಸಾವು ಬಯಸಿದ ನಿಮ್ಮ ಶಾಸಕನ ವಿರುದ್ಧ ಕ್ರಮವಿಲ್ಲವೇ?: ಮೋದಿಗೆ ಸುರ್ಜೇವಾಲಾ ಪ್ರಶ್ನೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರು ಯಾರೇ ನಾಯಕರು ಬಂದರೂ ರಕ್ಷಣೆ ನೀಡಬೇಕು. ಯಾವುದೇ ಪಕ್ಷ ಹೋದರೂ ನಮ್ಮ‌ ಪೊಲೀಸರು ರಕ್ಷಣೆ ನೀಡಬೇಕು. ಆದರೆ ಚಿಕ್ಕಬಳ್ಳಾಪುರದಲ್ಲಿ ಜನರನ್ನು ಮೆಚ್ಚಿಸಲು ಪೊಲೀಸರಿಗೆ ಡಿ ಕೆ ಶಿವಕುಮಾರ್ ಅವರು ಬೆದರಿಸಿದ್ದಾರೆ ಹಾಗೂ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕಿಡ್ನಾಪ್ ಹುನ್ನಾರ ಆರೋಪ: ಜೆಡಿಎಸ್ ಅಭ್ಯರ್ಥಿ ಮುನೇಗೌಡ ವಿರುದ್ಧ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ದೂರು

ನಮ್ಮ ಸರ್ಕಾರ ಬಂದರೆ ನಿಮ್ಮನ್ನು ನೋಡಿಕೊಳ್ಳುತ್ತೇವೆ ಎಂದು ನಿನ್ನೆ ಡಿ ಕೆ ಶಿ‌ವಕುಮಾರ್ ಅವರು ಪೊಲೀಸರಿಗೆ ಧಮ್ಕಿ ಹಾಕಿದ್ದಾರೆ. ಈ ಹಿಂದೆ ನಮ್ಮ‌ ರಾಜ್ಯದ ಡಿಜಿ ಮತ್ತು ಡಿಐಜಿಗೆ ಧಮ್ಕಿ ಹಾಕಿದ್ದರು. ಈಗ ಮತ್ತೊಮ್ಮೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ನಮ್ಮ ಎಲ್ಲಾ‌ ರಾಜಕೀಯ ಪಕ್ಷದ ನಾಯಕರಿಗೆ ರಕ್ಷಣೆ ಕೊಡುವ ಕೆಲಸ ಪೊಲೀಸರು ಮಾಡುತ್ತಾರೆ.

ಇಂಥಹ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಅವರು ಪೊಲೀಸರನ್ನು ಹೆದರಿಸುವುದು ನೇರವಾಗಿ‌ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಪೊಲೀಸರ ಕೆಲಸಕ್ಕೆ ಅಡ್ಡಿ ಆಗಿದೆ. ಹೀಗಾಗಿ ತಕ್ಷಣ ಡಿ ಕೆ ಶಿವಕುಮಾರ್ ಅವರ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಬೆದರಿಕೆ ದೂರು ದಾಖಲು ಮಾಡಬೇಕು ಎಂದು ಮನವಿ ಮಾಡಿರುವುದಾಗಿ ಅವರು ಹೇಳಿದರು.

ಇದನ್ನೂ ಓದಿ: ಡಿಕೆಶಿಯವರೇ ನಿಮಗೆ ತಾಕತ್ ಇದ್ದರೇ ಬಜರಂಗದಳ ನಿಷೇಧಿಸಿ: ರೇಣುಕಾಚಾರ್ಯ ಸವಾಲ್​​

ಇನ್ನು ಮೇ 1 ರಂದು ಜಮೀರ್ ಅಹಮದ್ ಖಾನ್ ಅವರು ಹುಮ್ನಾಬಾದ್​ನಲ್ಲಿ ನಡೆದ ಸಭೆಯಲ್ಲಿ ಮಾತನಾಡುವಾಗ ಚುನಾವಣೆ ಘೋಷಣೆ ಹಾಗೂ ನೀತಿ ಸಂಹಿತೆ ಜಾರಿ ಆದ ಮೇಲೆ ರಾಷ್ಟ್ರ ಧ್ವಜವನ್ನು ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ರಾಷ್ಟ್ರ ಧ್ವಜವನ್ನು ಭಾಷಣ ಮಾಡುವ ಪೋಡಿಯಂಗೆ ಹಾಕಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದವರು ರಾಷ್ಟ್ರಧ್ವಜಕ್ಕೆ ಎಷ್ಟು ಬೆಲೆ‌ಕೊಡುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದರು.

ರಾಷ್ಟ್ರ ಧ್ವಜದ ಬಗ್ಗೆ ಕಾಂಗ್ರೆಸ್ಸಿಗರಿಗೆ ಗೌರವ ಇಲ್ಲ. ರಾಷ್ಟ್ರಿಯ ನಾಯಕರ ಬಗ್ಗೆ ಗೌರವ ಇಲ್ಲ. ದೇಶದ ಯಾವುದೇ ವಿಚಾರಗಳ ಬಗ್ಗೆ ಗೌರವ ಇಲ್ಲ. ಹುಮ್ನಾಬಾದ್​ನಲ್ಲಿ‌ ರಾಷ್ಟ್ರಧ್ವಜವನ್ನು ಯಾಕೆ‌ ಬಳಕೆ ಮಾಡಿದರು. ರಾಷ್ಟ್ರ ಧ್ವಜವನ್ನು ಬಳಸಿ ನೀತಿ ಸಂಹಿತೆ ಉಲ್ಲಂಘನೆ ಆಗಿದೆ. ಹಾಗಾಗಿ ಆ ವೇದಿಕೆ‌ ಮೇಲೆ ಯಾರೆಲ್ಲ ಇದ್ದರು ಅವರ ಮೇಲೆ ದೂರು ದಾಖಲಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆಗ್ರಹಿಸಿದರು.

ಇದನ್ನೂ ಓದಿ: ದಲಿತ ನಾಯಕ ಖರ್ಗೆ ಸಾವು ಬಯಸಿದ ನಿಮ್ಮ ಶಾಸಕನ ವಿರುದ್ಧ ಕ್ರಮವಿಲ್ಲವೇ?: ಮೋದಿಗೆ ಸುರ್ಜೇವಾಲಾ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.