ETV Bharat / state

ಕಟೀಲ್​ ಜೊತೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯವಿಲ್ಲ: ಗಾಳಿ ಸುದ್ದಿಗೆ ತೆರೆ ಎಳೆದ ಬಿಎಸ್​ವೈ

ಕೇಂದ್ರ ಸರ್ಕಾರ ಯಾವ ರಾಜ್ಯಕ್ಕೂ ನೆರೆ ಪರಿಹಾರ ನೀಡಿಲ್ಲ. ಪ್ರತಿಪಕ್ಷಗಳು ಸುಮ್ಮನೆ ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಲ್ಲಿದ್ದರು ಹೀಗಾಗಿ ಸ್ವಲ್ಪ ತಡವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

author img

By

Published : Oct 3, 2019, 12:28 PM IST

ಸಿಎಂ ಯಡಿಯೂರಪ್ಪ

ಬೆಂಗಳೂರು: ನೆರೆ ವಿಚಾರವಾಗಿ ವಿರೋಧ ಪಕ್ಷಗಳು ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಪ್ರತಿಪಕ್ಷಗಳ ನಾಯಕರನ್ನು ಕುಟುಕಿದ್ದಾರೆ.

ಸಿಎಂ ಯಡಿಯೂರಪ್ಪ

ಸಚಿವ ಸಂಪುಟ ಸಭೆಯ ಬಳಿಕ ಬೆಳಗಾವಿ ಭಾಗಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ. ಅತಿವೃಷ್ಟಿ ಪರಿಸ್ಥಿತಿ ಬಗ್ಗೆ ಗಮನ ಹರಿಸುತ್ತೇವೆ. ರಸ್ತೆ, ಸೇತುವೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿವೆ. ಇದಕ್ಕಾಗಿ ಕೇಂದ್ರದಿಂದ ದೊಡ್ಡ ಪ್ರಮಾಣದ ಅನುದಾನಬೇಕು. ಈ ಸಂಬಂಧ ಮತ್ತೊಂದು ಬಾರಿ ದೆಹಲಿಗೆ ಹೋಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪರಿಹಾರ ಕೇಳುತ್ತೇನೆ ಎಂದು ತಿಳಿಸಿದರು.

ಕೇಂದ್ರದಿಂದ ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗೆಂದು ನಾವು ಕಾಯುತ್ತಿಲ್ಲ. ರಾಜ್ಯ ಸರ್ಕಾರದಿಂದ ಸುಮಾರು ₹ 3 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಜೆಡಿಎಸ್, ಕಾಂಗ್ರೆಸ್ ಅತಿಯಾಗಿ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಕೇಂದ್ರ ಸರ್ಕಾರದಿಂದ ಮುಂದಿನ ವಾರದಲ್ಲಿ ನೆರೆ ಪರಿಹಾರದ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದರು.

ಗುಲಗಂಜಿಯಷ್ಟು ಭಿನ್ನಾಭಿಪ್ರಾಯವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ನನ್ನ ನಡುವೆ ಗುಲಗಂಜಿಯಷ್ಟು ಭಿನಾಭಿಪ್ರಾಯ ಇಲ್ಲ ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದ ಸುದ್ದಿಗೆ ತೆರೆ ಎಳೆದಿದ್ದಾರೆ.

ಇಬ್ಬರು ಚರ್ಚಿಸಿಯೇ ಎಲ್ಲ ತೀರ್ಮಾನ ಮಾಡುತ್ತಿದ್ದೇವೆ. ಮೇಯರ್ ಚುನಾವಣೆ ಸಂಬಂಧ ಚರ್ಚೆ ಮಾಡಿಯೇ ತೀರ್ಮಾನ ಕೈಗೊಂಡಿದೆ ಎಂದು ವಿವರಿಸಿದರು.

ಬೆಂಗಳೂರು: ನೆರೆ ವಿಚಾರವಾಗಿ ವಿರೋಧ ಪಕ್ಷಗಳು ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಪ್ರತಿಪಕ್ಷಗಳ ನಾಯಕರನ್ನು ಕುಟುಕಿದ್ದಾರೆ.

ಸಿಎಂ ಯಡಿಯೂರಪ್ಪ

ಸಚಿವ ಸಂಪುಟ ಸಭೆಯ ಬಳಿಕ ಬೆಳಗಾವಿ ಭಾಗಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ. ಅತಿವೃಷ್ಟಿ ಪರಿಸ್ಥಿತಿ ಬಗ್ಗೆ ಗಮನ ಹರಿಸುತ್ತೇವೆ. ರಸ್ತೆ, ಸೇತುವೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿವೆ. ಇದಕ್ಕಾಗಿ ಕೇಂದ್ರದಿಂದ ದೊಡ್ಡ ಪ್ರಮಾಣದ ಅನುದಾನಬೇಕು. ಈ ಸಂಬಂಧ ಮತ್ತೊಂದು ಬಾರಿ ದೆಹಲಿಗೆ ಹೋಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪರಿಹಾರ ಕೇಳುತ್ತೇನೆ ಎಂದು ತಿಳಿಸಿದರು.

ಕೇಂದ್ರದಿಂದ ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗೆಂದು ನಾವು ಕಾಯುತ್ತಿಲ್ಲ. ರಾಜ್ಯ ಸರ್ಕಾರದಿಂದ ಸುಮಾರು ₹ 3 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಜೆಡಿಎಸ್, ಕಾಂಗ್ರೆಸ್ ಅತಿಯಾಗಿ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಕೇಂದ್ರ ಸರ್ಕಾರದಿಂದ ಮುಂದಿನ ವಾರದಲ್ಲಿ ನೆರೆ ಪರಿಹಾರದ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದರು.

ಗುಲಗಂಜಿಯಷ್ಟು ಭಿನ್ನಾಭಿಪ್ರಾಯವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ನನ್ನ ನಡುವೆ ಗುಲಗಂಜಿಯಷ್ಟು ಭಿನಾಭಿಪ್ರಾಯ ಇಲ್ಲ ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದ ಸುದ್ದಿಗೆ ತೆರೆ ಎಳೆದಿದ್ದಾರೆ.

ಇಬ್ಬರು ಚರ್ಚಿಸಿಯೇ ಎಲ್ಲ ತೀರ್ಮಾನ ಮಾಡುತ್ತಿದ್ದೇವೆ. ಮೇಯರ್ ಚುನಾವಣೆ ಸಂಬಂಧ ಚರ್ಚೆ ಮಾಡಿಯೇ ತೀರ್ಮಾನ ಕೈಗೊಂಡಿದೆ ಎಂದು ವಿವರಿಸಿದರು.

Intro:Body:KN_BNG_01_CMFLOOD_LASHESOUT_SCRIPT_7201951

ನೆರೆ ವಿಚಾರವಾಗಿ ಪ್ರತಿಪಕ್ಷ ಬೊಬ್ಬೆ ಹೊಡೆಯುವುದು ನಿಲ್ಲಿಸಬೇಕು: ಸಿಎಂ

ಬೆಂಗಳೂರು: ನೆರೆ ವಿಚಾರವಾಗಿ ವಿರೋಧ ಪಕ್ಷಗಳು ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಟಾಂಗ್ ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕ್ಯಾಬಿನೆಟ್ ಮೀಟಿಂಗ್ ಆದಮೇಲೆ ಬೆಳಗಾವಿ ಭಾಗಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ. ಅಲ್ಲಿ ಆಗಿರು ಅತಿವೃಷ್ಟಿ ಪರಿಸ್ಥಿತಿ ಬಗ್ಗೆ ಗಮನ ಹರಿಸುತ್ತೇವೆ. ರಸ್ತೆ ಸೇತುವೆಗಳು ದೊಡ್ಡ ಪ್ರಮಾಣದಲ್ಲಿ ಹಾನಿ ಆಗಿವೆ. ಇದಕ್ಕಾಗಿ ಕೇಂದ್ರದಿಂದ ದೊಡ್ಡ ಪ್ರಮಾಣದ ಅನುದಾನಬೇಕು. ಈ ಸಂಬಂಧ ಮತ್ತೊಂದು ಬಾರಿ ದೆಹಲಿಗೆ ಹೋಗಿ ಅಮಿತ್ ಶಾರನ್ನು ಭೇಟಿಯಾಗಿ ಪರಿಹಾರ ಕೇಳುತ್ತೇನೆ ಎಂದು ತಿಳಿಸಿದರು.

ಕೇಂದ್ರದವರು ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗಂತ ನಾವು ಕಾದು ಕುಂತಿಲ್ಲ. ನಮ್ಮ ರಾಜ್ಯ ಸರ್ಕಾರದಿಂದ ಸುಮಾರು 3000 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಜೆಡಿಎಸ್, ಕಾಂಗ್ರೆಸ್ ಅತಿಯಾಗಿ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿ ಕಾರಿದರು.

ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿ ಇದ್ದರು. ಇನ್ನು ಕೇಂದ್ರ ಸರ್ಕಾರದಿಂದ ನಾಲ್ಕಾರು ದಿನಗಳಲ್ಲಿ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದರು.

ಗುಲಗಂಜಿಯಷ್ಟು ಭಿನ್ನಾಭಿಪ್ರಾಯವಿಲ್ಲ:

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ನನ್ನ ನಡುವೆ ಗುಲಗಂಜಿಯಷ್ಟು ಭಿನಾಭಿಪ್ರಾಯ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಇಂದು ಇಬ್ಬರೂ ಪರಸ್ಪರ ಸಮಾಲೋಚನೆ ಮಾಡಿ, ಎಲ್ವನ್ನೂ ತೀರ್ಮಾನ ಮಾಡುತ್ತಿದ್ದೇವೆ. ಮೇಯರ್ ಚುನಾವಣೆ ಸಂಬಂಧ ಚರ್ಚೆ ಮಾಡಿಯೇ ತೀರ್ಮಾನ ಕೈಗೊಂಡಿದ್ದು, ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ವಿವರಿಸಿದರು.

ಕೆಲವು ಮಾಧ್ಯಮಗಳಲ್ಲಿ ನಮ್ಮಿಬ್ಬರ ಮಧ್ಯೆ ಸರಿ ಇಲ್ಲ ಎಂಬ ವರದಿ ಬರುತ್ತಿದೆ. ಅದು ಸರಿ ಅಲ್ಲ. ನಾವು ಇಬ್ಬರು ಸರಿ ಇದ್ದೇವೆ. ಯಾವುದೇ ಗೊಂದಲ, ಭಿನ್ನಮತ ಇಲ್ಲ ಎಂದು ಸ್ಪಷ್ಟಪಡಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.