ಆನೇಕಲ್: ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಬಿಎಂಟಿಸಿ ಬಸ್ ಗುದ್ದಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಜಂಗಲ್ ಪಾಳ್ಯ ಮುಖ್ಯ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಚಾಲಕನ ಅಜಾಗರೂಕತೆಯಿಂದ ಸಿಮೆಂಟ್ ಬ್ಲಾಕ್ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಪಕ್ಕದಲ್ಲೇ ನಿಂತಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಪರಿಣಾಮ ವಿದ್ಯುತ್ ಕಂಬ ಜಖಂಗೊಂಡಿದ್ದು, ಟ್ರ್ಯಾಕ್ಟರ್ ಚಾಲಕನ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ಸ್ಫೋಟ: ಚಾಲಕ ಸಜೀವ ದಹನ, ಹತ್ತಿರದ ಹೋಟೆಲ್ ಭಸ್ಮ
ಬನ್ನೇರುಘಟ್ಟದಿಂದ ಜಿಗಣಿ ಎಪಿಸಿ ಸರ್ಕಲ್ಗೆ ಸಂಚರಿಸುವ ಬಸ್ ಇದಾಗಿದ್ದು, ಬಿಎಂಟಿಸಿ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಇನ್ನೂ ಅಪಘಾತ ಸಂಭವಿಸುತ್ತಿದ್ದಂತೆ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಬೈಕ್ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ