ETV Bharat / state

ತಿರುಪತಿಯಲ್ಲಿರುವ ಕರ್ನಾಟಕ ಯಾತ್ರಿ ನಿವಾಸ ಸಮಸ್ಯೆ: ವಾರದಲ್ಲಿ ಸ್ಥಿತಿಗತಿ ಪರಿಶೀಲಿಸುವ ಭರವಸೆ ನೀಡಿದ ಸಚಿವರು - Muzarayi Department

ತಿರುಪತಿಯಲ್ಲಿರುವ ಕರ್ನಾಟಕ ಯಾತ್ರಿ ನಿವಾಸದ ಸಮಸ್ಯೆಯನ್ನು ಇನ್ನೊಂದು ವಾರದಲ್ಲಿ ಬಗೆಹರಿಸುವುದಾಗಿ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

Kota srinivas poojari
ಕೋಟಾ ಶ್ರೀನಿವಾಸ ಪೂಜಾರಿ
author img

By

Published : Jan 7, 2020, 9:25 PM IST

ಬೆಂಗಳೂರು: ಇನ್ನೊಂದು ವಾರದಲ್ಲಿ ಮುಜರಾಯಿ ಇಲಾಖೆ ನಿಯೋಗ ತಿರುಪತಿಗೆ ಭೇಟಿ ನೀಡಿ ಕರ್ನಾಟಕ ಯಾತ್ರಿ ನಿವಾಸದ ಸ್ಥಿತಿಗತಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

ಅಹವಾಲು ಸ್ವೀಕರಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಮಲ್ಲೇಶ್ವರಂನಲ್ಲಿರವ ಬಿಜೆಪಿ ಕಚೇರಿಯಲ್ಲಿ‌ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು. ಈ ವೇಳೆ ಎ.ಹೆಚ್. ಆನಂದ್ ನೇತೃತ್ವದ ನಿಯೋಗ ತಿರುಪತಿಯಲ್ಲಿರುವ ಕರ್ನಾಟಕ ಯಾತ್ರಿ ನಿವಾಸದ ಸಮಸ್ಯೆಗಳನ್ನು ಪರಿಹರಿಸುವಂತೆ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿತು.

ತಿರುಪತಿಯಲ್ಲಿ ಕರ್ನಾಟಕದ ಯಾತ್ರಿಗಳಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿವರ ನೀಡುವ ಜೊತೆಗೆ ಕನ್ನಡಿಗರಿಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ ಕರ್ನಾಟಕ ಯಾತ್ರಿ ನಿವಾಸದ ನಿರ್ವಹಣೆ ಸರಿಯಿಲ್ಲ. ಅಲ್ಲಿನ ಕ್ಯಾಂಟೀನ್ ಸರಿಯಿಲ್ಲ ಕರ್ನಾಟಕದ ಸಿಬ್ಬಂದಿ ಇಲ್ಲದ ಕಾರಣ ನಮಗೆ ಸಮಸ್ಯೆ ಆಗುತ್ತಿದೆ. ನಮ್ಮ ಸಿಬ್ಬಂದಿ ಅಲ್ಲಿ ಇರಬೇಕು. ಈ ಬಗ್ಗೆ ಪರಿಶೀಲನೆ ಮಾಡುವಂತೆ ಮನವಿ ಸಲ್ಲಿಸಿದರು.

ಮನವಿ ಆಲಿಸಿದ ಸಚಿವ ಕೋಟಾ ಶ್ರೀನಿವಾಸ್​ ಪೂಜಾರಿ ಇನ್ನೊಂದು ವಾರದಲ್ಲಿ ಮುಜರಾಯಿ ಇಲಾಖೆ ನಿಯೋಗ ತಿರುಪತಿಗೆ ತೆರಳಿ ಪರಿಶೀಲನೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ಬೆಂಗಳೂರು: ಇನ್ನೊಂದು ವಾರದಲ್ಲಿ ಮುಜರಾಯಿ ಇಲಾಖೆ ನಿಯೋಗ ತಿರುಪತಿಗೆ ಭೇಟಿ ನೀಡಿ ಕರ್ನಾಟಕ ಯಾತ್ರಿ ನಿವಾಸದ ಸ್ಥಿತಿಗತಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

ಅಹವಾಲು ಸ್ವೀಕರಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಮಲ್ಲೇಶ್ವರಂನಲ್ಲಿರವ ಬಿಜೆಪಿ ಕಚೇರಿಯಲ್ಲಿ‌ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು. ಈ ವೇಳೆ ಎ.ಹೆಚ್. ಆನಂದ್ ನೇತೃತ್ವದ ನಿಯೋಗ ತಿರುಪತಿಯಲ್ಲಿರುವ ಕರ್ನಾಟಕ ಯಾತ್ರಿ ನಿವಾಸದ ಸಮಸ್ಯೆಗಳನ್ನು ಪರಿಹರಿಸುವಂತೆ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿತು.

ತಿರುಪತಿಯಲ್ಲಿ ಕರ್ನಾಟಕದ ಯಾತ್ರಿಗಳಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿವರ ನೀಡುವ ಜೊತೆಗೆ ಕನ್ನಡಿಗರಿಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ ಕರ್ನಾಟಕ ಯಾತ್ರಿ ನಿವಾಸದ ನಿರ್ವಹಣೆ ಸರಿಯಿಲ್ಲ. ಅಲ್ಲಿನ ಕ್ಯಾಂಟೀನ್ ಸರಿಯಿಲ್ಲ ಕರ್ನಾಟಕದ ಸಿಬ್ಬಂದಿ ಇಲ್ಲದ ಕಾರಣ ನಮಗೆ ಸಮಸ್ಯೆ ಆಗುತ್ತಿದೆ. ನಮ್ಮ ಸಿಬ್ಬಂದಿ ಅಲ್ಲಿ ಇರಬೇಕು. ಈ ಬಗ್ಗೆ ಪರಿಶೀಲನೆ ಮಾಡುವಂತೆ ಮನವಿ ಸಲ್ಲಿಸಿದರು.

ಮನವಿ ಆಲಿಸಿದ ಸಚಿವ ಕೋಟಾ ಶ್ರೀನಿವಾಸ್​ ಪೂಜಾರಿ ಇನ್ನೊಂದು ವಾರದಲ್ಲಿ ಮುಜರಾಯಿ ಇಲಾಖೆ ನಿಯೋಗ ತಿರುಪತಿಗೆ ತೆರಳಿ ಪರಿಶೀಲನೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

Intro:KN_BNG_05_KOTA_BJP_WORKERS_MEET_VIDEO_9021933


Body:KN_BNG_05_KOTA_BJP_WORKERS_MEET_VIDEO_9021933


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.