ETV Bharat / state

ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ: ಸಿಎಂ ವಿರುದ್ಧ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ

author img

By ETV Bharat Karnataka Team

Published : Sep 9, 2023, 4:05 PM IST

Updated : Sep 9, 2023, 6:25 PM IST

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಸಿಎಂ ಹೆಸರು ಹೇಳದೇ ಕಾಂಗ್ರೆಸ್​ ನಾಯಕ ಬಿ.ಕೆ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

bk-hariprasad-slams-cm-siddaramaih
ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ : ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ವಾಗ್ದಾಳಿ
ಸಿಎಂ ವಿರುದ್ಧ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ

ಬೆಂಗಳೂರು : ಬೆಂಗಳೂರಿನ‌ ಅರಮನೆ‌ ಮೈದಾನದಲ್ಲಿ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಹೆಸರು ಹೇಳದೆಯೇ ಬಿ.ಕೆ.ಹರಿಪ್ರಸಾದ್ ಸಿಎಂ ಹೆಸರು ಪ್ರಸ್ತಾಪ ಮಾಡದೇ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಯಾರೋ ಕೆಲವರು ಪಂಚೆ ಹಾಕಿಕೊಂಡು ಹೂಬ್ಲೆಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ ಎಂದರು.

ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಬಂಗಾರಪ್ಪ ಅವರು ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸಿ ಎಲ್ಲಾ ಜಾತಿ, ಬಡವರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದರು. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಕೂಡ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ ಅವರು ಸಮಾಜವಾದದಲ್ಲಿ ಇದ್ದಂತವರು. ಸಮಾಜವಾದದ ಬಗ್ಗೆ ಹೋರಾಟ ಮಾಡಿದವರು. ಕಾಗೋಡು ತಿಮ್ಮಪ್ಪನವರು ಸಮಾಜವಾದಿ ಅಂದುಕೊಂಡು ಮಜಾವಾದಿಯಾಗಿರಲಿಲ್ಲ. ಸಮಾಜವಾದ ಅಂದರೆ ಎಲ್ಲರಿಗೂ ಸಮಾನವಾದ ಹಕ್ಕು ನೀಡುವುದಾಗಿದೆ ಎಂದು ತಿಳಿಸಿದರು.

ದಲಿತರನ್ನು ಡಿಸಿಎಂ ಮಾಡಬಹುದಿತ್ತು: ಚುನಾವಣೆ ವೇಳೆ ಎಲ್ಲರೂ ಹಿಂದುಳಿದವರ ಬಗ್ಗೆ ಮಾತನಾಡ್ತಾರೆ. ಅಧಿಕಾರ ಸಿಕ್ಕ ಮೇಲೆ ಸಮುದಾಯವನ್ನು ಮರೆಯುತ್ತಾರೆ. ಅಹಂಕಾರ ಮಾಡಿದ್ರೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂಬುದು ಹಿಂದಿನ ಚುನಾವಣೆಯಲ್ಲಿ ಗೊತ್ತಾಗಿದೆ ಎಂದು ಕಿಡಿ ಕಾರಿದರು. ದೀರ್ಘಾವಧಿಗೆ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರಿಗೆ ಸಿಎಂ ಆಗುವ ಎಲ್ಲ ಅರ್ಹತೆ ಇತ್ತು. ಆದರೆ ಅವರನ್ನು ಸಿಎಂ ಇರಲಿ, ಡಿಸಿಎಂ ಸ್ಥಾನದಿಂದ ಡಿಪ್ರಮೋಟ್ ಮಾಡಲಾಯ್ತು. ಅರ್ಹತೆ ಇರುವ ಪರಮೇಶ್ವರ್ ಅವರನ್ನೇ ಸಿಎಂ ಮಾಡಲು ಸಾಧ್ಯವಾಗಿಲ್ಲ ಎಂದು ಹರಿಹಾಯ್ದರು.

ಎಲ್ಲಾ ನನ್ನ ಜಾತಿಯವರೇ ಇರಬೇಕು : ಉಪಮುಖ್ಯಮಂತ್ರಿ ಮಾಡುವಾಗ ದಲಿತರನ್ನು ಮಾಡಬಹುದಿತ್ತು. ಆದಿವಾಸಿ ಸಮುದಾಯದ ಸತೀಶ್ ಜಾರಕಿಹೊಳಿಯನ್ನು ಮಾಡಬಹುದಿತ್ತು. ಅಲ್ಪಸಂಖ್ಯಾತರನ್ನು ಮಾಡಬಹುದಿತ್ತು. ಅದು ಯಾವುದು ಯೋಚನೆ ಬರಲಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ನಾನು ಅಧಿಕಾರಕ್ಕೆ ಬಂದರೆ ಎಲ್ಲರೂ ನನ್ನ ಜಾತಿಯವರೇ ಇರಬೇಕು. ಬೇರೆ ಯಾರೂ ಇರುವ ಹಾಗಿಲ್ಲ. ಈ ರೀತಿ ಯಾವ ಸಂವಿಧಾನದಲ್ಲಿದೆ ?. ನಿಮ್ಮ ಜಾತಿಯವರಿದ್ದರೆ ನೀವು ಒಂದು ರಾಜಕೀಯ ಪಕ್ಷ ಮಾಡಬಹುದು. ಆದರೆ ಒಂದು ಸರ್ಕಾರ ಮಾಡುವಾಗ ಎಲ್ಲಾ ಧರ್ಮ, ಜಾತಿ, ಭಾಷೆ ಪ್ರಾತಿನಿಧ್ಯ ಇದ್ದರೆ ಮಾತ್ರ ಸರ್ಕಾರ ಮಾಡಬಹುದು ಎಂದು ತೀವ್ರ ಅಸಮಾಧಾನ ಹೊರಹಾಕಿದರು.

ಇಷ್ಟ ಬಂದಂತೆ ಮಾಡಿದರೆ ಜನ ತೀರ್ಮಾನ ಮಾಡುತ್ತಾರೆ : ನಾನೊಬ್ಬ ಸರ್ಕಾರ ಮಾಡಿದ್ದೇನೆ. ನಾನು ಇಷ್ಟ ಬಂದ ಹಾಗೆ ಮಾಡುತ್ತೇನೆ ಎಂಬ ಗುಂಗಿನಲ್ಲಿ ಯಾರಾದರೂ ಇದ್ದರೆ ಜನಗಳು ತೀರ್ಮಾನ ಮಾಡುತ್ತಾರೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

ನಮ್ಮ ಸಮುದಾಯದವರು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ. ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿದ್ದಾರೆ. ನಮ್ಮ ಮೂಲ ಕಸಬು ಹೆಂಡ ಮಾರುವುದು ಎಂದು ಅಂದ್ಕೊಂಡಿದ್ದಾರೆ. ಆದರೆ ನಮ್ಮ ಕಸುಬು ಅದಲ್ಲ, ನಮ್ಮವರು ಯೋಧರಾಗಿದ್ದವರು. ನಾವು ಹಿಂದುಳಿದ ವರ್ಗ ಅಂತ ಒಪ್ಪುವುದಕ್ಕೆ ತಯಾರಿಲ್ಲ. ಇವತ್ತು 50% ತಳಸಮುದಾಯದ ಜನ 64 % ಜಿಎಸ್​ಟಿ ಕಟ್ಟುತ್ತಿದ್ದಾರೆ. ಮುಂದುವರೆದ ವರ್ಗ ಕಟ್ಟುತ್ತಿರೋದು ಕೇವಲ 10% ಮಾತ್ರ. ಇಂದು ನಾವು ಮುಂದುವರೆದ ಸಮುದಾಯಕ್ಕಿಂತ ಯಾವುದರಲ್ಲೂ ಕಮ್ಮಿ ಇಲ್ಲ ಎಂದರು.

ಈ ವೇದಿಕೆ ಸ್ವತಂತ್ರ ಭಾರತದ ಅತಂತ್ರ ಪ್ರಜೆಗಳ ವೇದಿಕೆ. ನಾವು ಚುನಾವಣೆ ಸಂದರ್ಭದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಎನ್ನುತ್ತೇವೆ. ಅಧಿಕಾರಕ್ಕೆ ಬಂದಾಗ ಅವರನ್ನು ಮರೆಯುತ್ತೇವೆ. ರಾಷ್ಟ್ರಪತಿ ದ್ರೌಪತಿ ಮುರ್ಮುಗೆ ಏನು ಶಕ್ತಿಯಿದ್ಯೋ ಅದೇ ಶಕ್ತಿ ನಿಮಗಿದೆ. ಯಾವುದಾದ್ರು ಪಕ್ಷದವರು ದುರಂಕಾರದಿಂದ ನಡೆದ್ರೆ ಮೊನ್ನೆ ನಡೆದ ಚುನಾವಣೆ ಸಾಕ್ಷಿ. ನಮ್ಮದು ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಹಾಳು ಮಾಡಲು ಬಿಡಬಾರದು ಎಂದು ಕರೆ ನೀಡಿದರು.

ನೀವು ದೇವರಾಜು ಅರಸು ಆಗುವುದಿಲ್ಲ: ದೇವರಾಜ ಅರಸು ಕಾರಿನಲ್ಲಿ ಕುಳಿತರೆ ನೀವು ದೇವರಾಜ ಅರಸು ಆಗೋದಿಲ್ಲ. ದೇವರಾಜ ಅರಸು ಚಿಂತನೆ ಇರಬೇಕು. ಸ್ಕ್ರೀನಿಂಗ್ ಕಮಿಟಿ ಮೀಟಿಂಗ್​ನಲ್ಲಿ ನಾನು ಅರಸು ಮೊಮ್ಮಗ ಸೂರಜ್ ಹೆಗ್ಡೆಗೆ ಎಂಎಲ್ಸಿ ಮಾಡಿ ಅಂದೆ. ಆದರೆ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಸೋತಿರಬಹುದು ಆದರೆ ಸತ್ತಿಲ್ಲ: ಬಿ.ಕೆ.ಹರಿಪ್ರಸಾದ್ ಚುನಾವಣೆಗೆ ಸ್ಪರ್ಧೆ ಮಾಡಿಲ್ಲ ಎನ್ನುತ್ತಾರೆ. ನಾನು ನಾಲ್ಕು ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. ಸೋತಿರಬಹುದು, ಆದ್ರೆ ಸತ್ತಿಲ್ಲ. ಸಾಯುವುದೂ ಇಲ್ಲ. ವಿದ್ಯಾರ್ಥಿ ನಾಯಕರಾಗಿ ದುಡಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಇಂದಿರಾಗಾಂಧಿ, ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ ಅಡಿ ಕೆಲಸ ಮಾಡಿದ್ದೇನೆ. ಮನಮೋಹನ್ ಸಿಂಗ್, ನರಸಿಂಹರಾಯರ ಕೆಳಗೆ ಕೆಲಸ ಮಾಡಿದವನು ನಾನು ಎಂದು ತಿಳಿಸಿದರು.

ಇದನ್ನೂ ಓದಿ : ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡರೇ ತಪ್ಪೇನಿದೆ: ಸಂಸದ ರಮೇಶ ಜಿಗಜಿಣಗಿ

ಸಿಎಂ ವಿರುದ್ಧ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ

ಬೆಂಗಳೂರು : ಬೆಂಗಳೂರಿನ‌ ಅರಮನೆ‌ ಮೈದಾನದಲ್ಲಿ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಹೆಸರು ಹೇಳದೆಯೇ ಬಿ.ಕೆ.ಹರಿಪ್ರಸಾದ್ ಸಿಎಂ ಹೆಸರು ಪ್ರಸ್ತಾಪ ಮಾಡದೇ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಯಾರೋ ಕೆಲವರು ಪಂಚೆ ಹಾಕಿಕೊಂಡು ಹೂಬ್ಲೆಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ ಎಂದರು.

ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಬಂಗಾರಪ್ಪ ಅವರು ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸಿ ಎಲ್ಲಾ ಜಾತಿ, ಬಡವರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದರು. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಕೂಡ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ ಅವರು ಸಮಾಜವಾದದಲ್ಲಿ ಇದ್ದಂತವರು. ಸಮಾಜವಾದದ ಬಗ್ಗೆ ಹೋರಾಟ ಮಾಡಿದವರು. ಕಾಗೋಡು ತಿಮ್ಮಪ್ಪನವರು ಸಮಾಜವಾದಿ ಅಂದುಕೊಂಡು ಮಜಾವಾದಿಯಾಗಿರಲಿಲ್ಲ. ಸಮಾಜವಾದ ಅಂದರೆ ಎಲ್ಲರಿಗೂ ಸಮಾನವಾದ ಹಕ್ಕು ನೀಡುವುದಾಗಿದೆ ಎಂದು ತಿಳಿಸಿದರು.

ದಲಿತರನ್ನು ಡಿಸಿಎಂ ಮಾಡಬಹುದಿತ್ತು: ಚುನಾವಣೆ ವೇಳೆ ಎಲ್ಲರೂ ಹಿಂದುಳಿದವರ ಬಗ್ಗೆ ಮಾತನಾಡ್ತಾರೆ. ಅಧಿಕಾರ ಸಿಕ್ಕ ಮೇಲೆ ಸಮುದಾಯವನ್ನು ಮರೆಯುತ್ತಾರೆ. ಅಹಂಕಾರ ಮಾಡಿದ್ರೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂಬುದು ಹಿಂದಿನ ಚುನಾವಣೆಯಲ್ಲಿ ಗೊತ್ತಾಗಿದೆ ಎಂದು ಕಿಡಿ ಕಾರಿದರು. ದೀರ್ಘಾವಧಿಗೆ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರಿಗೆ ಸಿಎಂ ಆಗುವ ಎಲ್ಲ ಅರ್ಹತೆ ಇತ್ತು. ಆದರೆ ಅವರನ್ನು ಸಿಎಂ ಇರಲಿ, ಡಿಸಿಎಂ ಸ್ಥಾನದಿಂದ ಡಿಪ್ರಮೋಟ್ ಮಾಡಲಾಯ್ತು. ಅರ್ಹತೆ ಇರುವ ಪರಮೇಶ್ವರ್ ಅವರನ್ನೇ ಸಿಎಂ ಮಾಡಲು ಸಾಧ್ಯವಾಗಿಲ್ಲ ಎಂದು ಹರಿಹಾಯ್ದರು.

ಎಲ್ಲಾ ನನ್ನ ಜಾತಿಯವರೇ ಇರಬೇಕು : ಉಪಮುಖ್ಯಮಂತ್ರಿ ಮಾಡುವಾಗ ದಲಿತರನ್ನು ಮಾಡಬಹುದಿತ್ತು. ಆದಿವಾಸಿ ಸಮುದಾಯದ ಸತೀಶ್ ಜಾರಕಿಹೊಳಿಯನ್ನು ಮಾಡಬಹುದಿತ್ತು. ಅಲ್ಪಸಂಖ್ಯಾತರನ್ನು ಮಾಡಬಹುದಿತ್ತು. ಅದು ಯಾವುದು ಯೋಚನೆ ಬರಲಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ನಾನು ಅಧಿಕಾರಕ್ಕೆ ಬಂದರೆ ಎಲ್ಲರೂ ನನ್ನ ಜಾತಿಯವರೇ ಇರಬೇಕು. ಬೇರೆ ಯಾರೂ ಇರುವ ಹಾಗಿಲ್ಲ. ಈ ರೀತಿ ಯಾವ ಸಂವಿಧಾನದಲ್ಲಿದೆ ?. ನಿಮ್ಮ ಜಾತಿಯವರಿದ್ದರೆ ನೀವು ಒಂದು ರಾಜಕೀಯ ಪಕ್ಷ ಮಾಡಬಹುದು. ಆದರೆ ಒಂದು ಸರ್ಕಾರ ಮಾಡುವಾಗ ಎಲ್ಲಾ ಧರ್ಮ, ಜಾತಿ, ಭಾಷೆ ಪ್ರಾತಿನಿಧ್ಯ ಇದ್ದರೆ ಮಾತ್ರ ಸರ್ಕಾರ ಮಾಡಬಹುದು ಎಂದು ತೀವ್ರ ಅಸಮಾಧಾನ ಹೊರಹಾಕಿದರು.

ಇಷ್ಟ ಬಂದಂತೆ ಮಾಡಿದರೆ ಜನ ತೀರ್ಮಾನ ಮಾಡುತ್ತಾರೆ : ನಾನೊಬ್ಬ ಸರ್ಕಾರ ಮಾಡಿದ್ದೇನೆ. ನಾನು ಇಷ್ಟ ಬಂದ ಹಾಗೆ ಮಾಡುತ್ತೇನೆ ಎಂಬ ಗುಂಗಿನಲ್ಲಿ ಯಾರಾದರೂ ಇದ್ದರೆ ಜನಗಳು ತೀರ್ಮಾನ ಮಾಡುತ್ತಾರೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

ನಮ್ಮ ಸಮುದಾಯದವರು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ. ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿದ್ದಾರೆ. ನಮ್ಮ ಮೂಲ ಕಸಬು ಹೆಂಡ ಮಾರುವುದು ಎಂದು ಅಂದ್ಕೊಂಡಿದ್ದಾರೆ. ಆದರೆ ನಮ್ಮ ಕಸುಬು ಅದಲ್ಲ, ನಮ್ಮವರು ಯೋಧರಾಗಿದ್ದವರು. ನಾವು ಹಿಂದುಳಿದ ವರ್ಗ ಅಂತ ಒಪ್ಪುವುದಕ್ಕೆ ತಯಾರಿಲ್ಲ. ಇವತ್ತು 50% ತಳಸಮುದಾಯದ ಜನ 64 % ಜಿಎಸ್​ಟಿ ಕಟ್ಟುತ್ತಿದ್ದಾರೆ. ಮುಂದುವರೆದ ವರ್ಗ ಕಟ್ಟುತ್ತಿರೋದು ಕೇವಲ 10% ಮಾತ್ರ. ಇಂದು ನಾವು ಮುಂದುವರೆದ ಸಮುದಾಯಕ್ಕಿಂತ ಯಾವುದರಲ್ಲೂ ಕಮ್ಮಿ ಇಲ್ಲ ಎಂದರು.

ಈ ವೇದಿಕೆ ಸ್ವತಂತ್ರ ಭಾರತದ ಅತಂತ್ರ ಪ್ರಜೆಗಳ ವೇದಿಕೆ. ನಾವು ಚುನಾವಣೆ ಸಂದರ್ಭದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಎನ್ನುತ್ತೇವೆ. ಅಧಿಕಾರಕ್ಕೆ ಬಂದಾಗ ಅವರನ್ನು ಮರೆಯುತ್ತೇವೆ. ರಾಷ್ಟ್ರಪತಿ ದ್ರೌಪತಿ ಮುರ್ಮುಗೆ ಏನು ಶಕ್ತಿಯಿದ್ಯೋ ಅದೇ ಶಕ್ತಿ ನಿಮಗಿದೆ. ಯಾವುದಾದ್ರು ಪಕ್ಷದವರು ದುರಂಕಾರದಿಂದ ನಡೆದ್ರೆ ಮೊನ್ನೆ ನಡೆದ ಚುನಾವಣೆ ಸಾಕ್ಷಿ. ನಮ್ಮದು ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಹಾಳು ಮಾಡಲು ಬಿಡಬಾರದು ಎಂದು ಕರೆ ನೀಡಿದರು.

ನೀವು ದೇವರಾಜು ಅರಸು ಆಗುವುದಿಲ್ಲ: ದೇವರಾಜ ಅರಸು ಕಾರಿನಲ್ಲಿ ಕುಳಿತರೆ ನೀವು ದೇವರಾಜ ಅರಸು ಆಗೋದಿಲ್ಲ. ದೇವರಾಜ ಅರಸು ಚಿಂತನೆ ಇರಬೇಕು. ಸ್ಕ್ರೀನಿಂಗ್ ಕಮಿಟಿ ಮೀಟಿಂಗ್​ನಲ್ಲಿ ನಾನು ಅರಸು ಮೊಮ್ಮಗ ಸೂರಜ್ ಹೆಗ್ಡೆಗೆ ಎಂಎಲ್ಸಿ ಮಾಡಿ ಅಂದೆ. ಆದರೆ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಸೋತಿರಬಹುದು ಆದರೆ ಸತ್ತಿಲ್ಲ: ಬಿ.ಕೆ.ಹರಿಪ್ರಸಾದ್ ಚುನಾವಣೆಗೆ ಸ್ಪರ್ಧೆ ಮಾಡಿಲ್ಲ ಎನ್ನುತ್ತಾರೆ. ನಾನು ನಾಲ್ಕು ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. ಸೋತಿರಬಹುದು, ಆದ್ರೆ ಸತ್ತಿಲ್ಲ. ಸಾಯುವುದೂ ಇಲ್ಲ. ವಿದ್ಯಾರ್ಥಿ ನಾಯಕರಾಗಿ ದುಡಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಇಂದಿರಾಗಾಂಧಿ, ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ ಅಡಿ ಕೆಲಸ ಮಾಡಿದ್ದೇನೆ. ಮನಮೋಹನ್ ಸಿಂಗ್, ನರಸಿಂಹರಾಯರ ಕೆಳಗೆ ಕೆಲಸ ಮಾಡಿದವನು ನಾನು ಎಂದು ತಿಳಿಸಿದರು.

ಇದನ್ನೂ ಓದಿ : ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡರೇ ತಪ್ಪೇನಿದೆ: ಸಂಸದ ರಮೇಶ ಜಿಗಜಿಣಗಿ

Last Updated : Sep 9, 2023, 6:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.