ETV Bharat / state

ಬಿಜೆಪಿ ಬೆಂಬಲಿಗರ ಬಂಧನ: ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ಪಟ್ಟು - undefined

ರಾಜ್ಯದಲ್ಲಿ ಬಿಜೆಪಿ ದ್ವೆಷಪೂರಿತ ರಾಜಕಾರಣ ನಡೆಸುತ್ತಿದ್ದು, ಉದ್ದೇಶಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಾಜಿ ಡಿ ಸಿಎಂ ಆರ್​ ಅಶೋಕ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಪ್ರತಿಭಟನೆ
author img

By

Published : May 6, 2019, 7:05 PM IST

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ದಿಢೀರ್​ ಬಂಧನ ನಡೆಯುತ್ತಿದ್ದು, ಗೃಹ ಸಚಿವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮಾಜಿ ಡಿಸಿಎಂ ಆರ್.ಅಶೋಕ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್​ ಸರ್ಕಾರ ದ್ವೇಷ ಪೂರಿತ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಡಿಸಿಎಂ ಆರ್.ಅಶೋಕ್, ಸೋಶಿಯಲ್ ಮೀಡಿಯಾ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯದ ಮೈತ್ರಿ ಸರ್ಕಾರ ಪ್ರಯತ್ನಿಸುತ್ತಿದೆ.ಪೊಲೀಸ್ ದೌರ್ಜನ್ಯ ಮಿತಿ ಮೀರುತ್ತಿದೆ,ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ನೀತಿ ಅನುಸರಿಸುತ್ತಿದೆ.ಪ್ರಧಾನಿಯವರನ್ನು ಗುಂಡಿಟ್ಟುಕೊಲ್ಲಬೇಕು ಎಂದಿದ್ದ ಬೇಳೂರು ಗೋಪಾಲಕೃಷ್ಣ ವಿರುದ್ದ ಇದುವರೆಗೂ ಕ್ರಮ ಆಗಿಲ್ಲ.ಆದರೆ ಪತ್ರಕರ್ತರನ್ನು ಮಾತ್ರ ಏಕಾಏಕಿ ಬಂಧಿಸಿ ಜೈಲಿಗಟ್ಟುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಎಂಎಲ್ ಸಿ ಅಶ್ವತ್ ನಾರಾಯಣ್, ರಾಜ್ಯದಲ್ಲಿ ಗೃಹ ಸಚಿವರು ಅಘೋಷಿತ ತುರ್ತುಪರಿಸ್ಥಿತಿ ಹೇರಿದ್ದಾರೆ. ಗೃಹ ಸಚಿವರ ವಿರುದ್ಧ ಯಾರಾದರು ಮಾತನಾಡಿದರೆ ಅವರನ್ನು ಬಂಧಿಸಲಾಗುತ್ತಿದೆ ಎಂದರು.

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ದಿಢೀರ್​ ಬಂಧನ ನಡೆಯುತ್ತಿದ್ದು, ಗೃಹ ಸಚಿವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮಾಜಿ ಡಿಸಿಎಂ ಆರ್.ಅಶೋಕ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್​ ಸರ್ಕಾರ ದ್ವೇಷ ಪೂರಿತ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಡಿಸಿಎಂ ಆರ್.ಅಶೋಕ್, ಸೋಶಿಯಲ್ ಮೀಡಿಯಾ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯದ ಮೈತ್ರಿ ಸರ್ಕಾರ ಪ್ರಯತ್ನಿಸುತ್ತಿದೆ.ಪೊಲೀಸ್ ದೌರ್ಜನ್ಯ ಮಿತಿ ಮೀರುತ್ತಿದೆ,ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ನೀತಿ ಅನುಸರಿಸುತ್ತಿದೆ.ಪ್ರಧಾನಿಯವರನ್ನು ಗುಂಡಿಟ್ಟುಕೊಲ್ಲಬೇಕು ಎಂದಿದ್ದ ಬೇಳೂರು ಗೋಪಾಲಕೃಷ್ಣ ವಿರುದ್ದ ಇದುವರೆಗೂ ಕ್ರಮ ಆಗಿಲ್ಲ.ಆದರೆ ಪತ್ರಕರ್ತರನ್ನು ಮಾತ್ರ ಏಕಾಏಕಿ ಬಂಧಿಸಿ ಜೈಲಿಗಟ್ಟುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಎಂಎಲ್ ಸಿ ಅಶ್ವತ್ ನಾರಾಯಣ್, ರಾಜ್ಯದಲ್ಲಿ ಗೃಹ ಸಚಿವರು ಅಘೋಷಿತ ತುರ್ತುಪರಿಸ್ಥಿತಿ ಹೇರಿದ್ದಾರೆ. ಗೃಹ ಸಚಿವರ ವಿರುದ್ಧ ಯಾರಾದರು ಮಾತನಾಡಿದರೆ ಅವರನ್ನು ಬಂಧಿಸಲಾಗುತ್ತಿದೆ ಎಂದರು.

Intro:ಬೆಂಗಳೂರು:ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತುರ್ತುಪರಿಸ್ಥಿಯ ಸ್ಥಿತಿ ನಿರ್ಮಾಣವಾಗುತ್ತದೆ.ಇದೀಗ ಸೋಶಿಯಲ್ ಮೀಡಿಯಾ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಲಾಗುತ್ತಿದೆ
ಇದೇ ರೀತಿಯ ನಿಮ್ಮ ಧೋರಣೆ ‌ಮುಂದುವರಿದರೆ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ ಎಂಬ ದೊಡ್ಡ ಆಂದೋಲನವನ್ನೇ ಪ್ರಾರಂಭಿಸಬೇಕಾಗುತ್ತದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್‌ಎಚ್ಚರಿಕೆ ನೀಡಿದರು.Body:ಗೃಹ ಸಚಿವ ಎಂ.ಬಿ.ಪಾಟೀಲ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾತ್ರೋ ರಾತ್ರಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುತ್ತಿರುವುದನ್ನು ಖಂಡಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರತಿಭಟನಾಕಾರರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಡಿಸಿಎಂ ಆರ್.ಅಶೋಕ್, ಸೋಶಿಯಲ್ ಮೀಡಿಯಾ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯದ ಮೈತ್ರಿ ಸರ್ಕಾರ ಪ್ರಯತ್ನಿಸುತ್ತಿದೆ.ಪೊಲೀಸ್ ದೌರ್ಜನ್ಯ ಮಿತಿ ಮೀರುತ್ತಿದೆ,ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ನೀತಿ ಅನುಸರಿಸುತ್ತಿದೆ.ಪ್ರಧಾನಿಯವರನ್ನು ಗುಂಡಿಟ್ಟುಕೊಲ್ಲಬೇಕು ಎಂದಿದ್ದ ಬೇಳೂರು ಗೋಪಾಲಕೃಷ್ಣ ವಿರುದ್ದ ಇದುವರೆಗೂ ಕ್ರಮ ಆಗಿಲ್ಲ.ಆದರೆ ಪತ್ರಕರ್ತರನ್ನು ಮಾತ್ರ ಏಕಾಏಕಿ ಬಂಧಿಸಿ ಜೈಲಿಗಟ್ಟುತ್ತಿದ್ದಾರೆ ಎಂದು ಕಿಡಿಕಾರಿದರು.

ಮಂಡ್ಯ ಚುನಾವಣೆ ಸಂದರ್ಭದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಮಾಧ್ಯಮದವರ ಮೇಲೆ ನಮ್ಮ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದರೆ ನಾವು ಹೊಣೆಯಲ್ಲ ಎಂದು ಹೇಳಿಕೆ ನೀಡಿದ ನಂತರ ದೌರ್ಜನ್ಯ ಹೆಚ್ಚಾಗಿದೆ.ಇದು ಇವತ್ತಲ್ಲ ನಾಳೆ ನಿಮಗೆ ತಿರುಗುಬಾಣ ಆಗುತ್ತದೆ.ಮಾಡಿದ್ದುಣ್ಣೋ ಮಾರಾಯ ಎಂಬಂತೆ ಆಗುತ್ತದೆ.ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಹರಿಹಾಯ್ದರು.

ಈ ಬಾರಿ‌ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ರಾಜ್ಯದಲ್ಲಿ ಎರಡಂಕಿಯನ್ನೂ ದಾಟೋದಿಲ್ಲ.ಹಾಗಂತ ಇಂಟಲಿಜೆನ್ಸ್ ರಿಪೋರ್ಟ್ ,ಮೀಡಿಯಾ ರಿಪೋರ್ಟ್ ಗಳಿವೆ.ಹಾಗಾದರೆ ಮುಂದೆ ನಿಮ್ಮ ಸರ್ಕಾರವೂ ಉಳಿಯೋದಿಲ್ಲ‌ ಎಂದು ಟಾಂಗ್ ನೀಡಿದರು.

ವಿವಾದಿತ ಹೇಳಿಕೆ ನೀಡಿದ ಅಶ್ವತ್ಥನಾರಾಯಣ್:

ನಂತರ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಎಂಎಲ್ ಸಿ ಅಶ್ವತ್ ನಾರಾಯಣ್,ರಾಜ್ಯದಲ್ಲಿ ಗೃಹ ಸಚಿವರು ಅಘೋಷಿತ ತುರ್ತುಪರಿಸ್ಥಿತಿ ಹೇರಿದ್ದಾರೆ.ಗೃಹ ಸಚಿವರ ವಿರುದ್ಧ ಯಾರಾದರು ಮಾತನಾಡಿದರೆ ಅವರನ್ನು ಬಂಧಿಸುವ ಕೆಲಸವಾಗ್ತಿದೆ.ವೀರಶೈವ ಲಿಂಗಾಯತ ವಿಚಾರದಲ್ಲಿ ಸಚಿವ ಡಿಕೆಶಿ ವಿರುದ್ಧ ಕ್ರಮವಿಲ್ಲ ಏಕೆ? ಯುಪಿ ಸಿಎಂ ಯೋಗಿ ಆದಿತ್ಯಾನಾಥ್ ವಿರುದ್ಧ ಪ್ರಭಾ ಬೆಳವಂಗಲ ಹೇಳಿಕೆ ಬಗ್ಗೆ ಕ್ರಮವಿಲ್ಲ ಏಕೆ?ಪ್ರಧಾನಿ ಮೋದಿ ವಿರುದ್ಧ ಬೇಲೂರು ಗೋಪಾಲಕೃಷ್ಣ ವಿರುದ್ಧ ಕ್ರಮವಿಲ್ಲ ಏಕೆ?.ಇವ್ರಿಗಿಲ್ಲದ ಕ್ರಮ ಬಿಜೆಪಿ ಕಾರ್ಯಕರ್ತರಿಗೆ ಮತ್ತು ಪತ್ರಕರ್ತರ ವಿಚಾರದಲ್ಲಿ ಕ್ರಮ ಕೈಗೊಳ್ಳುತ್ತಿರವುದು ಏಕೆ? ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿ ಅವರ ಗತಿ ಏನಾಯ್ತು ಅಂತ ನಿಮಗೆ ಗೊತ್ತಿದೆಯಾ ಅಂತ ಗೃಹ ಸಚಿವರನ್ನು ಪ್ರಶ್ನಿಸಿದರು.

ಓರ್ವ ಡಿಸಿಪಿಯನ್ನ ಚೇಲನನ್ನಾಗಿ ಮಾಡಿಕೊಂಡು ರಾತ್ರೋರಾತ್ರಿ ಕಾರ್ಯಕರ್ತರ ಬಂಧನ ಮಾಡಿಸಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ಸದ್ಯದ ಗೃಹ ಸಚಿವರು ಮಾಜಿ ಗೃಹ ಸಚಿವರಾಗಬೇಕಾಗುತ್ತದೆ.ಇಂದು ರಾಜ್ಯಪಾಲರಿಗೆ ಈ ಬಗ್ಗೆ ದೂರು ನೀಡುತ್ತೇವೆ ಎಂದರು.

ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ‌ ಅನಂತಕುಮಾರ್ ಮಾತನಾಡಿ, ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೇ ಇಲ್ಲ.ಮಹಿಳೆಯರನ್ನೂ ಸಹ ಪೊಲೀಸರು ಬಂಧಿಸಿ ಸುಖಾಸುಮ್ಮನೆ ಗಂಟೆಗಟ್ಟಲೆ ಪೊಲೀಸ್ ಠಾಣೆಯಲ್ಲಿ ಕೂರಿಸಿಕೊಳ್ಳುತ್ತಿದ್ದಾರೆ.ಒಂದು ರೀತಿಯಲ್ಲಿ‌ ಆತಂಕದ ವಾತಾವರಣ ನಿರ್ಮಾಣವಾಗಿದೆ.ಈ ರೀತಿಯ ಅನ್ಯಾಯವನ್ಮು ಬಿಜೆಪಿ ಸಹಿಸೋದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಬೆಂಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸದಾಶಿವ,ಚಿ.ನಾ.ರಾಮು,ಪದ್ಮನಾಭರೆಡ್ಡಿ ಸೇರಿ ಹಲವರು ಭಾಗಿಯಾಗಿದ್ದರು.Conclusion:-ಪ್ರಶಾಂತ್ ಕುಮಾರ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.