ETV Bharat / state

ಬೈಕ್​ಗೆ ತಮಿಳುನಾಡು ಬಸ್ ಡಿಕ್ಕಿ... ಯುವಕ ಸ್ಥಳದಲ್ಲೇ ಸಾವು

ತಮಿಳುನಾಡು ಸಾರಿಗೆ ಬಸ್ಸೊಂದು ಬೈಕಿಗೆ ವೇಗವಾಗಿ‌ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಯುವಕನ ದೇಹವನ್ನು ಸುಮಾರು ದೂರದ ವರೆಗೆ ಎಳೆದುಕೊಂಡು ಹೋಗಿದ್ದು, ಯುವಕ ಸಾವನ್ನಪ್ಪಿದ್ದಾನೆ.

author img

By

Published : May 17, 2019, 3:58 AM IST

ಯುವಕ ಸ್ಥಳದಲ್ಲೇ ಸಾವು

ಬೆಂಗಳೂರು: ಬೈಕ್​ಗೆ ಬಸ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕುಮಾರಸ್ವಾಮಿ ಲೇಔಟ್ ನಿವಾಸಿ ಜಗದೀಶ್ ಮೃತ ಸವಾರ. ನ್ಯಾಷನಲ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಜಗದೀಶ್, ಹೆಲ್ಮೆಟ್ ಧರಿಸಿಯೇ ಪ್ರಯಾಣ ಮಾಡುತ್ತಿದ್ದ. ಈ ವೇಳೆ ತಮಿಳುನಾಡು ಸಾರಿಗೆ ಬಸ್ಸೊಂದು ಬೈಕಿಗೆ ವೇಗವಾಗಿ‌ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಯುವಕನ ದೇಹ ಸುಮಾರು ದೂರದ ವರೆಗೆ ಎಳೆದುಕೊಂಡು ಹೋಗಿದೆ.

‌ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ದೇಹವನ್ನು ಸ್ಥಳೀಯರ ನೆರವಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಸ್ಥಳದಲ್ಲೇ ಯುವಕ ಮೃತಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದ ಬಸ್ ಚಾಲಕ ಅಬ್ದುಲ್ ಪಾಶಾನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಬೆಂಗಳೂರು: ಬೈಕ್​ಗೆ ಬಸ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕುಮಾರಸ್ವಾಮಿ ಲೇಔಟ್ ನಿವಾಸಿ ಜಗದೀಶ್ ಮೃತ ಸವಾರ. ನ್ಯಾಷನಲ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಜಗದೀಶ್, ಹೆಲ್ಮೆಟ್ ಧರಿಸಿಯೇ ಪ್ರಯಾಣ ಮಾಡುತ್ತಿದ್ದ. ಈ ವೇಳೆ ತಮಿಳುನಾಡು ಸಾರಿಗೆ ಬಸ್ಸೊಂದು ಬೈಕಿಗೆ ವೇಗವಾಗಿ‌ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಯುವಕನ ದೇಹ ಸುಮಾರು ದೂರದ ವರೆಗೆ ಎಳೆದುಕೊಂಡು ಹೋಗಿದೆ.

‌ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ದೇಹವನ್ನು ಸ್ಥಳೀಯರ ನೆರವಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಸ್ಥಳದಲ್ಲೇ ಯುವಕ ಮೃತಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದ ಬಸ್ ಚಾಲಕ ಅಬ್ದುಲ್ ಪಾಶಾನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Intro:Body:
ಬೈಕ್ ಗೆ ಡಿಕ್ಕಿ ಹೊಡೆದ ತಮಿಳುನಾಡು ಬಸ್: ಸ್ಥಳದಲ್ಲೇ ಸಾವನ್ನಪ್ಪಿದ ಯುವಕ

ಬೆಂಗಳೂರು: ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಮೈಸೂರು ರಸ್ತೆ ಫ್ಲೈಓವರ್ ಮೇಲೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಮಾರಸ್ವಾಮಿ ಲೇಔಟ್ ನಿವಾಸಿ ಜಗದೀಶ್ ಮೃತ ಸವಾರ. ನ್ಯಾಷನಲ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಜಗದೀಶ್, ಹೆಲ್ಮೆಟ್ ಧರಿಸಿಯೇ ಪ್ರಯಾಣ ಮಾಡುತ್ತಿದ್ದ. ಈ ವೇಳೆ ತಮಿಳುನಾಡು ಸಾರಿಗೆ ಬಸ್ಸೊಂದು ಬೈಕಿಗೆ ವೇಗವಾಗಿ‌ ಡಿಕ್ಕಿ ಹೊಡೆದ ಪರಿಣಾಮ ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಚಕ್ರಕ್ಕೆ ಸಿಲುಕಿ ಹಾಕಿಕೊಂಡಿದ್ದಾನೆ. ಯುವಕನ ಶವ ಕೆಲ ದೂರ ಎಳೆದುಕೊಂಡಿದೆ.‌ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರ ನೆರವಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಸ್ಥಳದಲ್ಲೇ ವೈದ್ಯರು ಯುವಕ ಮೃತಪಟ್ಟಿರುವುದಾಗಿ ದೃಡಪಡಿಸಿದ್ದಾರೆ. ಈ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿ ಹೊಡೆದ ಬಸ್ ಚಾಲಕ ಅಬ್ದುಲ್ ಪಾಶಾನನ್ನ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.