ಬೆಂಗಳೂರು: ನಾಳೆ ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ದಾವಣಗೆರೆ ಜಿಲ್ಲೆಗೆ ತೆರಳಲಿದ್ದಾರೆ. ಹರಿಹರ ತಾಲೂಕಿನ ಬೆಳ್ಳೂಡಿಯಲ್ಲಿ ಕನಕ ಗುರುಪೀಠದ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಆದರೆ ಈ ಕಾರ್ಯಕ್ರಮದ ವೇಳೆ ಸಿಎಂ ಯಡುಯೂರಪ್ಪ ಹಾಗೂ ಸಚಿವ ಕೆ ಎಸ್ ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ನಾಳೆ ಈ ಬೆಳ್ಳೂಡಿಯ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಮತ್ತು ಸಿಎಂ ಬಿಎಸ್ವೈ ಮುಖಾಮುಖಿ ಆಗಲಿದ್ದಾರಾ ಎಂಬುದರ ಬಗ್ಗೆ ಕುತೂಹಲ ಹೆಚ್ಚಿದೆ.
ರಾಜ್ಯಪಾಲರಿಗೆ ದೂರು ಕೊಟ್ಟ ಬಳಿಕ ಇದುವರೆಗೂ ಸಿಎಂ ಬಿಎಸ್ವೈ ಅವರನ್ನು ಸಚಿವ ಈಶ್ವರಪ್ಪ ಭೇಟಿಯಾಗಿಲ್ಲ. ಈ ಕಾರ್ಯಕ್ರಮದಲ್ಲಿ ಉಭಯ ನಾಯಕರು ವೇದಿಕೆ ಹಂಚಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: ಸಿಎಂ ಬಿಎಸ್ವೈ-ಸಚಿವ ಈಶ್ವರಪ್ಪ ಶೀತಲ ಸಮರ: ಅಡಕತ್ತರಿಯಲ್ಲಿ ಅಧಿಕಾರಿಗಳು