ETV Bharat / state

ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿಲ್ಲ, ಕಾಂಗ್ರೆಸ್ ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ : ನಳಿನ್ ಕುಮಾರ್ ಕಟೀಲ್

author img

By

Published : Jan 25, 2022, 3:59 PM IST

ಜಗತ್ತಿನ ಅತಿದೊಡ್ಡ ಪಕ್ಷ ನಮ್ಮದು. ಎರಡು ವರ್ಷದಿಂದ ನೂತನ ಪ್ರಯೋಗ ಮಾಡುತ್ತಿದ್ದೇವೆ. ಶಕ್ತಿಕೇಂದ್ರ, ಮತಗಟ್ಟೆ, ಪೇಜ್ ಕಮಿಟಿ ಮಾಡಿದ್ದೇವೆ. ಮತಗಟ್ಟೆ ಅಧ್ಯಕ್ಷರ ಮನೆಗೆ ನಾಮಫಲಕ ಹಾಕಿದ್ದೇವೆ, ಮತಗಟ್ಟೆಯಲ್ಲಿ ಪಕ್ಷ ಬಹಳ ಗಟ್ಟಿಯಾಗಿದೆ. ಬಿಬಿಎಂಪಿ ಚುನಾವಣೆ ಎದುರಿಸಲು ಹಲವು ಸುತ್ತಿನ ಸಭೆ ಮಾಡಿದ್ದು, ಪ್ರಭಾರಿ ನಿಯುಕ್ತಿ ಮಾಡುವ ಕೆಲಸ ಮಾಡಲಿದ್ದೇವೆ..

ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಬೆಂಗಳೂರು : ಬಿಜೆಪಿಯ ಯಾವೊಬ್ಬ ಶಾಸಕನೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಆದರೆ, ಕಾಂಗ್ರೆಸ್​​ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹತ್ತಾರು ಜನ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಮೋದಿ ಯೋಚನೆ, ಯೋಜನೆಗಳು, ಮೂರು ವರ್ಷ ಕೋವಿಡ್ ನಡುವೆ ಆಗಿರುವ ಅಭಿವೃದ್ಧಿ, ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದ ಅಭಿವೃದ್ಧಿ ನೋಡಿ ಕಾಂಗ್ರೆಸ್​ನಲ್ಲಿ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್​ನವರು ಬಿಜೆಪಿ ಕಡೆ ಮುಖ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ಅಧಿಕಾರದ ಹಗಲು ಗನಸು ಕಾಣುತ್ತಿದ್ದಾರೆ. ಪ್ರಚಲಿತ ರಾಜಕಾರಣ ವಿದ್ಯಮಾನಗಳಿಂದ ಭಯಭೀತರಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸ್ಪಷ್ಟ ಎಂದು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರು ಅತಂತ್ರ ಸೃಷ್ಟಿ ಮಾಡಲು ಹೊರಟಿದ್ದಾರೆ. ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯ ಯಾವೊಬ್ಬರೂ ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ ಎಂದರು.

ಇದನ್ನೂ ಓದಿ: ಹೈಕಮಾಂಡ್ ಒಪ್ಪಿದ್ರೆ ಕಾಂಗ್ರೆಸ್​ನ 16 ಶಾಸಕರನ್ನು ಬಿಜೆಪಿಗೆ ಕರೆತರುತ್ತೇನೆ: ರಮೇಶ್ ಜಾರಕಿಹೊಳಿ‌ ಹೊಸ ಬಾಂಬ್​!

ನಮ್ಮದು ಶಿಸ್ತಿನ ಪಕ್ಷ, ನಮ್ಮಲ್ಲಿ ಎಲ್ಲರೂ ಶಿಸ್ತು ಅನುಸರಿಸಬೇಕು. ಎಲ್ಲಾ ಎಚ್ಚರಿಕೆ ನೀಡಿದರೂ ಶಿಸ್ತು ಉಲ್ಲಂಘನೆ ಸಹಿಸಲ್ಲ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಬಹಿರಂಗವಾಗಿ ಹೇಳಿಕೆ ನೀಡಬಾರದು. ಮಾಧ್ಯಮಗಳ ಮೂಲಕ ಮಾತನಾಡುವವರನ್ನೂ ಕರೆಸಿ ಈ ಬಗ್ಗೆ ಮಾತನಾಡುತ್ತೇನೆ.

ಈಗಾಗಲೇ ಪದೇಪದೆ ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ರಾಜ್ಯದ ಶಿಸ್ತು ಸಮಿತಿ ಮೂಲಕ‌ ಸ್ಪಷ್ಟೀಕರಣ ಪಡೆದು ಕೇಂದ್ರಕ್ಕೆ ವರದಿ ನೀಡಲಾಗಿದೆ. ಅಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುತ್ತದೆ. ಈಗಾಗಲೇ ನೋಟಿಸ್ ಪಡೆದವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ಮುಂದೆ ಯಾರೇ ಶಿಸ್ತು ಉಲ್ಲಂಘಿಸಿದರೂ ಪಕ್ಷದ ಶಿಸ್ತು ಸಮಿತಿ ನೋಟಿಸ್ ನೀಡಲಿದೆ. ವರಿಷ್ಠರು ಮುಂದೇನು ಮಾಡಬೇಕು ಎಂದು ನಿರ್ಧರಿಸಲಿದ್ದಾರೆ ಎಂದರು.

ಉಸ್ತುವಾರಿಗೆ ಅಸಮಾಧಾನವಿಲ್ಲ: ಜಿಲ್ಲಾ ಉಸ್ತುವಾರಿ ನೇಮಕದ ವಿಚಾರದಲ್ಲಿ ಈ ಬಾರಿ ಹೊಸ ನೀತಿ ಅನುಸರಿಸಲಾಗಿದೆ. ಈಗಾಗಲೇ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ರಾಜ್ಯದಲ್ಲಿಯೂ ಇದೇ ರೀತಿಯ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ನಮ್ಮ ರಾಷ್ಟ್ರೀಯ ನಾಯಕರ ಸೂಚನೆಯಂತೆ ಬೊಮ್ಮಾಯಿ ಈ ರೀತಿ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಹಿರಿಯ ಸಚಿವರಾದ ಆರ್. ಅಶೋಕ್, ಜೆಸಿ ಮಾಧುಸ್ವಾಮಿ ಅವರಿಗೆ ದೊಡ್ಡ ಜವಾಬ್ದಾರಿ ಇದೆ. ಎಲ್ಲರೊಂದಿಗೂ ಮಾತುಕತೆ ನಡೆಸಿ ಇದನ್ನು ಮಾಡಲಾಗಿದೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ಶಾಸಕರು ಮಾತನಾಡಬೇಕಿಲ್ಲ: ಪಕ್ಷದ ಯಾವುದೇ ಶಾಸಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಸಿಎಂ, ವರಿಷ್ಟರು ಅದನ್ನು ನಿರ್ಧಾರ ಮಾಡಲಿದ್ದಾರೆ. ಹಾಗಾಗಿ, ಯಾರೂ ಮಾತನಾಡುವ ಅಗತ್ಯವಿಲ್ಲ. ನಿಗಮ ಮಂಡಳಿಗೆ ನೇಮಕಾತಿ ಕುರಿತು ಸಭೆ ನಡೆಸಲಾಗಿದೆ. ಸಮಾಲೋಚನೆ ನಡೆದಿದೆ. ಇನ್ನೊಂದು ವಾರದಲ್ಲಿ ಸಿಎಂಗೆ ವರದಿ ಕೊಡಲಿದ್ದೇವೆ. ನಂತರ ನೇಮಕಾತಿ ನಡೆಯಲಿದೆ ಎಂದರು.

ಸರ್ಕಾರ, ಪಕ್ಷದ ನಾಯಕತ್ವದಲ್ಲಿ ಬದಲಾವಣೆ ಇಲ್ಲ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದಿನ ಒಂದು ವರ್ಷ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಇರಲಿದ್ದಾರೆ. ಅದೇ ರೀತಿ ಪಕ್ಷದ ಅಧ್ಯಕ್ಷರಿಗೆ ಮೂರು ವರ್ಷದ ಅಧಿಕಾರವಿದೆ, ಚುನಾವಣೆ ಮೂಲಕವೇ ಅಧ್ಯಕ್ಷರ ಆಯ್ಕೆ ಸಾಧ್ಯ. ಯಾವುದೇ ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ರೀತಿಯ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಾಲಿಕೆ ಟಾರ್ಗೆಟ್ : ಈಗ ನಮ್ಮ ಗುರಿ ಬಿಬಿಎಂಪಿ ಚುನಾವಣೆ, ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್ ಮೂರು ಚುನಾವಣೆ ಗೆಲ್ಲುವುದಾಗಿದೆ. ಆ ಬಗ್ಗೆ ಸಿದ್ದತಾ ಕಾರ್ಯ ನಡೆಯುತ್ತಿದೆ. ಸದ್ಯದ್ರಲ್ಲೇ ಬಿಬಿಎಂಪಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ ನಡೆಯಲಿದೆ. ಈ ಚುನಾವಣೆ ದೃಷ್ಟಿಯಿಂದ ಪೂರ್ವ ತಯಾರಿಗೆ ಪಕ್ಷ ಸಿದ್ದತೆ ಮಾಡಿಕೊಂಡಿದೆ.

ಜಗತ್ತಿನ ಅತಿದೊಡ್ಡ ಪಕ್ಷ ನಮ್ಮದು. ಎರಡು ವರ್ಷದಿಂದ ನೂತನ ಪ್ರಯೋಗ ಮಾಡುತ್ತಿದ್ದೇವೆ. ಶಕ್ತಿಕೇಂದ್ರ, ಮತಗಟ್ಟೆ, ಪೇಜ್ ಕಮಿಟಿ ಮಾಡಿದ್ದೇವೆ. ಮತಗಟ್ಟೆ ಅಧ್ಯಕ್ಷರ ಮನೆಗೆ ನಾಮಫಲಕ ಹಾಕಿದ್ದೇವೆ, ಮತಗಟ್ಟೆಯಲ್ಲಿ ಪಕ್ಷ ಬಹಳ ಗಟ್ಟಿಯಾಗಿದೆ. ಬಿಬಿಎಂಪಿ ಚುನಾವಣೆ ಎದುರಿಸಲು ಹಲವು ಸುತ್ತಿನ ಸಭೆ ಮಾಡಿದ್ದು, ಪ್ರಭಾರಿ ನಿಯುಕ್ತಿ ಮಾಡುವ ಕೆಲಸ ಮಾಡಲಿದ್ದೇವೆ.

ಸಿಎಂ ನೇತೃತ್ವದಲ್ಲಿ ಪಾಲಿಕೆ ಚುನಾವಣೆ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ವಿಸ್ತಾರಕ್ ಯೋಜನೆ, ಕೊರೊನಾ ಸೇವಾ ಕಾರ್ಯದ ಮೂಲಕ‌ ಸೇವೆ ಮತ್ತು ರಾಜಕಾರಣ ಎರಡನ್ನೂ ಮಾಡಬೇಕು ಎನ್ನುವ ತತ್ವದೊಂದಿಗೆ ಮುನ್ನಡೆಯುತ್ತೇವೆ ಎಂದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ರಾಜ್ಯದಲ್ಲಿ ಮೂರನೇ ಅಲೆ ಇದೆ. ಎರಡು ಅಲೆಯಲ್ಲಿ ಪಕ್ಷದ ಸೇವಾ ಸಂಘಟನೆ ಮೂಲಕ ಜನರ ಪ್ರಾಣರಕ್ಷಣೆ ಮತ್ತು ಮನೆ‌ ಮನೆಗಳಿಗೆ ಆಹಾರ ಒದಗಿದುವ ಕೆಲಸ‌ ಮಾಡಿದ್ದೆವು. ಮೂರನೇ ಅಲೆ ವೇಳೆಯೂ ಕಾರ್ಯಕರ್ತರು ಜನರಿಗೆ ಸೇವೆ ಮಾಡಬೇಕು. ಆರೋಗ್ಯದ ಕಾಳಜಿ ತೋರಬೇಕು, ಲಸಿಕೆ ಜಾಗೃತಿ ಮೂಡಿಸಬೇಕು ಎನ್ನುವ ಕುರಿತು ಚರ್ಚೆ ನಡೆಸಲಾಗಿದೆ ಎಂದರು.

ಪಂಚರಾಜ್ಯದಲ್ಲಿ ಬಿಜೆಪಿಗೆ ಗೆಲುವು : ಪಂಚ ರಾಜ್ಯಗಳ‌ ಚುನಾವವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ. ಕಾಂಗ್ರೆಸ್ ಮುಕ್ತ ಭಾರತವಾಗಲಿದೆ. ಗೋವಾ, ಉತ್ತರಾಖಂಡ, ಉತ್ತರಪ್ರದೇಶ ಎಲ್ಲಾ ಕಡೆ ಬಿಜೆಪಿ ಗೆಲ್ಲಲಿದೆ. ಎಲ್ಲಾ ಸಮೀಕ್ಷೆ ಬಿಜೆಪಿ ಪರ ಬಂದಿದೆ. ಕಾಂಗ್ರೆಸ್ ಮೊದಲಿನಿಂದಲೂ ಇಬ್ಬಗೆ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತ ತುಷ್ಟೀಕರಣ ಜೊತೆ ರಾಷ್ಟ್ರದ ಹಿತ ಕಡೆಗಣಿಸುತ್ತಿದೆ.

ಪಾಕಿಸ್ತಾನದ ಪ್ರಧಾನಿ ಈ ದೇಶದ ಸಿಎಂಗೆ ದೂರವಾಣಿ ಕರೆಯನ್ನು ಮಾಡಿ ಇಂತವರಿಗೆ ಅಧಿಕಾರ ಕೊಡಿ ಎನ್ನುವುದು ಕಾಂಗ್ರೆಸ್​ನ ರಾಜಕಾರಣ ಹೇಗಿದೆ ಎನ್ನುವುದನ್ನು ತೋರಿಸಲಿದೆ. ವೈರಿ ರಾಷ್ಟ್ರದ ಜೊತೆ ಅವರಿಗೆ ಸಂಬಂಧ ಇದೆ ಎನ್ನುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ರಾಷ್ಟ್ರ ವಿರೋಧಿ ನೀತಿ ಅನುಸರಿಸುತ್ತಿದೆ ಎನ್ನುವುದು ಇದರಿಂದ ಸ್ಪಷ್ಟವಾಗಿದೆ ಎಂದರು.

ಬೆಂಗಳೂರು : ಬಿಜೆಪಿಯ ಯಾವೊಬ್ಬ ಶಾಸಕನೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಆದರೆ, ಕಾಂಗ್ರೆಸ್​​ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹತ್ತಾರು ಜನ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಮೋದಿ ಯೋಚನೆ, ಯೋಜನೆಗಳು, ಮೂರು ವರ್ಷ ಕೋವಿಡ್ ನಡುವೆ ಆಗಿರುವ ಅಭಿವೃದ್ಧಿ, ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದ ಅಭಿವೃದ್ಧಿ ನೋಡಿ ಕಾಂಗ್ರೆಸ್​ನಲ್ಲಿ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್​ನವರು ಬಿಜೆಪಿ ಕಡೆ ಮುಖ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ಅಧಿಕಾರದ ಹಗಲು ಗನಸು ಕಾಣುತ್ತಿದ್ದಾರೆ. ಪ್ರಚಲಿತ ರಾಜಕಾರಣ ವಿದ್ಯಮಾನಗಳಿಂದ ಭಯಭೀತರಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸ್ಪಷ್ಟ ಎಂದು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರು ಅತಂತ್ರ ಸೃಷ್ಟಿ ಮಾಡಲು ಹೊರಟಿದ್ದಾರೆ. ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯ ಯಾವೊಬ್ಬರೂ ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ ಎಂದರು.

ಇದನ್ನೂ ಓದಿ: ಹೈಕಮಾಂಡ್ ಒಪ್ಪಿದ್ರೆ ಕಾಂಗ್ರೆಸ್​ನ 16 ಶಾಸಕರನ್ನು ಬಿಜೆಪಿಗೆ ಕರೆತರುತ್ತೇನೆ: ರಮೇಶ್ ಜಾರಕಿಹೊಳಿ‌ ಹೊಸ ಬಾಂಬ್​!

ನಮ್ಮದು ಶಿಸ್ತಿನ ಪಕ್ಷ, ನಮ್ಮಲ್ಲಿ ಎಲ್ಲರೂ ಶಿಸ್ತು ಅನುಸರಿಸಬೇಕು. ಎಲ್ಲಾ ಎಚ್ಚರಿಕೆ ನೀಡಿದರೂ ಶಿಸ್ತು ಉಲ್ಲಂಘನೆ ಸಹಿಸಲ್ಲ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಬಹಿರಂಗವಾಗಿ ಹೇಳಿಕೆ ನೀಡಬಾರದು. ಮಾಧ್ಯಮಗಳ ಮೂಲಕ ಮಾತನಾಡುವವರನ್ನೂ ಕರೆಸಿ ಈ ಬಗ್ಗೆ ಮಾತನಾಡುತ್ತೇನೆ.

ಈಗಾಗಲೇ ಪದೇಪದೆ ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ರಾಜ್ಯದ ಶಿಸ್ತು ಸಮಿತಿ ಮೂಲಕ‌ ಸ್ಪಷ್ಟೀಕರಣ ಪಡೆದು ಕೇಂದ್ರಕ್ಕೆ ವರದಿ ನೀಡಲಾಗಿದೆ. ಅಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುತ್ತದೆ. ಈಗಾಗಲೇ ನೋಟಿಸ್ ಪಡೆದವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ಮುಂದೆ ಯಾರೇ ಶಿಸ್ತು ಉಲ್ಲಂಘಿಸಿದರೂ ಪಕ್ಷದ ಶಿಸ್ತು ಸಮಿತಿ ನೋಟಿಸ್ ನೀಡಲಿದೆ. ವರಿಷ್ಠರು ಮುಂದೇನು ಮಾಡಬೇಕು ಎಂದು ನಿರ್ಧರಿಸಲಿದ್ದಾರೆ ಎಂದರು.

ಉಸ್ತುವಾರಿಗೆ ಅಸಮಾಧಾನವಿಲ್ಲ: ಜಿಲ್ಲಾ ಉಸ್ತುವಾರಿ ನೇಮಕದ ವಿಚಾರದಲ್ಲಿ ಈ ಬಾರಿ ಹೊಸ ನೀತಿ ಅನುಸರಿಸಲಾಗಿದೆ. ಈಗಾಗಲೇ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ರಾಜ್ಯದಲ್ಲಿಯೂ ಇದೇ ರೀತಿಯ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ನಮ್ಮ ರಾಷ್ಟ್ರೀಯ ನಾಯಕರ ಸೂಚನೆಯಂತೆ ಬೊಮ್ಮಾಯಿ ಈ ರೀತಿ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಹಿರಿಯ ಸಚಿವರಾದ ಆರ್. ಅಶೋಕ್, ಜೆಸಿ ಮಾಧುಸ್ವಾಮಿ ಅವರಿಗೆ ದೊಡ್ಡ ಜವಾಬ್ದಾರಿ ಇದೆ. ಎಲ್ಲರೊಂದಿಗೂ ಮಾತುಕತೆ ನಡೆಸಿ ಇದನ್ನು ಮಾಡಲಾಗಿದೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ಶಾಸಕರು ಮಾತನಾಡಬೇಕಿಲ್ಲ: ಪಕ್ಷದ ಯಾವುದೇ ಶಾಸಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಸಿಎಂ, ವರಿಷ್ಟರು ಅದನ್ನು ನಿರ್ಧಾರ ಮಾಡಲಿದ್ದಾರೆ. ಹಾಗಾಗಿ, ಯಾರೂ ಮಾತನಾಡುವ ಅಗತ್ಯವಿಲ್ಲ. ನಿಗಮ ಮಂಡಳಿಗೆ ನೇಮಕಾತಿ ಕುರಿತು ಸಭೆ ನಡೆಸಲಾಗಿದೆ. ಸಮಾಲೋಚನೆ ನಡೆದಿದೆ. ಇನ್ನೊಂದು ವಾರದಲ್ಲಿ ಸಿಎಂಗೆ ವರದಿ ಕೊಡಲಿದ್ದೇವೆ. ನಂತರ ನೇಮಕಾತಿ ನಡೆಯಲಿದೆ ಎಂದರು.

ಸರ್ಕಾರ, ಪಕ್ಷದ ನಾಯಕತ್ವದಲ್ಲಿ ಬದಲಾವಣೆ ಇಲ್ಲ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದಿನ ಒಂದು ವರ್ಷ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಇರಲಿದ್ದಾರೆ. ಅದೇ ರೀತಿ ಪಕ್ಷದ ಅಧ್ಯಕ್ಷರಿಗೆ ಮೂರು ವರ್ಷದ ಅಧಿಕಾರವಿದೆ, ಚುನಾವಣೆ ಮೂಲಕವೇ ಅಧ್ಯಕ್ಷರ ಆಯ್ಕೆ ಸಾಧ್ಯ. ಯಾವುದೇ ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ರೀತಿಯ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಾಲಿಕೆ ಟಾರ್ಗೆಟ್ : ಈಗ ನಮ್ಮ ಗುರಿ ಬಿಬಿಎಂಪಿ ಚುನಾವಣೆ, ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್ ಮೂರು ಚುನಾವಣೆ ಗೆಲ್ಲುವುದಾಗಿದೆ. ಆ ಬಗ್ಗೆ ಸಿದ್ದತಾ ಕಾರ್ಯ ನಡೆಯುತ್ತಿದೆ. ಸದ್ಯದ್ರಲ್ಲೇ ಬಿಬಿಎಂಪಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ ನಡೆಯಲಿದೆ. ಈ ಚುನಾವಣೆ ದೃಷ್ಟಿಯಿಂದ ಪೂರ್ವ ತಯಾರಿಗೆ ಪಕ್ಷ ಸಿದ್ದತೆ ಮಾಡಿಕೊಂಡಿದೆ.

ಜಗತ್ತಿನ ಅತಿದೊಡ್ಡ ಪಕ್ಷ ನಮ್ಮದು. ಎರಡು ವರ್ಷದಿಂದ ನೂತನ ಪ್ರಯೋಗ ಮಾಡುತ್ತಿದ್ದೇವೆ. ಶಕ್ತಿಕೇಂದ್ರ, ಮತಗಟ್ಟೆ, ಪೇಜ್ ಕಮಿಟಿ ಮಾಡಿದ್ದೇವೆ. ಮತಗಟ್ಟೆ ಅಧ್ಯಕ್ಷರ ಮನೆಗೆ ನಾಮಫಲಕ ಹಾಕಿದ್ದೇವೆ, ಮತಗಟ್ಟೆಯಲ್ಲಿ ಪಕ್ಷ ಬಹಳ ಗಟ್ಟಿಯಾಗಿದೆ. ಬಿಬಿಎಂಪಿ ಚುನಾವಣೆ ಎದುರಿಸಲು ಹಲವು ಸುತ್ತಿನ ಸಭೆ ಮಾಡಿದ್ದು, ಪ್ರಭಾರಿ ನಿಯುಕ್ತಿ ಮಾಡುವ ಕೆಲಸ ಮಾಡಲಿದ್ದೇವೆ.

ಸಿಎಂ ನೇತೃತ್ವದಲ್ಲಿ ಪಾಲಿಕೆ ಚುನಾವಣೆ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ವಿಸ್ತಾರಕ್ ಯೋಜನೆ, ಕೊರೊನಾ ಸೇವಾ ಕಾರ್ಯದ ಮೂಲಕ‌ ಸೇವೆ ಮತ್ತು ರಾಜಕಾರಣ ಎರಡನ್ನೂ ಮಾಡಬೇಕು ಎನ್ನುವ ತತ್ವದೊಂದಿಗೆ ಮುನ್ನಡೆಯುತ್ತೇವೆ ಎಂದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ರಾಜ್ಯದಲ್ಲಿ ಮೂರನೇ ಅಲೆ ಇದೆ. ಎರಡು ಅಲೆಯಲ್ಲಿ ಪಕ್ಷದ ಸೇವಾ ಸಂಘಟನೆ ಮೂಲಕ ಜನರ ಪ್ರಾಣರಕ್ಷಣೆ ಮತ್ತು ಮನೆ‌ ಮನೆಗಳಿಗೆ ಆಹಾರ ಒದಗಿದುವ ಕೆಲಸ‌ ಮಾಡಿದ್ದೆವು. ಮೂರನೇ ಅಲೆ ವೇಳೆಯೂ ಕಾರ್ಯಕರ್ತರು ಜನರಿಗೆ ಸೇವೆ ಮಾಡಬೇಕು. ಆರೋಗ್ಯದ ಕಾಳಜಿ ತೋರಬೇಕು, ಲಸಿಕೆ ಜಾಗೃತಿ ಮೂಡಿಸಬೇಕು ಎನ್ನುವ ಕುರಿತು ಚರ್ಚೆ ನಡೆಸಲಾಗಿದೆ ಎಂದರು.

ಪಂಚರಾಜ್ಯದಲ್ಲಿ ಬಿಜೆಪಿಗೆ ಗೆಲುವು : ಪಂಚ ರಾಜ್ಯಗಳ‌ ಚುನಾವವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ. ಕಾಂಗ್ರೆಸ್ ಮುಕ್ತ ಭಾರತವಾಗಲಿದೆ. ಗೋವಾ, ಉತ್ತರಾಖಂಡ, ಉತ್ತರಪ್ರದೇಶ ಎಲ್ಲಾ ಕಡೆ ಬಿಜೆಪಿ ಗೆಲ್ಲಲಿದೆ. ಎಲ್ಲಾ ಸಮೀಕ್ಷೆ ಬಿಜೆಪಿ ಪರ ಬಂದಿದೆ. ಕಾಂಗ್ರೆಸ್ ಮೊದಲಿನಿಂದಲೂ ಇಬ್ಬಗೆ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತ ತುಷ್ಟೀಕರಣ ಜೊತೆ ರಾಷ್ಟ್ರದ ಹಿತ ಕಡೆಗಣಿಸುತ್ತಿದೆ.

ಪಾಕಿಸ್ತಾನದ ಪ್ರಧಾನಿ ಈ ದೇಶದ ಸಿಎಂಗೆ ದೂರವಾಣಿ ಕರೆಯನ್ನು ಮಾಡಿ ಇಂತವರಿಗೆ ಅಧಿಕಾರ ಕೊಡಿ ಎನ್ನುವುದು ಕಾಂಗ್ರೆಸ್​ನ ರಾಜಕಾರಣ ಹೇಗಿದೆ ಎನ್ನುವುದನ್ನು ತೋರಿಸಲಿದೆ. ವೈರಿ ರಾಷ್ಟ್ರದ ಜೊತೆ ಅವರಿಗೆ ಸಂಬಂಧ ಇದೆ ಎನ್ನುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ರಾಷ್ಟ್ರ ವಿರೋಧಿ ನೀತಿ ಅನುಸರಿಸುತ್ತಿದೆ ಎನ್ನುವುದು ಇದರಿಂದ ಸ್ಪಷ್ಟವಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.