ಬೆಂಗಳೂರು: ಸಾರಿಗೆ ಇಲಾಖೆಯು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ವೀಕೆಂಡ್ ಕರ್ಫ್ಯೂನಲ್ಲೂ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳು ಓಡಾಟ ನಡೆಸಲಿವೆ. ಹೀಗಾಗಿ ನಾಳೆಯೂ ಸಾರಿಗೆ ಬಸ್ಗಳ ಸಂಚಾರ ಇರಲಿದೆ.
ಕೆಎಸ್ಆರ್ಟಿಸಿ ಈಗಾಗಲೇ ದಿನದ 24 ಗಂಟೆಯೂ ಬಸ್ ಕಾರ್ಯಾಚರಣೆ ನಡೆಸುತ್ತಿದೆ. ಆದರೆ ಬಿಎಂಟಿಸಿ ಬೆಳಗ್ಗೆ 6 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಬಸ್ ಕಾರ್ಯಾಚರಣೆ ಮಾಡುತ್ತಿತ್ತು. ಅಲ್ಲದೆ ವಾರಾಂತ್ಯದಲ್ಲಿ ಬಸ್ ಸಂಚಾರ ಇರುವುದಿಲ್ಲ ಎಂದು ಹೇಳಿತ್ತು. ಆದರೆ ಪ್ರಯಾಣಿಕರ ಅನುಕೂಲಕ್ಕಾಗಿ ನಾಳೆಯೂ ಬಿಎಂಟಿಸಿ ಬಸ್ ಕಾರ್ಯಚರಣೆಯಲ್ಲಿರಲಿವೆ.
ಈ ಬಗ್ಗೆ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್ ಮಾತನಾಡಿದ್ದು, ಈಗಾಗಲೇ ವಾರದ 5 ದಿನಗಳು 4 ಸಾವಿರ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ.. ಆದ್ರಲ್ಲಿ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ಬಸ್ ಓಡಾಟವಿದೆ. ವೀಕೆಂಡ್ ಕರ್ಫ್ಯೂನಲ್ಲಿ ಅಗತ್ಯ ವಸ್ತುಗಳ ಸೇವೆ ಹೊರತು ಪಡಿಸಿ ಎಲ್ಲವೂ ಕ್ಲೋಸ್ ಆಗುತ್ತದೆ. ಆದ್ದರಿಂದ ನಾಳೆ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ ಕಡಿಮೆ ಇರಲಿದೆ. ನಾಳೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ 1200 ಬಸ್ಸುಗಳು ಓಡಾಟ ನಡೆಸಲಿವೆ. ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಎಂಟಿಸಿಗೆ ನಿನ್ನೆ 1 ಕೋಟಿ 7 ಲಕ್ಷ ಆದಾಯ ಬಂದಿದೆ. 9 ಲಕ್ಷ 31 ಸಾವಿರ ಪ್ರಯಾಣಿಕರು ಸಂಚಾರ ಮಾಡಿದ್ದಾರೆ ಎಂದು ಹೇಳಿದರು.