ETV Bharat / state

ಖುಷಿ ಸುದ್ದಿ; ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಚಾರ ನಾಳೆಯಿಂದ ಆರಂಭ - BMTC

ನಾಳೆಯಿಂದ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಬಸ್​ಗಳು ಸಂಚಾರಕ್ಕೆ ಸಿದ್ದವಾಗಿದ್ದು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಿ ಸೇವೆ ನೀಡಲು ಸಿದ್ಧವಾಗುತ್ತಿವೆ. ​

bmtc-and-ksrtc-start-tomorrow
ಬಿಎಂಟಿಸಿ, ಕೆಎಸ್​ಆರ್​ಟಿಸಿ ಸಂಚಾರಕ್ಕೆ ಸಿದ್ದ
author img

By

Published : Jun 20, 2021, 3:51 PM IST

Updated : Jun 20, 2021, 4:15 PM IST

ಬೆಂಗಳೂರು: ಸುಮಾರು‌ 2 ತಿಂಗಳ‌ ಲಾಕ್‌ಡೌನ್ ನಂತರ ನಾಳೆಯಿಂದ ರಾಜ್ಯಾದ್ಯಂತ ಅನ್‌ಲಾಕ್‌ ಆರಂಭವಾಗಲಿದೆ. ಈ ಮಧ್ಯೆ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ ಸೇವೆ ನಾಳೆಯಿಂದ ಪುನಾರಂಭಿಸಲು ನಿಗಮಗಳು ಸಿದ್ಧತೆ ನಡೆಸುತ್ತಿವೆ.

ಪ್ರಯಾಣಿಕರ ಬೇಡಿಕೆ ಆಧರಿಸಿ ಬಸ್​ ಸಂಚಾರ ಇರಲಿದ್ದು, ಶೇ 50 ರಷ್ಟು ಬಸ್ ಓಡಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ಒಟ್ಟು 2 ಸಾವಿರ ಬಿಎಂಟಿಸಿ ಬಸ್ಸ್ಉಗಳು ರಸ್ತೆಗಿಳಿಯಲಿವೆ. ಬೆಂಗಳೂರು ನಗರ ಹಾಗೂ ಹೊರ ಭಾಗದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಂಜೆ 7 ಗಂಟೆಯ ನಂತರ ಬಿಎಂಟಿಸಿ ಓಡಾಟ ಇರಲ್ಲ. ಹೀಗಾಗಿ ಸಂಜೆ 7 ಗಂಟೆಗೆ ನಿಲ್ದಾಣದಿಂದ ಬಸ್‌ಗಳು ನಿರ್ಗಮಿಸಲಿವೆ. ಇನ್ನು ಬೆಳ್ಳಂಬೆಳಗ್ಗೆ ಹಾಗೂ ತಡ ರಾತ್ರಿಯಲ್ಲಿ ಬಸ್ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಚಾಲನ ಸಿಬ್ಬಂದಿ ಅವಧಿಯನ್ನ 8 ಗಂಟೆ ಮೀರದಂತೆ ಕ್ರಮಕೈಗೊಳ್ಳಲಾಗಿದೆ. ಪ್ರತಿ ಡಿಪೋಗಳಲ್ಲಿ 5 ಹೆಚ್ಚುವರಿ ಬಸ್​​ಗಳನ್ನ ಕಾಯ್ದಿರಿಸುವುದು. ಬಸ್​ಗಳಲ್ಲಿ ಮಾರ್ಗಸೂಚಿ ಫಲಕ ಕಡ್ಡಾಯವಾಗಿ ಪ್ರದರ್ಶಿಸುವುದು. ಬಸ್ ನಲ್ಲಿ ಶೇ 50 ಜನರಿಗೆ ಮಾತ್ರ ಅವಕಾಶ ಎಂಬ ನಿಯಮಗಳನ್ನ ಪಾಲಿಸಬೇಕಿದೆ.

ಇನ್ನು ಮತ್ತೊಂದೆಡೆ ಕೆಎಸ್ಆರ್​ಟಿಸಿ ಸಂಚಾರಕ್ಕೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಕೆಎಸ್‌ಆರ್‌ಟಿಸಿಯಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ. ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ. ಮೊದಲ ಹಂತದಲ್ಲಿ ಮೂರು ಸಾವಿರ ಬಸ್​ಗಳು​ ಕಾರ್ಯಾಚರಣೆ ಮಾಡಲಿವೆ. ಸದ್ಯ ನಾಳೆಯಿಂದ ಅಂತಾರಾ​ಜ್ಯ ಸಂಚಾರವಿಲ್ಲ. ಮುಂದಿನ ದಿನಗಳಲ್ಲಿ ಆಯಾ ರಾಜ್ಯಗಳ ಮಾರ್ಗಸೂಚಿಗಳ ಅನ್ವಯ ಈ ಬಗ್ಗೆ ನಿರ್ಧರಿಸಲಾಗುತ್ತದೆ. ಪ್ರಯಾಣಿಕರು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಓದಿ:ಬಿಜೆಪಿ ಮುಖ್ಯಮಂತ್ರಿಗಳ ಜೊತೆ ಜೆಪಿ ನಡ್ಡಾ ವಿಡಿಯೋ ಸಂವಾದ: ಬಿಎಸ್​ವೈ ಭಾಗಿ

ಬೆಂಗಳೂರು: ಸುಮಾರು‌ 2 ತಿಂಗಳ‌ ಲಾಕ್‌ಡೌನ್ ನಂತರ ನಾಳೆಯಿಂದ ರಾಜ್ಯಾದ್ಯಂತ ಅನ್‌ಲಾಕ್‌ ಆರಂಭವಾಗಲಿದೆ. ಈ ಮಧ್ಯೆ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ ಸೇವೆ ನಾಳೆಯಿಂದ ಪುನಾರಂಭಿಸಲು ನಿಗಮಗಳು ಸಿದ್ಧತೆ ನಡೆಸುತ್ತಿವೆ.

ಪ್ರಯಾಣಿಕರ ಬೇಡಿಕೆ ಆಧರಿಸಿ ಬಸ್​ ಸಂಚಾರ ಇರಲಿದ್ದು, ಶೇ 50 ರಷ್ಟು ಬಸ್ ಓಡಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ಒಟ್ಟು 2 ಸಾವಿರ ಬಿಎಂಟಿಸಿ ಬಸ್ಸ್ಉಗಳು ರಸ್ತೆಗಿಳಿಯಲಿವೆ. ಬೆಂಗಳೂರು ನಗರ ಹಾಗೂ ಹೊರ ಭಾಗದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಂಜೆ 7 ಗಂಟೆಯ ನಂತರ ಬಿಎಂಟಿಸಿ ಓಡಾಟ ಇರಲ್ಲ. ಹೀಗಾಗಿ ಸಂಜೆ 7 ಗಂಟೆಗೆ ನಿಲ್ದಾಣದಿಂದ ಬಸ್‌ಗಳು ನಿರ್ಗಮಿಸಲಿವೆ. ಇನ್ನು ಬೆಳ್ಳಂಬೆಳಗ್ಗೆ ಹಾಗೂ ತಡ ರಾತ್ರಿಯಲ್ಲಿ ಬಸ್ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಚಾಲನ ಸಿಬ್ಬಂದಿ ಅವಧಿಯನ್ನ 8 ಗಂಟೆ ಮೀರದಂತೆ ಕ್ರಮಕೈಗೊಳ್ಳಲಾಗಿದೆ. ಪ್ರತಿ ಡಿಪೋಗಳಲ್ಲಿ 5 ಹೆಚ್ಚುವರಿ ಬಸ್​​ಗಳನ್ನ ಕಾಯ್ದಿರಿಸುವುದು. ಬಸ್​ಗಳಲ್ಲಿ ಮಾರ್ಗಸೂಚಿ ಫಲಕ ಕಡ್ಡಾಯವಾಗಿ ಪ್ರದರ್ಶಿಸುವುದು. ಬಸ್ ನಲ್ಲಿ ಶೇ 50 ಜನರಿಗೆ ಮಾತ್ರ ಅವಕಾಶ ಎಂಬ ನಿಯಮಗಳನ್ನ ಪಾಲಿಸಬೇಕಿದೆ.

ಇನ್ನು ಮತ್ತೊಂದೆಡೆ ಕೆಎಸ್ಆರ್​ಟಿಸಿ ಸಂಚಾರಕ್ಕೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಕೆಎಸ್‌ಆರ್‌ಟಿಸಿಯಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ. ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ. ಮೊದಲ ಹಂತದಲ್ಲಿ ಮೂರು ಸಾವಿರ ಬಸ್​ಗಳು​ ಕಾರ್ಯಾಚರಣೆ ಮಾಡಲಿವೆ. ಸದ್ಯ ನಾಳೆಯಿಂದ ಅಂತಾರಾ​ಜ್ಯ ಸಂಚಾರವಿಲ್ಲ. ಮುಂದಿನ ದಿನಗಳಲ್ಲಿ ಆಯಾ ರಾಜ್ಯಗಳ ಮಾರ್ಗಸೂಚಿಗಳ ಅನ್ವಯ ಈ ಬಗ್ಗೆ ನಿರ್ಧರಿಸಲಾಗುತ್ತದೆ. ಪ್ರಯಾಣಿಕರು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಓದಿ:ಬಿಜೆಪಿ ಮುಖ್ಯಮಂತ್ರಿಗಳ ಜೊತೆ ಜೆಪಿ ನಡ್ಡಾ ವಿಡಿಯೋ ಸಂವಾದ: ಬಿಎಸ್​ವೈ ಭಾಗಿ

Last Updated : Jun 20, 2021, 4:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.