ETV Bharat / state

ಮಸ್ತಕದಲ್ಲೂ ಏನಿಲ್ಲ, ಪುಸ್ತಕವೂ ಓದಲ್ಲ ಎನ್ನುವವರಿಗೆ ಏನೆನ್ನೋಣ.. ಕಾಂಗ್ರೆಸ್ ಕಾಲೆಳೆದ ಬಿಜೆಪಿ..!

author img

By

Published : Dec 19, 2022, 2:50 PM IST

ವೀರ ಸಾವರ್ಕರ್ ಫೋಟೋ ವಿಚಾರವಾಗಿ ಕಾಂಗ್ರೆಸ್​ ವಿರೊಧಿಸುತ್ತಿರುವುದಕ್ಕೆ ಬಿಜೆಪಿ ಸರಣಿ ಟ್ವಿಟ್​ ಮಾಡಿ ಪ್ರಶ್ನಿಸಿದೆ. ಸಾವರ್ಕರ್ ಒಪ್ಪಿದ್ದ ಗಾಂಧಿ, ನೇತಾಜಿ, ಇಂದಿರಾರನ್ನೂ ವಿರೋಧಿಸುತ್ತೀರಾ ಎಂದು ಬಿಜೆಪಿ ಕೇಳಿದೆ.

bjp tweet
ಬಿಜೆಪಿ ಸರಣಿ ಟ್ವಿಟ್​

ಬೆಳಗಾವಿ/ಬೆಂಗಳೂರು: 1970 ರಲ್ಲಿ ಇಂದಿರಾ ಗಾಂಧಿ ಸರ್ಕಾರ ವೀರ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿತ್ತು. ಸಾವರ್ಕರ್ ಕುರಿತು ಡಾಕ್ಯುಮೆಂಟರಿ ನಿರ್ಮಾಣಕ್ಕಾಗಿ ಸಾವರ್ಕರ್ ಸ್ಮಾರಕ ಸಮಿತಿಗೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ದರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ? ಎಂದು ಸುವರ್ಣಸೌಧದ ಅಸೆಂಬ್ಲಿ ಹಾಲ್​ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ವಿರೋಧಿಸಿದ ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು ನೀಡಿದೆ.

ಅಸೆಂಬ್ಲಿ ಹಾಲ್​ನಲ್ಲಿ ಸಾವರ್ಕರ್ ಫೋಟೋ ಅಳವಡಿಕೆ ಮಾಡಿದ್ದನ್ನು ಖಂಡಿಸುತ್ತಿರುವ ಕಾಂಗ್ರೆಸ್ ನಾಯಕರ ಮುಂದೆ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರಣಿ ಪ್ರಶ್ನೆ ಮಾಡಿದೆ. ಸಾವರ್ಕರ್‌ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಖುದ್ದು ಸಾವರ್ಕರ್‌ ಹೋರಾಟವನ್ನು ಕೊಂಡಾಡಿ ಅವರೊಬ್ಬ ಅದ್ಭುತ ಸ್ವಾತಂತ್ರ್ಯ ಹೋರಾಟಗಾರ ಎಂದು ಶ್ಲಾಘಿಸಿ ಪತ್ರ ಬರೆದಿದ್ದರು. ಇದರ ಜೊತೆಗೆ ವೀರ ಸಾವರ್ಕರ್ ನಿಧಿಗೆ ವೈಯುಕ್ತಿಕವಾಗಿ 11,000 ರೂಪಾಯಿ ದೇಣಿಗೆ ಕೂಡಾ ನೀಡಿದ್ದರು.

  • 1970 ರಲ್ಲಿ ಇಂದಿರಾ ಗಾಂಧಿ ಸರ್ಕಾರ ವೀರ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿತ್ತು.

    ಸಾವರ್ಕರ್ ಕುರಿತು ಡಾಕ್ಯುಮೆಂಟರಿ ನಿರ್ಮಾಣಕ್ಕಾಗಿ ಸಾವರ್ಕರ್ ಸ್ಮಾರಕ ಸಮಿತಿಗೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ದರು.

    ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ?

    1/n#AntiNationalCongress pic.twitter.com/QVgeH2zBDp

    — BJP Karnataka (@BJP4Karnataka) December 19, 2022 " class="align-text-top noRightClick twitterSection" data=" ">

ವೀರ ಸಾವರ್ಕರ್ ಬಗ್ಗೆ ಕಾಂಗ್ರೆಸ್ಸಿಗೆ ವಿರೋಧ ಏಕೆ: ಸಾವರ್ಕರ್‌ ಅಸ್ಪೃಶ್ಯತಾ ನಿವಾರಣೋಪಾಯಗಳು ಅಂಬೇಡ್ಕರ್‌ ಅವರಿಗೆ ಪ್ರೇರಣೆಯಾಗಿತ್ತು, ಆದರೆ ಕಾಂಗ್ರೆಸ್ಸಿಗರಿಗೆ ಆಗಲೇ ಇಲ್ಲ! ಅಸ್ಪೃಶ್ಯತೆ ನಿವಾರಿಸಲು ನನ್ನ ಆಶಯಕ್ಕನುಗುಣವಾಗಿ ಸಮಾಜದೊಳಗಿದ್ದು ಶ್ರಮಿಸುತ್ತಿರುವ ಕೆಲವೇ ಕೆಲವು ಮಂದಿಯಲ್ಲಿ ಸಾವರ್ಕರ್‌ ಕೂಡಾ ಒಬ್ಬರು ಎಂದು ಅಂಬೇಡ್ಕರ್‌ ಕೊಂಡಾಡಿದ್ದರು, ತಾಯಿ ಭಾರತಿಗೆ ಕನ್ನಡದಾರತಿ ಎತ್ತುವೆ ಎಂದ ಆಲೂರು ವೆಂಕಟರಾಯರಿಗೆ, ಭಾರತ ಜನನಿಯ ತನುಜಾತೆ ಎಂದ ಕುವೆಂಪು ಅವರಿಗೆ ಭಾಷೆಯಲ್ಲ, ಕಾವ್ಯವೇ ನವಮೇಘರೂಪ ಎಂದ ಬೇಂದ್ರೆಯವರಿಗೆ ಪ್ರೇರಣೆಯಾದವರು ಸಾವರ್ಕರ್. ಅಂಥಹ ವೀರ ಸಾವರ್ಕರ್ ಅವರು ಕಾಂಗ್ರೆಸ್ಸಿಗೆ ಮಾತ್ರ ವರ್ಜ್ಯವಾಗುವುದೇಕೆ? ಎಂದು ಪ್ರಶ್ನಿಸಿದೆ.

ಕೆಪಿಸಿಸಿ ಗಾಂಧೀಜಿಯನ್ನೂ ವಿರೋಧಿಸುವುದೇ: ಸಿಂಗಾಪುರದ "ಫ್ರೀ ಇಂಡಿಯಾ ರೇಡಿಯೋ" ಭಾಷಣದಲ್ಲಿ ನೇತಾಜಿ, "ರಾಜಕೀಯ ಪ್ರಬುದ್ಧತೆಯಿಲ್ಲದ ಕಾಂಗ್ರೆಸ್ ಸೈನಿಕರನ್ನು ಹಣಕ್ಕಾಗಿ ಮಾರಿಕೊಂಡವರು ಎಂದು ಹೀಗಳೆಯುತ್ತಿರುವಾಗ ಸಾವರ್ಕರ್ ಸೇನೆಗೆ ಸೇರಿ ಎನ್ನುತ್ತಿರುವುದು ಸ್ಫೂರ್ತಿದಾಯಕ" ಎಂದಿದ್ದರು. ಸಾವರ್ಕರ್ ನಿಂದಕರೆಲ್ಲರೂ ನೇತಾಜಿ ನಿಂದಕರೂ ಆಗಿದ್ದಾರೇಕೆಂದು ಈಗ ತಿಳಿಯಿತೇ? ಕಾಂಗ್ರೆಸ್ ಇಂದು ಸಾವರ್ಕರ್‌ರನ್ನು‌ ವಿರೋಧಿಸಬಹುದು. ಆದರೆ ಸಾವರ್ಕರ್‌ರನ್ನು ಅಪಾರವಾಗಿ ಪ್ರೀತಿಸುವವರು, ಗೌರವಿಸುವವರ ಸಾಲಲ್ಲಿ‌ ಗಾಂಧೀಜಿಯೂ ನಿಲ್ಲುತ್ತಾರೆ‌. ಗಾಂಧೀಜಿ ಪತ್ರಗಳಲ್ಲಿ ಸಾವರ್ಕರ್‌ರನ್ನು ಪ್ರೀತಿಯಿಂದ ʼಭಾಯ್ʼ ಎಂದು ಸಂಬೋಧಿಸುತ್ತಿದ್ದರು. ಕೆಪಿಸಿಸಿ ಗಾಂಧೀಜಿಯನ್ನೂ ವಿರೋಧಿಸುವುದೇ? ಎಂದು ಪ್ರಶ್ನಿಸಿದೆ.

ಓಲೈಕೆ ರಾಜಕಾರಣ ಏಕೆ?: ಒಂದು‌ ಸಮುದಾಯದ ಓಲೈಕೆಯಲ್ಲೇ ನಿರತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ಗೆ ಟಿಪ್ಪು, ಶಾರಿಕ್‌ನಂಥವರೇ ದೇವರಾಗಿದ್ದಾರೆಯೇ‌ ವಿನಾ, ದಲಿತರಿಗೂ ಪತಿತ‌ ಪಾವನ ಮಂದಿರ‌ ಕೊಟ್ಟ ಸಾವರ್ಕರ್ ದೇವರಾಗಲಿಲ್ಲ. ಸಮಾಜವಾದಿ ಸಿದ್ದರಾಮಯ್ಯ ಈಗೆಲ್ಲಿ ಹೋದರು? ಮಾನ್ಯ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ, ಸಾವರ್ಕರ್‌ ಅವರನ್ನು ಓದುವುದು ಬೇಡ. ಕೇವಲ‌ ನಿಮ್ಮ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರ ಮಾತನ್ನು ನೀವು ಅರ್ಥ ಮಾಡಿಕೊಂಡಿದ್ದರೂ, ಸಾವರ್ಕರ್‌ ಅವರ ಭಾವಚಿತ್ರಕ್ಕೆ ನೀವೇ ಹಾರ‌ ಹಾಕುತ್ತಿದ್ದಿರೇನೋ! ಮಸ್ತಕದಲ್ಲೂ ಏನಿಲ್ಲ, ಪುಸ್ತಕವೂ ಓದಲ್ಲ ಎನ್ನುವವರಿಗೆ ಏನೆನ್ನೋಣ? ಎಂದು ಟೀಕಿಸಿದೆ.

ಸಾವರ್ಕರ್ ಎಂದರೆ ಗಾಂಢೀವ: ಅಂಡಮಾನಿನ ಕತ್ತಲ ಕೋಣೆಯಲ್ಲಿ ವೀರ ಸಾವರ್ಕರ್ ಕಾಲ ಕಳೆಯದಿರುತ್ತಿದ್ದರೆ, ಅವರ ಚಿಂತನೆಗಳು ರಾಷ್ಟ್ರದಲ್ಲಿ ಹರಿಯದಿರುತ್ತಿದ್ದರೆ ಭಾರತ 1947 ರಲ್ಲಿ ಸ್ವತಂತ್ರವಾಗುತ್ತಲೂ ಇರಲಿಲ್ಲ, ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತಲೂ ಇರಲಿಲ್ಲ! ಅಂದು ವೀರ ಸಾವರ್ಕರ್‌ ಕತ್ತಲ ಕೋಣೆಯಲ್ಲಿ ಕಾಲ ಕಳೆಯದಿರುತ್ತಿದ್ದರೆ, ಇಂದು ವಿರೋಧಿಸುವವರಿಗೆ ಧ್ವನಿಯೇ ಇರುತ್ತಿರಲಿಲ್ಲ. ಇಂದಿನ ಆಡಳಿತದ ಯಾವ ಸಂಕೇತಗಳೂ ಇರುತ್ತಿರಲಿಲ್ಲ. ಅರ್ಜುನನನ್ನು ಶಂಕಿಸಬಹುದು. ಆದರೆ ಗಾಂಢೀವವನ್ನು ಶಂಕಿಸಬಹುದೇ? ಸಾವರ್ಕರ್ ಎಂದರೆ ಗಾಂಢೀವ! ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದೆ.

ರಾಜ್ಯ ಕಾಂಗ್ರೆಸ್ಸಿಗರಿಗೆ ನಿಮ್ಹಾನ್ಸ್‌ ಚಿಕಿತ್ಸೆ ಅಗತ್ಯ: ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​ಗೆ ಜನರಿಗಿಂತ ನಿಮ್ಹಾನ್ಸ್‌ ಆಸ್ಪತ್ರೆಯ ನುರಿತ ಮನೋವೈದ್ಯರ ಅವಶ್ಯಕತೆ ಹೆಚ್ಚಾಗಿದೆ. ಪರದೇಶಿ ಟಿಪ್ಪುವನ್ನು ಹೊಗಳುವವರು, ದೇಶಪ್ರೇಮಿ ಸಾವರ್ಕರ್‌ ಫೋಟೊ ಕಂಡರೂ ಉರಿದು‌ ಬೀಳುವವರು ಒಂದೋ ದೇಶವಿರೋಧಿಯಾಗಿರಬೇಕು ಅಥವಾ ಮಾನಸಿಕ ಅಸ್ವಸ್ಥರಾಗಿರಬೇಕು! ಎಂದು ಬಿಜೆಪಿ ಕುಹಕವಾಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಪ್ರತಿಭಟನೆ ಮಧ್ಯೆ ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿ ಏಳು ಮಹನೀಯರ ಭಾವಚಿತ್ರ ಅನಾವರಣ

ಬೆಳಗಾವಿ/ಬೆಂಗಳೂರು: 1970 ರಲ್ಲಿ ಇಂದಿರಾ ಗಾಂಧಿ ಸರ್ಕಾರ ವೀರ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿತ್ತು. ಸಾವರ್ಕರ್ ಕುರಿತು ಡಾಕ್ಯುಮೆಂಟರಿ ನಿರ್ಮಾಣಕ್ಕಾಗಿ ಸಾವರ್ಕರ್ ಸ್ಮಾರಕ ಸಮಿತಿಗೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ದರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ? ಎಂದು ಸುವರ್ಣಸೌಧದ ಅಸೆಂಬ್ಲಿ ಹಾಲ್​ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ವಿರೋಧಿಸಿದ ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು ನೀಡಿದೆ.

ಅಸೆಂಬ್ಲಿ ಹಾಲ್​ನಲ್ಲಿ ಸಾವರ್ಕರ್ ಫೋಟೋ ಅಳವಡಿಕೆ ಮಾಡಿದ್ದನ್ನು ಖಂಡಿಸುತ್ತಿರುವ ಕಾಂಗ್ರೆಸ್ ನಾಯಕರ ಮುಂದೆ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರಣಿ ಪ್ರಶ್ನೆ ಮಾಡಿದೆ. ಸಾವರ್ಕರ್‌ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಖುದ್ದು ಸಾವರ್ಕರ್‌ ಹೋರಾಟವನ್ನು ಕೊಂಡಾಡಿ ಅವರೊಬ್ಬ ಅದ್ಭುತ ಸ್ವಾತಂತ್ರ್ಯ ಹೋರಾಟಗಾರ ಎಂದು ಶ್ಲಾಘಿಸಿ ಪತ್ರ ಬರೆದಿದ್ದರು. ಇದರ ಜೊತೆಗೆ ವೀರ ಸಾವರ್ಕರ್ ನಿಧಿಗೆ ವೈಯುಕ್ತಿಕವಾಗಿ 11,000 ರೂಪಾಯಿ ದೇಣಿಗೆ ಕೂಡಾ ನೀಡಿದ್ದರು.

  • 1970 ರಲ್ಲಿ ಇಂದಿರಾ ಗಾಂಧಿ ಸರ್ಕಾರ ವೀರ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿತ್ತು.

    ಸಾವರ್ಕರ್ ಕುರಿತು ಡಾಕ್ಯುಮೆಂಟರಿ ನಿರ್ಮಾಣಕ್ಕಾಗಿ ಸಾವರ್ಕರ್ ಸ್ಮಾರಕ ಸಮಿತಿಗೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ದರು.

    ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ?

    1/n#AntiNationalCongress pic.twitter.com/QVgeH2zBDp

    — BJP Karnataka (@BJP4Karnataka) December 19, 2022 " class="align-text-top noRightClick twitterSection" data=" ">

ವೀರ ಸಾವರ್ಕರ್ ಬಗ್ಗೆ ಕಾಂಗ್ರೆಸ್ಸಿಗೆ ವಿರೋಧ ಏಕೆ: ಸಾವರ್ಕರ್‌ ಅಸ್ಪೃಶ್ಯತಾ ನಿವಾರಣೋಪಾಯಗಳು ಅಂಬೇಡ್ಕರ್‌ ಅವರಿಗೆ ಪ್ರೇರಣೆಯಾಗಿತ್ತು, ಆದರೆ ಕಾಂಗ್ರೆಸ್ಸಿಗರಿಗೆ ಆಗಲೇ ಇಲ್ಲ! ಅಸ್ಪೃಶ್ಯತೆ ನಿವಾರಿಸಲು ನನ್ನ ಆಶಯಕ್ಕನುಗುಣವಾಗಿ ಸಮಾಜದೊಳಗಿದ್ದು ಶ್ರಮಿಸುತ್ತಿರುವ ಕೆಲವೇ ಕೆಲವು ಮಂದಿಯಲ್ಲಿ ಸಾವರ್ಕರ್‌ ಕೂಡಾ ಒಬ್ಬರು ಎಂದು ಅಂಬೇಡ್ಕರ್‌ ಕೊಂಡಾಡಿದ್ದರು, ತಾಯಿ ಭಾರತಿಗೆ ಕನ್ನಡದಾರತಿ ಎತ್ತುವೆ ಎಂದ ಆಲೂರು ವೆಂಕಟರಾಯರಿಗೆ, ಭಾರತ ಜನನಿಯ ತನುಜಾತೆ ಎಂದ ಕುವೆಂಪು ಅವರಿಗೆ ಭಾಷೆಯಲ್ಲ, ಕಾವ್ಯವೇ ನವಮೇಘರೂಪ ಎಂದ ಬೇಂದ್ರೆಯವರಿಗೆ ಪ್ರೇರಣೆಯಾದವರು ಸಾವರ್ಕರ್. ಅಂಥಹ ವೀರ ಸಾವರ್ಕರ್ ಅವರು ಕಾಂಗ್ರೆಸ್ಸಿಗೆ ಮಾತ್ರ ವರ್ಜ್ಯವಾಗುವುದೇಕೆ? ಎಂದು ಪ್ರಶ್ನಿಸಿದೆ.

ಕೆಪಿಸಿಸಿ ಗಾಂಧೀಜಿಯನ್ನೂ ವಿರೋಧಿಸುವುದೇ: ಸಿಂಗಾಪುರದ "ಫ್ರೀ ಇಂಡಿಯಾ ರೇಡಿಯೋ" ಭಾಷಣದಲ್ಲಿ ನೇತಾಜಿ, "ರಾಜಕೀಯ ಪ್ರಬುದ್ಧತೆಯಿಲ್ಲದ ಕಾಂಗ್ರೆಸ್ ಸೈನಿಕರನ್ನು ಹಣಕ್ಕಾಗಿ ಮಾರಿಕೊಂಡವರು ಎಂದು ಹೀಗಳೆಯುತ್ತಿರುವಾಗ ಸಾವರ್ಕರ್ ಸೇನೆಗೆ ಸೇರಿ ಎನ್ನುತ್ತಿರುವುದು ಸ್ಫೂರ್ತಿದಾಯಕ" ಎಂದಿದ್ದರು. ಸಾವರ್ಕರ್ ನಿಂದಕರೆಲ್ಲರೂ ನೇತಾಜಿ ನಿಂದಕರೂ ಆಗಿದ್ದಾರೇಕೆಂದು ಈಗ ತಿಳಿಯಿತೇ? ಕಾಂಗ್ರೆಸ್ ಇಂದು ಸಾವರ್ಕರ್‌ರನ್ನು‌ ವಿರೋಧಿಸಬಹುದು. ಆದರೆ ಸಾವರ್ಕರ್‌ರನ್ನು ಅಪಾರವಾಗಿ ಪ್ರೀತಿಸುವವರು, ಗೌರವಿಸುವವರ ಸಾಲಲ್ಲಿ‌ ಗಾಂಧೀಜಿಯೂ ನಿಲ್ಲುತ್ತಾರೆ‌. ಗಾಂಧೀಜಿ ಪತ್ರಗಳಲ್ಲಿ ಸಾವರ್ಕರ್‌ರನ್ನು ಪ್ರೀತಿಯಿಂದ ʼಭಾಯ್ʼ ಎಂದು ಸಂಬೋಧಿಸುತ್ತಿದ್ದರು. ಕೆಪಿಸಿಸಿ ಗಾಂಧೀಜಿಯನ್ನೂ ವಿರೋಧಿಸುವುದೇ? ಎಂದು ಪ್ರಶ್ನಿಸಿದೆ.

ಓಲೈಕೆ ರಾಜಕಾರಣ ಏಕೆ?: ಒಂದು‌ ಸಮುದಾಯದ ಓಲೈಕೆಯಲ್ಲೇ ನಿರತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ಗೆ ಟಿಪ್ಪು, ಶಾರಿಕ್‌ನಂಥವರೇ ದೇವರಾಗಿದ್ದಾರೆಯೇ‌ ವಿನಾ, ದಲಿತರಿಗೂ ಪತಿತ‌ ಪಾವನ ಮಂದಿರ‌ ಕೊಟ್ಟ ಸಾವರ್ಕರ್ ದೇವರಾಗಲಿಲ್ಲ. ಸಮಾಜವಾದಿ ಸಿದ್ದರಾಮಯ್ಯ ಈಗೆಲ್ಲಿ ಹೋದರು? ಮಾನ್ಯ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ, ಸಾವರ್ಕರ್‌ ಅವರನ್ನು ಓದುವುದು ಬೇಡ. ಕೇವಲ‌ ನಿಮ್ಮ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರ ಮಾತನ್ನು ನೀವು ಅರ್ಥ ಮಾಡಿಕೊಂಡಿದ್ದರೂ, ಸಾವರ್ಕರ್‌ ಅವರ ಭಾವಚಿತ್ರಕ್ಕೆ ನೀವೇ ಹಾರ‌ ಹಾಕುತ್ತಿದ್ದಿರೇನೋ! ಮಸ್ತಕದಲ್ಲೂ ಏನಿಲ್ಲ, ಪುಸ್ತಕವೂ ಓದಲ್ಲ ಎನ್ನುವವರಿಗೆ ಏನೆನ್ನೋಣ? ಎಂದು ಟೀಕಿಸಿದೆ.

ಸಾವರ್ಕರ್ ಎಂದರೆ ಗಾಂಢೀವ: ಅಂಡಮಾನಿನ ಕತ್ತಲ ಕೋಣೆಯಲ್ಲಿ ವೀರ ಸಾವರ್ಕರ್ ಕಾಲ ಕಳೆಯದಿರುತ್ತಿದ್ದರೆ, ಅವರ ಚಿಂತನೆಗಳು ರಾಷ್ಟ್ರದಲ್ಲಿ ಹರಿಯದಿರುತ್ತಿದ್ದರೆ ಭಾರತ 1947 ರಲ್ಲಿ ಸ್ವತಂತ್ರವಾಗುತ್ತಲೂ ಇರಲಿಲ್ಲ, ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತಲೂ ಇರಲಿಲ್ಲ! ಅಂದು ವೀರ ಸಾವರ್ಕರ್‌ ಕತ್ತಲ ಕೋಣೆಯಲ್ಲಿ ಕಾಲ ಕಳೆಯದಿರುತ್ತಿದ್ದರೆ, ಇಂದು ವಿರೋಧಿಸುವವರಿಗೆ ಧ್ವನಿಯೇ ಇರುತ್ತಿರಲಿಲ್ಲ. ಇಂದಿನ ಆಡಳಿತದ ಯಾವ ಸಂಕೇತಗಳೂ ಇರುತ್ತಿರಲಿಲ್ಲ. ಅರ್ಜುನನನ್ನು ಶಂಕಿಸಬಹುದು. ಆದರೆ ಗಾಂಢೀವವನ್ನು ಶಂಕಿಸಬಹುದೇ? ಸಾವರ್ಕರ್ ಎಂದರೆ ಗಾಂಢೀವ! ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದೆ.

ರಾಜ್ಯ ಕಾಂಗ್ರೆಸ್ಸಿಗರಿಗೆ ನಿಮ್ಹಾನ್ಸ್‌ ಚಿಕಿತ್ಸೆ ಅಗತ್ಯ: ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​ಗೆ ಜನರಿಗಿಂತ ನಿಮ್ಹಾನ್ಸ್‌ ಆಸ್ಪತ್ರೆಯ ನುರಿತ ಮನೋವೈದ್ಯರ ಅವಶ್ಯಕತೆ ಹೆಚ್ಚಾಗಿದೆ. ಪರದೇಶಿ ಟಿಪ್ಪುವನ್ನು ಹೊಗಳುವವರು, ದೇಶಪ್ರೇಮಿ ಸಾವರ್ಕರ್‌ ಫೋಟೊ ಕಂಡರೂ ಉರಿದು‌ ಬೀಳುವವರು ಒಂದೋ ದೇಶವಿರೋಧಿಯಾಗಿರಬೇಕು ಅಥವಾ ಮಾನಸಿಕ ಅಸ್ವಸ್ಥರಾಗಿರಬೇಕು! ಎಂದು ಬಿಜೆಪಿ ಕುಹಕವಾಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಪ್ರತಿಭಟನೆ ಮಧ್ಯೆ ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿ ಏಳು ಮಹನೀಯರ ಭಾವಚಿತ್ರ ಅನಾವರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.