ETV Bharat / state

ನಾಳೆ ಬೊಮ್ಮಾಯಿ‌, ಬಿಎಸ್​ವೈ ದೆಹಲಿ ಪ್ರವಾಸ: ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಗರಿಗೆದರಿದ ಕನಸು

author img

By

Published : Jan 15, 2023, 7:54 PM IST

ಬಿಜೆಪಿ ನಾಯಕ ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ - ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ - ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

bs-yadiyurappa-and-cm-bommai-delhi-tour
ನಾಳೆ ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿಎಸ್ ವೈ ದೆಹಲಿ ಪ್ರವಾಸ: ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಗರಿಗೆದರಿದ ಕನಸು

ಬೆಂಗಳೂರು: ರಾಜ್ಯ ಬಿಜೆಪಿಯ ಅಗ್ರ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ನವದೆಹಲಿಗೆ ತೆರಳುತ್ತಿದ್ದು ಮತ್ತೊಮ್ಮೆ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಈ ಬಾರಿಯಾದರೂ ಸಂಪುಟದಲ್ಲಿ ಅವಕಾಶ ಸಿಗಲಿದೆಯಾ ಎನ್ನುವ ನಿರೀಕ್ಷೆಯೊಂದಿಗೆ ನಾಯಕರ ದೆಹಲಿ ಪ್ರವಾಸವನ್ನೇ ಎದುರು ನೋಡುತ್ತಿದ್ದಾರೆ‌.

ಬಿಎಸ್​ವೈ ಮತ್ತು ಬೊಮ್ಮಾಯಿ ದೆಹಲಿ ಪ್ರವಾಸ : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೋಮವಾರ ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ಸೋಮವಾರ ಮತ್ತು ಮಂಗಳವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ : ಧಾರವಾಡ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ‌ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಲಿದ್ದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಪಾಲ್ಗೊಂಡ ನಂತರ ಇಬ್ಬರೂ ಪ್ರತ್ಯೇಕವಾಗಿ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಈ ವರ್ಷ ಕರ್ನಾಟಕ ಸೇರಿ ಒಂಭತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೊದಲಿಗೆ ಕರ್ನಾಟಕದ ಸರತಿ ಶುರುವಾಗಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಈ ಸಭೆ ಕರ್ನಾಟಕದ ಮಟ್ಟಿಗೆ ಹೆಚ್ಚಿನ‌ ಮಹತ್ವ ಪಡೆದುಕೊಂಡಿದೆ‌.

ಚುನಾವಣೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ : ರಣತಂತ್ರದ ಭಾಗವಾಗಿ ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಸರ್ಕಾರದ ಸಾಧನೆ ತಿಳಿಸುವ ಜನಸಂಕಲ್ಪ ಯಾತ್ರೆ ಸಾಧನೆ, ಫಲ, ಡಬಲ್ ಇಂಜಿನ್ ಸರ್ಕಾರದ ಪ್ರಯೋಜನಗಳ ಬಗ್ಗೆ ಪರಿಣಾಮಕಾರಿಯಾಗಿ ಬಿಂಬಿಸಲು ಮಾಡಿದ ಪ್ರಯತ್ನ, ಸಂಘಟನೆ ಬಲವರ್ಧನೆ ಚಟುವಟಿಕೆಗಳ ಪ್ರಗತಿ ಪರಾಮರ್ಶೆಯಾಗಲಿದೆ. ರಾಜ್ಯಕ್ಕೆ ಪ್ರತ್ಯೇಕವಾಗಿ ಹೆಣೆಯಬೇಕಾದ ಚುನಾವಣಾ ತಂತ್ರಗಾರಿಕೆ ಕುರಿತು ಚರ್ಚೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದವರೇ ಆದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಪಕ್ಷದ ರಾಜ್ಯಾಧ್ಯಕ್ಷ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈ ಸಭೆಯಲ್ಲಿ ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ಸಚಿವ ಸಂಪುಟದಲ್ಲಿ ಖಾಲಿಯಿರುವ ಆರು ಸ್ಥಾನಗಳ ಭರ್ತಿ, ಅವಧಿ ಮುಗಿದ ನಿಗಮ-ಮಂಡಳಿಗಳಿಗೆ ಹೊಸಬರ ನೇಮಕದ ಬಗ್ಗೆ ವರಿಷ್ಠರ ಬಳಿ ಸಿಎಂ ಬೊಮ್ಮಾಯಿ‌ ಪ್ರಸ್ತಾಪಿಸುವ ಸಾಧ್ಯತೆಗಳಿದೆ ಎಂದು ತಿಳಿದುಬಂದಿದೆ. ಚುನಾವಣೆಗೆ ಇನ್ನು ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನವಿದ್ದು, ನಂತರ ಪಕ್ಷದ ಚುನಾವಣಾ ಚಟುವಟಿಕೆ ಬಿರುಸಾಗಲಿದೆ. ಹಾಗಾಗಿ ಸಂಪುಟ ವಿಸ್ತರಣೆಗೆ ಇದೊಂದೇ ಕಡೆಯ ಅವಕಾಶ ಎನ್ನಲಾಗುತ್ತಿದೆ. ಸಂಕ್ರಾಂತಿ ನಂತರ ಸಂಪುಟದಲ್ಲಿ ಬದಲಾವಣೆ ಕಾಣಬಹುದು ಎನ್ನುವ ನಾಯಕರ ಹೇಳಿಕೆ, ಯಡಿಯೂರಪ್ಪ ಅಭಿಪ್ರಾಯ ಪರಿಗಣಿಸುವುದಾದಲ್ಲಿ ಈ ಬಾರಿ ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ನಿರ್ಧಾರ ಹೊರಬೀಳಬಹುದು ಎನ್ನಲಾಗುತ್ತಿದೆ.

ಈಗಾಗಲೇ ಚಳಿಗಾಲದ ಅಧಿವೇಶನದ ವೇಳೆಯಲ್ಲೇ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿ ಕಲಾಪದಿಂದ ದೂರ ಉಳಿದು ಎಚ್ಚರಿಕೆ ನೀಡಿ ನಂತರ ಭರವಸೆ ಬಳಿಕ ಕಲಾಪಕ್ಕೆ ಹಾಜರಾಗಿದ್ದರು. ಈಗಲೂ ಸಂಪುಟಕ್ಕೆ ಈ ಇಬ್ಬರು ನಾಯಕರನ್ನು ಸೇರಿಸಿಕೊಳ್ಳದಿದ್ದಲ್ಲಿ ಮತ್ತೊಮ್ಮೆ ಅಧಿವೇಶನದಲ್ಲಿ ಪಕ್ಷಕ್ಕೆ ಇರಿಸು ಮುರುಸಾಗುವ ಸಾಧ್ಯತೆ ಇದೆ. ಹಾಗಾಗಿ ಇವರಿಬ್ಬರ ವಿವಾದದಲ್ಲಿ ಪಕ್ಷ ಈ ಬಾರಿ ತೀರ್ಮಾನ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹಳೆ ಮೈಸೂರು ಭಾಗಕ್ಕೆ ಒತ್ತು: ಇನ್ನು ಹಳೆ ಮೈಸೂರು ಭಾಗವನ್ನು ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಮಾಡಿರುವುದರಿಂದ ಸಿಪಿ ಯೋಗೀಶ್ವರ್​ಗೂ ಸಂಪುಟದಲ್ಲಿ ಅವಕಾಶ ನೀಡಬೇಕಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಸರ್ಕಾರ ರಚನೆ ವೇಳೆ ಮಹತ್ವದ ಪಾತ್ರ ವಹಿಸಿದ್ದ ಸಿಪಿವೈಗೆ ಈಗ ಮತ್ತೆ ಅವಕಾಶ ನೀಡಿದಲ್ಲಿ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎನ್ನುವ ಲೆಕ್ಕಾಚಾರ ಇದೆ. ಅಲ್ಲದೆ ಬೊಮ್ಮಾಯಿ ನಿವಾಸಕ್ಕೆ ಸತತವಾಗಿ ಭೇಟಿ ನೀಡಿ ಸಚಿವ ಸ್ಥಾನದ ಅಪೇಕ್ಷೆ ವ್ಯಕ್ತಪಡಿಸುತ್ತಲೇ ಇದ್ದು ಒತ್ತಡ ಹೇರುತ್ತಿದ್ದಾರೆ ಹೀಗಾಗಿ ಇವರ ಹೆಸರೂ ಕೂಡ ಚರ್ಚೆಗೆ ಬರಲಿದೆ ಎನ್ನಲಾಗಿದೆ.

ಸದ್ಯ ಕೈ ಬಿಟ್ಟ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗುತ್ತದೆಯೋ ಅಥವಾ ಯೋಗೀಶ್ವರ್ ಸೇರಿ ಇತರ ಕೆಲವರಿಗೂ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆಯೋ ಅಥವಾ ಸಂಪುಟ ವಿಸ್ತರಣೆ ವಿಚಾರವನ್ನೇ ಬಿಟ್ಟು ನೇರವಾಗಿ ಚುನಾವಣಾ ಸಿದ್ದತಾ ಕಣಕ್ಕೆ ಹೈಕಮಾಂಡ್ ಧುಮುಕಲಿದೆಯೋ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ : ಕಾಂಗ್ರೆಸ್​​ ಸೇರಿದ ನಾಗೇಶ್, ದತ್ತಾ ಭವಿಷ್ಯವೇನು? ಕಷ್ಟವಾಗಲಿದೆಯಾ ಚುನಾವಣಾ ಕಣ?

ಬೆಂಗಳೂರು: ರಾಜ್ಯ ಬಿಜೆಪಿಯ ಅಗ್ರ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ನವದೆಹಲಿಗೆ ತೆರಳುತ್ತಿದ್ದು ಮತ್ತೊಮ್ಮೆ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಈ ಬಾರಿಯಾದರೂ ಸಂಪುಟದಲ್ಲಿ ಅವಕಾಶ ಸಿಗಲಿದೆಯಾ ಎನ್ನುವ ನಿರೀಕ್ಷೆಯೊಂದಿಗೆ ನಾಯಕರ ದೆಹಲಿ ಪ್ರವಾಸವನ್ನೇ ಎದುರು ನೋಡುತ್ತಿದ್ದಾರೆ‌.

ಬಿಎಸ್​ವೈ ಮತ್ತು ಬೊಮ್ಮಾಯಿ ದೆಹಲಿ ಪ್ರವಾಸ : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೋಮವಾರ ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ಸೋಮವಾರ ಮತ್ತು ಮಂಗಳವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ : ಧಾರವಾಡ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ‌ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಲಿದ್ದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಪಾಲ್ಗೊಂಡ ನಂತರ ಇಬ್ಬರೂ ಪ್ರತ್ಯೇಕವಾಗಿ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಈ ವರ್ಷ ಕರ್ನಾಟಕ ಸೇರಿ ಒಂಭತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೊದಲಿಗೆ ಕರ್ನಾಟಕದ ಸರತಿ ಶುರುವಾಗಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಈ ಸಭೆ ಕರ್ನಾಟಕದ ಮಟ್ಟಿಗೆ ಹೆಚ್ಚಿನ‌ ಮಹತ್ವ ಪಡೆದುಕೊಂಡಿದೆ‌.

ಚುನಾವಣೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ : ರಣತಂತ್ರದ ಭಾಗವಾಗಿ ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಸರ್ಕಾರದ ಸಾಧನೆ ತಿಳಿಸುವ ಜನಸಂಕಲ್ಪ ಯಾತ್ರೆ ಸಾಧನೆ, ಫಲ, ಡಬಲ್ ಇಂಜಿನ್ ಸರ್ಕಾರದ ಪ್ರಯೋಜನಗಳ ಬಗ್ಗೆ ಪರಿಣಾಮಕಾರಿಯಾಗಿ ಬಿಂಬಿಸಲು ಮಾಡಿದ ಪ್ರಯತ್ನ, ಸಂಘಟನೆ ಬಲವರ್ಧನೆ ಚಟುವಟಿಕೆಗಳ ಪ್ರಗತಿ ಪರಾಮರ್ಶೆಯಾಗಲಿದೆ. ರಾಜ್ಯಕ್ಕೆ ಪ್ರತ್ಯೇಕವಾಗಿ ಹೆಣೆಯಬೇಕಾದ ಚುನಾವಣಾ ತಂತ್ರಗಾರಿಕೆ ಕುರಿತು ಚರ್ಚೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದವರೇ ಆದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಪಕ್ಷದ ರಾಜ್ಯಾಧ್ಯಕ್ಷ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈ ಸಭೆಯಲ್ಲಿ ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ಸಚಿವ ಸಂಪುಟದಲ್ಲಿ ಖಾಲಿಯಿರುವ ಆರು ಸ್ಥಾನಗಳ ಭರ್ತಿ, ಅವಧಿ ಮುಗಿದ ನಿಗಮ-ಮಂಡಳಿಗಳಿಗೆ ಹೊಸಬರ ನೇಮಕದ ಬಗ್ಗೆ ವರಿಷ್ಠರ ಬಳಿ ಸಿಎಂ ಬೊಮ್ಮಾಯಿ‌ ಪ್ರಸ್ತಾಪಿಸುವ ಸಾಧ್ಯತೆಗಳಿದೆ ಎಂದು ತಿಳಿದುಬಂದಿದೆ. ಚುನಾವಣೆಗೆ ಇನ್ನು ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನವಿದ್ದು, ನಂತರ ಪಕ್ಷದ ಚುನಾವಣಾ ಚಟುವಟಿಕೆ ಬಿರುಸಾಗಲಿದೆ. ಹಾಗಾಗಿ ಸಂಪುಟ ವಿಸ್ತರಣೆಗೆ ಇದೊಂದೇ ಕಡೆಯ ಅವಕಾಶ ಎನ್ನಲಾಗುತ್ತಿದೆ. ಸಂಕ್ರಾಂತಿ ನಂತರ ಸಂಪುಟದಲ್ಲಿ ಬದಲಾವಣೆ ಕಾಣಬಹುದು ಎನ್ನುವ ನಾಯಕರ ಹೇಳಿಕೆ, ಯಡಿಯೂರಪ್ಪ ಅಭಿಪ್ರಾಯ ಪರಿಗಣಿಸುವುದಾದಲ್ಲಿ ಈ ಬಾರಿ ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ನಿರ್ಧಾರ ಹೊರಬೀಳಬಹುದು ಎನ್ನಲಾಗುತ್ತಿದೆ.

ಈಗಾಗಲೇ ಚಳಿಗಾಲದ ಅಧಿವೇಶನದ ವೇಳೆಯಲ್ಲೇ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿ ಕಲಾಪದಿಂದ ದೂರ ಉಳಿದು ಎಚ್ಚರಿಕೆ ನೀಡಿ ನಂತರ ಭರವಸೆ ಬಳಿಕ ಕಲಾಪಕ್ಕೆ ಹಾಜರಾಗಿದ್ದರು. ಈಗಲೂ ಸಂಪುಟಕ್ಕೆ ಈ ಇಬ್ಬರು ನಾಯಕರನ್ನು ಸೇರಿಸಿಕೊಳ್ಳದಿದ್ದಲ್ಲಿ ಮತ್ತೊಮ್ಮೆ ಅಧಿವೇಶನದಲ್ಲಿ ಪಕ್ಷಕ್ಕೆ ಇರಿಸು ಮುರುಸಾಗುವ ಸಾಧ್ಯತೆ ಇದೆ. ಹಾಗಾಗಿ ಇವರಿಬ್ಬರ ವಿವಾದದಲ್ಲಿ ಪಕ್ಷ ಈ ಬಾರಿ ತೀರ್ಮಾನ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹಳೆ ಮೈಸೂರು ಭಾಗಕ್ಕೆ ಒತ್ತು: ಇನ್ನು ಹಳೆ ಮೈಸೂರು ಭಾಗವನ್ನು ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಮಾಡಿರುವುದರಿಂದ ಸಿಪಿ ಯೋಗೀಶ್ವರ್​ಗೂ ಸಂಪುಟದಲ್ಲಿ ಅವಕಾಶ ನೀಡಬೇಕಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಸರ್ಕಾರ ರಚನೆ ವೇಳೆ ಮಹತ್ವದ ಪಾತ್ರ ವಹಿಸಿದ್ದ ಸಿಪಿವೈಗೆ ಈಗ ಮತ್ತೆ ಅವಕಾಶ ನೀಡಿದಲ್ಲಿ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎನ್ನುವ ಲೆಕ್ಕಾಚಾರ ಇದೆ. ಅಲ್ಲದೆ ಬೊಮ್ಮಾಯಿ ನಿವಾಸಕ್ಕೆ ಸತತವಾಗಿ ಭೇಟಿ ನೀಡಿ ಸಚಿವ ಸ್ಥಾನದ ಅಪೇಕ್ಷೆ ವ್ಯಕ್ತಪಡಿಸುತ್ತಲೇ ಇದ್ದು ಒತ್ತಡ ಹೇರುತ್ತಿದ್ದಾರೆ ಹೀಗಾಗಿ ಇವರ ಹೆಸರೂ ಕೂಡ ಚರ್ಚೆಗೆ ಬರಲಿದೆ ಎನ್ನಲಾಗಿದೆ.

ಸದ್ಯ ಕೈ ಬಿಟ್ಟ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗುತ್ತದೆಯೋ ಅಥವಾ ಯೋಗೀಶ್ವರ್ ಸೇರಿ ಇತರ ಕೆಲವರಿಗೂ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆಯೋ ಅಥವಾ ಸಂಪುಟ ವಿಸ್ತರಣೆ ವಿಚಾರವನ್ನೇ ಬಿಟ್ಟು ನೇರವಾಗಿ ಚುನಾವಣಾ ಸಿದ್ದತಾ ಕಣಕ್ಕೆ ಹೈಕಮಾಂಡ್ ಧುಮುಕಲಿದೆಯೋ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ : ಕಾಂಗ್ರೆಸ್​​ ಸೇರಿದ ನಾಗೇಶ್, ದತ್ತಾ ಭವಿಷ್ಯವೇನು? ಕಷ್ಟವಾಗಲಿದೆಯಾ ಚುನಾವಣಾ ಕಣ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.