ETV Bharat / state

ಸಂಕ್ರಮಣ ಮುಗಿಯುತ್ತಿದ್ದಂತೆ ಬಿಜೆಪಿ ಫುಲ್ ಆ್ಯಕ್ಟೀವ್: ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಹೈಕಮಾಂಡ್ ಟಾಪ್ ಲೀಡರ್ಸ್​​

author img

By

Published : Jan 17, 2023, 3:32 PM IST

ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರ ಸೆಳೆಯಲು ಮುಂದಾದ ಬಿಜೆಪಿ - ರಾಜ್ಯಕ್ಕೆ ಹೈಕಮಾಂಡ್​ ಪ್ರಮುಖ ನಾಯಕರ ಭೇಟಿ - ರಾಜ್ಯದ ಮೇಲೆ ಮೋದಿ, ಅಮಿತ್​ ಶಾ ಕಣ್ಣು

ಸಂಕ್ರಮಣ ಮುಗಿಯುತ್ತಿದ್ದಂತೆ ಬಿಜೆಪಿ ಫುಲ್ ಆಕ್ಟೀವ್: ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಹೈಕಮಾಂಡ್ ಟಾಪ್ ಲೀಡರ್ಸ್​​
http://10.10.50.85:6060/reg-lowres/17-January-2023/kn-bng-02-bjp-top-leaders-state-tour-special-story-7208080_17012023135556_1701f_1673943956_538.jpg

ಬೆಂಗಳೂರು: ಮಕರ ಸಂಕ್ರಮಣ ಮುಗಿಯುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ಜೋರಾಗಿದ್ದು, ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್​ನ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ. ಬಿಜೆಪಿ ಪರ ಪ್ರಚಾರ ಕಾರ್ಯ ನಡೆಸಲಿದ್ದು, ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಜೊತೆಗೆ ಸಂಘಟನಾತ್ಮಕ ಚಟುವಟಿಕೆಗೆ ಚುರುಕು ನೀಡಲಿದ್ದಾರೆ. ಮೋದಿ, ಅಮಿತ್ ಶಾ ಜೋಡಿಯ ಮೋಡಿ ಜೊತೆಗೆ ಯೋಗಿ ಆದಿತ್ಯನಾಥರ ಮೂಲಕ ನಾಥ ಪರಂಪರೆಯ ಶ್ರೀಗಳನ್ನು ಸೆಳೆಯುವ ಕೆಲಸವನ್ನೂ ಮಾಡಲಾಗುತ್ತಿದೆ.

ಮುಂದಿನ ಒಂದು ತಿಂಗಳಿನಲ್ಲಿ ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್ ನ ಪ್ರಭಾವಿ ರಾಜಕಾರಣಿಗಳ ದಂಡು ರಾಜ್ಯಕ್ಕೆ ಭರ್ಜರಿ ಪ್ರವೇಶ ಮಾಡುತ್ತಿದೆ. ಈಗಾಗಲೇ ಪ್ರಧಾನಿ ಮೋದಿ ಅವರು ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ಅಂತಿಮಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಬಾರಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಒಂದು ಬಾರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಒಂದು ಬಾರಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮಗಳು ಅಂತಿಮಗೊಂಡಿವೆ. ಚುನಾವಣೆ ಹಿನ್ನೆಲೆಯಲ್ಲಿ ಘಟಾನುಘಟಿ ನಾಯಕರು ರಾಜ್ಯ ಬಿಜೆಪಿಗೆ ಬೂಸ್ಟ್ ನೀಡಲು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಜ.19 ಮತ್ತು ಫೆ.13ಕ್ಕೆ ಪ್ರಧಾನಿ ಮೋದಿ: ಜನವರಿ 12 ರಂದು ಹುಬ್ಬಳ್ಳಿಯ ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ವಾರದಲ್ಲೇ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಜ.19 ರಂದು ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ. ಇದೇ ವೇಳೆ, ಜಲ್ ಜೀವನ್ ಮಿಷನ್ ಅಡಿ ಯಾದಗಿರಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಚನ್ನೈ ಸುರತ್ ಎಕ್ಸ್ ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಕಲ್ಬುರ್ಗಿಯ ಮಳಖೇಡಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ 51 ಸಾವಿರಕ್ಕೂ ಅಧಿಕ ಲಂಬಾಣಿ ತಾಂಡಾ, ಕುರುಬರ ಹಟ್ಟಿ ಮುಂತಾದ ಕಡೆಗಳಲ್ಲಿ ವಾಸಿಸುವ ಜನರಿಗೆ, ಅವರ ವಾಸಸ್ಥಳದ ಹಕ್ಕುಪತ್ರ ವಿತರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಇದೇ ವೇಳೆ, ಕಲಬುರಗಿಯಲ್ಲಿ ಬಂಜಾರ ಸಮಾವೇಶ ನಡೆಸುವ ಯೋಜನೆಯನ್ನು ರಾಜ್ಯ ಬಿಜೆಪಿ ಘಟಕ ಹಾಕಿಕೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.

ಜನವರಿ ನಂತರ ಫೆಬ್ರವರಿ 13 ರಂದು ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ 2023ಕ್ಕೆ ಚಾಲನೆ ನೀಡಲಿದ್ದಾರೆ. ಈ ಪ್ರವಾಸದ ವೇಳೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ಬೆಂಗಳೂರು ಸಮೀಪದಲ್ಲೇ ಬೃಹತ್ ಸಮಾವೇಶವನ್ನು ಆಯೋಜನೆ ಮಾಡುವ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ. ಆ ಮೂಲಕ ಮೋದಿ ಮೋಡಿ ರಾಜ್ಯದಲ್ಲಿ ಆಗುವಂತೆ ನೋಡಿಕೊಳ್ಳಲು ರಾಜ್ಯದ ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಜ.25 ಕ್ಕೆ ಅಮಿತ್ ಶಾ ಪ್ರವಾಸ: ಜನವರಿ 25 ಕ್ಕೆ ರಾಜ್ಯಕ್ಕೆ ಮತ್ತೊಮ್ಮೆ ಅಮಿತ್ ಶಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಡ್ಯ, ಬೆಂಗಳೂರು ಪ್ರವಾಸದ ವೇಳೆಯಲ್ಲಿ ಘೋಷಣೆ ಮಾಡಿದ್ದಂತೆ ಜನವರಿ ತಿಂಗಳಾಂತ್ಯಕ್ಕೆ ಅಮಿತ್ ಶಾ ಮತ್ತೆ ಆಗಮಿಸುತ್ತಿದ್ದು, ಹಳೆ ಮೈಸೂರು ಭಾಗದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮತದಾರರನ್ನು ಸೆಳೆಯುವ ಕೆಲಸ ಮಾಡಲಿದ್ದಾರೆ. ಇದೇ ವೇಳೆ, ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿ ಚುನಾವಣಾ ಪ್ರಚಾರದ ಕಾರ್ಯತಂತ್ರಗಳ ಬ್ಲೂಪ್ರಿಂಟ್ ಅನ್ನು ರಾಜ್ಯದ ನಾಯಕರಿಗೆ ನೀಡಲಿದ್ದಾರೆ ಎನ್ನಲಾಗಿದೆ.

ಜ.21ಕ್ಕೆ ಜೆಪಿ ನಡ್ಡಾ ಪ್ರವಾಸ: ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ 29ರವರೆಗೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.

ಕೇಂದ್ರ- ರಾಜ್ಯ ಸರಕಾರಗಳ ಸಾಧನೆ, ಕೊಡುಗೆ, ಕಾರ್ಯಕ್ರಮಗಳ ಕುರಿತು 2 ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ, ಅವರ ಮನೆಮನೆಗೆ ತೆರಳಿ ಕರಪತ್ರ ಹಂಚುವ ಕಾರ್ಯಕ್ರಮ ಇದಾಗಿದ್ದು, ಫಲಾನುಭವಿಗಳನ್ನು ಮಾತನಾಡಿಸಿ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕಿಸಿ, ಬಿಜೆಪಿ ಸರಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ಆಗಿರುವುದನ್ನು ತಿಳಿಸಿ ಅವರ ವಾಹನಗಳ ಮೇಲೆ ಸ್ಟೀಕರ್ ಹಾಕಿಸುವ ಕೆಲಸ ಮಾಡುವ ಯೋಜನೆಗೆ ನಡ್ಡಾ ಚಾಲನೆ ನೀಡಿ ರಾಜ್ಯದ ಸಂಘಟನಾತ್ಮಕ ಚಟುವಟಿಕೆಗೆ ಹೊಸ ಉತ್ಸಾಹ ತುಂಬಲಿದ್ದಾರೆ.

ಜ.31ಕ್ಕೆ ಯುಪಿ ಸಿಎಂ ಯೋಗಿ ಭೇಟಿ: ಜನವರಿ 31ರಂದು ರಾಜ್ಯಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿ ವಾರ್ಡ್ ನಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡಿರುವ 300 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲು ಆಗಮಿಸಲಿದ್ದಾರೆ.

ಈ ಕುರಿತು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದು, ಯೋಗಿ ಆದಿತ್ಯನಾಥರ ಪ್ರವಾಸವನ್ನು ಖಚಿತ ಪಡಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳ ಉಸ್ತುವಾರಿಯಲ್ಲಿ ನಡೆಯುತ್ತಿರುವ ಆಸ್ಪತ್ರೆ ನಿರ್ಮಾಣದ ಉದ್ಘಾಟನೆ ವೇಳೆ ನಾಥ ಪರಂಪರೆಯವರೇ ಆದ ಯೋಗಿ ಆದಿತ್ಯನಾಥರನ್ನು ಕರೆತಂದು ನಾಥ ಪರಂಪರೆಯನ್ನು ಸೆಳೆಯುವ ಪ್ರಯತ್ನಕ್ಕೆ ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ಇನ್ನು ಈ ಭೇಟಿ ವೇಳೆ ಪಕ್ಷದ ಕಾರ್ಯಕ್ರಮವನ್ನು ಆಯೋಜನೆ ಮಾಡಲು ನಿರ್ಧರಿಸಲಾಗಿದ್ದು, ಇದರ ಸಿದ್ದತಾ ಕಾರ್ಯಗಳನ್ನು ಬಿಜೆಪಿ ಆರಂಭಿಸಿದೆ. ಪಕ್ಷದ ಕಾರ್ಯಕ್ರಮದ ವಿವರಗಳನ್ನು ಕೆಲ ದಿನಗಳ ನಂತರ ಪ್ರಕಟಿಸುವುದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.

ಸದ್ಯಕ್ಕೆ ಇದು ಈಗ ನಿಗದಿಯಾಗಿರುವ ಕಾರ್ಯಕ್ರಮಗಳ ಪಟ್ಟಿಯಾಗಿದ್ದು, ಮೋದಿ, ಅಮಿತ್ ಶಾ ಪ್ರವಾಸ ಮತ್ತೆ ಹೊಸದಾಗಿ ಸೇರಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಕೇಂದ್ರದ ಇತರ ನಾಯಕರ ಪ್ರವಾಸಗಳೂ ರಾಜ್ಯದಲ್ಲಿ ಮರು ನಿಗದಿಯಾಗಲಿವೆ. ಒಟ್ಟಿನಲ್ಲಿ ಬಿಜೆಪಿ ಟಾಪ್ ನಾಯಕರ ಚಿತ್ತ ಇದೀಗ ಕರ್ನಾಟಕದ ಕಡೆ ನೆಟ್ಟಿದ್ದು, ಸರಣಿ ಪ್ರವಾಸಗಳ ಮೂಲಕ ರಾಜ್ಯಕ್ಕೆ ಭರ್ಜರಿ ಎಂಟ್ರಿ ನೀಡುತ್ತಾ ಪಕ್ಷಕ್ಕೆ ಹೊಸ ಹುಮ್ಮಸ್ಸು ತುಂಬುತ್ತಿದ್ದಾರೆ.

ಇದನ್ನೂ ಓದಿ: ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ: ಯಾರು ಅರ್ಜಿ ಸಲ್ಲಿಸಬಹುದು?

ಬೆಂಗಳೂರು: ಮಕರ ಸಂಕ್ರಮಣ ಮುಗಿಯುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ಜೋರಾಗಿದ್ದು, ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್​ನ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ. ಬಿಜೆಪಿ ಪರ ಪ್ರಚಾರ ಕಾರ್ಯ ನಡೆಸಲಿದ್ದು, ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಜೊತೆಗೆ ಸಂಘಟನಾತ್ಮಕ ಚಟುವಟಿಕೆಗೆ ಚುರುಕು ನೀಡಲಿದ್ದಾರೆ. ಮೋದಿ, ಅಮಿತ್ ಶಾ ಜೋಡಿಯ ಮೋಡಿ ಜೊತೆಗೆ ಯೋಗಿ ಆದಿತ್ಯನಾಥರ ಮೂಲಕ ನಾಥ ಪರಂಪರೆಯ ಶ್ರೀಗಳನ್ನು ಸೆಳೆಯುವ ಕೆಲಸವನ್ನೂ ಮಾಡಲಾಗುತ್ತಿದೆ.

ಮುಂದಿನ ಒಂದು ತಿಂಗಳಿನಲ್ಲಿ ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್ ನ ಪ್ರಭಾವಿ ರಾಜಕಾರಣಿಗಳ ದಂಡು ರಾಜ್ಯಕ್ಕೆ ಭರ್ಜರಿ ಪ್ರವೇಶ ಮಾಡುತ್ತಿದೆ. ಈಗಾಗಲೇ ಪ್ರಧಾನಿ ಮೋದಿ ಅವರು ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ಅಂತಿಮಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಬಾರಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಒಂದು ಬಾರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಒಂದು ಬಾರಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮಗಳು ಅಂತಿಮಗೊಂಡಿವೆ. ಚುನಾವಣೆ ಹಿನ್ನೆಲೆಯಲ್ಲಿ ಘಟಾನುಘಟಿ ನಾಯಕರು ರಾಜ್ಯ ಬಿಜೆಪಿಗೆ ಬೂಸ್ಟ್ ನೀಡಲು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಜ.19 ಮತ್ತು ಫೆ.13ಕ್ಕೆ ಪ್ರಧಾನಿ ಮೋದಿ: ಜನವರಿ 12 ರಂದು ಹುಬ್ಬಳ್ಳಿಯ ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ವಾರದಲ್ಲೇ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಜ.19 ರಂದು ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ. ಇದೇ ವೇಳೆ, ಜಲ್ ಜೀವನ್ ಮಿಷನ್ ಅಡಿ ಯಾದಗಿರಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಚನ್ನೈ ಸುರತ್ ಎಕ್ಸ್ ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಕಲ್ಬುರ್ಗಿಯ ಮಳಖೇಡಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ 51 ಸಾವಿರಕ್ಕೂ ಅಧಿಕ ಲಂಬಾಣಿ ತಾಂಡಾ, ಕುರುಬರ ಹಟ್ಟಿ ಮುಂತಾದ ಕಡೆಗಳಲ್ಲಿ ವಾಸಿಸುವ ಜನರಿಗೆ, ಅವರ ವಾಸಸ್ಥಳದ ಹಕ್ಕುಪತ್ರ ವಿತರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಇದೇ ವೇಳೆ, ಕಲಬುರಗಿಯಲ್ಲಿ ಬಂಜಾರ ಸಮಾವೇಶ ನಡೆಸುವ ಯೋಜನೆಯನ್ನು ರಾಜ್ಯ ಬಿಜೆಪಿ ಘಟಕ ಹಾಕಿಕೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.

ಜನವರಿ ನಂತರ ಫೆಬ್ರವರಿ 13 ರಂದು ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ 2023ಕ್ಕೆ ಚಾಲನೆ ನೀಡಲಿದ್ದಾರೆ. ಈ ಪ್ರವಾಸದ ವೇಳೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ಬೆಂಗಳೂರು ಸಮೀಪದಲ್ಲೇ ಬೃಹತ್ ಸಮಾವೇಶವನ್ನು ಆಯೋಜನೆ ಮಾಡುವ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ. ಆ ಮೂಲಕ ಮೋದಿ ಮೋಡಿ ರಾಜ್ಯದಲ್ಲಿ ಆಗುವಂತೆ ನೋಡಿಕೊಳ್ಳಲು ರಾಜ್ಯದ ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಜ.25 ಕ್ಕೆ ಅಮಿತ್ ಶಾ ಪ್ರವಾಸ: ಜನವರಿ 25 ಕ್ಕೆ ರಾಜ್ಯಕ್ಕೆ ಮತ್ತೊಮ್ಮೆ ಅಮಿತ್ ಶಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಡ್ಯ, ಬೆಂಗಳೂರು ಪ್ರವಾಸದ ವೇಳೆಯಲ್ಲಿ ಘೋಷಣೆ ಮಾಡಿದ್ದಂತೆ ಜನವರಿ ತಿಂಗಳಾಂತ್ಯಕ್ಕೆ ಅಮಿತ್ ಶಾ ಮತ್ತೆ ಆಗಮಿಸುತ್ತಿದ್ದು, ಹಳೆ ಮೈಸೂರು ಭಾಗದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮತದಾರರನ್ನು ಸೆಳೆಯುವ ಕೆಲಸ ಮಾಡಲಿದ್ದಾರೆ. ಇದೇ ವೇಳೆ, ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿ ಚುನಾವಣಾ ಪ್ರಚಾರದ ಕಾರ್ಯತಂತ್ರಗಳ ಬ್ಲೂಪ್ರಿಂಟ್ ಅನ್ನು ರಾಜ್ಯದ ನಾಯಕರಿಗೆ ನೀಡಲಿದ್ದಾರೆ ಎನ್ನಲಾಗಿದೆ.

ಜ.21ಕ್ಕೆ ಜೆಪಿ ನಡ್ಡಾ ಪ್ರವಾಸ: ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ 29ರವರೆಗೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.

ಕೇಂದ್ರ- ರಾಜ್ಯ ಸರಕಾರಗಳ ಸಾಧನೆ, ಕೊಡುಗೆ, ಕಾರ್ಯಕ್ರಮಗಳ ಕುರಿತು 2 ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ, ಅವರ ಮನೆಮನೆಗೆ ತೆರಳಿ ಕರಪತ್ರ ಹಂಚುವ ಕಾರ್ಯಕ್ರಮ ಇದಾಗಿದ್ದು, ಫಲಾನುಭವಿಗಳನ್ನು ಮಾತನಾಡಿಸಿ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕಿಸಿ, ಬಿಜೆಪಿ ಸರಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ಆಗಿರುವುದನ್ನು ತಿಳಿಸಿ ಅವರ ವಾಹನಗಳ ಮೇಲೆ ಸ್ಟೀಕರ್ ಹಾಕಿಸುವ ಕೆಲಸ ಮಾಡುವ ಯೋಜನೆಗೆ ನಡ್ಡಾ ಚಾಲನೆ ನೀಡಿ ರಾಜ್ಯದ ಸಂಘಟನಾತ್ಮಕ ಚಟುವಟಿಕೆಗೆ ಹೊಸ ಉತ್ಸಾಹ ತುಂಬಲಿದ್ದಾರೆ.

ಜ.31ಕ್ಕೆ ಯುಪಿ ಸಿಎಂ ಯೋಗಿ ಭೇಟಿ: ಜನವರಿ 31ರಂದು ರಾಜ್ಯಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿ ವಾರ್ಡ್ ನಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡಿರುವ 300 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲು ಆಗಮಿಸಲಿದ್ದಾರೆ.

ಈ ಕುರಿತು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದು, ಯೋಗಿ ಆದಿತ್ಯನಾಥರ ಪ್ರವಾಸವನ್ನು ಖಚಿತ ಪಡಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳ ಉಸ್ತುವಾರಿಯಲ್ಲಿ ನಡೆಯುತ್ತಿರುವ ಆಸ್ಪತ್ರೆ ನಿರ್ಮಾಣದ ಉದ್ಘಾಟನೆ ವೇಳೆ ನಾಥ ಪರಂಪರೆಯವರೇ ಆದ ಯೋಗಿ ಆದಿತ್ಯನಾಥರನ್ನು ಕರೆತಂದು ನಾಥ ಪರಂಪರೆಯನ್ನು ಸೆಳೆಯುವ ಪ್ರಯತ್ನಕ್ಕೆ ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ಇನ್ನು ಈ ಭೇಟಿ ವೇಳೆ ಪಕ್ಷದ ಕಾರ್ಯಕ್ರಮವನ್ನು ಆಯೋಜನೆ ಮಾಡಲು ನಿರ್ಧರಿಸಲಾಗಿದ್ದು, ಇದರ ಸಿದ್ದತಾ ಕಾರ್ಯಗಳನ್ನು ಬಿಜೆಪಿ ಆರಂಭಿಸಿದೆ. ಪಕ್ಷದ ಕಾರ್ಯಕ್ರಮದ ವಿವರಗಳನ್ನು ಕೆಲ ದಿನಗಳ ನಂತರ ಪ್ರಕಟಿಸುವುದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.

ಸದ್ಯಕ್ಕೆ ಇದು ಈಗ ನಿಗದಿಯಾಗಿರುವ ಕಾರ್ಯಕ್ರಮಗಳ ಪಟ್ಟಿಯಾಗಿದ್ದು, ಮೋದಿ, ಅಮಿತ್ ಶಾ ಪ್ರವಾಸ ಮತ್ತೆ ಹೊಸದಾಗಿ ಸೇರಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಕೇಂದ್ರದ ಇತರ ನಾಯಕರ ಪ್ರವಾಸಗಳೂ ರಾಜ್ಯದಲ್ಲಿ ಮರು ನಿಗದಿಯಾಗಲಿವೆ. ಒಟ್ಟಿನಲ್ಲಿ ಬಿಜೆಪಿ ಟಾಪ್ ನಾಯಕರ ಚಿತ್ತ ಇದೀಗ ಕರ್ನಾಟಕದ ಕಡೆ ನೆಟ್ಟಿದ್ದು, ಸರಣಿ ಪ್ರವಾಸಗಳ ಮೂಲಕ ರಾಜ್ಯಕ್ಕೆ ಭರ್ಜರಿ ಎಂಟ್ರಿ ನೀಡುತ್ತಾ ಪಕ್ಷಕ್ಕೆ ಹೊಸ ಹುಮ್ಮಸ್ಸು ತುಂಬುತ್ತಿದ್ದಾರೆ.

ಇದನ್ನೂ ಓದಿ: ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ: ಯಾರು ಅರ್ಜಿ ಸಲ್ಲಿಸಬಹುದು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.