ETV Bharat / state

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಕರ್ನಾಟಕ ಪ್ರವಾಸ ರದ್ದು

ಬಿಜೆಪಿ ಕಾರ್ಯಕಾರಿಣಿ ಸಭೆ ಮುಂದೂಡಿದ ಹಿನ್ನೆಲೆ ಬಿಜೆಪಿ ರಾಜ್ಯ ಉಸ್ತುವಾರಿಯ ಕರ್ನಾಟಕ ಪ್ರವಾಸ ರದ್ದಾಗಿದೆ.

author img

By

Published : Mar 6, 2021, 5:30 PM IST

BJP state incharge Arun sing, BJP state incharge Arun sing cancels tour, BJP state incharge Arun sing cancels tour of Karnataka, BJP state incharge Arun sing news, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಪ್ರವಾಸ ರದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಕರ್ನಾಟಕ ಪ್ರವಾಸ ರದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಸುದ್ದಿ,
ಬಿಜೆಪಿ ರಾಜ್ಯ ಉಸ್ತುವಾರಿ ಕರ್ನಾಟಕ ಪ್ರವಾಸ ರದ್ದು

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಅವರ ರಾಜ್ಯ ಭೇಟಿ ರದ್ದಾಗಿದೆ. ಬಿಜೆಪಿ ಕಾರ್ಯಕಾರಿಣಿ ಸಭೆ ಮುಂದೂಡಿಕೆಯಾದ ಹಿನ್ನೆಲೆ ಪ್ರವಾಸ ರದ್ದು ಮಾಡಲಾಗಿದೆ.

ಮಾರ್ಚ್ 13 ರ ಶನಿವಾರ ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಮಾರ್ಚ್ 14 ರಂದು ನಿಗದಿಯಾಗಿದ್ದ ಬಿಜೆಪಿ ವಿಶೇಷ ಸಭೆ ಮುಂದೂಡಿಕೆಯಾಗಿದೆ.

ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಪಕ್ಷದ ಶಾಸಕರೆಲ್ಲ ಬೆಂಗಳೂರಿನಲ್ಲಿ ಇರಲಿದ್ದಾರೆ. ಹಾಗಾಗಿ ಇಂಥ ಸಮಯದಲ್ಲಿ ಎಲ್ಲರೂ ಕಲಬುರಗಿಯಲ್ಲಿ ಸೇರುವುದು ಕಷ್ಟ ಮತ್ತು ಸಿದ್ಧತೆಗೂ ಸಮಸ್ಯೆಯಾಗಲಿದೆ. ಅಲ್ಲದೆ, ವಾರವಿಡೀ ಬೆಂಗಳೂರಿನಲ್ಲಿರುವ ಶಾಸಕರು ವಾರಾಂತ್ಯಕ್ಕಾದರೂ ತವರು ಕ್ಷೇತ್ರಕ್ಕೆ ಭೇಟಿ ನೀಡಬೇಕಾಗಲಿದೆ. ಹಾಗಾಗಿ ಇಂಥ ಸಮಯದಲ್ಲಿ ಕಾರ್ಯಕಾರಿಣಿ ಸಭೆ ಬೇಡ ಎನ್ನುವ ನಿರ್ಧಾರಕ್ಕೆ ಬಂದ ನಾಯಕರು ಸಭೆ ಮುಂದೂಡಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆ ಹಾಗೂ ವಿಶೇಷ ಸಭೆ ಮುಂದೂಡಿಕೆಯಾದ ಕಾರಣ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ತಿಂಗಳು ಮತ್ತೆ ಸಭೆಗೆ ದಿನಾಂಕ ನಿಗದಿಯಾಗಲಿದ್ದು, ಆಗ ಸಭೆಗೆ ಆಗಮಿಸಲಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಅವರ ರಾಜ್ಯ ಭೇಟಿ ರದ್ದಾಗಿದೆ. ಬಿಜೆಪಿ ಕಾರ್ಯಕಾರಿಣಿ ಸಭೆ ಮುಂದೂಡಿಕೆಯಾದ ಹಿನ್ನೆಲೆ ಪ್ರವಾಸ ರದ್ದು ಮಾಡಲಾಗಿದೆ.

ಮಾರ್ಚ್ 13 ರ ಶನಿವಾರ ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಮಾರ್ಚ್ 14 ರಂದು ನಿಗದಿಯಾಗಿದ್ದ ಬಿಜೆಪಿ ವಿಶೇಷ ಸಭೆ ಮುಂದೂಡಿಕೆಯಾಗಿದೆ.

ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಪಕ್ಷದ ಶಾಸಕರೆಲ್ಲ ಬೆಂಗಳೂರಿನಲ್ಲಿ ಇರಲಿದ್ದಾರೆ. ಹಾಗಾಗಿ ಇಂಥ ಸಮಯದಲ್ಲಿ ಎಲ್ಲರೂ ಕಲಬುರಗಿಯಲ್ಲಿ ಸೇರುವುದು ಕಷ್ಟ ಮತ್ತು ಸಿದ್ಧತೆಗೂ ಸಮಸ್ಯೆಯಾಗಲಿದೆ. ಅಲ್ಲದೆ, ವಾರವಿಡೀ ಬೆಂಗಳೂರಿನಲ್ಲಿರುವ ಶಾಸಕರು ವಾರಾಂತ್ಯಕ್ಕಾದರೂ ತವರು ಕ್ಷೇತ್ರಕ್ಕೆ ಭೇಟಿ ನೀಡಬೇಕಾಗಲಿದೆ. ಹಾಗಾಗಿ ಇಂಥ ಸಮಯದಲ್ಲಿ ಕಾರ್ಯಕಾರಿಣಿ ಸಭೆ ಬೇಡ ಎನ್ನುವ ನಿರ್ಧಾರಕ್ಕೆ ಬಂದ ನಾಯಕರು ಸಭೆ ಮುಂದೂಡಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆ ಹಾಗೂ ವಿಶೇಷ ಸಭೆ ಮುಂದೂಡಿಕೆಯಾದ ಕಾರಣ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ತಿಂಗಳು ಮತ್ತೆ ಸಭೆಗೆ ದಿನಾಂಕ ನಿಗದಿಯಾಗಲಿದ್ದು, ಆಗ ಸಭೆಗೆ ಆಗಮಿಸಲಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.