ETV Bharat / state

ಇದೇನಾ ಸರ್ಕಾರದ ಕಲ್ಯಾಣ ಕರ್ನಾಟಕ ಕಾಳಜಿ?: ವಿಶೇಷ ಅಭಿವೃದ್ಧಿ ಯೋಜನೆ ಪ್ರಗತಿ ಈಗಲೂ ಶೋಚನೀಯ!

author img

By

Published : Dec 6, 2022, 1:09 PM IST

ಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿ ಆದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಲೆಕ್ಕಾಚಾರ ಕಳಪೆಯಾಗಿದೆ. ಹಣ ಬಿಡುಗಡೆ ಮತ್ತು ಬಳಕೆಯಲ್ಲಿ ಬೊಮ್ಮಾಯಿ ಸರ್ಕಾರ ಮೂರನೇ ತ್ರೈಮಾಸಿಕ ಅನುದಾನ ಬಿಡುಗಡೆಯಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ.

Bommai government failed to release special development plan grant
ಇದೇನಾ ಬೊಮ್ಮಾಯಿ ಸರ್ಕಾರದ ಕಲ್ಯಾಣ ಕರ್ನಾಟಕ ಕಾಳಜಿ

ಬೆಂಗಳೂರು: ಬೊಮ್ಮಾಯಿ ಸರ್ಕಾರದ ಕೊನೆಯ ಬೆಳಗಾವಿ ಅಧಿವೇಶನಕ್ಕೆ ವೇದಿಕೆ ಸಜ್ಜಾಗಿದೆ.‌ ಉತ್ತರ ಕರ್ನಾಟಕ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ವೇದಿಕೆ ಬೆಳಗಾವಿ ಅಧಿವೇಶನ. ಆದರೆ ಇತ್ತ ಉತ್ತರ ಕರ್ನಾಡಕ ಭಾಗದ ಕಲ್ಯಾಣಕ್ಕಾಗಿನ ವಿಶೇಷ ಅಭಿವೃದ್ಧಿ ಯೋಜನೆಯ ಅನುದಾನ ಬಳಕೆಯಲ್ಲಿ ಬೊಮ್ಮಾಯಿ‌ ಸರ್ಕಾರ ವಿಫಲವಾಗಿದೆ ಎನ್ನಲಾಗಿದೆ.

ಬೊಮ್ಮಾಯಿ ಸರ್ಕಾರ ವಿಶೇಷ ಅಭಿವೃದ್ಧಿ ಯೋಜನೆಯ ಅನುಷ್ಠಾನದಲ್ಲಿ ಎಡವಿದೆ. ಆರ್ಥಿಕ ವರ್ಷದ ಮುಕ್ತಾಯದ ಹಂತಕ್ಕೆ ಬಂದರೂ ಬೊಮ್ಮಾಯಿ ಸರ್ಕಾರ ವಿಶೇಷ ಅಭಿವೃದ್ಧಿ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿನ‌ ಅನುದಾನ ಬಳಸುವಲ್ಲಿ ವಿಫಲವಾಗಿದೆ. 2022-23 ಸಾಲಿನ ಎಂಟು ತಿಂಗಳು ಕಳೆದರೂ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿಗೆ ಇನ್ನೂ ವೇಗ ಸಿಕ್ಕಿಲ್ಲ. ಆದ ಪ್ರಗತಿ ತೀರಾ ಶೋಚನೀಯವಾಗಿದೆ.

ಡಾ.ನಂಜುಂಡಪ್ಪ ವರದಿಯಂತೆ ಹಿಂದುಳಿದ ತಾಲೂಕುಗಳಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ 12 ವರ್ಷಗಳಿಂದ ಅನುದಾನ ನೀಡಲಾಗುತ್ತಿದೆ. ಸಿಎಂ ಉತ್ತರ ಕರ್ನಾಟಕ ಭಾಗದವರೇ ಆದರೂ ಆ ಪ್ರದೇಶದ ಅಭಿವೃದ್ಧಿಗೆ ನೀಡಬೇಕಾದ ಅನುದಾನ ಮಾತ್ರ ಸರಿಯಾಗಿ ಬಳಕೆ ಆಗಿಲ್ಲ. ಬೊಮ್ಮಾಯಿ ಸರ್ಕಾರ ವಿಶೇಷ ಅಭಿವೃದ್ಧಿ ಯೋಜನೆಯಡಿ ಅನುದಾ‌ನ ಬಳಕೆಯಲ್ಲಿ ಎಂಟು ತಿಂಗಳು ಕಳೆದರೂ ಅತ್ಯಂತ ಕಳಪೆ ಪ್ರದರ್ಶನ ಮುಂದುವರಿಸಿದೆ.

ವಿಷೇಶ ಅಭಿವೃದ್ಧಿ ಯೋಜನೆಯಡಿ ಪ್ರಗತಿ ಕೇವಲ ಶೇ 16ರಷ್ಟು ಮಾತ್ರ: 2022-23 ಸಾಲಿನಲ್ಲಿ ವಿಶೇಷ ಅಭಿವೃದ್ಧಿ ಯೋಜನೆಗೆ (SDP) ಬೊಮ್ಮಾಯಿ ಸರ್ಕಾರ ಸದ್ಯ 3,426.37 ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ. ಆರ್ಥಿಕ ವರ್ಷದ ಎಂಟು ತಿಂಗಳು ಪೂರ್ಣಗೊಂಡಿದೆ. ಆದರೂ ವಿಶೇಷ ಅಭಿವೃದ್ಧಿ ಯೋಜನೆಯ ಅನುಷ್ಠಾನದ ಪ್ರಗತಿಗೆ ಇನ್ನೂ ವೇಗ ಕೊಡುವಲ್ಲಿ ಬೊಮ್ಮಾಯಿ‌ ಸರ್ಕಾರ ವಿಫಲವಾಗಿದೆ.

ವಿಶೇಷ ಅಭಿವೃದ್ಧಿ ಯೋಜನೆಯಡಿ ಮೊದಲ ತ್ರೈಮಾಸಿಕದಲ್ಲಿ ಕಳಪೆ ಪ್ರದರ್ಶನ ತೋರಿದ್ದ ಬೊಮ್ಮಾಯಿ ಸರ್ಕಾರ ಎರಡನೇ ತ್ರೈ ಮಾಸಿಕದಲ್ಲೂ ಅತ್ಯಂತ ಕಳಪೆ ಪ್ರಗತಿ ಮುಂದುವರಿಸಿತ್ತು. ಇನ್ನೇನು ಮೂರನೇ ತ್ರೈಮಾಸಿಕದಲ್ಲಾದರೂ ಪ್ರಗತಿಗೆ ಚುರುಕು ಸಿಗುತ್ತೆ ಅಂದಕೊಂಡರೆ ಅದೂ ಹುಸಿಯಾಗಿದೆ. 13 ಇಲಾಖೆಗಳಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ 2022-23ಸಾಲಿನ ನವೆಂಬರ್ ವರೆಗೆ ಬಿಡುಗಡೆಯಾದ ಅನುದಾನ ಕೇವಲ 680.83 ಕೋಟಿ ರೂ. ಮಾತ್ರ. ಒಟ್ಟು 3,426.37 ಕೋಟಿ ಅನುದಾನ ಹಂಚಿಕೆಯಲ್ಲಿ ನವೆಂಬರ್ ವರೆಗೆ ಕೇವಲ 680.83 ಕೋಟಿ ರೂ. ಮಾತ್ರ ಬಿಡುಗಡೆಯಾಗಿದೆ.

ದುರಂತ ಅಂದರೆ ಅಲ್ಪ ಬಿಡುಗಡೆ ಮೊತ್ತದಲ್ಲಿ ಅತ್ಯಲ್ಪ ಖರ್ಚು ಮಾಡಲಾಗಿದೆ. ಬಿಡುಗಡೆಯಾದ ಅನುದಾನದ ಪೈಕಿ ನವೆಂಬರ್ ವರೆಗೆ ಖರ್ಚು ಮಾಡಿದ್ದು, ಕೇವಲ 548.51 ಕೋಟಿ ರೂ. ಮಾತ್ರ. ಇನ್ನು ಒಟ್ಟು ಹಂಚಿಕೆ ಮುಂದೆ ಕಳೆದ ಎಂಟು ತಿಂಗಳಲ್ಲಿ ಬೊಮ್ಮಾಯಿ‌ ಸರ್ಕಾರ ವೆಚ್ಚ ಮಾಡಿದ್ದು ಕೇವಲ ಶೇ16.01 ಎಂದು ಸಾಂಖ್ಯಿಕ ಇಲಾಖೆ ಅಂಕಿ - ಅಂಶ ನೀಡಿದೆ.

ಒಟ್ಟು 6 ಇಲಾಖೆಗಳು ಅತ್ಯಂತ ಕಳಪೆ ಪ್ರಗತಿ ತೋರಿದೆ. ಈ ಪೈಕಿ 3 ಇಲಾಖೆಗಳು ವಿಶೇಷ ಅಭಿವೃದ್ಧಿ ಯೋಜನೆಯಡಿ ಯಾವುದೇ ವೆಚ್ಚ ಮಾಡಿಲ್ಲ. ಉಳಿದಂತೆ ಮೂರು ಇಲಾಖೆಗಳು ಒಂದಂಕಿಯಷ್ಟೇ ಖರ್ಚು ಮಾಡಿದೆ.

SDPಯಡಿ ಇಲಾಖಾವಾರು ಪ್ರಗತಿ:

ಇಲಾಖೆಗಳು ಒಟ್ಟು ಹಂಚಿಕೆ(ಕೋಟಿಗಳಲ್ಲಿ)ಬಿಡುಗಡೆವೆಚ್ಚಪ್ರಗತಿ(ಶೇಕಡಾವಾರು)
ಲೋಕೋಪಯೋಗಿ ಇಲಾಖೆ70000
ಕೌಶಲ್ಯಾಭಿವೃದ್ಧಿ ಇಲಾಖೆ307.500
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ752.500
ಶಿಕ್ಷಣ ಇಲಾಖೆ443.26140.838.21.18
ಮಹಿಳಾ ಮತ್ತ ಮಕ್ಕಳ ಕಲ್ಯಾಣ ಇಲಾಖೆ107.50152.552.37
ಉನ್ನತ ಶಿಕ್ಷಣ ಇಲಾಖೆ501.501.503
ಗ್ರಾಮೀಣಾಭಿವೃದ್ಧಿ ಇಲಾಖೆ527.6720.2928.535.41
ಯೋಜನಾ ಇಲಾಖೆ1,00025039.403.94
ವಸತಿ ಇಲಾಖೆ45037.50223.2049.60
ಕೃಷಿ ಇಲಾಖೆ4520.5818.0440.09
ಆರೋಗ್ಯ ಇಲಾಖೆ483.20102.17173.1735.84
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ6019.2118.2230.37
ಸಮಾಜ ಕಲ್ಯಾಣ ಇಲಾಖೆ8563.7535.8842.21

ಇದನ್ನೂ ಓದಿ: ಬಂಪರ್ ಆದಾಯ ಸಂಗ್ರಹ: ಬಜೆಟ್ ಗುರಿ ಮೀರಿ ತೆರಿಗೆ ಸಂಗ್ರಹಿಸುವತ್ತ ಬೊಮ್ಮಾಯಿ ಸರ್ಕಾರ!

ಬೆಂಗಳೂರು: ಬೊಮ್ಮಾಯಿ ಸರ್ಕಾರದ ಕೊನೆಯ ಬೆಳಗಾವಿ ಅಧಿವೇಶನಕ್ಕೆ ವೇದಿಕೆ ಸಜ್ಜಾಗಿದೆ.‌ ಉತ್ತರ ಕರ್ನಾಟಕ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ವೇದಿಕೆ ಬೆಳಗಾವಿ ಅಧಿವೇಶನ. ಆದರೆ ಇತ್ತ ಉತ್ತರ ಕರ್ನಾಡಕ ಭಾಗದ ಕಲ್ಯಾಣಕ್ಕಾಗಿನ ವಿಶೇಷ ಅಭಿವೃದ್ಧಿ ಯೋಜನೆಯ ಅನುದಾನ ಬಳಕೆಯಲ್ಲಿ ಬೊಮ್ಮಾಯಿ‌ ಸರ್ಕಾರ ವಿಫಲವಾಗಿದೆ ಎನ್ನಲಾಗಿದೆ.

ಬೊಮ್ಮಾಯಿ ಸರ್ಕಾರ ವಿಶೇಷ ಅಭಿವೃದ್ಧಿ ಯೋಜನೆಯ ಅನುಷ್ಠಾನದಲ್ಲಿ ಎಡವಿದೆ. ಆರ್ಥಿಕ ವರ್ಷದ ಮುಕ್ತಾಯದ ಹಂತಕ್ಕೆ ಬಂದರೂ ಬೊಮ್ಮಾಯಿ ಸರ್ಕಾರ ವಿಶೇಷ ಅಭಿವೃದ್ಧಿ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿನ‌ ಅನುದಾನ ಬಳಸುವಲ್ಲಿ ವಿಫಲವಾಗಿದೆ. 2022-23 ಸಾಲಿನ ಎಂಟು ತಿಂಗಳು ಕಳೆದರೂ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿಗೆ ಇನ್ನೂ ವೇಗ ಸಿಕ್ಕಿಲ್ಲ. ಆದ ಪ್ರಗತಿ ತೀರಾ ಶೋಚನೀಯವಾಗಿದೆ.

ಡಾ.ನಂಜುಂಡಪ್ಪ ವರದಿಯಂತೆ ಹಿಂದುಳಿದ ತಾಲೂಕುಗಳಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ 12 ವರ್ಷಗಳಿಂದ ಅನುದಾನ ನೀಡಲಾಗುತ್ತಿದೆ. ಸಿಎಂ ಉತ್ತರ ಕರ್ನಾಟಕ ಭಾಗದವರೇ ಆದರೂ ಆ ಪ್ರದೇಶದ ಅಭಿವೃದ್ಧಿಗೆ ನೀಡಬೇಕಾದ ಅನುದಾನ ಮಾತ್ರ ಸರಿಯಾಗಿ ಬಳಕೆ ಆಗಿಲ್ಲ. ಬೊಮ್ಮಾಯಿ ಸರ್ಕಾರ ವಿಶೇಷ ಅಭಿವೃದ್ಧಿ ಯೋಜನೆಯಡಿ ಅನುದಾ‌ನ ಬಳಕೆಯಲ್ಲಿ ಎಂಟು ತಿಂಗಳು ಕಳೆದರೂ ಅತ್ಯಂತ ಕಳಪೆ ಪ್ರದರ್ಶನ ಮುಂದುವರಿಸಿದೆ.

ವಿಷೇಶ ಅಭಿವೃದ್ಧಿ ಯೋಜನೆಯಡಿ ಪ್ರಗತಿ ಕೇವಲ ಶೇ 16ರಷ್ಟು ಮಾತ್ರ: 2022-23 ಸಾಲಿನಲ್ಲಿ ವಿಶೇಷ ಅಭಿವೃದ್ಧಿ ಯೋಜನೆಗೆ (SDP) ಬೊಮ್ಮಾಯಿ ಸರ್ಕಾರ ಸದ್ಯ 3,426.37 ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ. ಆರ್ಥಿಕ ವರ್ಷದ ಎಂಟು ತಿಂಗಳು ಪೂರ್ಣಗೊಂಡಿದೆ. ಆದರೂ ವಿಶೇಷ ಅಭಿವೃದ್ಧಿ ಯೋಜನೆಯ ಅನುಷ್ಠಾನದ ಪ್ರಗತಿಗೆ ಇನ್ನೂ ವೇಗ ಕೊಡುವಲ್ಲಿ ಬೊಮ್ಮಾಯಿ‌ ಸರ್ಕಾರ ವಿಫಲವಾಗಿದೆ.

ವಿಶೇಷ ಅಭಿವೃದ್ಧಿ ಯೋಜನೆಯಡಿ ಮೊದಲ ತ್ರೈಮಾಸಿಕದಲ್ಲಿ ಕಳಪೆ ಪ್ರದರ್ಶನ ತೋರಿದ್ದ ಬೊಮ್ಮಾಯಿ ಸರ್ಕಾರ ಎರಡನೇ ತ್ರೈ ಮಾಸಿಕದಲ್ಲೂ ಅತ್ಯಂತ ಕಳಪೆ ಪ್ರಗತಿ ಮುಂದುವರಿಸಿತ್ತು. ಇನ್ನೇನು ಮೂರನೇ ತ್ರೈಮಾಸಿಕದಲ್ಲಾದರೂ ಪ್ರಗತಿಗೆ ಚುರುಕು ಸಿಗುತ್ತೆ ಅಂದಕೊಂಡರೆ ಅದೂ ಹುಸಿಯಾಗಿದೆ. 13 ಇಲಾಖೆಗಳಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ 2022-23ಸಾಲಿನ ನವೆಂಬರ್ ವರೆಗೆ ಬಿಡುಗಡೆಯಾದ ಅನುದಾನ ಕೇವಲ 680.83 ಕೋಟಿ ರೂ. ಮಾತ್ರ. ಒಟ್ಟು 3,426.37 ಕೋಟಿ ಅನುದಾನ ಹಂಚಿಕೆಯಲ್ಲಿ ನವೆಂಬರ್ ವರೆಗೆ ಕೇವಲ 680.83 ಕೋಟಿ ರೂ. ಮಾತ್ರ ಬಿಡುಗಡೆಯಾಗಿದೆ.

ದುರಂತ ಅಂದರೆ ಅಲ್ಪ ಬಿಡುಗಡೆ ಮೊತ್ತದಲ್ಲಿ ಅತ್ಯಲ್ಪ ಖರ್ಚು ಮಾಡಲಾಗಿದೆ. ಬಿಡುಗಡೆಯಾದ ಅನುದಾನದ ಪೈಕಿ ನವೆಂಬರ್ ವರೆಗೆ ಖರ್ಚು ಮಾಡಿದ್ದು, ಕೇವಲ 548.51 ಕೋಟಿ ರೂ. ಮಾತ್ರ. ಇನ್ನು ಒಟ್ಟು ಹಂಚಿಕೆ ಮುಂದೆ ಕಳೆದ ಎಂಟು ತಿಂಗಳಲ್ಲಿ ಬೊಮ್ಮಾಯಿ‌ ಸರ್ಕಾರ ವೆಚ್ಚ ಮಾಡಿದ್ದು ಕೇವಲ ಶೇ16.01 ಎಂದು ಸಾಂಖ್ಯಿಕ ಇಲಾಖೆ ಅಂಕಿ - ಅಂಶ ನೀಡಿದೆ.

ಒಟ್ಟು 6 ಇಲಾಖೆಗಳು ಅತ್ಯಂತ ಕಳಪೆ ಪ್ರಗತಿ ತೋರಿದೆ. ಈ ಪೈಕಿ 3 ಇಲಾಖೆಗಳು ವಿಶೇಷ ಅಭಿವೃದ್ಧಿ ಯೋಜನೆಯಡಿ ಯಾವುದೇ ವೆಚ್ಚ ಮಾಡಿಲ್ಲ. ಉಳಿದಂತೆ ಮೂರು ಇಲಾಖೆಗಳು ಒಂದಂಕಿಯಷ್ಟೇ ಖರ್ಚು ಮಾಡಿದೆ.

SDPಯಡಿ ಇಲಾಖಾವಾರು ಪ್ರಗತಿ:

ಇಲಾಖೆಗಳು ಒಟ್ಟು ಹಂಚಿಕೆ(ಕೋಟಿಗಳಲ್ಲಿ)ಬಿಡುಗಡೆವೆಚ್ಚಪ್ರಗತಿ(ಶೇಕಡಾವಾರು)
ಲೋಕೋಪಯೋಗಿ ಇಲಾಖೆ70000
ಕೌಶಲ್ಯಾಭಿವೃದ್ಧಿ ಇಲಾಖೆ307.500
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ752.500
ಶಿಕ್ಷಣ ಇಲಾಖೆ443.26140.838.21.18
ಮಹಿಳಾ ಮತ್ತ ಮಕ್ಕಳ ಕಲ್ಯಾಣ ಇಲಾಖೆ107.50152.552.37
ಉನ್ನತ ಶಿಕ್ಷಣ ಇಲಾಖೆ501.501.503
ಗ್ರಾಮೀಣಾಭಿವೃದ್ಧಿ ಇಲಾಖೆ527.6720.2928.535.41
ಯೋಜನಾ ಇಲಾಖೆ1,00025039.403.94
ವಸತಿ ಇಲಾಖೆ45037.50223.2049.60
ಕೃಷಿ ಇಲಾಖೆ4520.5818.0440.09
ಆರೋಗ್ಯ ಇಲಾಖೆ483.20102.17173.1735.84
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ6019.2118.2230.37
ಸಮಾಜ ಕಲ್ಯಾಣ ಇಲಾಖೆ8563.7535.8842.21

ಇದನ್ನೂ ಓದಿ: ಬಂಪರ್ ಆದಾಯ ಸಂಗ್ರಹ: ಬಜೆಟ್ ಗುರಿ ಮೀರಿ ತೆರಿಗೆ ಸಂಗ್ರಹಿಸುವತ್ತ ಬೊಮ್ಮಾಯಿ ಸರ್ಕಾರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.