ETV Bharat / state

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆ : ಬಿ ಎಸ್​ ಯಡಿಯೂರಪ್ಪ - ಈಟಿವಿ ಭಾರತ ಕನ್ನಡ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆ ಆಗಲಿದೆ ಎಂದು ಬಿಎಸ್​ವೈ ಹೇಳಿದ್ದಾರೆ.

ಬಿ ಎಸ್​ ಯಡಿಯೂರಪ್ಪ
ಬಿ ಎಸ್​ ಯಡಿಯೂರಪ್ಪ
author img

By

Published : Jul 3, 2023, 1:44 PM IST

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ನಾಳೆ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಲಿದೆ ಎಂದು ಮಾಜಿ ಸಿ ಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ‌ ಮಧ್ಯಾಹ್ನ 12.10ಕ್ಕೆ ಬಿಎಸ್​ವೈ ಆಗಮಿಸಿದರು. ನಿನ್ನೆಯಷ್ಟೇ ದೆಹಲಿಗೆ ತೆರಳಿದ್ದ ಅವರು ಇಂದು ವಾಪಸ್​ ಆಗಿದ್ದಾರೆ. ಈ ವೇಳೆ ಏರ್​ಪೋರ್ಟ್​ನಲ್ಲಿ​ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಜೆ ಪಿ ನಡ್ಡಾ ಜೊತೆ ಸುದೀರ್ಘ ಚರ್ಚೆ ಮಾಡಿದ್ದೇನೆ. ನಾಳೆ ವಿರೋಧ ಪಕ್ಷದ ನಾಯಕನನ್ನು ರಾಷ್ಟ್ರೀಯ ನಾಯಕರು ಘೊಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ವೀಕ್ಷಕರೆದುರು ಕರ್ನಾಟಕ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದ್ದು, ಸಂಜೆ 6 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸಭೆಯಲ್ಲಿ ವಿಪಕ್ಷ ನಾಯಕನ ಹೆಸರು ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿತ್ತು.

ಈ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್​ ಮಾಡಿದ್ದು, "ಸದನ ಪ್ರಾಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್​ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲೇ ಅತ್ಯಂತ ಶೋಚನೀಯ ಸಂಗತಿ" ಎಂದು ಬಿಜೆಪಿಯ ಕಾಲೆಳೆದಿದೆ.

ಇನ್ನು ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ದೆಹಲಿಯಿಂದ ಮನ್ಸೂಕ್ ಮಾಂಡವೀಯ, ಮತ್ತು ವಿನೋಧ ತಾವಡೆ ವೀಕ್ಷಕರಾಗಿ ಬರುತ್ತಿದ್ದು, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ ಕೂಡ ಇರಲಿದ್ದಾರೆ. ಇಬ್ಬರು ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ನಾಯಕನ ಆಯ್ಕೆ ನಡೆಯಲಿದ್ದು, ಶಾಸಕರ ಅಭಿಪ್ರಾಯ ಸಂಗ್ರಹ ಸಾಧ್ಯತೆ ಅಥವಾ ಈಗಾಗಲೇ ನಿರ್ಣಯ ಮಾಡಿರುವ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಕುರಿತು ಮಾಜಿ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ನಾಯಕನ ಆಯ್ಕೆಗಾಗಿ ಕೇಂದ್ರದಿಂದ ವೀಕ್ಷಕರ ಬರಲಿದ್ದು, ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಬಳಿಕ ವಿಪಕ್ಷ ನಾಯಕರ ಆಯ್ಕೆ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಳಂಬ ಹಿನ್ನೆಲೆ ಬಿಜೆಪಿ ಶಾಸಕರಲ್ಲಿ ಗೊಂದಲ ಮೂಡಿದ್ದು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ವಲಸಿಗ ಶಾಸಕರು ಆರ್. ಟಿ‌. ನಗರದ ನಿವಾಸದಲ್ಲಿ ಭೇಟಿ ಮಾಡಿ ಈ ಬಗ್ಗೆ ಇಂದು ಮಾತುಕತೆ ನಡೆಸಿದರು. ಶಾಸಕ ಎಸ್. ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜ್, ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದರು.

ಶಾಸಕಾಂಗ ಪಕ್ಷದ ಸಭೆಗೂ ಮೊದಲು ನಳಿನ್​ ಕುಮಾರ್​ ಕಟೀಲ್ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನಕಾರ್ಯದರ್ಶಿಗಳ‌ ಸಭೆ ನಡೆಯಲಿದೆ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾಧ್ಯಕ್ಷರ ಜೊತೆ ಸಭೆ ನಿಗದಿಯಾಗಿದ್ದು, ಸೋಲಿನ ಕುರಿತು ಪರಾಮರ್ಶೆ ನಡೆಸಲಾಗುತ್ತದೆ. ಇದರ ಜೊತೆಗೆ ಲೋಕಸಭಾ ಚುನಾವಣಾ ತಯಾರಿ ಮಾತುಕತೆ ನಡೆಯಲಿದೆ.

ಇದನ್ನೂ ಓದಿ: ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ: ಸಂಜೆ ಬಿಜೆಪಿ ಶಾಸಕಾಂಗ ಸಭೆ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ನಾಳೆ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಲಿದೆ ಎಂದು ಮಾಜಿ ಸಿ ಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ‌ ಮಧ್ಯಾಹ್ನ 12.10ಕ್ಕೆ ಬಿಎಸ್​ವೈ ಆಗಮಿಸಿದರು. ನಿನ್ನೆಯಷ್ಟೇ ದೆಹಲಿಗೆ ತೆರಳಿದ್ದ ಅವರು ಇಂದು ವಾಪಸ್​ ಆಗಿದ್ದಾರೆ. ಈ ವೇಳೆ ಏರ್​ಪೋರ್ಟ್​ನಲ್ಲಿ​ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಜೆ ಪಿ ನಡ್ಡಾ ಜೊತೆ ಸುದೀರ್ಘ ಚರ್ಚೆ ಮಾಡಿದ್ದೇನೆ. ನಾಳೆ ವಿರೋಧ ಪಕ್ಷದ ನಾಯಕನನ್ನು ರಾಷ್ಟ್ರೀಯ ನಾಯಕರು ಘೊಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ವೀಕ್ಷಕರೆದುರು ಕರ್ನಾಟಕ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದ್ದು, ಸಂಜೆ 6 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸಭೆಯಲ್ಲಿ ವಿಪಕ್ಷ ನಾಯಕನ ಹೆಸರು ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿತ್ತು.

ಈ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್​ ಮಾಡಿದ್ದು, "ಸದನ ಪ್ರಾಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್​ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲೇ ಅತ್ಯಂತ ಶೋಚನೀಯ ಸಂಗತಿ" ಎಂದು ಬಿಜೆಪಿಯ ಕಾಲೆಳೆದಿದೆ.

ಇನ್ನು ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ದೆಹಲಿಯಿಂದ ಮನ್ಸೂಕ್ ಮಾಂಡವೀಯ, ಮತ್ತು ವಿನೋಧ ತಾವಡೆ ವೀಕ್ಷಕರಾಗಿ ಬರುತ್ತಿದ್ದು, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ ಕೂಡ ಇರಲಿದ್ದಾರೆ. ಇಬ್ಬರು ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ನಾಯಕನ ಆಯ್ಕೆ ನಡೆಯಲಿದ್ದು, ಶಾಸಕರ ಅಭಿಪ್ರಾಯ ಸಂಗ್ರಹ ಸಾಧ್ಯತೆ ಅಥವಾ ಈಗಾಗಲೇ ನಿರ್ಣಯ ಮಾಡಿರುವ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಕುರಿತು ಮಾಜಿ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ನಾಯಕನ ಆಯ್ಕೆಗಾಗಿ ಕೇಂದ್ರದಿಂದ ವೀಕ್ಷಕರ ಬರಲಿದ್ದು, ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಬಳಿಕ ವಿಪಕ್ಷ ನಾಯಕರ ಆಯ್ಕೆ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಳಂಬ ಹಿನ್ನೆಲೆ ಬಿಜೆಪಿ ಶಾಸಕರಲ್ಲಿ ಗೊಂದಲ ಮೂಡಿದ್ದು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ವಲಸಿಗ ಶಾಸಕರು ಆರ್. ಟಿ‌. ನಗರದ ನಿವಾಸದಲ್ಲಿ ಭೇಟಿ ಮಾಡಿ ಈ ಬಗ್ಗೆ ಇಂದು ಮಾತುಕತೆ ನಡೆಸಿದರು. ಶಾಸಕ ಎಸ್. ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜ್, ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದರು.

ಶಾಸಕಾಂಗ ಪಕ್ಷದ ಸಭೆಗೂ ಮೊದಲು ನಳಿನ್​ ಕುಮಾರ್​ ಕಟೀಲ್ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನಕಾರ್ಯದರ್ಶಿಗಳ‌ ಸಭೆ ನಡೆಯಲಿದೆ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾಧ್ಯಕ್ಷರ ಜೊತೆ ಸಭೆ ನಿಗದಿಯಾಗಿದ್ದು, ಸೋಲಿನ ಕುರಿತು ಪರಾಮರ್ಶೆ ನಡೆಸಲಾಗುತ್ತದೆ. ಇದರ ಜೊತೆಗೆ ಲೋಕಸಭಾ ಚುನಾವಣಾ ತಯಾರಿ ಮಾತುಕತೆ ನಡೆಯಲಿದೆ.

ಇದನ್ನೂ ಓದಿ: ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ: ಸಂಜೆ ಬಿಜೆಪಿ ಶಾಸಕಾಂಗ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.