ETV Bharat / state

ನಾಳೆ ಬಿಜೆಪಿಯಿಂದ ಪ್ರತಿಭಟನೆ : ಮೈತ್ರಿ ಸರ್ಕಾರದ ರಾಜೀನಾಮೆಗೆ ಆಗ್ರಹ

ಇಬ್ಬರು ಪಕ್ಷೇತರರು ಬಿಜೆಪಿಗೆ ಬೆಂಬಲ ನೀಡಿದ್ದು ನಾವು 107 ಕ್ಕೆ ತಲುಪಿದ್ದೇವೆ. 13 ಶಾಸಕರ ರಾಜೀನಾಮೆ ಮತ್ತು ಇಬ್ಬರು ಪಕ್ಷೇತರರು ಬಿಜೆಪಿ‌ ಕಡೆ ಬಂದ ಕಾರಣ ಅವರ ಬಲ 104ಕ್ಕೆ ತಲುಪಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ‌ ಪ್ರತಿಭಟನೆ ಮಾಡಲಾಗುತ್ತದೆ-ಲಿಂಬಾವಳಿ

author img

By

Published : Jul 8, 2019, 8:45 PM IST

ಮೈತ್ರಿ ಸರ್ಕಾರದ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಬಹುಮತ ಕಳೆದುಕೊಂಡಿರುವ ಮೈತ್ರಿ ಸರ್ಕಾರದ ರಾಜೀನಾಮೆಗೆ ಆಗ್ರಹಿಸಿ ಹೋರಾಟ ನಡೆಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ

ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಯಿತು. ಒಟ್ಟಾರೆ ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಅವಲೋಕಿಸಲಾಯಿತು. ರಾಜ್ಯದಲ್ಲಿ ಸರ್ಕಾರ ರಚನೆಯಾದಾಗಿನಿಂದ ಒಂದಲ್ಲಾ ಒಂದು ಬಂಧನದಲ್ಲಿ ಸಿಲುಕಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಬರ ಸಮಸ್ಯೆಗೆ ನೆರವು ನೀಡಿಲ್ಲ, ಪರಸ್ಪರ ಕಚ್ಚಾಟ ಮಾಡಿದ್ದಾರೆ ಎನ್ನುವ ಅಭಿಪ್ರಾಯ ಸಭೆಯಲ್ಲಿ ಮೂಡಿ ಬಂತು ಎಂದರು.

ನಾವು ಸರ್ಕಾರ ಕೆಡವಲು ಯಾವುದೇ ಪ್ರಯತ್ನ ಮಾಡಿಲ್ಲ. ಶಾಸಕರಿಗೆ ಆಮಿಷ ತೋರಿಸುವ ಕೆಲಸ ಮಾಡಲ್ಲ. ಇನ್ನೂ ಎರಡು ಮೂರು ದಿನ ಕಾದು ನೋಡುತ್ತೇವೆ. ರಾಜಕೀಯ ಪರಿಸ್ಥಿತಿ ಸುಧಾರಿಸದೇ ಇದ್ದರೆ ಸರ್ಕಾರ ಪತನಗೊಳ್ಳುವ ವಾತಾವರಣ ನಿರ್ಮಾಣ ಮುಂದುವರೆದರೆ ಬಿಜೆಪಿ ಏನು ಮಾಡಬೇಕು ಎಂದು ಪರಿಸ್ಥಿತಿ ಅವಲೋಕಿಸಿ ನಾಳೆ ಸಂಜೆ 5 ಗಂಟೆಗೆ ಮತ್ತೆ ಶಾಸಕಾಂಗ ಸಭೆ ನಡೆಸಿ ನಿರ್ಧರಿಸಲಾಗುತ್ತದೆ ಎಂದರು.

ಇಬ್ಬರು ಪಕ್ಷೇತರರು ಬಿಜೆಪಿಗೆ ಬೆಂಬಲ ನೀಡಿದ್ದು ನಾವು 107 ಕ್ಕೆ ತಲುಪಿದ್ದೇವೆ. 13 ಶಾಸಕರ ರಾಜೀನಾಮೆ ಮತ್ತು ಇಬ್ಬರು ಪಕ್ಷೇತರರು ಬಿಜೆಪಿ‌ ಕಡೆ ಬಂದ ಕಾರಣ ಅವರ ಬಲ 104ಕ್ಕೆ ತಲುಪಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ‌ ಪ್ರತಿಭಟನೆ ಮಾಡಲಾಗುತ್ತದೆ ಎಂದರು.

ರಾಜ್ಯಪಾಲರಿಗೆ ಶಂಕರ್ ಮತ್ತು ನಾಗೇಶ್ ರಾಜೀನಾಮೆ ಪತ್ರ ಹಾಗೂ ಬಿಜೆಪಿಗೆ ಬೆಂಬಲ ಪತ್ರ ನೀಡಿದ್ದಾರೆ. ಆರು ತಿಂಗಳ ಒಳಗಾಗಿ ಸಹ ಸದಸ್ಯತ್ವ ಪಡೆಯಬೇಕು. ಹಾಗಾಗಿ ಅವರ ಬೆಂಬಲ ಕಾನೂನು ಸಮಸ್ಯೆಯ ಗಣನೆಗೆ ಬರಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು: ಬಹುಮತ ಕಳೆದುಕೊಂಡಿರುವ ಮೈತ್ರಿ ಸರ್ಕಾರದ ರಾಜೀನಾಮೆಗೆ ಆಗ್ರಹಿಸಿ ಹೋರಾಟ ನಡೆಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ

ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಯಿತು. ಒಟ್ಟಾರೆ ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಅವಲೋಕಿಸಲಾಯಿತು. ರಾಜ್ಯದಲ್ಲಿ ಸರ್ಕಾರ ರಚನೆಯಾದಾಗಿನಿಂದ ಒಂದಲ್ಲಾ ಒಂದು ಬಂಧನದಲ್ಲಿ ಸಿಲುಕಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಬರ ಸಮಸ್ಯೆಗೆ ನೆರವು ನೀಡಿಲ್ಲ, ಪರಸ್ಪರ ಕಚ್ಚಾಟ ಮಾಡಿದ್ದಾರೆ ಎನ್ನುವ ಅಭಿಪ್ರಾಯ ಸಭೆಯಲ್ಲಿ ಮೂಡಿ ಬಂತು ಎಂದರು.

ನಾವು ಸರ್ಕಾರ ಕೆಡವಲು ಯಾವುದೇ ಪ್ರಯತ್ನ ಮಾಡಿಲ್ಲ. ಶಾಸಕರಿಗೆ ಆಮಿಷ ತೋರಿಸುವ ಕೆಲಸ ಮಾಡಲ್ಲ. ಇನ್ನೂ ಎರಡು ಮೂರು ದಿನ ಕಾದು ನೋಡುತ್ತೇವೆ. ರಾಜಕೀಯ ಪರಿಸ್ಥಿತಿ ಸುಧಾರಿಸದೇ ಇದ್ದರೆ ಸರ್ಕಾರ ಪತನಗೊಳ್ಳುವ ವಾತಾವರಣ ನಿರ್ಮಾಣ ಮುಂದುವರೆದರೆ ಬಿಜೆಪಿ ಏನು ಮಾಡಬೇಕು ಎಂದು ಪರಿಸ್ಥಿತಿ ಅವಲೋಕಿಸಿ ನಾಳೆ ಸಂಜೆ 5 ಗಂಟೆಗೆ ಮತ್ತೆ ಶಾಸಕಾಂಗ ಸಭೆ ನಡೆಸಿ ನಿರ್ಧರಿಸಲಾಗುತ್ತದೆ ಎಂದರು.

ಇಬ್ಬರು ಪಕ್ಷೇತರರು ಬಿಜೆಪಿಗೆ ಬೆಂಬಲ ನೀಡಿದ್ದು ನಾವು 107 ಕ್ಕೆ ತಲುಪಿದ್ದೇವೆ. 13 ಶಾಸಕರ ರಾಜೀನಾಮೆ ಮತ್ತು ಇಬ್ಬರು ಪಕ್ಷೇತರರು ಬಿಜೆಪಿ‌ ಕಡೆ ಬಂದ ಕಾರಣ ಅವರ ಬಲ 104ಕ್ಕೆ ತಲುಪಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ‌ ಪ್ರತಿಭಟನೆ ಮಾಡಲಾಗುತ್ತದೆ ಎಂದರು.

ರಾಜ್ಯಪಾಲರಿಗೆ ಶಂಕರ್ ಮತ್ತು ನಾಗೇಶ್ ರಾಜೀನಾಮೆ ಪತ್ರ ಹಾಗೂ ಬಿಜೆಪಿಗೆ ಬೆಂಬಲ ಪತ್ರ ನೀಡಿದ್ದಾರೆ. ಆರು ತಿಂಗಳ ಒಳಗಾಗಿ ಸಹ ಸದಸ್ಯತ್ವ ಪಡೆಯಬೇಕು. ಹಾಗಾಗಿ ಅವರ ಬೆಂಬಲ ಕಾನೂನು ಸಮಸ್ಯೆಯ ಗಣನೆಗೆ ಬರಲ್ಲ ಎಂದು ಸ್ಪಷ್ಟಪಡಿಸಿದರು.

Intro:


ಬೆಂಗಳೂರು:ಬಹುಮತ ಕಳೆದುಕೊಂಡಿರುವ ಮೈತ್ರಿ ಸರ್ಕಾರದ ರಾಜೀನಾಮೆಗೆ ಆಗ್ರಹಿಸಿ ಹೋರಾಟ ನಡೆಸುವ ಮಹತ್ವದ ನಿರ್ಧಾರವನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಂಡಿದ್ದು, ಸದನದ ಹೊರಗೆ ನಾಳೆ ಪ್ರತಿಭಟ‌ನೆ ನಡೆಸಿ ಸದನದಲ್ಲಿ ಹೋರಾಟ ನಡೆಸುವ ಬಗ್ಗೆ ನಾಳೆ ಮತ್ತೊಮ್ಮೆ ಶಾಸಕಾಂಗ ಸಭೆ ನಡೆಸುವ ನಿರ್ಧಾರ ಕೈಗೊಂಡಿದೆ.

ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ,ಸಧ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಯಿತು, ಒಟ್ಟಾರೆ ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಅವಲೋಕಿಸಲಾಯಿತು. ರಾಜ್ಯದಲ್ಲಿ ಸರ್ಕಾರ ರಚನೆಯಾದಾಗಿನಿಂದ ಒಂದಲ್ಲಾ ಒಂದು ಬಂಧನದಲ್ಲಿ ಸಿಲುಕಿದೆ.ಜನರ ಸಮಸ್ಯೆಗಳಿಗೆ ಸ್ಪಂಧಿಸಿಲ್ಲ, ಬರ ಸಮಸ್ಯೆಗೆ ನೆರವು ನೀಡಿಲ್ಲ, ಪರಸ್ಪರ ಕಚ್ಚಾಟ ಮಾಡಿದ್ದಾರೆ ಎನ್ನುವ ಅಭಿಪ್ರಾಯ ಸಭೆಯಲ್ಲಿ ಮೂಡಿ ಬಂತು ಎಂದು ವಿವರ ನೀಡಿದರು.

ನಾವು ಯಾವುದೇ ರೀತಿಯ ಸರ್ಕಾರ ಅಸ್ಥಿರ ಪ್ರಯತ್ನ, ಶಾಸಕರಿಗೆ ಅವರು ಆಮಿಷ ತೋರಿಸಿದಂತೆ ಬಿಜೆಪಿ ಮಾಡಲ್ಲ. ಇನ್ನೂ ಎರಡು ಮೂರು ದಿನ ಕಾದು ನೋಡುತ್ತೇವೆ.ರಾಜಕೀಯ ಪರಿಸ್ಥಿತಿ ಸುಧಾರಿಸದೇ ಇದ್ದರೆ ಸರ್ಕಾರ ಪತನಗೊಳ್ಳುವ ವಾತಾವರಣ ನಿರ್ಮಾಣ ಮುಂದುವರೆದರೆ ಬಿಜೆಪಿ ಏನು ಮಾಡಬೇಕು ಎಂದು ಪರಿಸ್ಥಿತಿ ಅವಲೋಕಿಸಿ ನಾಳೆ ಸಂಜೆ 5 ಗಂಟೆಗೆ ಮತ್ತೆ ಶಾಸಕಾಂಗ ಸಭೆ ನಡೆಸಿ ನಿರ್ಧರಿಸಲಾಗುತ್ತದೆ ಎಂದರು.

ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ,
ಪಕ್ಷೇತರ ಇಬ್ಬರು ಬಿಜೆಪಿಗೆ ಬೆಂಬಲ ನೀಡಿದ್ದು ನಾವು 107 ಕ್ಕೆ ತಲುಪಿದ್ದೇವೆ,13 ಶಾಸಕರ ರಾಜೀನಾಮೆ ಇಬ್ಬರು ಪಕ್ಷೇತರರು ಬಿಜೆಪಿ‌ ಕಡೆ ಬಂದ ಕಾರಣ ಅವರ ಬಲ 104ಕ್ಕೆ ತಲುಪಿದೆ ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ‌ ಪ್ರತಿಭಟನೆ ಮಾಡಲಾಗುತ್ತದೆ ಎಂದರು.

ರಾಜ್ಯಪಾಲರಿಗೆ ಶಂಕರ್ ಮತ್ತು ನಾಗೇಶ್ ರಾಜೀನಾಮೆ ಪತ್ರ ಹಾಗು ಬಿಜೆಪಿ ಬೆಂಬಲ ಪತ್ರ ನೀಡಿದ್ದಾರೆ.
ಆರು ತಿಂಗಳ ಒಳಗಾಗಿ ಸಹ ಸದಸ್ಯತ್ವ ಪಡೆಯಬೇಕು ಹಾಗಾಗಿ ಅವರ ಬೆಂಬಲ ಕಾನೂನು ಸಮಸ್ಯೆಯ ಗಣನೆಗೆ ಬರಲ್ಲ ಎಂದು ಸ್ಪಷ್ಟಪಡಿಸಿದರು.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.