ETV Bharat / state

ಗಡಿ ವಿವಾದ... ಸಚಿವರ ಸಮಿತಿ ರಚಿಸಿಕೊಳ್ಳುವಂತೆ ಅಮಿತ್ ಶಾ ಸೂಚನೆ: ಬೊಮ್ಮಾಯಿ

author img

By

Published : Dec 15, 2022, 6:49 AM IST

ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಮರಸ್ಯ ನಿರ್ವಹಣೆಗೆ ತಲಾ ಮೂರು ಸಚಿವರನ್ನು ನೇಮಿಸಿಕೊಳ್ಳಲು ಮತ್ತು ಗಡಿ ವಿವಾದವನ್ನು ಆದಷ್ಟು ಬೇಗ ಚರ್ಚಿಸಿ ಬಗೆಹರಿಸಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

basavaraj bommai
ಬಸವರಾಜ ಬೊಮ್ಮಾಯಿ
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗಡಿ ವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ, ಸಂವಿಧಾನಬದ್ಧವಾಗಿ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಅಲ್ಲಿಯವರೆಗೂ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಮರಸ್ಯ ನಿರ್ವಹಣೆಗೆ ತಲಾ ಮೂವರು ಸಚಿವರನ್ನು ನೇಮಿಸಿಕೊಳ್ಳಲು ಮತ್ತು ಗಡಿ ವಿವಾದವನ್ನು ಆದಷ್ಟು ಬೇಗ ಚರ್ಚಿಸಿ ಬಗೆಹರಿಸಿಕೊಳ್ಳಲು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಚಿವರ ಜತೆ ಕೇಂದ್ರ ಗೃಹ ಸಚಿವರು ಸಭೆ ನಡೆಸಿದರು. ಗಡಿ ವಿಚಾರದ ಬಗ್ಗೆ ಮಹಾರಾಷ್ಟ್ರದವರು ಸರ್ವೋಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಗ್ಗೆ ಹಾಗೂ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಯಿತು. ಎರಡೂ ಪಕ್ಷಗಳ ವಿಚಾರಗಳನ್ನು ಚರ್ಚಿಸಿದ ನಂತರ ಕೇಂದ್ರ ಗೃಹ ಸಚಿವರು ಕೆಲವೊಂದು ಸೂಚನೆಗಳನ್ನು ನೀಡಿರುವುದಾಗಿ ತಿಳಿಸಿದರು.

ಗಡಿ ವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ : ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇದ್ದು, ಜನರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಗಡಿ ವಿಚಾರದ ಬಗ್ಗೆ ಸಂವಿಧಾನಬದ್ಧವಾಗಿ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ತೀರ್ಮಾನ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದಾಗಲಿ, ಜನಸಾಮಾನ್ಯರಿಗೆ ತೊಂದರೆ ಕೊಡುವುದಾಗಲಿ, ವ್ಯಾಪಾರ ವಹಿವಾಟುಗಳಿಗೆ ತೊಂದರೆ ಕೊಡುವುದಾಗಲಿ ಮಾಡಬಾರದು. ಎರಡು ರಾಜ್ಯಗಳ ನಡುವೆ ಬರುವ ಸಣ್ಣಪುಟ್ಟ ವಿಚಾರಗಳ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಚಿವರು ಸೇರಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಉಭಯ ರಾಜ್ಯಗಳು ನಿರಂತರವಾಗಿ ಪರಸ್ಪರ ಸಂಪರ್ಕದಲ್ಲಿರಬೇಕು. ಗಡಿ ವಿಚಾರದ ವಾಸ್ತವಾಂಶ, ಪರವಿರೋಧ ನಿಲುವುಗಳೇನೇ ಇದ್ದರೂ, ಎರಡೂ ರಾಜ್ಯಗಳ ರಾಜಕೀಯ ಪಕ್ಷಗಳು ಗಡಿ ವಿಚಾರದಲ್ಲಿ ಯಾವುದೇ ರಾಜಕಾರಣ ಮಾಡದೇ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವರು ಸ್ಪಷ್ಟವಾದ ನಿರ್ದೇಶನವನ್ನು ನೀಡಿದ್ದಾರೆ. ಜನವರಿಯಲ್ಲಿ ಗಡಿ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ ಎಂದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿ ನೇಮಕಕ್ಕೆ ಸಲಹೆ: 2 ರಾಜ್ಯಗಳ ನಡುವೆ ನಡೆಯುತ್ತಿರುವ ಕಲ್ಲು ತೂರಾಟ ನಿಯಂತ್ರಿಸಬೇಕು. ಸಾಮಾನ್ಯ ಪೊಲೀಸರಿಗಿಂತಲೂ ಇದೇ ವಿಷಯದ ಬಗ್ಗೆ ಲಕ್ಷ್ಯ ನೀಡಲು ಹಿರಿಯ ಐಪಿಎಸ್ ಅಧಿಕಾರಿಯನ್ನು ನೇಮಿಸಿಕೊಳ್ಳಲು ಸೂಚನೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.

ಯುವ ಜನೋತ್ಸವಕ್ಕೆ ಪ್ರಧಾನಿಗಳಿಗೆ ಆಹ್ವಾನ: ಉಳಿದಂತೆ ಪಕ್ಷದ ಸಂಘಟನೆ, ಜನಸಂಕಲ್ಪ ಯಾತ್ರೆ, ಪ್ರಧಾನಿ ಹಾಗೂ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ದಿನಾಂಕಗಳನ್ನು ಚರ್ಚಿಸಲಾಯಿತು. ಪ್ರಧಾನಿಗಳು ಇನ್ನು ಮುಂದೆ ಹೆಚ್ಚಿನ ಸಮಯವನ್ನು ಸಹಜವಾಗಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಳಗಾವಿ ಗಡಿ ವಿವಾದ: ಸಾಂವಿಧಾನಿಕ ಮಾರ್ಗದ ಮೂಲಕವೇ ಪರಿಹಾರ- ಅಮಿತ್ ಶಾ

ಯುವ ಜನೋತ್ಸವ: ಜನವರಿ 12 ರಂದು ಯುವ ಜನೋತ್ಸವವನ್ನು ಹಮ್ಮಿಕೊಳ್ಳಲು ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಚರ್ಚಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿಗಳನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಲಾಗುತ್ತಿದೆ. ಜೊತೆಗೆ ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚಿಸಲು ಸಮಯ ಕೋರಲಾಗಿದೆ. ಸಚಿವ ಸಂಪುಟ ರಚನೆಯ ಅವಶ್ಯಕತೆಗಳ ಬಗ್ಗೆ ವಿವರಗಳನ್ನು ನೀಡಲಾಗಿದೆ ಎಂದರು.

ಪೆನ್ನಾರ್ ನದಿ ನೀರು: ಪೆನ್ನಾರ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೂರು ತಿಂಗಳಲ್ಲಿ ನ್ಯಾಯಾಧೀಕರಣ ರಚನೆ ಮಾಡಲು ಸುಪ್ರೀಂಕೋರ್ಟ್ ತಿಳಿಸಿದೆ. ಇದು ಸಣ್ಣ ವಿಚಾರವಾಗಿದ್ದು, ಪ್ರಾಧಿಕಾರ ರಚನೆ ಬೇಡ ಎಂದಿದ್ದೇವೆ. ಸುಪ್ರೀಂಕೋರ್ಟ್​ನಲ್ಲಿ ನಾವು ಮರುಪರಿಶೀಲನಾ ಅರ್ಜಿ ಸಲ್ಲಿಸಲಿದ್ದೇವೆ ಹಾಗೂ ನಮ್ಮ ನಿಲುವಿನ ಕುರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗಡಿ ವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ, ಸಂವಿಧಾನಬದ್ಧವಾಗಿ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಅಲ್ಲಿಯವರೆಗೂ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಮರಸ್ಯ ನಿರ್ವಹಣೆಗೆ ತಲಾ ಮೂವರು ಸಚಿವರನ್ನು ನೇಮಿಸಿಕೊಳ್ಳಲು ಮತ್ತು ಗಡಿ ವಿವಾದವನ್ನು ಆದಷ್ಟು ಬೇಗ ಚರ್ಚಿಸಿ ಬಗೆಹರಿಸಿಕೊಳ್ಳಲು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಚಿವರ ಜತೆ ಕೇಂದ್ರ ಗೃಹ ಸಚಿವರು ಸಭೆ ನಡೆಸಿದರು. ಗಡಿ ವಿಚಾರದ ಬಗ್ಗೆ ಮಹಾರಾಷ್ಟ್ರದವರು ಸರ್ವೋಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಗ್ಗೆ ಹಾಗೂ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಯಿತು. ಎರಡೂ ಪಕ್ಷಗಳ ವಿಚಾರಗಳನ್ನು ಚರ್ಚಿಸಿದ ನಂತರ ಕೇಂದ್ರ ಗೃಹ ಸಚಿವರು ಕೆಲವೊಂದು ಸೂಚನೆಗಳನ್ನು ನೀಡಿರುವುದಾಗಿ ತಿಳಿಸಿದರು.

ಗಡಿ ವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ : ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇದ್ದು, ಜನರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಗಡಿ ವಿಚಾರದ ಬಗ್ಗೆ ಸಂವಿಧಾನಬದ್ಧವಾಗಿ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ತೀರ್ಮಾನ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದಾಗಲಿ, ಜನಸಾಮಾನ್ಯರಿಗೆ ತೊಂದರೆ ಕೊಡುವುದಾಗಲಿ, ವ್ಯಾಪಾರ ವಹಿವಾಟುಗಳಿಗೆ ತೊಂದರೆ ಕೊಡುವುದಾಗಲಿ ಮಾಡಬಾರದು. ಎರಡು ರಾಜ್ಯಗಳ ನಡುವೆ ಬರುವ ಸಣ್ಣಪುಟ್ಟ ವಿಚಾರಗಳ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಚಿವರು ಸೇರಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಉಭಯ ರಾಜ್ಯಗಳು ನಿರಂತರವಾಗಿ ಪರಸ್ಪರ ಸಂಪರ್ಕದಲ್ಲಿರಬೇಕು. ಗಡಿ ವಿಚಾರದ ವಾಸ್ತವಾಂಶ, ಪರವಿರೋಧ ನಿಲುವುಗಳೇನೇ ಇದ್ದರೂ, ಎರಡೂ ರಾಜ್ಯಗಳ ರಾಜಕೀಯ ಪಕ್ಷಗಳು ಗಡಿ ವಿಚಾರದಲ್ಲಿ ಯಾವುದೇ ರಾಜಕಾರಣ ಮಾಡದೇ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವರು ಸ್ಪಷ್ಟವಾದ ನಿರ್ದೇಶನವನ್ನು ನೀಡಿದ್ದಾರೆ. ಜನವರಿಯಲ್ಲಿ ಗಡಿ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ ಎಂದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿ ನೇಮಕಕ್ಕೆ ಸಲಹೆ: 2 ರಾಜ್ಯಗಳ ನಡುವೆ ನಡೆಯುತ್ತಿರುವ ಕಲ್ಲು ತೂರಾಟ ನಿಯಂತ್ರಿಸಬೇಕು. ಸಾಮಾನ್ಯ ಪೊಲೀಸರಿಗಿಂತಲೂ ಇದೇ ವಿಷಯದ ಬಗ್ಗೆ ಲಕ್ಷ್ಯ ನೀಡಲು ಹಿರಿಯ ಐಪಿಎಸ್ ಅಧಿಕಾರಿಯನ್ನು ನೇಮಿಸಿಕೊಳ್ಳಲು ಸೂಚನೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.

ಯುವ ಜನೋತ್ಸವಕ್ಕೆ ಪ್ರಧಾನಿಗಳಿಗೆ ಆಹ್ವಾನ: ಉಳಿದಂತೆ ಪಕ್ಷದ ಸಂಘಟನೆ, ಜನಸಂಕಲ್ಪ ಯಾತ್ರೆ, ಪ್ರಧಾನಿ ಹಾಗೂ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ದಿನಾಂಕಗಳನ್ನು ಚರ್ಚಿಸಲಾಯಿತು. ಪ್ರಧಾನಿಗಳು ಇನ್ನು ಮುಂದೆ ಹೆಚ್ಚಿನ ಸಮಯವನ್ನು ಸಹಜವಾಗಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಳಗಾವಿ ಗಡಿ ವಿವಾದ: ಸಾಂವಿಧಾನಿಕ ಮಾರ್ಗದ ಮೂಲಕವೇ ಪರಿಹಾರ- ಅಮಿತ್ ಶಾ

ಯುವ ಜನೋತ್ಸವ: ಜನವರಿ 12 ರಂದು ಯುವ ಜನೋತ್ಸವವನ್ನು ಹಮ್ಮಿಕೊಳ್ಳಲು ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಚರ್ಚಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿಗಳನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಲಾಗುತ್ತಿದೆ. ಜೊತೆಗೆ ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚಿಸಲು ಸಮಯ ಕೋರಲಾಗಿದೆ. ಸಚಿವ ಸಂಪುಟ ರಚನೆಯ ಅವಶ್ಯಕತೆಗಳ ಬಗ್ಗೆ ವಿವರಗಳನ್ನು ನೀಡಲಾಗಿದೆ ಎಂದರು.

ಪೆನ್ನಾರ್ ನದಿ ನೀರು: ಪೆನ್ನಾರ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೂರು ತಿಂಗಳಲ್ಲಿ ನ್ಯಾಯಾಧೀಕರಣ ರಚನೆ ಮಾಡಲು ಸುಪ್ರೀಂಕೋರ್ಟ್ ತಿಳಿಸಿದೆ. ಇದು ಸಣ್ಣ ವಿಚಾರವಾಗಿದ್ದು, ಪ್ರಾಧಿಕಾರ ರಚನೆ ಬೇಡ ಎಂದಿದ್ದೇವೆ. ಸುಪ್ರೀಂಕೋರ್ಟ್​ನಲ್ಲಿ ನಾವು ಮರುಪರಿಶೀಲನಾ ಅರ್ಜಿ ಸಲ್ಲಿಸಲಿದ್ದೇವೆ ಹಾಗೂ ನಮ್ಮ ನಿಲುವಿನ ಕುರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.