ETV Bharat / state

ಗದ್ದುಗೆ ಗುದ್ದಾಟದಲ್ಲಿ ಗೆಲ್ಲೋರು ಯಾರು? 3 ಪಕ್ಷಗಳಿಗೂ ಪ್ರತಿಷ್ಠೆಯ ಕಣ ಈ ಉಪ ಸಮರ

author img

By

Published : Oct 6, 2019, 5:00 PM IST

ರಾಜ್ಯದಲ್ಲಿರುವ ಏಕೈಕ ಪ್ರಾದೇಶಿಕ ಪಕ್ಷ ಜೆಡಿಎಸ್ ಈಗಾಗಲೇ ಸರಣಿ ಸಭೆಗಳನ್ನು ನಡೆಸಿದ್ದು, ಇತ್ತೀಚೆಗೆ ಸಂಸದೀಯ ಮಂಡಳಿ ಸಭೆ ಸಹ ನಡೆಸಿದೆ. ಇದೀಗ ರಾಜ್ಯ ಪ್ರವಾಸ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್ ಸಹ ಕಳೆದ ಹದಿನೈದು ದಿನಗಳಿಂದ ಸಭೆಗಳನ್ನು ನಡೆಸುತ್ತಿದೆ. ಇದರಲ್ಲಿ ಬಿಜೆಪಿ ಕೂಡ ಹಿಂದೆ ಬಿದ್ದಿಲ್ಲ. ಒಟ್ಟಾರೆ ಉಪಚುನಾವಣೆಗೆ ಮೂರು ಪಕ್ಷಗಳು ಕೂಡ ತನ್ನದೇ ಆದ ಲೆಕ್ಕಾಚಾರದಲ್ಲಿ ತೊಡಗಿವೆ.

ಉಪಚುನಾವಣೆಗೆ ಮೂರು ಪಕ್ಷಗಳ ತಯಾರಿ

ಬೆಂಗಳೂರು: ಇದೇ ತಿಂಗಳಲ್ಲಿ ನಡೆಯಬೇಕಿದ್ದ ಉಪಚುನಾವಣೆಯನ್ನು ಚುನಾವಣಾ ಆಯೋಗ ದಿಢೀರನೇ ಮುಂದೂಡಿದೆ. ಇದೀಗ ಸ್ವಲ್ಪ ವಿರಾಮ ಕೊಟ್ಟಿದ್ದ ಚುನಾವಣಾ ತಯಾರಿಗೆ ರಾಜಕೀಯ ಪಕ್ಷಗಳು ಮತ್ತೆ ಚಾಲನೆ ನೀಡಿವೆ.

ಕಾಂಗ್ರೆಸ್-ಜೆಡಿಎಸ್​​ನ 17 ಶಾಸಕರು ರಾಜೀನಾಮೆ ಕೊಟ್ಟಿದ್ದು, ಇದರಲ್ಲಿ 15 ಕ್ಷೇತ್ರಗಳಿಗೆ ಮಾತ್ರ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ ಮಾಡುತ್ತದೆಯಾದರೂ, ಐದು ಕ್ಷೇತ್ರಗಳ ಮೇಲೆ ಹೆಚ್ಚು ಕಣ್ಣಿಟ್ಟಿದೆ. ಆ ಕ್ಷೇತ್ರಗಳ ಮೇಲೆಯೇ ಹೆಚ್ಚು ಆಸಕ್ತಿ ವಹಿಸಿರುವ ನಾಯಕರು, ಐದು ಕ್ಷೇತ್ರಗಳನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳುವ ಗುರಿ ಹೊಂದಿದ್ದಾರೆ ಎನ್ನಲಾಗಿದೆ.

ಇಂತಹದೊಂದು ಚರ್ಚೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಪಕ್ಷದ ಟಿಕೆಟ್ ಪಡೆದು ಗೆದ್ದು ಪಕ್ಷಕ್ಕೆ ದ್ರೋಹ ಮಾಡಿರುವ ಹಿರಿಯ ಮುಖಂಡ ಹೆಚ್.ವಿಶ್ವನಾಥ್, ಕೆ. ಗೋಪಾಲಯ್ಯ, ನಾರಾಯಣಗೌಡ ಸ್ಪರ್ಧಿಸಿದ್ದ ಹುಣಸೂರು, ಮಹಾಲಕ್ಷ್ಮಿಲೇಔಟ್ ಹಾಗೂ ಕೆ.ಆರ್. ಪೇಟೆ ಕ್ಷೇತ್ರಗಳ ಮೇಲೆ ನಾಯಕರು ಹೆಚ್ಚಿನ ಗಮನಹರಿಸಿದ್ದಾರೆ. ಈ ಮೂರು ಕ್ಷೇತ್ರಗಳನ್ನು ಶತಾಯಗತಾಯ ಗೆಲ್ಲಬೇಕೆಂಬುದು ಆ ನಾಯಕರ ಲೆಕ್ಕಾಚಾರವಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲು ಅನುಭವಿಸಿದ್ದ ಯಶವಂತಪುರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೂ ಜೆಡಿಎಸ್ ನಾಯಕರು ಹೆಚ್ಚು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್​ಗೆ ಹೆಚ್ಚು ನೆಲೆ ಇಲ್ಲದ ಉತ್ತರಕರ್ನಾಟಕ ಹಾಗೂ ಕರಾವಳಿ ಕ್ಷೇತ್ರಗಳ ಕುರಿತು ಹೆಚ್ಚು ಆಸಕ್ತಿ ತೋರುತ್ತಿಲ್ಲ. ಆದರೆ, ಚುನಾವಣೆಯಲ್ಲಿ ಆ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಇಲ್ಲೂ ಜೆಡಿಎಸ್ ಇದೆ ಎಂಬ ಸಂದೇಶ ರವಾನೆ ಮಾಡುವ ತಂತ್ರಗಾರಿಕೆ ಜೆಡಿಎಸ್ ನದ್ದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಹದಿನೈದು ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9 ರಂದು ಫಲಿತಾಂಶ ಪ್ರಕಟವಾಗಲಿದೆ. ಒಂದೆಡೆ ಬಿಜೆಪಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ, ಮತ್ತೊಂದೆಡೆ ಮೈತ್ರಿ ಸರ್ಕಾರವನ್ನು ಕೆಡವಿದ ಅನರ್ಹ ಶಾಸಕರ ಪ್ರತಿಷ್ಠೆಯ ಪ್ರಶ್ನೆ, ಇನ್ನೊಂದೆಡೆ ಕಾಂಗ್ರೆಸ್-ಜೆಡಿಎಸ್ ನಾಯಕರ ಸೇಡಿನ ಪ್ರಶ್ನೆಯಾಗಿದೆ. ಒಟ್ಟಾರೆ, ಈ ಉಪಚುನಾವಣೆ ಮೂರು ಪಕ್ಷಗಳಿಗೂ ಅತ್ಯಂತ ಮಹತ್ವದ್ದಾಗಿದೆ ಎಂದೇ ಹೇಳಬಹುದು.

ಬೆಂಗಳೂರು: ಇದೇ ತಿಂಗಳಲ್ಲಿ ನಡೆಯಬೇಕಿದ್ದ ಉಪಚುನಾವಣೆಯನ್ನು ಚುನಾವಣಾ ಆಯೋಗ ದಿಢೀರನೇ ಮುಂದೂಡಿದೆ. ಇದೀಗ ಸ್ವಲ್ಪ ವಿರಾಮ ಕೊಟ್ಟಿದ್ದ ಚುನಾವಣಾ ತಯಾರಿಗೆ ರಾಜಕೀಯ ಪಕ್ಷಗಳು ಮತ್ತೆ ಚಾಲನೆ ನೀಡಿವೆ.

ಕಾಂಗ್ರೆಸ್-ಜೆಡಿಎಸ್​​ನ 17 ಶಾಸಕರು ರಾಜೀನಾಮೆ ಕೊಟ್ಟಿದ್ದು, ಇದರಲ್ಲಿ 15 ಕ್ಷೇತ್ರಗಳಿಗೆ ಮಾತ್ರ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ ಮಾಡುತ್ತದೆಯಾದರೂ, ಐದು ಕ್ಷೇತ್ರಗಳ ಮೇಲೆ ಹೆಚ್ಚು ಕಣ್ಣಿಟ್ಟಿದೆ. ಆ ಕ್ಷೇತ್ರಗಳ ಮೇಲೆಯೇ ಹೆಚ್ಚು ಆಸಕ್ತಿ ವಹಿಸಿರುವ ನಾಯಕರು, ಐದು ಕ್ಷೇತ್ರಗಳನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳುವ ಗುರಿ ಹೊಂದಿದ್ದಾರೆ ಎನ್ನಲಾಗಿದೆ.

ಇಂತಹದೊಂದು ಚರ್ಚೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಪಕ್ಷದ ಟಿಕೆಟ್ ಪಡೆದು ಗೆದ್ದು ಪಕ್ಷಕ್ಕೆ ದ್ರೋಹ ಮಾಡಿರುವ ಹಿರಿಯ ಮುಖಂಡ ಹೆಚ್.ವಿಶ್ವನಾಥ್, ಕೆ. ಗೋಪಾಲಯ್ಯ, ನಾರಾಯಣಗೌಡ ಸ್ಪರ್ಧಿಸಿದ್ದ ಹುಣಸೂರು, ಮಹಾಲಕ್ಷ್ಮಿಲೇಔಟ್ ಹಾಗೂ ಕೆ.ಆರ್. ಪೇಟೆ ಕ್ಷೇತ್ರಗಳ ಮೇಲೆ ನಾಯಕರು ಹೆಚ್ಚಿನ ಗಮನಹರಿಸಿದ್ದಾರೆ. ಈ ಮೂರು ಕ್ಷೇತ್ರಗಳನ್ನು ಶತಾಯಗತಾಯ ಗೆಲ್ಲಬೇಕೆಂಬುದು ಆ ನಾಯಕರ ಲೆಕ್ಕಾಚಾರವಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲು ಅನುಭವಿಸಿದ್ದ ಯಶವಂತಪುರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೂ ಜೆಡಿಎಸ್ ನಾಯಕರು ಹೆಚ್ಚು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್​ಗೆ ಹೆಚ್ಚು ನೆಲೆ ಇಲ್ಲದ ಉತ್ತರಕರ್ನಾಟಕ ಹಾಗೂ ಕರಾವಳಿ ಕ್ಷೇತ್ರಗಳ ಕುರಿತು ಹೆಚ್ಚು ಆಸಕ್ತಿ ತೋರುತ್ತಿಲ್ಲ. ಆದರೆ, ಚುನಾವಣೆಯಲ್ಲಿ ಆ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಇಲ್ಲೂ ಜೆಡಿಎಸ್ ಇದೆ ಎಂಬ ಸಂದೇಶ ರವಾನೆ ಮಾಡುವ ತಂತ್ರಗಾರಿಕೆ ಜೆಡಿಎಸ್ ನದ್ದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಹದಿನೈದು ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9 ರಂದು ಫಲಿತಾಂಶ ಪ್ರಕಟವಾಗಲಿದೆ. ಒಂದೆಡೆ ಬಿಜೆಪಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ, ಮತ್ತೊಂದೆಡೆ ಮೈತ್ರಿ ಸರ್ಕಾರವನ್ನು ಕೆಡವಿದ ಅನರ್ಹ ಶಾಸಕರ ಪ್ರತಿಷ್ಠೆಯ ಪ್ರಶ್ನೆ, ಇನ್ನೊಂದೆಡೆ ಕಾಂಗ್ರೆಸ್-ಜೆಡಿಎಸ್ ನಾಯಕರ ಸೇಡಿನ ಪ್ರಶ್ನೆಯಾಗಿದೆ. ಒಟ್ಟಾರೆ, ಈ ಉಪಚುನಾವಣೆ ಮೂರು ಪಕ್ಷಗಳಿಗೂ ಅತ್ಯಂತ ಮಹತ್ವದ್ದಾಗಿದೆ ಎಂದೇ ಹೇಳಬಹುದು.

Intro:ಬೆಂಗಳೂರು : ಇದೇ ತಿಂಗಳಲ್ಲಿ ನಡೆಯಬೇಕಿದ್ದ ಉಪಚುನಾವಣೆ ದಿಢೀರನೇ ಮುಂದೂಡಲಾಗಿತ್ತು. ಇದೀಗ ಸ್ವಲ್ಪ ವಿರಾಮ ಕೊಟ್ಟಿದ್ದ ಚುನಾವಣಾ ತಯಾರಿಗೆ ರಾಜಕೀಯ ಪಕ್ಷಗಳು ಮತ್ತೆ ಚಾಲನೆ ನೀಡಿವೆ.
ರಾಜ್ಯದಲ್ಲಿರುವ ಏಕೈಕ ಪ್ರಾದೇಶಿಕ ಪಕ್ಷ ಜೆಡಿಎಸ್ ಈಗಾಗಲೇ ಸರಣಿ ಸಭೆಗಳನ್ನು ನಡೆಸಿದ್ದು, ಇತ್ತೀಚೆಗೆ ಸಂಸದೀಯ ಮಂಡಳಿ ಸಭೆ ಸಹ ನಡೆಸಿದೆ. ಇದೀಗ ರಾಜ್ಯ ಪ್ರವಾಸ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ.
Body:ಇನ್ನು ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಸಹ ಕಳೆದ ಹದಿನೈದು ದಿನಗಳಿಂದ ಸಭೆಗಳನ್ನು ನಡೆಸುತ್ತಿದೆ. ಬಿಜೆಪಿ ಕೂಡ ಹಿಂದೆ ಬಿದ್ದಿಲ್ಲ. ಉಪ ಚುನಾವಣೆಗೆ ಮೂರು ಪಕ್ಷಗಳು ಕೂಡ ತನ್ನದೇ ಲೆಕ್ಕಾಚಾರದಲ್ಲಿ ತೊಡಗಿವೆ.
ಕಾಂಗ್ರೆಸ್- ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟಿದ್ದು, ಇದರಲ್ಲಿ 15 ಕ್ಷೇತ್ರಗಳಿಗೆ ಮಾತ್ರ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ ಮಾಡುತ್ತದೆಯಾದರೂ, ಐದು ಕ್ಷೇತ್ರಗಳ ಮೇಲೆ ಹೆಚ್ಚು ಕಣ್ಣಿಟ್ಟಿದೆ. ಆ ಕ್ಷೇತ್ರಗಳ ಮೇಲೆಯೇ ಹೆಚ್ಚು ಆಸಕ್ತಿ ವಹಿಸಿರುವ ನಾಯಕರು, ಐದು ಕ್ಷೇತ್ರಗಳನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳುವ ಗುರಿ ಹೊಂದಿದ್ದಾರೆ ಎನ್ನಲಾಗಿದೆ. ಇಂತಹದೊಂದು ಚರ್ಚೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ಪಕ್ಷದ ಟಿಕೆಟ್ ಪಡೆದು ಗೆದ್ದು ಪಕ್ಷಕ್ಕೆ ದ್ರೋಹ ಮಾಡಿರುವ ಹಿರಿಯ ಮುಖಂಡ ಹೆಚ್.ವಿಶ್ವನಾಥ್, ಕೆ. ಗೋಪಾಲಯ್ಯ, ನಾರಾಯಣಗೌಡ ಸ್ಪರ್ಧಿಸಿದ್ದ ಹುಣಸೂರು, ಮಹಾಲಕ್ಷ್ಮಿಲೇಔಟ್ ಹಾಗೂ ಕೆ.ಆರ್. ಪೇಟೆ ಕ್ಷೇತ್ರಗಳ ಮೇಲೆ ನಾಯಕರು ಹೆಚ್ಚಿನ ಗಮನಹರಿಸಿದ್ದಾರೆ. ಈ ಮೂರು ಕ್ಷೇತ್ರಗಳನ್ನು ಶತಾಯಗತಾಯ ಗೆಲ್ಲಬೇಕೆಂಬುದು ಆ ನಾಯಕರ ಲೆಕ್ಕಾಚಾರವಾಗಿದೆ.
ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲು ಅನುಭವಿಸಿದ್ದ ಯಶವಂತಪುರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೂ ಜೆಡಿಎಸ್ ನಾಯಕರು ಹೆಚ್ಚು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ.
ಇನ್ನು ಜೆಡಿಎಸ್ ಗೆ ಹೆಚ್ಚು ನೆಲೆ ಇಲ್ಲದ ಉತ್ತರ ಕರ್ನಾಟಕ ಹಾಗೂ ಕರಾವಳಿ ಕ್ಷೇತ್ರಗಳ ಕುರಿತು ಹೆಚ್ಚು ಆಸಕ್ತಿ ತೋರುತ್ತಿಲ್ಲ. ಆದರೆ, ಚುನಾವಣೆಯಲ್ಲಿ ಆ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಇಲ್ಲೂ ಜೆಡಿಎಸ್ ಇದೆ ಎಂಬ ಸಂದೇಶ ರವಾನೆ ಮಾಡುವ ತಂತ್ರಗಾರಿಕೆ ಜೆಡಿಎಸ್ ನದ್ದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಹದಿನೈದು ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9 ರಂದು ಫಲಿತಾಂಶ ಪ್ರಕಟವಾಗಲಿದೆ.
ಒಂದೆಡೆ ಬಿಜೆಪಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ, ಮತ್ತೊಂದೆಡೆ ಮೈತ್ರಿ ಸರ್ಕಾರವನ್ನು ಕೆಡವಿದ ಅನರ್ಹ ಶಾಸಕರ ಪ್ರತಿಷ್ಠೆಯ ಪ್ರಶ್ನೆ, ಇನ್ನೊಂದೆಡೆ ಕಾಂಗ್ರೆಸ್ –ಜೆಡಿಎಸ್ ನಾಯಕರ ಸೇಡಿನ ಪ್ರಶ್ನೆಯಾಗಿದೆ. ಒಟ್ಟಾರೆ, ಈ ಉಪಚುನಾವಣೆ ಮೂರು ಪಕ್ಷಗಳಿಗೂ ಅತ್ಯಂತ ಮಹತ್ವದ್ದಾಗಿದೆ ಎಂತಲೇ ಹೇಳಬಹುದು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.