ETV Bharat / state

ಪರಿಷತ್ ಚುನಾವಣೆ: ಕ್ಲೀನ್ ಸ್ವೀಪ್​ನತ್ತ ಬಿಜೆಪಿ ಚಿತ್ತ

author img

By

Published : Jun 12, 2022, 6:06 PM IST

ನಾಳೆ ನಡೆಯಲಿರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎರಡು ಹೆಚ್ಚುವರಿ ಸ್ಥಾನದ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ನಾಲ್ಕೂ ಸ್ಥಾನಗಳನ್ನು ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡಲು ಪ್ರಯತ್ನ ನಡೆಸುತ್ತಿದೆ.

bjp strategy to win in Parishat election
ಪರಿಷತ್ ಚುನಾವಣೆ ಗೆಲುವಿಗೆ ಬಿಜೆಪಿ ತಂತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಒಂದು ಹೆಚ್ಚುವರಿ ಸ್ಥಾನ ಧಕ್ಕಿಸಿಕೊಂಡಿರುವ ಬಿಜೆಪಿ ಇದೀಗ ನಾಳೆ ನಡೆಯಲಿರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎರಡು ಹೆಚ್ಚುವರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ನಾಲ್ಕೂ ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡಲು ಪ್ರಯತ್ನ ನಡೆಸುತ್ತಿದೆ. ಬಿಜೆಪಿ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಹಾಲಿ ಸದಸ್ಯ ಅರುಣ್ ಶಹಾಪುರ್, ವಾಯುವ್ಯ ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯ ಹನುಮಂತ ರುದ್ರಪ್ಪ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಹೊಸದಾಗಿ ಆಯ್ಕೆಯಾಗಿರುವ ಎಂ.ವಿ. ರವಿಶಂಕರ್ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ತೊರೆದು ಬಂದಿರುವ ಹಾಲಿ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಕಣಕ್ಕಿಳಿಸಿದೆ. ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಯದ್ದು ಎರಡು ಕ್ಷೇತ್ರಗಳಾಗಿದ್ದು, ಅವುಗಳನ್ನು ಉಳಿಸಿಕೊಳ್ಳುವ ಜೊತೆಗೆ ಮತ್ತೆರಡು ಸ್ಥಾನದ ಮೇಲೂ ಕಣ್ಣಿಟ್ಟಿದೆ.

ಹೊರಟ್ಟಿ ಅದೃಷ್ಟ ಪರೀಕ್ಷೆ: ಏಳು ಬಾರಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ಆಯ್ಕೆಯಾಗುತ್ತಾ ಬಂದಿರುವ ಬಸವರಾಜ ಹೊರಟ್ಟಿ ಇದೀಗ ಎಂಟನೇ ಬಾರಿ ಅದೃಷ್ಟ ಪರೀಕ್ಷೆ ಎದುರಿಸುತ್ತಿದ್ದಾರೆ. ಆದರೆ ಈ ಬಾರಿ ಅವರು ಜೆಡಿಎಸ್ ಬದಲು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾರೆ. ಈವರೆಗೂ ಹೊರಟ್ಟಿ ಸೋಲಿಸಲು ಪ್ರಯತ್ನಿಸಿ ಸೋತಿದ್ದ ಬಿಜೆಪಿ ಇದೀಗ ಅದೇ ಹೊರಟ್ಟಿ ಅವರ ಗೆಲುವಿಗೆ ಶ್ರಮಿಸಲು ಮುಂದಾಗಿದೆ.

ಬಿಜೆಪಿಯಿಂದ ಮೂವರು ಹಾಲಿ ಸದಸ್ಯರ ಸ್ಪರ್ಧೆ: ಅರುಣ್ ಶಹಾಪುರ, ಹನುಮಂತ ನಿರಾಣಿ ಹಾಗು ಬಸವರಾಜ ಹೊರಟ್ಟಿ ಮೂವರು ಹಾಲಿ ಸದಸ್ಯರು. ಮೂವರು ಆಯ್ಕೆಯಾಗುವ ವಿಶ್ವಾಸ ಬಿಜೆಪಿ ನಾಯಕರಿಗಿದೆ. ಹಾಗಾಗಿ ಮೂರೂ ಕ್ಷೇತ್ರದಲ್ಲೂ ಭರ್ಜರಿ ಪ್ರಚಾರ ಕಾರ್ಯ ನಡೆಸಲಾಗಿದೆ.

ದಕ್ಷಿಣ ಪದವೀಧರ ಕ್ಷೇತ್ರ ಕಠಿಣ: ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಹೊಸದಾಗಿ ಎಂ.ವಿ. ರವಿಶಂಕರ್ ಅವರಿಗೆ ಬಿಜೆಪಿ ಮಣೆ ಹಾಕಿದೆ. ಕಳೆದ ಡಿಸೆಂಬರ್​ನಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಮೈಸೂರು ಚಾಮರಾಜನಗರ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲುವ ಅವಕಾಶವಿದ್ದರೂ ಬಿಜೆಪಿ ಸೋತಿತ್ತು. ಈ ಹಿನ್ನೆಲೆಯಲ್ಲಿ ಈಗ ಅದೇ ವ್ಯಾಪ್ತಿಯಲ್ಲಿ ನಡೆಯುತ್ತಿರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಕಠಿಣ ಸವಾಲಿದ್ದು, ಸಾಕಷ್ಟು ತಂತ್ರಗಾರಿಕೆ ಬಳಸಿ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ.

ಬೀಡು ಬಿಟ್ಟ ಉಸ್ತುವಾರಿಗಳು: ಬೆಳಗಾವಿ, ವಿಜಯಪುರ, ಚಿಕ್ಕೋಡಿ, ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿ ಒಳಗೊಂಡ ವಾಯುವ್ಯ ಶಿಕ್ಷಕರ ಕ್ಷೇತ್ರದ ಜವಾಬ್ದಾರಿ ಹೊತ್ತ ಹಿರಿಯ ಸಚಿವ ಗೋವಿಂದ ಕಾರಜೋಳ, ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ವೈ.ಎ. ನಾರಾಯಣಸ್ವಾಮಿ, ಶಶಿಲ್ ನಮೋಶಿ, ಮಾಜಿ ಎಂಎಲ್​ಸಿ ಮಹಾಂತೇಶ್ ಕವಟಗಿಮಠ, ಶಾಸಕ ಪಿ. ರಾಜೀವ್, ತಂಡದ ಸಂಯೋಜಕ ಎಂಎಲ್​ಸಿ ಎನ್. ರವಿಕುಮಾರ್ ಅವರೊಂದಿಗೆ ಕ್ಷೇತ್ರದಲ್ಲೇ ಬೀಡುಬಿಟ್ಟು ಪ್ರಚಾರ ನಡೆಸಿದ್ದರು.

ಬೆಳಗಾವಿ, ವಿಜಯಪುರ, ಚಿಕ್ಕೋಡಿ, ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿ ಒಳಗೊಂಡಿರುವ ವಾಯುವ್ಯ ಪದವೀಧರರ ಕ್ಷೇತ್ರದ ಜವಾಬ್ದಾರಿ ಹೊತ್ತ ಶಾಸಕ ಅಭಯ್ ಪಾಟೀಲ್, ಎಂಎಲ್​ಸಿಗಳಾದ ಚಿದಾನಂದ ಗೌಡ, ಪ್ರತಾಪ್ ಸಿಂಹ ನಾಯಕ್, ಎಂ.ವೈ ಸತೀಶ್, ಸಂಯೋಜಕ ಮಾಜಿ ಎಂಎಲ್​ಸಿ ಅಶ್ವತ್ಥ್ ನಾರಾಯಣ್ ಅವರೊಂದಿಗೆ ಕ್ಷೇತ್ರದಲ್ಲೇ ಬೀಡುಬಿಟ್ಟು ಪ್ರಚಾರ ಕೈಗೊಂಡಿದ್ದರು.

ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿ ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದ ಜವಾಬ್ದಾರಿ ಹೊತ್ತ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್, ಎಂಎಲ್​ಸಿಗಳಾದ ಪ್ರದೀಪ್ ಶೆಟ್ಟರ್, ಡಿ.ಎಸ್ ಅರುಣ್, ಲಿಂಗರಾಜ ಪಾಟೀಲ್, ಭೋಜರಾಜ ಕರೂದಿ, ರವಿ ದಂಡಿನ್, ತಂಡದ ಸಂಯೋಜಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಅವರೊಂದಿಗೆ ಕ್ಷೇತ್ರದಲ್ಲೇ ಬೀಡುಬಿಟ್ಟು ಮತಬೇಟೆ ನಡೆಸಿದ್ದರು.

ಮೈಸೂರು, ಚಾಮರಾಜನಗರ,ಹಾಸನ, ಮಂಡ್ಯ ಜಿಲ್ಲೆ ವ್ಯಾಪ್ತಿ ಒಳಗೊಂಡಿರುವ ದಕ್ಷಿಣ ಪದವೀಧರ ಕ್ಷೇತ್ರದ ಜವಾಬ್ದಾರಿ ಹೊತ್ತ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್, ಸಚಿವರಾದ ವಿ. ಸೋಮಣ್ಣ, ಕೆ.ಸಿ ನಾರಾಯಣಗೌಡ, ಕೆ. ಗೋಪಾಲಯ್ಯ, ಶಾಸಕರಾದ ಹೆಚ್.ಎಸ್. ಗೋಪಿನಾಥ ರೆಡ್ಡಿ, ಪ್ರೀತಂ ಗೌಡ, ಎಂಎಲ್​ಸಿಗಳಾದ ಎಂ.ಕೆ ಪ್ರಾಣೇಶ್, ಪುಟ್ಟಣ್ಣ ಅ. ದೇವೇಗೌಡ, ತಂಡದ ಸಂಯೋಜಕ ಸಿದ್ದರಾಜು ಅವರೊಂದಿಗೆ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದರು.

ಇವರೆಲ್ಲರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹೆಚ್ಚುವರಿಯಾಗಿ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಉಳಿದ ಎಲ್ಲಾ ಜನಪ್ರತಿನಿಧಿ, ಪಕ್ಷದ ಪ್ರಮುಖರು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ ಫಲಿತಾಂಶ: ಕಾಂಗ್ರೆಸ್​ ವಿರುದ್ಧ ಸಿ.ಎಂ ಇಬ್ರಾಹಿಂ ವಾಗ್ದಾಳಿ

ಒಟ್ಟಿನಲ್ಲಿ ಹಾಲಿ ಇಬ್ಬರು ಸದಸ್ಯರ ಜೊತೆಗೆ ಹೊರಟ್ಟಿ ಅವರನ್ನು ಗೆಲ್ಲಿಸಿಕೊಂಡು ಮೂರು ಸ್ಥಾನ ಧಕ್ಕಿಸಿಕೊಳ್ಳುವ ಪ್ಲಾನ್ ಮಾಡಿರುವ ಬಿಜೆಪಿ, ದಕ್ಷಿಣ ಪದವೀಧರ ಕ್ಷೇತ್ರದ ಗೆಲುವಿಗೂ ಇನ್ನಿಲ್ಲದ ಸರ್ಕಸ್ ಮಾಡಿದೆ. ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ನಾಲ್ಕೂ ಸ್ಥಾನ ಗೆದ್ದು ಕ್ಲೀನ್ ಸ್ವೀಪ್ ಮಾಡುವ ಪ್ರಯತ್ನದಲ್ಲಿದ್ದು, ಕನಿಷ್ಠ ಮೂರು ಕ್ಷೇತ್ರಗಳಲ್ಲಾದರೂ ಕಮಲ ಅರಳಲೇಬೇಕು ಎಂದು ಪಣ ತೊಟ್ಟಿದೆ.

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಒಂದು ಹೆಚ್ಚುವರಿ ಸ್ಥಾನ ಧಕ್ಕಿಸಿಕೊಂಡಿರುವ ಬಿಜೆಪಿ ಇದೀಗ ನಾಳೆ ನಡೆಯಲಿರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎರಡು ಹೆಚ್ಚುವರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ನಾಲ್ಕೂ ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡಲು ಪ್ರಯತ್ನ ನಡೆಸುತ್ತಿದೆ. ಬಿಜೆಪಿ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಹಾಲಿ ಸದಸ್ಯ ಅರುಣ್ ಶಹಾಪುರ್, ವಾಯುವ್ಯ ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯ ಹನುಮಂತ ರುದ್ರಪ್ಪ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಹೊಸದಾಗಿ ಆಯ್ಕೆಯಾಗಿರುವ ಎಂ.ವಿ. ರವಿಶಂಕರ್ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ತೊರೆದು ಬಂದಿರುವ ಹಾಲಿ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಕಣಕ್ಕಿಳಿಸಿದೆ. ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಯದ್ದು ಎರಡು ಕ್ಷೇತ್ರಗಳಾಗಿದ್ದು, ಅವುಗಳನ್ನು ಉಳಿಸಿಕೊಳ್ಳುವ ಜೊತೆಗೆ ಮತ್ತೆರಡು ಸ್ಥಾನದ ಮೇಲೂ ಕಣ್ಣಿಟ್ಟಿದೆ.

ಹೊರಟ್ಟಿ ಅದೃಷ್ಟ ಪರೀಕ್ಷೆ: ಏಳು ಬಾರಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ಆಯ್ಕೆಯಾಗುತ್ತಾ ಬಂದಿರುವ ಬಸವರಾಜ ಹೊರಟ್ಟಿ ಇದೀಗ ಎಂಟನೇ ಬಾರಿ ಅದೃಷ್ಟ ಪರೀಕ್ಷೆ ಎದುರಿಸುತ್ತಿದ್ದಾರೆ. ಆದರೆ ಈ ಬಾರಿ ಅವರು ಜೆಡಿಎಸ್ ಬದಲು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾರೆ. ಈವರೆಗೂ ಹೊರಟ್ಟಿ ಸೋಲಿಸಲು ಪ್ರಯತ್ನಿಸಿ ಸೋತಿದ್ದ ಬಿಜೆಪಿ ಇದೀಗ ಅದೇ ಹೊರಟ್ಟಿ ಅವರ ಗೆಲುವಿಗೆ ಶ್ರಮಿಸಲು ಮುಂದಾಗಿದೆ.

ಬಿಜೆಪಿಯಿಂದ ಮೂವರು ಹಾಲಿ ಸದಸ್ಯರ ಸ್ಪರ್ಧೆ: ಅರುಣ್ ಶಹಾಪುರ, ಹನುಮಂತ ನಿರಾಣಿ ಹಾಗು ಬಸವರಾಜ ಹೊರಟ್ಟಿ ಮೂವರು ಹಾಲಿ ಸದಸ್ಯರು. ಮೂವರು ಆಯ್ಕೆಯಾಗುವ ವಿಶ್ವಾಸ ಬಿಜೆಪಿ ನಾಯಕರಿಗಿದೆ. ಹಾಗಾಗಿ ಮೂರೂ ಕ್ಷೇತ್ರದಲ್ಲೂ ಭರ್ಜರಿ ಪ್ರಚಾರ ಕಾರ್ಯ ನಡೆಸಲಾಗಿದೆ.

ದಕ್ಷಿಣ ಪದವೀಧರ ಕ್ಷೇತ್ರ ಕಠಿಣ: ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಹೊಸದಾಗಿ ಎಂ.ವಿ. ರವಿಶಂಕರ್ ಅವರಿಗೆ ಬಿಜೆಪಿ ಮಣೆ ಹಾಕಿದೆ. ಕಳೆದ ಡಿಸೆಂಬರ್​ನಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಮೈಸೂರು ಚಾಮರಾಜನಗರ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲುವ ಅವಕಾಶವಿದ್ದರೂ ಬಿಜೆಪಿ ಸೋತಿತ್ತು. ಈ ಹಿನ್ನೆಲೆಯಲ್ಲಿ ಈಗ ಅದೇ ವ್ಯಾಪ್ತಿಯಲ್ಲಿ ನಡೆಯುತ್ತಿರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಕಠಿಣ ಸವಾಲಿದ್ದು, ಸಾಕಷ್ಟು ತಂತ್ರಗಾರಿಕೆ ಬಳಸಿ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ.

ಬೀಡು ಬಿಟ್ಟ ಉಸ್ತುವಾರಿಗಳು: ಬೆಳಗಾವಿ, ವಿಜಯಪುರ, ಚಿಕ್ಕೋಡಿ, ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿ ಒಳಗೊಂಡ ವಾಯುವ್ಯ ಶಿಕ್ಷಕರ ಕ್ಷೇತ್ರದ ಜವಾಬ್ದಾರಿ ಹೊತ್ತ ಹಿರಿಯ ಸಚಿವ ಗೋವಿಂದ ಕಾರಜೋಳ, ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ವೈ.ಎ. ನಾರಾಯಣಸ್ವಾಮಿ, ಶಶಿಲ್ ನಮೋಶಿ, ಮಾಜಿ ಎಂಎಲ್​ಸಿ ಮಹಾಂತೇಶ್ ಕವಟಗಿಮಠ, ಶಾಸಕ ಪಿ. ರಾಜೀವ್, ತಂಡದ ಸಂಯೋಜಕ ಎಂಎಲ್​ಸಿ ಎನ್. ರವಿಕುಮಾರ್ ಅವರೊಂದಿಗೆ ಕ್ಷೇತ್ರದಲ್ಲೇ ಬೀಡುಬಿಟ್ಟು ಪ್ರಚಾರ ನಡೆಸಿದ್ದರು.

ಬೆಳಗಾವಿ, ವಿಜಯಪುರ, ಚಿಕ್ಕೋಡಿ, ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿ ಒಳಗೊಂಡಿರುವ ವಾಯುವ್ಯ ಪದವೀಧರರ ಕ್ಷೇತ್ರದ ಜವಾಬ್ದಾರಿ ಹೊತ್ತ ಶಾಸಕ ಅಭಯ್ ಪಾಟೀಲ್, ಎಂಎಲ್​ಸಿಗಳಾದ ಚಿದಾನಂದ ಗೌಡ, ಪ್ರತಾಪ್ ಸಿಂಹ ನಾಯಕ್, ಎಂ.ವೈ ಸತೀಶ್, ಸಂಯೋಜಕ ಮಾಜಿ ಎಂಎಲ್​ಸಿ ಅಶ್ವತ್ಥ್ ನಾರಾಯಣ್ ಅವರೊಂದಿಗೆ ಕ್ಷೇತ್ರದಲ್ಲೇ ಬೀಡುಬಿಟ್ಟು ಪ್ರಚಾರ ಕೈಗೊಂಡಿದ್ದರು.

ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿ ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದ ಜವಾಬ್ದಾರಿ ಹೊತ್ತ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್, ಎಂಎಲ್​ಸಿಗಳಾದ ಪ್ರದೀಪ್ ಶೆಟ್ಟರ್, ಡಿ.ಎಸ್ ಅರುಣ್, ಲಿಂಗರಾಜ ಪಾಟೀಲ್, ಭೋಜರಾಜ ಕರೂದಿ, ರವಿ ದಂಡಿನ್, ತಂಡದ ಸಂಯೋಜಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಅವರೊಂದಿಗೆ ಕ್ಷೇತ್ರದಲ್ಲೇ ಬೀಡುಬಿಟ್ಟು ಮತಬೇಟೆ ನಡೆಸಿದ್ದರು.

ಮೈಸೂರು, ಚಾಮರಾಜನಗರ,ಹಾಸನ, ಮಂಡ್ಯ ಜಿಲ್ಲೆ ವ್ಯಾಪ್ತಿ ಒಳಗೊಂಡಿರುವ ದಕ್ಷಿಣ ಪದವೀಧರ ಕ್ಷೇತ್ರದ ಜವಾಬ್ದಾರಿ ಹೊತ್ತ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್, ಸಚಿವರಾದ ವಿ. ಸೋಮಣ್ಣ, ಕೆ.ಸಿ ನಾರಾಯಣಗೌಡ, ಕೆ. ಗೋಪಾಲಯ್ಯ, ಶಾಸಕರಾದ ಹೆಚ್.ಎಸ್. ಗೋಪಿನಾಥ ರೆಡ್ಡಿ, ಪ್ರೀತಂ ಗೌಡ, ಎಂಎಲ್​ಸಿಗಳಾದ ಎಂ.ಕೆ ಪ್ರಾಣೇಶ್, ಪುಟ್ಟಣ್ಣ ಅ. ದೇವೇಗೌಡ, ತಂಡದ ಸಂಯೋಜಕ ಸಿದ್ದರಾಜು ಅವರೊಂದಿಗೆ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದರು.

ಇವರೆಲ್ಲರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹೆಚ್ಚುವರಿಯಾಗಿ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಉಳಿದ ಎಲ್ಲಾ ಜನಪ್ರತಿನಿಧಿ, ಪಕ್ಷದ ಪ್ರಮುಖರು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ ಫಲಿತಾಂಶ: ಕಾಂಗ್ರೆಸ್​ ವಿರುದ್ಧ ಸಿ.ಎಂ ಇಬ್ರಾಹಿಂ ವಾಗ್ದಾಳಿ

ಒಟ್ಟಿನಲ್ಲಿ ಹಾಲಿ ಇಬ್ಬರು ಸದಸ್ಯರ ಜೊತೆಗೆ ಹೊರಟ್ಟಿ ಅವರನ್ನು ಗೆಲ್ಲಿಸಿಕೊಂಡು ಮೂರು ಸ್ಥಾನ ಧಕ್ಕಿಸಿಕೊಳ್ಳುವ ಪ್ಲಾನ್ ಮಾಡಿರುವ ಬಿಜೆಪಿ, ದಕ್ಷಿಣ ಪದವೀಧರ ಕ್ಷೇತ್ರದ ಗೆಲುವಿಗೂ ಇನ್ನಿಲ್ಲದ ಸರ್ಕಸ್ ಮಾಡಿದೆ. ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ನಾಲ್ಕೂ ಸ್ಥಾನ ಗೆದ್ದು ಕ್ಲೀನ್ ಸ್ವೀಪ್ ಮಾಡುವ ಪ್ರಯತ್ನದಲ್ಲಿದ್ದು, ಕನಿಷ್ಠ ಮೂರು ಕ್ಷೇತ್ರಗಳಲ್ಲಾದರೂ ಕಮಲ ಅರಳಲೇಬೇಕು ಎಂದು ಪಣ ತೊಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.