ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಗಸ್ಟ್ 6ರಂದು ರಾಜ್ಯದ ಸಂಸದರೊಂದಿಗೆ ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆಸಲಿದ್ದಾರೆ.
ರಾಜ್ಯ ಸರ್ಕಾರದಿಂದ ಕಳುಹಿಸಲಾಗಿರುವ ಯೋಜನೆಗಳಿಗೆ ಸಂಬಂಧಿಸಿದ ಪ್ರಸ್ತಾವಣೆಗಳು ಹಾಗೂ ಬಾಕಿ ಉಳಿದಿರುವ ವಿವಿಧ ಯೋಜನೆಗಳ ಕುರಿತು ಈ ಸಭೆಯಲ್ಲಿ ವಿಸ್ತೃತ ಚರ್ಚೆಯಾಗುವ ಸಾಧ್ಯತೆ ಇದೆ.
ರಾಜ್ಯದ ಎಲ್ಲ ಸಂಸದರು ಈ ಸಭೆಯಲ್ಲಿ ಭಾಗಿಯಾಗುವಂತೆ ಬಿಎಸ್ವೈ ಮನವಿ ಮಾಡಿದ್ದು, ಖಾಸಗಿ ಹೋಟೆಲ್ನಲ್ಲಿ ಭೋಜನಕೂಟವನ್ನೂ ಏರ್ಪಡಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಎಸ್ವೈ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಿದ್ದಾರೆ.