ETV Bharat / state

ಬಸವರಾಜ್​ರನ್ನು ಬಿಜೆಪಿಗೆ ಸೊಸೆಯನ್ನಾಗಿ ಸ್ವೀಕರಿಸಿದ್ದೇವೆ: ಸದಾನಂದ ಗೌಡ ನಗೆ ಚಟಾಕಿ - Sadananda Gowda talks about Birathi Basavaraj

ಬೈರತಿ ಬಸವರಾಜ್ ಅವರನ್ನು ನಮ್ಮ ಪಕ್ಷದ ಸೊಸೆಯನ್ನಾಗಿ ಸ್ವೀಕಾರ ಮಾಡಿದ್ದೇವೆ. ಎಲ್ಲರ ಸಮಕ್ಷಮದಲ್ಲಿ ಬೀಗದ ಕೀ‌ ಕೊಡುತ್ತಿದ್ದೇನೆ. ಆಗಾಗ ಪಕ್ಷದ ಹಾಗೂ ಬಸವರಾಜ್ ಅವರ ಹಿತದೃಷ್ಟಿಯಿಂದ ಮಾರ್ಗದರ್ಶನ ಸಲಹೆ-ಸೂಚನೆಗಳನ್ನು ನೀಡುತ್ತಾ ಇರುತ್ತೇವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ನಗೆ ಚಟಾಕಿ ಹಾರಿಸಿದರು.

ಚುನಾವಣಾ‌ ಪೂರ್ವಭಾವಿ ಸಭೆ
author img

By

Published : Nov 18, 2019, 11:24 AM IST

Updated : Nov 18, 2019, 11:59 AM IST

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಹೊರಬಂದ ಬಳಿಕ ಬಿಜೆಪಿ ಸೇರ್ಪಡೆಯಾದ ಬೈರತಿ ಬಸವರಾಜ್, ಮೊದಲ ಬಾರಿಗೆ ಕೆ.ಆರ್.ಪುರ ಕ್ಷೇತ್ರದ ಜನರೊಂದಿಗೆ ಚುನಾವಣಾ‌ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಸಭೆ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ ಬಸವರಾಜ್ ಅವರಿಗೆ ಹಾಗೂ ಪಕ್ಷಕ್ಕಾಗಿ ಉದಾರ ಮನಸ್ಸಿನಿಂದ ಕ್ಷೇತ್ರ ಬಿಟ್ಟುಕೊಟ್ಟಿರುವ ಮಾಜಿ ಶಾಸಕ ನಂದೀಶ್ ರೆಡ್ಡಿ ಅವರಿಗೆ ಅಭಿನಂದಿಸಿದರು.

ಬಸವರಾಜ್ ಅವರನ್ನು ನಮ್ಮ ಪಕ್ಷದ ಸೊಸೆಯನ್ನಾಗಿ ಸ್ವೀಕಾರ ಮಾಡಿದ್ದೇವೆ. ಎಲ್ಲರ ಸಮಕ್ಷಮದಲ್ಲಿ ಬೀಗದ ಕೀ‌ ಕೊಡುತ್ತಿದ್ದೇನೆ. ಆಗಾಗ ಪಕ್ಷದ ಹಾಗೂ ಬಸವರಾಜ್ ಅವರ ಹಿತದೃಷ್ಟಿಯಿಂದ ಮಾರ್ಗದರ್ಶನ ಸಲಹೆ-ಸೂಚನೆಗಳನ್ನು ನೀಡುತ್ತಾ ಇರುತ್ತೇವೆ ಎಂದು ಇದೇ ವೇಳೆ ಹಾಸ್ಯಭರಿತವಾಗಿ ಹೇಳಿದ್ರು.

ಚುನಾವಣಾ‌ ಪೂರ್ವಭಾವಿ ಸಭೆ

ಬೈರತಿ ಬಸವರಾಜ್ ಮಾತನಾಡಿ, ಕಳೆದ ಸರ್ಕಾರಗಳು ನಮಗೆ ಸರಿಯಾಗಿ ಸ್ಪಂದಿಸಿಲ್ಲ.. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಅನಿವಾರ್ಯವಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆ.ಆರ್.ಪುರ ಕ್ಷೇತ್ರಕ್ಕೆ 625 ಕೋಟಿ ರೂ.ಅನುದಾನ ಮಂಜೂರು ಮಾಡಿರುವುದು ಸಂತೋಷ ತಂದಿದೆ ಎಂದರು.

ಸಭೆಯಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಕಂದಾಯ ಸಚಿವ ಅರ್.ಅಶೋಕ್, ಶಾಸಕರಾದ ಅರವಿಂದ ಲಿಂಬಾವಳಿ, ವಿಶ್ವನಾಥ್, ಸತೀಶ್ ರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಮಾಜಿ ಶಾಸಕ ನಂದೀಶ್ ರೆಡ್ಡಿ ಸೇರಿದಂತೆ ಮೊದಲಾದ ನಾಯಕರು ಉಪಸ್ಥಿತರಿದ್ದರು.

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಹೊರಬಂದ ಬಳಿಕ ಬಿಜೆಪಿ ಸೇರ್ಪಡೆಯಾದ ಬೈರತಿ ಬಸವರಾಜ್, ಮೊದಲ ಬಾರಿಗೆ ಕೆ.ಆರ್.ಪುರ ಕ್ಷೇತ್ರದ ಜನರೊಂದಿಗೆ ಚುನಾವಣಾ‌ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಸಭೆ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ ಬಸವರಾಜ್ ಅವರಿಗೆ ಹಾಗೂ ಪಕ್ಷಕ್ಕಾಗಿ ಉದಾರ ಮನಸ್ಸಿನಿಂದ ಕ್ಷೇತ್ರ ಬಿಟ್ಟುಕೊಟ್ಟಿರುವ ಮಾಜಿ ಶಾಸಕ ನಂದೀಶ್ ರೆಡ್ಡಿ ಅವರಿಗೆ ಅಭಿನಂದಿಸಿದರು.

ಬಸವರಾಜ್ ಅವರನ್ನು ನಮ್ಮ ಪಕ್ಷದ ಸೊಸೆಯನ್ನಾಗಿ ಸ್ವೀಕಾರ ಮಾಡಿದ್ದೇವೆ. ಎಲ್ಲರ ಸಮಕ್ಷಮದಲ್ಲಿ ಬೀಗದ ಕೀ‌ ಕೊಡುತ್ತಿದ್ದೇನೆ. ಆಗಾಗ ಪಕ್ಷದ ಹಾಗೂ ಬಸವರಾಜ್ ಅವರ ಹಿತದೃಷ್ಟಿಯಿಂದ ಮಾರ್ಗದರ್ಶನ ಸಲಹೆ-ಸೂಚನೆಗಳನ್ನು ನೀಡುತ್ತಾ ಇರುತ್ತೇವೆ ಎಂದು ಇದೇ ವೇಳೆ ಹಾಸ್ಯಭರಿತವಾಗಿ ಹೇಳಿದ್ರು.

ಚುನಾವಣಾ‌ ಪೂರ್ವಭಾವಿ ಸಭೆ

ಬೈರತಿ ಬಸವರಾಜ್ ಮಾತನಾಡಿ, ಕಳೆದ ಸರ್ಕಾರಗಳು ನಮಗೆ ಸರಿಯಾಗಿ ಸ್ಪಂದಿಸಿಲ್ಲ.. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಅನಿವಾರ್ಯವಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆ.ಆರ್.ಪುರ ಕ್ಷೇತ್ರಕ್ಕೆ 625 ಕೋಟಿ ರೂ.ಅನುದಾನ ಮಂಜೂರು ಮಾಡಿರುವುದು ಸಂತೋಷ ತಂದಿದೆ ಎಂದರು.

ಸಭೆಯಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಕಂದಾಯ ಸಚಿವ ಅರ್.ಅಶೋಕ್, ಶಾಸಕರಾದ ಅರವಿಂದ ಲಿಂಬಾವಳಿ, ವಿಶ್ವನಾಥ್, ಸತೀಶ್ ರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಮಾಜಿ ಶಾಸಕ ನಂದೀಶ್ ರೆಡ್ಡಿ ಸೇರಿದಂತೆ ಮೊದಲಾದ ನಾಯಕರು ಉಪಸ್ಥಿತರಿದ್ದರು.

Intro:Body:ಬಿಜೆಪಿ ಸೇರ್ಪಡೆಯಾದ ಬಳಿಕ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಿದ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಹೊರಬಂದ ಬಳಿಕ ಬಿಜೆಪಿ ಸೇರ್ಪಡೆಯಾಗಿ ಮೊದಲ ಬಾರಿಗೆ ಕೆ.ಆರ್.ಪುರ ಕ್ಷೇತ್ರದ ಜನರೊಂದಿಗೆ ಚುನಾವಣಾ‌ ಪೂರ್ವಭಾವಿ ಸಭೆ ನಡೆಯಿತು..
ಪೂರ್ವ ಭಾವಿ ಸಭೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್ ಅವರು ಕ್ಷೇತ್ರದ ಮುಖಂಡರು, ಕಾರ್ಯಕರ್ತರಿಗೆ ಬಿಜೆಪಿಯ ಶಾಲು ಹೊದಿಸಿ ಪಕ್ಷಕ್ಕೆ ಸ್ವಯಂಪ್ರೇರಿತವಾಗಿ ಬರಮಾಡಿಕೊಂಡರು. ಇದಕ್ಕೆ ಸಾಕ್ಷಿಯೆಂಬಂತೆ ಕೇಂದ್ರ ಸಚಿವ ಸದಾನಂದಗೌಡ, ಕಂದಾಯ ಸಚಿವ ಅರ್.ಅಶೋಕ್, ಶಾಸಕರಾದ ಅರವಿಂದ ಲಿಂಬಾವಳಿ, ವಿಶ್ವನಾಥ್, ಸತೀಶ್ ರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಮಾಜಿ ಶಾಸಕ ನಂದೀಶ್ ರೆಡ್ಡಿ ಸೇರಿದಂತೆ ಮೊದಲಾದ ನಾಯಕರು ಉಪಸ್ಥಿತರಿದ್ದರು.

ಸಭೆ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ ಬಸವರಾಜ್ ಅವರಿಗೆ ಹಾಗೂ ಪಕ್ಷಕ್ಕಾಗಿ ಉದಾರ ಮನಸ್ಸಿನಿಂದ ಕ್ಷೇತ್ರ ಬಿಟ್ಟುಕೊಟ್ಟಿರುವ ಮಾಜಿ ಶಾಸಕ ನಂದೀಶ್ ರೆಡ್ಡಿ ಅವರಿಗೆ ಅಭಿನಂದನೆಗಳು. ಈ ಪರಿಸ್ಥಿತಿ ನೋಡುತ್ತಿದ್ದರೆ ಕಾಂಗ್ರೆಸ್ ಅಭ್ಯರ್ಥಿಗೆ ಸೋಲು ಖಚಿತ. ಅಲ್ಲದೇ ಇದೊಂದು ಒನ್ ಸೈಡ್ ಗೆಲುವು ಇದಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಉಪಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿವೆ. ಇಲ್ಲಿ ಗೆಲುವು ದಾಖಲಿಸುವ‌ ಮೂಲಕ ಕೈ-ತೆನೆ ಮಾಡಿಕೊಂಡಿರುವ ಒಪ್ಪಂದಗಳನ್ನು ಪುಡಿ ಮಾಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು..
ಬಸವರಾಜ್ ಅವರನ್ನು ನಮ್ಮ ಪಕ್ಷದ ಸೊಸೆಯನ್ನಾಗಿ ಸ್ವೀಕಾರ ಮಾಡಿದ್ದೇವೆ. ಎಲ್ಲರ ಸಮಕ್ಷಮದಲ್ಲಿ ಬೀಗದ ಕೀ‌ ಕೊಡುತ್ತಿದ್ದೇನೆ.. ಆಗಾಗ ಪಕ್ಷದ ಹಾಗೂ ಬಸವರಾಜ್ ಅವರ ಹಿತದೃಷ್ಟಿಯಿಂದ ಮಾರ್ಗದರ್ಶನ ಸಲಹೆ- ಸೂಚನೆಗಳನ್ನು ನೀಡುತ್ತಾ ಇರುತ್ತೇವೆ ಎಂದರು.

ಸಚಿವ ಆರ್.ಅಶೋಕ್ ಮಾತನಾಡಿ, ಬಸವರಾಜ್ ಹಾಗೂ ನಂದೀಶ್ ರೆಡ್ಡಿ ಈ ಕ್ಷೇತ್ರದ ಜೋಡೆತ್ತುಗಳು.. ಹೀಗಾಗಿ ಬಿಜೆಪಿ ಅಭ್ಯರ್ಥಿಗೆ ಈ‌ ಬಾರಿ ಗೆಲುವು ಖಚಿತ.‌ ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ... ಬಸವರಾಜ್ ಅವರನ್ನು ಗೆಲ್ಲಿಸಿದರೆ ಅಭಿವೃದ್ಧಿ ಕೆಲಸಗಳಿಗೆ ವೇಗ ದೊರೆಯಲಿದೆ ಎಂದರು.‌

ಬೈರತಿ ಬಸವರಾಜ್ ಮಾತನಾಡಿ, ಕಳೆದ ಸರ್ಕಾರಗಳು ನಮಗೆ ಸರಿಯಾಗಿ ಸ್ಪಂದಿಸಿಲ್ಲ.. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಅನಿವಾರ್ಯವಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆ.ಆರ್.ಪುರ ಕ್ಷೇತ್ರಕ್ಕೆ 625 ಕೋಟಿ ರೂ.ಅನುದಾನ ಮಂಜೂರು ಮಾಡಿರುವುದು ಸಂತೋಷ ತಂದಿದೆ ಎಂದರು.




Conclusion:
Last Updated : Nov 18, 2019, 11:59 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.