ETV Bharat / state

ಶಾಸಕ ಮಹದೇವು ಇಷ್ಟು ದಿನ ಸಿದ್ದರಾಮಯ್ಯ ಪಕ್ಕ ನಿದ್ರೆ ಮಾಡ್ತಿದ್ರಾ?: ರವಿಕುಮಾರ್​ ಪ್ರಶ್ನೆ

author img

By

Published : Jul 4, 2019, 1:51 PM IST

ಬಿಜೆಪಿಯವರು ಹಣದ ಆಮಿಷವೊಡ್ಡಿದ್ದರು ಎಂದು ಈಗ ಆರೋಪ ಮಾಡುತ್ತಿರುವ ಜೆಡಿಎಸ್ ಶಾಸಕ ಕೆ. ಮಹದೇವ ಅವರು ಇಷ್ಟು ದಿನ ಸಿದ್ದರಾಮಯ್ಯ ಅವರ ಪಕ್ಕ ನಿದ್ದೆ ಮಾಡುತ್ತಿದ್ದರಾ, ಇಲ್ಲಾ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ತಾರಾ ಹೋಟೆಲ್​ನಲ್ಲಿ ಊಟ ಮಾಡುತ್ತಿದ್ದರಾ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿದರು.

ಬೆಂಗಳೂರು: ಬಿಜೆಪಿಯವರು ಹಣದ ಆಮಿಷವೊಡ್ಡಿದ್ದರು ಎಂದು ಈಗ ಆರೋಪ ಮಾಡುತ್ತಿರುವ ಜೆಡಿಎಸ್ ಶಾಸಕ ಕೆ. ಮಹದೇವ ಅವರು ಇಷ್ಟು ದಿನ ಸಿದ್ದರಾಮಯ್ಯ ಅವರ ಪಕ್ಕ ನಿದ್ದೆ ಮಾಡುತ್ತಿದ್ದರಾ, ಇಲ್ಲಾ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ತಾರಾ ಹೋಟೆಲ್​ನಲ್ಲಿ ಊಟ ಮಾಡುತ್ತಿದ್ದರಾ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿದರು.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ತಮಗೂ 40 ಕೋಟಿ ಹಣ ನೀಡುವ ಆಫರ್ ನೀಡಲಾಗಿತ್ತು ಎಂದು ಪಿರಿಯಾಪಟ್ಟಣ ಶಾಸಕ ಕೆ. ಮಹದೇವ ಮಾಡಿರುವ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿ
ಇದು ನಿರಾಧಾರ ಆರೋಪ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬಿಜೆಪಿಯಿಂದ ಯಾವುದೇ ಆಪರೇಷನ್, ಇಂಜೆಕ್ಷನ್, ಟ್ಯಾಬ್ಲೆಟ್ ಇಲ್ಲ. ಬಿಜೆಪಿ ಬಗ್ಗೆ ಮಾತನಾಡುವ ಬದಲು ತಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ನೋಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರವಿಕುಮಾರ್ ಟಾಂಗ್ ನೀಡಿದ್ದಾರೆ.

ಬೆಂಗಳೂರು: ಬಿಜೆಪಿಯವರು ಹಣದ ಆಮಿಷವೊಡ್ಡಿದ್ದರು ಎಂದು ಈಗ ಆರೋಪ ಮಾಡುತ್ತಿರುವ ಜೆಡಿಎಸ್ ಶಾಸಕ ಕೆ. ಮಹದೇವ ಅವರು ಇಷ್ಟು ದಿನ ಸಿದ್ದರಾಮಯ್ಯ ಅವರ ಪಕ್ಕ ನಿದ್ದೆ ಮಾಡುತ್ತಿದ್ದರಾ, ಇಲ್ಲಾ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ತಾರಾ ಹೋಟೆಲ್​ನಲ್ಲಿ ಊಟ ಮಾಡುತ್ತಿದ್ದರಾ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿದರು.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ತಮಗೂ 40 ಕೋಟಿ ಹಣ ನೀಡುವ ಆಫರ್ ನೀಡಲಾಗಿತ್ತು ಎಂದು ಪಿರಿಯಾಪಟ್ಟಣ ಶಾಸಕ ಕೆ. ಮಹದೇವ ಮಾಡಿರುವ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿ
ಇದು ನಿರಾಧಾರ ಆರೋಪ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬಿಜೆಪಿಯಿಂದ ಯಾವುದೇ ಆಪರೇಷನ್, ಇಂಜೆಕ್ಷನ್, ಟ್ಯಾಬ್ಲೆಟ್ ಇಲ್ಲ. ಬಿಜೆಪಿ ಬಗ್ಗೆ ಮಾತನಾಡುವ ಬದಲು ತಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ನೋಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರವಿಕುಮಾರ್ ಟಾಂಗ್ ನೀಡಿದ್ದಾರೆ.

Intro:ಬೆಂಗಳೂರು:ಹಣದ ಆಮಿಷ ಮಾಡಿದ್ದರೂ ಎಂದು ಈಗ ಆರೋಪ ಮಾಡುತ್ತಿರುವ ಜೆಡಿಎಸ್ ಶಾಸಕ ಕೆ.ಮಹದೇವ ಇಷ್ಟು ದಿನ ಸಿದ್ದರಾಮಯ್ಯ ಪಕ್ಕ ನಿದ್ದೆ ಮಾಡುತ್ತಿದ್ದರಾ ಇಲ್ಲಾ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ತಾರಾ ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದರಾ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.Body:

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ತಮಗೂ 40 ಕೋಟಿ ಹಣ ನೀಡುವ ಆಫರ್ ನೀಡಲಾಗಿತ್ತು ಎಂದು ಪರಿಯಾಪಟ್ಟಣ ಶಾಸಕ ಮಹದೇವ ಮಾಡಿರುವ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿ
ಇದು ನಿರಾಧಾರ ಆರೋಪ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬಿಜೆಪಿಯಿಂದ ಯಾವುದೇ ಆಪರೇಷನ್, ಇಂಜಕ್ಷನ್,ಟ್ಯಾಬ್ಲೆಟ್ ಇಲ್ಲ ಬಿಜೆಪಿ ಬಗ್ಗೆ ಮಾತನಾಡುವ ಬದಲು ತಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ನೋಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರವಿಕುಮಾರ್ ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ, ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ ಎಂದು ಸಿದ್ದರಾಮಯ್ಯ ಪದೇ ಪದೇ ಆರೋಪ ಮಾಡುತ್ತಿದ್ದಾರೆ ಆದರೆ ನಮ್ಮ ಪಕ್ಷ ಯಾವುದೇ ಆಪರೇಷನ್ ಗೆ ಕೈ ಹಾಕಿಲ್ಲ.ಆ ಸರ್ಕಾರ ಬಿದ್ದ ನಂತರ ರಾಜ್ಯಾಧ್ಯಕ್ಷರು, ರಾಜ್ಯದ ನಾಯಕರು,ವರಿಷ್ಠರು ಎಲ್ಲಾ ಸೇರಿ ರಾಜ್ಯದಲ್ಲಿ ಏನು ಮಾಡಬೇಕು ಎಂದು ನಿರ್ಧಾರ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಅವರ ತಟ್ಟೆಯಲ್ಲಿ ಎಷ್ಟು ನೊಣ ಬಿದ್ದಿವೆ ಎಂದು ನೋಡಿಕೊಳ್ಳಲಿ ಅವರ ಪಕ್ಷದಲ್ಲೇ ಎಷ್ಟು ಜನ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಜೆಡಿಎಸ್ ನ ಎಷ್ಟು ಜನ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಎನ್ನುವುದನ್ನು ಗಮನಿಸಬೇಕು, ಈ ಸರ್ಕಾರ ಅವಧಿ ಪೂರೈಸಲ್ಲ, ಸರ್ಕಾರ ಉದ್ದಾರವಾಗಲ್ಲ ಎಂದು ಹಿರಿಯ ನಾಯಕರೇ ಮಾತನಾಡುತ್ತಿದ್ದಾರೆ ಹಾಗಾಗಿ ಸಿದ್ದರಾಮಯ್ಯ ಬಿಜೆಪಿ ಸುಧಾರಣೆ ಬಗ್ಗೆ ಮಾತನಾಡುವುದನ್ನು ಬಿಟ್ಟು ತಮ್ಮ ಪಕ್ಷದ ಕಥೆ ಏನು ಎಂದು ನೋಡಿಕೊಳ್ಳಲಿ, 56 ಇಂಚಿನ ಎದೆಯ ನರೇಂದ್ರ ಮೋದಿ ತಿಪ್ಪರಲಾಗ ಹಾಕಿದರೂ ಮತ್ತೆ ಪ್ರಧಾನಿ ಆಗಲ್ಲ ಎಂದಿದ್ದರು ಹಾಗಾದರೆ ಸಿದ್ದರಾಮಯ್ಯ ಎಷ್ಟು ತಿಪ್ಪರಲಾಗ ಹಾಕಿದರು?ಅವರು ಬೇರೆಯವರಿಗೆ ಭಗವದ್ಗೀತೆ ಹೇಳುವುದು ಬಿಟ್ಟು ತಮ್ಮ ಪಕ್ಷದಲ್ಲಿ ಏನಾಗಿದೆ ಎಂದು ನೋಡಿಕೊಳ್ಳಲಿ,ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರೇ ಪಲಾಯನ ಮಾಡುತ್ತಿದ್ದಾರೆ ಮೊದಲು ಅವರು ಅವರ ಪಕ್ಷದ ಕಡೆ ನೋಡಲಿ ಎಂದು ವ್ಯಂಗ್ಯವಾಡಿದರು.

ಸದಸ್ಯತ್ವ ಅಭಿಯಾನ ಚುನಾವಣೆಗೆ ಪೂರ್ವ ತಯಾರಿಯಲ್ಲ. ಒಂದು ವೇಳೆ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂದಿಟ್ಟುಕೊಂಡರೂ ಇಡೀ ದೇಶದಲ್ಲಿ ಅಭಿಯಾನ ಏಕೆ ಮಾಡುತ್ತಿದ್ದೆವು? ಇದು
ರಾಷ್ಟ್ರೀಯ ವೇಳಾ ಪಟ್ಟಿ. ರಾಷ್ಟ್ರೀಯ ಕರೆಯಂತೆ ಸದಸ್ಯತ್ವ ಮಾಡುತ್ತಿದ್ದೇವೆ ಹಾಗಾಗಿ ಸದಸ್ಯತ್ವ ಅಭಿಯಾನ ಚುನಾವಣೆಗೆ ಸಿದ್ದತೆ ನಡೆಸುವ ಭಾಗವಾಗಿ ಮಾಡುತ್ತಿರುವುದಲ್ಲ ಎಂದು ರವಿಕುಮಾರ್ ಸ್ಪಷ್ಟೀಕರಣ ನೀಡಿದರು.Conclusion:-ಪ್ರಶಾಂತ್ ಕುಮಾರ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.