ETV Bharat / state

ನಾಳೆ 'ಗೃಹ' ಪ್ರವೇಶ ಮಾಡಲಿರುವ ಶಿಗ್ಗಾಂವಿ ಶೂರ ಬಸವರಾಜ ಬೊಮ್ಮಾಯಿ

author img

By

Published : Jul 27, 2021, 8:26 PM IST

Updated : Jul 27, 2021, 9:34 PM IST

ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ಮುಕ್ತಾಯವಾಗಿದೆ. ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಸವರಾಜ​ ಬೊಮ್ಮಾಯಿಗೆ ಹೈಕಮಾಂಡ್ ಅಂತಿಮವಾಗಿ ಮಣೆ ಹಾಕಿದೆ.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ 20ನೇ ಮುಖ್ಯಮಂತ್ರಿಯಾಗಿ ಬಸವರಾಜ್​ ಬೊಮ್ಮಾಯಿ ಆಯ್ಕೆಯಾಗಿದ್ದು, ನಾಳೆ ಬೆಳಗ್ಗೆ 11ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರು ಅಧಿಕಾರ ಗೋಪ್ಯತೆಯ ಪ್ರಮಾಣ ಬೋಧಿಸಲಿದ್ದಾರೆ.

20ನೇ ಮುಖ್ಯಮಂತ್ರಿಯಾಗಿ ಬಸವರಾಜ್​ ಬೊಮ್ಮಾಯಿ ಆಯ್ಕೆ
20ನೇ ಮುಖ್ಯಮಂತ್ರಿಯಾಗಿ ಬಸವರಾಜ್​ ಬೊಮ್ಮಾಯಿ ಆಯ್ಕೆ

ಶಿಗ್ಗಾಂವಿ ಕ್ಷೇತ್ರದ ಶಾಸಕರೂ ಆಗಿರುವ ಬೊಮ್ಮಾಯಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡವರು. ಈ ಮೂಲಕ ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಗೊಂದಲಕ್ಕೆ ತೆರೆ ಬಿದ್ದಿದೆ.

ಅಂದು ಅಪ್ಪ ಇಂದು ಮಗ ಸಿಎಂ..

ಕೇಂದ್ರದ ಮಾಜಿ ಸಚಿವ ಹಾಗೂ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷರಾಗಿದ್ದ ದಿ.ಎಸ್.ಆರ್. ಬೊಮ್ಮಾಯಿಯವರ ಪುತ್ರ ಬಸವರಾಜ್​ ಬೊಮ್ಮಾಯಿ. ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಮುಖ್ಯಮಂತ್ರಿ ಆಗುತ್ತಿರುವುದು ರಾಜ್ಯದಲ್ಲಿ ಇದು ಎರಡನೇ ಬಾರಿ.

ಈ ಹಿಂದೆ ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರ ಪುತ್ರ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಸಿಎಂ ಆಗಿರುವುದು ಈ ಎರಡು ಕುಟುಂಬಗಳಲ್ಲಿ ಮಾತ್ರ. ಎಸ್.ಆರ್.ಬೊಮ್ಮಾಯಿ ಅವರು ರಾಜ್ಯದ 11ನೇ ಮುಖ್ಯಮಂತ್ರಿಯಾಗಿದ್ದರು. ಅವರ ಪುತ್ರ ಬಸವರಾಜ ಈಗ 20ನೇ ಸಿಎಂ ಆಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ 20ನೇ ಮುಖ್ಯಮಂತ್ರಿಯಾಗಿ ಬಸವರಾಜ್​ ಬೊಮ್ಮಾಯಿ ಆಯ್ಕೆಯಾಗಿದ್ದು, ನಾಳೆ ಬೆಳಗ್ಗೆ 11ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರು ಅಧಿಕಾರ ಗೋಪ್ಯತೆಯ ಪ್ರಮಾಣ ಬೋಧಿಸಲಿದ್ದಾರೆ.

20ನೇ ಮುಖ್ಯಮಂತ್ರಿಯಾಗಿ ಬಸವರಾಜ್​ ಬೊಮ್ಮಾಯಿ ಆಯ್ಕೆ
20ನೇ ಮುಖ್ಯಮಂತ್ರಿಯಾಗಿ ಬಸವರಾಜ್​ ಬೊಮ್ಮಾಯಿ ಆಯ್ಕೆ

ಶಿಗ್ಗಾಂವಿ ಕ್ಷೇತ್ರದ ಶಾಸಕರೂ ಆಗಿರುವ ಬೊಮ್ಮಾಯಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡವರು. ಈ ಮೂಲಕ ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಗೊಂದಲಕ್ಕೆ ತೆರೆ ಬಿದ್ದಿದೆ.

ಅಂದು ಅಪ್ಪ ಇಂದು ಮಗ ಸಿಎಂ..

ಕೇಂದ್ರದ ಮಾಜಿ ಸಚಿವ ಹಾಗೂ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷರಾಗಿದ್ದ ದಿ.ಎಸ್.ಆರ್. ಬೊಮ್ಮಾಯಿಯವರ ಪುತ್ರ ಬಸವರಾಜ್​ ಬೊಮ್ಮಾಯಿ. ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಮುಖ್ಯಮಂತ್ರಿ ಆಗುತ್ತಿರುವುದು ರಾಜ್ಯದಲ್ಲಿ ಇದು ಎರಡನೇ ಬಾರಿ.

ಈ ಹಿಂದೆ ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರ ಪುತ್ರ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಸಿಎಂ ಆಗಿರುವುದು ಈ ಎರಡು ಕುಟುಂಬಗಳಲ್ಲಿ ಮಾತ್ರ. ಎಸ್.ಆರ್.ಬೊಮ್ಮಾಯಿ ಅವರು ರಾಜ್ಯದ 11ನೇ ಮುಖ್ಯಮಂತ್ರಿಯಾಗಿದ್ದರು. ಅವರ ಪುತ್ರ ಬಸವರಾಜ ಈಗ 20ನೇ ಸಿಎಂ ಆಗಿ ಆಯ್ಕೆಯಾಗಿದ್ದಾರೆ.

Last Updated : Jul 27, 2021, 9:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.